ಕಡಬ ನ್ಯೂಸ್

ಕೋವಿಡ್-19: ರಾಜ್ಯದಲ್ಲಿ ಇಳಿಯದ ಸಾವಿನ ಪ್ರಕರಣ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.08: ರಾಜ್ಯದಲ್ಲಿ ಹೊಸ ಸೋಂಕು ಪ್ರಕರಣಗಳು ಇಳಿಕೆಯಾದರೂ, ಸಾವಿನ ಪ್ರಮಾಣ ಮಾತ್ರ ಇಳಿಕೆಯಾಗುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊಪ್ಪಳ ಮೂಲದ 2 ವರ್ಷದ ಮಗು ಸೇರಿ 340 ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದು, ಸೋಮವಾರ 11,958 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,07,481ಕ್ಕೆ ತಲುಪಿದೆ. ರಾಜ್ಯದಲ್ಲಿ 0-9 ವರ್ಷದ 81,520 ಮಕ್ಕಳಿಕೆ ಸೋಂಕು ತಗುಲಿದ್ದು, 10-19 ವರ್ಷದ 2,03,526 ಮಕ್ಕಳಿಗೆ ಸೋಂಕು ತಗುಲಿರುವುದು […]

ಕೋವಿಡ್-19: ರಾಜ್ಯದಲ್ಲಿ ಇಳಿಯದ ಸಾವಿನ ಪ್ರಕರಣ Read More »

ಕರ್ನಾಟಕ

ರಾಷ್ಟ್ರವನ್ನೇ ತಲ್ಲಣಗೊಳಿಸಿದ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ➤ ಪತ್ನಿ ಸೇರಿ ಮೂವರಿಗೆ ಜೀವಿತಾವಧಿ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba,ಉಡುಪಿ, ಜೂ.08:ಉಡುಪಿಯ ಇಂದ್ರಾಳಿಯ ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ (52) ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೃತರ ಪತ್ನಿ ಮತ್ತು ಮಗ ಸೇರಿದಂತೆ ಮೂವರನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಂಗಳವಾರ (ಜೂನ್ 8) ಅಪರಾಧಿಗಳೆಂದು ತೀರ್ಪು ನೀಡಿದೆ.ಅಲ್ಲದೆ ಮೂವರಿಗೂ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಲಾಗಿದೆ.   ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಮತ್ತು ನಂದಳಿಕೆ ಮೂಲದ ಜ್ಯೋತಿಷಿ ನಿರಂಜನ್ ಭಟ್ ಅಪರಾಧಿ ಎಂದು ನ್ಯಾಯಾಲಯ ಪರಿಗಣಿಸಿಜೀವಾವಧಿ ಶಿಕ್ಷೆ ವಿಧಿಸಿದೆ. ವಿಶೇಷ

ರಾಷ್ಟ್ರವನ್ನೇ ತಲ್ಲಣಗೊಳಿಸಿದ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ➤ ಪತ್ನಿ ಸೇರಿ ಮೂವರಿಗೆ ಜೀವಿತಾವಧಿ ಜೈಲು ಶಿಕ್ಷೆ Read More »

ಕರ್ನಾಟಕ

ಪಿಲಿಕುಲದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ “ಹುಲಿ ರಾಣಿ”

(ನ್ಯೂಸ್ ಕಡಬ) newskadaba,ಮಂಗಳೂರು ಜೂ.06: ಪಿಲಿಕುಲದಲ್ಲಿರುವ 10 ವರ್ಷದ ಹುಲಿ ರಾಣಿ ಮೂರು ಮರಿಗಳಿಗೆ ಜನ್ಮ ನೀಡಿದೆ. ಆರೋಗ್ಯವಾಗಿರುವ ಈ ಮೂರು ಮರಿಗಳು ಇನ್ನೂ 16 ದಿನಗಳಲ್ಲಿ ಕಣ್ಣು ತೆರೆಯುತ್ತವೆ. 2019 ರಲ್ಲಿ ರಾಣಿ ಹುಲಿ 5 ಮರಿಗಳಿಗೆ ಜನ್ಮ ನೀಡಿತ್ತು. ಇದೀಗ ಪಿಲಿಕುಲದಲ್ಲಿ ಹುಲಿಗಳ ಸಂಖ್ಯೆ 13 ಕ್ಕೇ ಏರಿಕೆಯಾಗಿದೆ. ಹಾಗೂ ಪಿಲಿಕುಲದಲ್ಲಿರುವ ಕಾಡುಶ್ವಾನ ಧೋಳ್ ಕೂಡ ಇತ್ತೀಚೆಗೆ ಏಳು ಮರಿಗಳಿಗೆ ಜನ್ಮ ನೀಡಿದೆ. ಈ ಹಿಂದೆ ಇದೇ ಕಾಡುಶ್ವಾನ 5 ಮರಿಗಳಿಗೆ ಜನ್ಮ ನೀಡಿತ್ತು. ಪಿಲಿಕುಲದಲ್ಲಿ

ಪಿಲಿಕುಲದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ “ಹುಲಿ ರಾಣಿ” Read More »

ಕರಾವಳಿ

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸದ್ಯದಲ್ಲೇ ಕೊರೊನಾ ಲಸಿಕೆ ➤ ಸಚಿವ ಡಾ.ಕೆ. ಸುಧಾಕರ್‌

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.06: ಸದ್ಯಕ್ಕೆ 18 ವರ್ಷ ಮೇಲ್ಪಟ್ಟ ಆದ್ಯತಾ ಗುಂಪಿನವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಅತೀ ಶೀಘ್ರದಲ್ಲೇ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು. ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ  ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಉಚಿತ ದಿನಸಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ತಲಾ 5 ಸಾವಿರ ರೂಪಾಯಿ ಸಹಾಯಧನ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸದ್ಯದಲ್ಲೇ ಕೊರೊನಾ ಲಸಿಕೆ ➤ ಸಚಿವ ಡಾ.ಕೆ. ಸುಧಾಕರ್‌ Read More »

ಕರ್ನಾಟಕ

ನರಿಮೊಗರು: ಮಾನಸಿಕ ಅಸ್ವಸ್ಥೆಯಾಗಿದ್ದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba,ನರಿಮೊಗರು ಜೂ.05: ಮಾನಸಿಕ ಅಸ್ವಸ್ಥೆ ಯುವತಿಯೊಬ್ಬರು ನಾಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಕರ್ಗಲ್ಲು ಎಂಬಲ್ಲಿ ವರದಿಯಾಗಿದೆ. 23 ವರ್ಷದ ವಿಜೇತಾ ಎಂಬುವವರು ನಾಪತ್ತೆಯಾಗಿರುವ ಯುವತಿ.   ವಿಜೇತ ಅವರು ಮಾನಸಿಕ ಅಸ್ವಸ್ಥರಾಗಿದ್ದು, ಜೂ.4ರಂದು ಬೆಳಿಗ್ಗೆ ತನ್ನ ಮನೆಯಿಂದ ಹೊರಗೆ ಹೋದವರು ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಯುವತಿ ತಂದೆ ಅಣ್ಣು ಪೂಜಾರಿ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನರಿಮೊಗರು: ಮಾನಸಿಕ ಅಸ್ವಸ್ಥೆಯಾಗಿದ್ದ ಯುವತಿ ನಾಪತ್ತೆ Read More »

ಕರಾವಳಿ

ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.05: ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ  ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.   ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,44,082ಕ್ಕೆ ತಲುಪಿದೆ.  ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ

ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಕಾರ್ಕಳ: ಊಟ ಕೇಳಿದ ಹೆತ್ತ ತಾಯಿಗೆ ಥಳಿಸಿದ ಪಾಪಿ ಪುತ್ರ

(ನ್ಯೂಸ್ ಕಡಬ) newskadaba,ಕಾರ್ಕಳ ಜೂ.05: ಊಟ ಕೇಳಿದ 82 ವರ್ಷದ ತಾಯಿಯನ್ನು ಮಗ ಹಲ್ಲೆ ನಡೆಸಿ ಮನೆಯಿಂದ ಹೊರ ಹಾಕಿ ಕ್ರೂರತ್ವ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.   ತಾಲೂಕಿನ ಕಲ್ಯಾ ಗ್ರಾಮದ ಕೈಕಂಬ ಎಂಬಲ್ಲಿ 82 ವರ್ಷದ ಯಶೋಧ ಹಾಗೂ ಮಗ ದಾಮೋದರನೊಂದಿಗೆ ವಾಸವಾಗಿದ್ದರು. ತಾಯಿ ಹಸಿವಿನಿಂದ ಮಗನಲ್ಲಿ ಊಟ ಕೇಳಿದ್ದಾರೆ. ಈ ವೇಳೆ ಕೋಪಗೊಂಡ ಮಗ ದಾಮೋದರ ಊಟ ನೀಡದೇ, ಎದ್ದು ನಿಲ್ಲಲು ಆಗದ ವೃದ್ಧೆ ತಾಯಿಯನ್ನು ಹೊಡೆದು ಮನೆಯಿಂದ ಹೊರಗೆ ಹಾಕಿದ್ದಾನೆ ಎನ್ನಲಾಗಿದೆ.

ಕಾರ್ಕಳ: ಊಟ ಕೇಳಿದ ಹೆತ್ತ ತಾಯಿಗೆ ಥಳಿಸಿದ ಪಾಪಿ ಪುತ್ರ Read More »

ಕರ್ನಾಟಕ

ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರ ಸರ್ಕಾರದಿಂದಲೇ ನಿಗದಿ ➤ ಸಚಿವ ಡಾ.ಕೆ.ಸುಧಾಕರ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05: ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರವನ್ನು ಸರ್ಕಾರದಿಂದಲೇ ನಿಗದಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.     ಕಪ್ಪು ಶಿಲೀಂಧ್ರದ ಔಷಧಿಯ ಕೊರತೆ ಈಗ ಇಲ್ಲ. 15 ದಿನಗಳ ಹಿಂದೆ ಇದ್ದ ಕೊರತೆ ಈಗ ಇಲ್ಲ. ಕೇಂದ್ರದಿಂದ ದೊಡ್ಡ ಪ್ರಮಾಣದಲ್ಲಿ ಔಷಧಿ ಬಂದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಚಿಕಿತ್ಸೆಗಳನ್ನು ಉಚಿತಗೊಳಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ನಿರ್ದಿಷ್ಟ ದರ ನಿಗದಿಪಡಿಸಬೇಕಿದೆ. ಬೇಕಾದ ಹಾಗೆ

ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರ ಸರ್ಕಾರದಿಂದಲೇ ನಿಗದಿ ➤ ಸಚಿವ ಡಾ.ಕೆ.ಸುಧಾಕರ್ Read More »

ಕರ್ನಾಟಕ

ಇಂದು ಏರಿಕೆಯಾಗದ ಪೆಟ್ರೋಲ್, ಡೀಸೆಲ್ ಬೆಲೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ಬೆಂಗಳೂರು, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 3 ತಿಂಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದ್ದು, ಕಳೆದೆರಡು ದಿನಗಳಿಂದ ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಜೈಪುರದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ.     ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್

ಇಂದು ಏರಿಕೆಯಾಗದ ಪೆಟ್ರೋಲ್, ಡೀಸೆಲ್ ಬೆಲೆ Read More »

ಕರ್ನಾಟಕ

ಮೂರನೇ ಅಲೆಗೆ ಸಿದ್ಧತೆ ➤ ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ಕೊರೋನಾ ಸೋಂಕಿನ ಮೊದಲನೇ ಅಲೆಗಿಂತ ಎರಡನೇ ಅಲೆ ಭಿನ್ನವಾಗಿತ್ತು. 2ನೇ ಅಲೆಗಿಂತ 3ನೇ ಅಲೆ ವಿಭಿನ್ನವಾಗಿರುತ್ತದೆ. ಈಗಾಗಲೇ ತಜ್ಞರು ಮೂರನೇ ಅಲೆ ಬಗ್ಗೆ ಎಚ್ಚರಿಕೆ ನೀಡಿದ್ದು, ಈ ಹಿನ್ನಲೆಯಲ್ಲಿ ನಾವು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್​ ತಿಳಿಸಿದ್ದಾರೆ.   ಈ ಸಂಬಂಧ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಆಕ್ಸಿಜನ್​ ಸಮಸ್ಯೆ ಉದ್ಭವಿಸದಂತೆ ಪ್ರತಿ ಜಿಲ್ಲೆಯಲ್ಲೂ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಪ್ರತಿ ಪ್ರಾಥಮಿಕ ಕೇಂದ್ರಗಳಲ್ಲಿ ಬೆಡ್​ಗಳ ಹೆಚ್ಚಳ

ಮೂರನೇ ಅಲೆಗೆ ಸಿದ್ಧತೆ ➤ ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ Read More »

ಕರ್ನಾಟಕ
Scroll to Top