ಕಡಬ ನ್ಯೂಸ್

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ ➤ ಬೆಂಗಳೂರಿನಲ್ಲಿ 933 ಸೇರಿ 4,517 ಹೊಸ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ. 20: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 4,517 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,06,453ಕ್ಕೆ ಏರಿಕೆಯಾಗಿದೆ.ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 120 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 33,883ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು 933 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,05,259ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ […]

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ ➤ ಬೆಂಗಳೂರಿನಲ್ಲಿ 933 ಸೇರಿ 4,517 ಹೊಸ ಪ್ರಕರಣ ಪತ್ತೆ Read More »

ಕರಾವಳಿ

ಶಾಲಾ ಮಕ್ಕಳಿಗೆ ಸಿಗಲಿದೆ ಕೆನೆಭರಿತ ಹಾಲಿನ ಪುಡಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.19: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲಿನಹುಡಿ ವಿತರಿಸಲು ನಿರ್ಧಾರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈಗಾಗಲೇ ಲಾಕ್ಡೌನ್ ಸಮಯದಲ್ಲಿ ಮನೆಲ್ಲಿರುವ ವಿದ್ಯಾರ್ಥಿಗಳಿಗೆ ಅಕ್ಕಿ, ಅಡುಗೆ ಎಣ್ಣೆ ಇನ್ನಿತರ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಇನ್ನು ಮುಂದೆ ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೆನೆಭರಿತ ಹಾಲಿನ ಪುಡಿ ವಿತರಿಸಲಾಗುವುದು.

ಶಾಲಾ ಮಕ್ಕಳಿಗೆ ಸಿಗಲಿದೆ ಕೆನೆಭರಿತ ಹಾಲಿನ ಪುಡಿ Read More »

ಕರಾವಳಿ

ಮಾಣಿ: ರಸ್ತೆ ಬದಿ ಹೊಂಡಕ್ಕೆ ಉರುಳಿದ ಯಂತ್ರ ಸಾಗಾಟ ಲಾರಿ

(ನ್ಯೂಸ್ ಕಡಬ) newskadaba,ಬಂಟ್ವಾಳ ಜೂ.19: ಚಾಲಕನ ನಿಯಂತ್ರಣ ಕಳೆದುಕೊಂಡು ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿ, ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಇಂದು ಮಧ್ಯಾಹ್ನ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿ, ಮಾಣಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ.ಮುಂಭಾಗದಿಂದ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಈ ಘಟನೆ ನಡೆದಿದೆ.

ಮಾಣಿ: ರಸ್ತೆ ಬದಿ ಹೊಂಡಕ್ಕೆ ಉರುಳಿದ ಯಂತ್ರ ಸಾಗಾಟ ಲಾರಿ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ನಿಯಂತ್ರಣಕ್ಕೆ ಬಾರದ ಕೋವಿಡ್ ➤ ಲಾಕ್ ಡೌನ್ ವಿಸ್ತರಣೆ..?!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.19: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿಲ್ಲ. ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ಹೇರಿದರೂ ಸೋಂಕಿನ ಅರ್ಭಟ ತಗ್ಗಿಲ್ಲ. ಇಂದು ಈ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಯುವ ಎಲ್ಲ ಸಾಧ್ಯತೆಗಳಿವೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 1,024 ಕ್ಕೆ ಏರಿದೆ. ಜಿಲ್ಲೆಯ ಇಂದಿನ ಪಾಸಿಟಿವಿಟಿ ರೇಟ್ 10.07% ಆಗಿದೆ. ಜತೆಗೆ ಇಂದು 665 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 6,931ಆಕ್ವೀವ್ ಕೇಸ್ ಇದ್ದು

ದಕ್ಷಿಣ ಕನ್ನಡದಲ್ಲಿ ನಿಯಂತ್ರಣಕ್ಕೆ ಬಾರದ ಕೋವಿಡ್ ➤ ಲಾಕ್ ಡೌನ್ ವಿಸ್ತರಣೆ..?! Read More »

ಕರಾವಳಿ, ಕರ್ನಾಟಕ

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ

(ನ್ಯೂಸ್ ಕಡಬ) newskadaba,ಸುಳ್ಯ, ಜೂ.19: ನ್ಯೂಜಿಲೆಂಡ್‌ನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ತಾಲೂಕಿನ ಅರಂತೋಡು ಮೇರ್ಕಜೆಯ ಮೂಲದ ಜಯಪ್ರಕಾಶ್(45) ಅವರು ಜೂನ್ 15 ರ ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಸೌಖ್ಯದ ಕಾರಣದಿಂದ ಮೂರು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಬ್ರೈನ್ ಟ್ಯೂಮರ್ ಇರುವುದು 3 ವಾರದ ಹಿಂದೆ ಗೊತ್ತಾಗಿತ್ತು. ಅದಕ್ಕಾಗಿ ಆಪರೇಶನ್ ಮಾಡಲು ಸಿದ್ಧತೆ ನಡೆಸಿದಾಗ ಅವರು ಅಸೌಖ್ಯ ತೀವ್ರಗೊಂಡು ಕೋಮಕ್ಕೆ ಜಾರಿದರೆನ್ನಲಾಗಿದೆ. ಶುಕ್ರವಾರ ರಾತ್ರಿ 2.30 ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಜಯಪ್ರಕಾಶ್ ಅವರ ಪತ್ನಿ ಪುಷ್ಪಾ

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ Read More »

ಕರಾವಳಿ

ಫ್ಲೈಯಿಂಗ್​ ಸಿಖ್​ ಮಿಲ್ಕಾ ಸಿಂಗ್​ ನಿಧನ ➤ ಪ್ರಧಾನಿ ಸೇರಿದಂತೆ ಗಣ್ಯರಿಂದ ಸಂತಾಪ..!

(ನ್ಯೂಸ್ ಕಡಬ) newskadaba,ಚಂಡೀಗಢ ಜೂ.19: ಭಾರತದ ಕೀರ್ತಿ ಪತಾಕೆಯನ್ನು ದೇಶ ವಿದೇಶದಲ್ಲಿ ಹಾರಿಸುವಂತೆ ಮಾಡಿದ್ದ ದಿಗ್ಗಜ ಅಥ್ಲೀಟ್​ ಮಿಲ್ಕಾ ಸಿಂಗ್​ (Milkha Singh) ಇನ್ನಿಲ್ಲ. 91 ವರ್ಷದ ಮಿಲ್ಕಾ ಸಿಂಗ್​ ಹಾಗೂ ಅವರ ಮಡದಿ ನಿರ್ಮಲ್​ ಕೌರ್​ ಅವರಿಗೆ ಕಳೆದ ತಿಂಗಳು ಕೊರೋನಾ ಸೋಂಕಾಗಿತ್ತು. ಸೊಂಕಾಗಿತ್ತು. ಕಳೆದ ಭಾನುವಾರ ನಿರ್ಮಲ್​ ಕೌರ್​ ಅವರು ಕೋವಿಡ್​ನಿಂದಾಗಿಯೇ ಕೊನೆಯುಸಿರೆಳೆದಿದ್ದರು. ಕಳೆದ ಒಂದು ತಿಂಗಳಿನಿಂದ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಿಲ್ಕಾ ಸಿಂಗ್​​ ಅವರು ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಮಿಲ್ಕಾ ಸಿಂಗ್​ ಅವರು

ಫ್ಲೈಯಿಂಗ್​ ಸಿಖ್​ ಮಿಲ್ಕಾ ಸಿಂಗ್​ ನಿಧನ ➤ ಪ್ರಧಾನಿ ಸೇರಿದಂತೆ ಗಣ್ಯರಿಂದ ಸಂತಾಪ..! Read More »

ಕರಾವಳಿ

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

(ನ್ಯೂಸ್ ಕಡಬ) newskadaba,ಸುಳ್ಯ ಜೂ.17:ಮನೆಯ ಕೊಟ್ಟಿಗೆಯಲ್ಲಿ ಯುವಕರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೋಡಿಕಾನದಲ್ಲಿ ನಡೆದಿದೆ.   ತೋಡಿಕಾನ ಗ್ರಾಮದ ದೇವರಗುಂಡಿ ಬಳಿಯ ನಿವಾಸಿ ಕೇಪಣ್ಣ ನಾಯ್ಕ್ ರ ಪುತ್ರ ಜಯರಾಮ ನೇಣಿಗೆ ಶರಣಾದವರು. ಅವರಿಗೆ 34 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿದ್ದ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ Read More »

ಕರಾವಳಿ

ಮಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಪತ್ತೆ..!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.17: ಲಾಕ್‍ಡೌನ್ ಇದ್ದರೂ ನಗರದಲ್ಲಿ ಮಾದಕ ವಸ್ತುಗಳ ಸಾಗಾಟ ಜಾಲ ಹೆಚ್ಚುತ್ತಲೇ ಇದ್ದು, ಕೋಣಾಜೆ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.   ಮಂಗಳೂರಿನಿಂದ ಕೇರಳಕ್ಕೆ ನಿಷೇಧಿತ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ.ಬೆಂಗಳೂರಿನಲ್ಲಿ ಎಂಡಿಎಂಎ ಖರೀದಿಸಿ ಸ್ವಿಫ್ಟ್ ಕಾರಿನ ಮೂಲಕ ಕೋಣಾಜೆ ಠಾಣಾ ವ್ಯಾಪ್ತಿಯ ಮುಡಿಪು ನಾಟೆಕಲ್ ರಸ್ತೆ ಮೂಲಕ ಕೇರಳಕ್ಕೆ ಸಾಗಾಟ ಮಾಡುತ್ತಿದ್ದಾಗ ರೆಡ್ ಹ್ಯಾಂಡ್

ಮಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಪತ್ತೆ..! Read More »

ಕರಾವಳಿ

ಮಂಗಳೂರಿನಲ್ಲಿ ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.17: ತನ್ನಿಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರವೆಸಗುತ್ತಿದ್ದ ಕಾಮುಕ ತಂದೆಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್​ ನಿವಾಸಿ ಈ ಕೃತ್ಯವೆಸಗಿದವನು. ಈತ ತನ್ನ 17 ಮತ್ತು 18 ವರ್ಷದ ಇಬ್ಬರು ಪುತ್ರಿಯರ ಮೇಲೆ ಕಳೆದ ಒಂದೂವರೆ ವರ್ಷದಿಂದ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದುಬಂದಿದೆ. ಮನೆಯಲ್ಲಿ ಪತ್ನಿ ಇಲ್ಲದ ಸಂದರ್ಭದಲ್ಲಿ ಆರೋಪಿ ಈ ಹೇಯ ಕೃತ್ಯ ಎಸಗಿದ್ದಾನೆ.ಇತ್ತೀಚೆಗೆ ಈ ಸಹೋದರಿಯರು ತಾಯಿ ಜೊತೆಗೆ ಮಾವನ ಮನೆಗೆ ತೆರಳಿದಾಗ ಅಲ್ಲಿ ಈ ವಿಷಯ ತಿಳಿಸಿದ್ದಾರೆ.ವಿಷಯ ತಿಳಿದ ಬಳಿಕ ಬಾಲಕಿಯರ

ಮಂಗಳೂರಿನಲ್ಲಿ ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ Read More »

ಕರಾವಳಿ

ರೈತ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.17: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿ ಉತ್ಪನ್ನ ಮಾರಾಟಕ್ಕೆ ಅನುಕೂಲವಾಗುವಂತೆ ಇ-ಸಹಮತಿ ಆ್ಯಪ್ ಸಿದ್ಧಪಡಿಸಿದ್ದು, ಶೀಘ್ರವೇ ಈ ಆ್ಯಪ್ ಲೋಕಾರ್ಪಣೆಗೊಳ್ಳಲಿದೆ.   ಇ-ಆಡಳಿತ ಇಲಾಖೆ ಎನ್ ಐಸಿ ಮೂಲಕ ಇ-ಸಹಮತಿ ಆ್ಯಪ್(e-Sahamati App) ಸಿದ್ಧಪಡಿಸಲಾಗಿದ್ದು, ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಎಲ್ಲಿಯಾದರೂ ಮಾರಾಟ ಮಾಡಲು ಮತ್ತು ಖಾಸಗಿ ಕಂಪನಿಗಳ ಜೊತೆಗೆ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ. ಊರಿನಲ್ಲಿಯೇ ಆ್ಯಪ್ ಬಳಸಿಕೊಂಡು ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಹುದು.ಇ-ಸಹಮತಿ

ರೈತ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ Read More »

ಕರಾವಳಿ
Scroll to Top