ಕಡಬ ನ್ಯೂಸ್

ಪುತ್ತೂರು : ವಿದ್ಯುತ್ ಆಘಾತಕ್ಕೆ ಕೇಬಲ್ ಆಪರೇಟರ್ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.27: ಬಿಎಸ್ಸೆನ್ನೆಲ್ ಕೇಬಲ್ ಅಳವಡಿಕೆಗಾಗಿ ವಿದ್ಯುತ್ ಕಂಬ ಏರಿದ್ದ ಕೇಬಲ್ ಆಪರೇಟರ್ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಇಂದು (ರವಿವಾರ) ನಡೆದಿದೆ. ಕೇಬಲ್ ಆಪರೇಟರ್ ಆರ್ಲಪದವು ನಿವಾಸಿ ಪದ್ಮನಾಭ ಪಾಣಾಜೆ(44) ಮೃತಪಟ್ಟವರು.ಪುತ್ತೂರು ನಗರದ ಕೋರ್ಟ್ ರಸ್ತೆಯ ಮೀನು ಮಾರುಕಟ್ಟೆ ಬಳಿಯ ವಿದ್ಯುತ್ ಕಂಬಕ್ಕೆ ಹತ್ತಿದ ವೇಳೆ ಈ ದುರ್ಘಟನೆ ಸಂಭವಿಸಿದೆ.ಪದ್ಮನಾಭ ಅವರು ಬಿಎಸ್ಸೆನ್ನೆಲ್ ಗುತ್ತಿಗೆದಾರ ಸಂಸ್ಥೆ ಶ್ರೀ ಅಸೋಸಿಯೇಟೆಡ್‌ನಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಕೆಲಸ […]

ಪುತ್ತೂರು : ವಿದ್ಯುತ್ ಆಘಾತಕ್ಕೆ ಕೇಬಲ್ ಆಪರೇಟರ್ ಮೃತ್ಯು Read More »

ಕರಾವಳಿ

ಡಿವೈಎಫ್‌ಐ ಕಾರ್ಯಕರ್ತನ ಕೊಲೆ ಖಂಡಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27: ಡಿವೈಎಫ್‌ಐ ಕಾರ್ಯಕರ್ತ ಅಬ್ದುಲ್ ರಹ್ಮಾನ್‌ ಅವರ ಕೊಲೆ ಖಂಡಿಸಿ ಡಿವೈಎಫ್‌ಐ ಕೊಡ್ಲಮೊಗರು ಗ್ರಾಮ ಸಮಿತಿ ನೇತೃತ್ವದಲ್ಲಿ ಬಾಕ್ರಬೈಲ್‌ ಪೇಟೆಯಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಮಂಜೇಶ್ವರ ಬ್ಲಾಕ್ ಪಂಚಾಯಿತಿ ಸದಸ್ಯ, ಸಿಪಿಎಂ ಮುಖಂಡ ಮೊಯ್ದಿನ್ ಕುಂಞಿ ತಲಕ್ಕಿ, ಕೇರಳದ ಎಲ್‌ಡಿಎಫ್ ಸರಕಾರದ ಸಾಧನೆಯನ್ನು ದೇಶ- ವಿದೇಶಗಳಲ್ಲಿ ಕೊಂಡಾಡುವ ಈ ಸಂದರ್ಭ ಹತಾಶೆಗೊಂಡಿರುವ ಮುಸ್ಲಿಂ ಲೀಗ್, ಅಮಾಯಕ ಮುಸ್ಲಿಂ ಯುವಕರನ್ನೇ ಟಾರ್ಗೆಟ್ ಮಾಡಿ ಕೊಲೆ ರಾಜಕೀಯ ನಡೆಸಿರುವುದು ಖಂಡನೀಯ ಎಂದರು.ಸಿಪಿಎಂ

ಡಿವೈಎಫ್‌ಐ ಕಾರ್ಯಕರ್ತನ ಕೊಲೆ ಖಂಡಿಸಿ ಪ್ರತಿಭಟನೆ Read More »

ಕರಾವಳಿ

ಪುತ್ತೂರು: ಚುನಾವಣಾಧಿಕಾರಿಯಿಂದ ಮತಗಟ್ಟೆಗಳ ಭೇಟಿ ➤ ಅಭ್ಯರ್ಥಿಗಳ ಚಿಹ್ನೆ ಇರುವ ಪತ್ರ ಹಂಚಿಕೆ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.27:ಇಲ್ಲಿನ ಹಂಟ್ಯಾರು ಶಾಲಾ ಮತಗಟ್ಟೆಯ ವಠಾರದಲ್ಲಿ ಅಭ್ಯರ್ಥಿಗಳ ಚಿಹ್ನೆಯ‌ ಪತ್ರ ಹಂಚುತ್ತಿರುವುದು ಪತ್ತೆಯಾಗಿದೆ. ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ಗ್ರಾಮ ಪಂಚಾಯತ್ ಚುನಾವಣೆಯ ಮತಗಟ್ಟೆಗಳನ್ನು ಭೇಟಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾಗ ಮತದಾರರೊಬ್ಬರ ಕೈಯಲ್ಲಿದ್ದ ಚೀಟಿ ನೋಡಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಚೀಟಿಯ ಬಗ್ಗೆವ್ಯಕ್ತಿಯನ್ನು ವಿಚಾರಿಸಿ ಬೂತ್ ಗೆ ದಾಳಿ ಮಾಡಿದಾಗ ಟೇಬಲ್ ನ ಅಡಿಯಲ್ಲಿ ಪಕ್ಷದ ಚಿಹ್ನೆ ಇರುವ ಅಭ್ಯರ್ಥಿಯ ಚೀಟಿನ ಒಂದು ಕಟ್ಟು ಪತ್ತೆಯಾಗಿದೆ.ಈ ಸಂಬಂಧ ಕಾನೂನು ಕ್ರಮ ಜರಗಿಸುವಂತೆ

ಪುತ್ತೂರು: ಚುನಾವಣಾಧಿಕಾರಿಯಿಂದ ಮತಗಟ್ಟೆಗಳ ಭೇಟಿ ➤ ಅಭ್ಯರ್ಥಿಗಳ ಚಿಹ್ನೆ ಇರುವ ಪತ್ರ ಹಂಚಿಕೆ ಪತ್ತೆ Read More »

ಕರಾವಳಿ

ಕಡಬ: ಕೊರೊನಾ ವಾರಿಯರ್‌ ಗೆ ಪೊರಕೆಯಿಂದ ಹಲ್ಲೆ ➤ ಪ್ರಕರಣ ತಡವಾಗಿ ಬೆಳಕಿಗೆ,ಜಿಲ್ಲಾಧಿಕಾರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಡಿ.27:  ಕರ್ತವ್ಯ ನಿರತ ಕೊರೊನಾ ವಾರಿಯರ್ ಗೆ ಕೊರೊನಾ ಸೋಂಕಿತರೊಬ್ಬರು ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಬಳಿಕ ಪೊರಕೆಯಲ್ಲಿ ಹಲ್ಲೆ ಮಾಡಿದ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.ಕಡಬ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ಕುಟ್ರುಪಾಡಿ ಗ್ರಾಮದ ಉಳಿಪ್ಪು ಭಾಗದಲ್ಲಿ ಆಶಾ ಕಾರ್ಯಕರ್ತೆ ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜೀವಿ ಬಿ.ಎಸ್. ಎಂಬವರು ಹಲ್ಲೆಗೊಳಗಾದವರು. ಡಿ.16 ರಂದು ಉಳಿಪ್ಪು ನಿವಾಸಿ ಜಿನ್ನಪ್ಪ ಗೌಡ ಎಂಬವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಡಿ.21ರಂದು ಮನೆಗೆ ಭೇಟಿ

ಕಡಬ: ಕೊರೊನಾ ವಾರಿಯರ್‌ ಗೆ ಪೊರಕೆಯಿಂದ ಹಲ್ಲೆ ➤ ಪ್ರಕರಣ ತಡವಾಗಿ ಬೆಳಕಿಗೆ,ಜಿಲ್ಲಾಧಿಕಾರಿಗೆ ದೂರು Read More »

ಕರಾವಳಿ

ಕುಕ್ಕೆಯಲ್ಲಿ ನೀರುಬಂಡಿ ಉತ್ಸವ ➤ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಸಂಪನ್ನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.27: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಕೊಪ್ಪರಿಗೆ ಇಳಿಸುವುದರ ಮೂಲಕ ಮುಕ್ತಾಯಗೊಂಡಿದೆ. ಕಳೆದ ದಿನ ದೇವಾಲಯದ ಹೊರ ಅಂಗಳದಲ್ಲಿ ನೀರು ತುಂಬಿಸಿ ಆ ನೀರಿನಲ್ಲಿ ದೇವರ ಬಂಡಿ ಉತ್ಸವ ನಡೆಯಿತು.ಇದು ನೀರಿನಲ್ಲಿ ಬಂಡಿ ಉತ್ಸವ ಎಂದೇ ಪ್ರಸಿದ್ದಿ. ಬೇರೆ ಯಾವುದೇ ದೇಗುಲದಲ್ಲಿ ನಡೆಯದ ಈ ನೀರು ಬಂಡಿ ಉತ್ಸವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತ್ರ ನಡೆಯುತ್ತಿರುವುದು ವಿಶೇಷ. ನೀರು ಬಂಡಿ ಉತ್ಸವ ನಡೆಯುವುದರೊಂದಿಗೆ ಈ ಬಾರಿಯ ಚಂಪಾ

ಕುಕ್ಕೆಯಲ್ಲಿ ನೀರುಬಂಡಿ ಉತ್ಸವ ➤ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಸಂಪನ್ನ Read More »

ಕರಾವಳಿ

ಮಂಗಳೂರು :ಸೇತುವೆಯಿಂದ ನದಿಗೆ ಹಾರಿದ ಮಹಿಳೆ ➤ ಸ್ಥಳೀಯರು, ಪೊಲೀಸರಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಕೂಳೂರು ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮಹಿಳೆಯನ್ನು ಕೃಷ್ಣಾಪುರದ ನಿವಾಸಿ, ವಿವಾಹಿತೆ ಜುಲೈಖಾ ಎಂದು ಗುರುತಿಸಲಾಗಿದೆ. ಮಹಿಳೆ ತಾನು ಬಂದಿದ್ದ ದ್ವಿಚಕ್ರವಾಹನವನ್ನು ಸೇತುವೆ ಬಳಿ ನಿಲ್ಲಿಸಿ ಏಕಾಏಕಿ ಸೇತುವೆಯಿಂದ ಹಾರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈಕೆ ನದಿಗೆ ಹಾರಿದ್ದನ್ನು ಗಮನಿಸಿ ಕೂಡಲೇ ಕಾರ್ಯಪ್ರವೃತ್ತರಾದ ಮಂಗಳೂರು ಸಂಚಾರ ಉತ್ತರ ಠಾಣೆ ಇಂಟರ್ ಸೆಪ್ಟರ್ ವಾಹನದ ಎಎಸ್‌ಐ ಮಂಜುನಾಥ ಹಾಗೂ ಸಿಬಂದಿ ಈಕೆಯ ರಕ್ಷಣೆಗೆ

ಮಂಗಳೂರು :ಸೇತುವೆಯಿಂದ ನದಿಗೆ ಹಾರಿದ ಮಹಿಳೆ ➤ ಸ್ಥಳೀಯರು, ಪೊಲೀಸರಿಂದ ರಕ್ಷಣೆ Read More »

ಕರಾವಳಿ

ಮಂಗಳೂರು :ಸಿಎಫ್ ಐ ನಿಂದ ಸಂಸದ ನಳಿನ್ ಕಚೇರಿಗೆ ಮುತ್ತಿಗೆ ಯತ್ನ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( ಸಿಎಫ್ಐ) ಸಂಘಟನೆಯ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.   PFI ಮುಖಂಡರ ಮೇಲೆ ಇ.ಡಿ. ತನಿಖೆ ವಿರೋಧಿಸಿ ಸಿಎಫ್ ಐ ಕಾರ್ಯಕರ್ತರು ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ‌ ನಡೆಸಿದರು.ಈ ವೇಳೆ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು, ಮಾತಿನ ಚಕಮಕಿ ನಡೆಯಿತು.ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ

ಮಂಗಳೂರು :ಸಿಎಫ್ ಐ ನಿಂದ ಸಂಸದ ನಳಿನ್ ಕಚೇರಿಗೆ ಮುತ್ತಿಗೆ ಯತ್ನ.! Read More »

ಕರಾವಳಿ

ಉಡುಪಿ: ಗೀತಾ ಮಂದಿರಲ್ಲಿ ಗೀತಾಜಯಂತಿ ಉತ್ಸವ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.26: ಗೀತಾಜಯಂತಿ ಉತ್ಸವವು ಉಡುಪಿಯ ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು. ಪರ್ಯಾಯ ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥರು ಹಾಗೂ ಪುತ್ತಿಗೆ ಶ್ರೀಗಳವರಾದ ಶ್ರೀ ಸುಗುಣೀಂದ್ರ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು. ಈ ವೇಳೆ ಅನುಗ್ರಹ ಸಂದೇಶ ನೀಡಿದ ಪರ್ಯಾಯ ಶ್ರೀಗಳು ಎಲ್ಲರ ಅಂತರ್ಯಾಮಿಯಾಗಿ ಪ್ರೇರಣೆಗೈದ ಭಗವಂತ ಶ್ರೀ ಕೃಷ್ಣ ರೂಪದಿಂದ ಅನುಗ್ರಹಿಸಿದ ಸಾಧನವೇ ಭಗವದ್ಗೀತೆ ಅತೀ ಶ್ರೇಷ್ಟ ಸಾಧನೀಯ ಗ್ರಂಥ ಎಂದರು. ಪುತ್ತಿಗೆ ಶ್ರೀಗಳು ಭಗವಂತನ ಸಹಜ ಉದ್ಗಾರವೇ ಗೀತೆ. .ಸಹಜವಾಗಿದ್ದು ಸತ್ಯವಾಗಿದ್ದು

ಉಡುಪಿ: ಗೀತಾ ಮಂದಿರಲ್ಲಿ ಗೀತಾಜಯಂತಿ ಉತ್ಸವ Read More »

ಕರಾವಳಿ

ಡಿ.28 ರಂದು ಉಪ್ಪಿನಂಗಡಿಯಲ್ಲಿ ನೂತನ ಬ್ರೈಟ್ ಎಲೆಕ್ಟ್ರಾನಿಕ್ಸ್ & ಗಿಫ್ಟ್ ,ಪಿ ಎಸ್ ವಾಚ್ ವರ್ಕ್ಸ್ ಶುಭಾರಂಭ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.26: ಡಿ.28 ರಂದು ಉಪ್ಪಿನಂಗಡಿಯಲ್ಲಿ ನೂತನ ಬ್ರೈಟ್ ಎಲೆಕ್ಟ್ರಾನಿಕ್ಸ್ & ಗಿಫ್ಟ್ ,ಪಿ ಎಸ್ ವಾಚ್ ವರ್ಕ್ಸ್ ಶುಭಾರಂಭ ಗೊಳ್ಳಲಿದೆ. ಉಪ್ಪಿನಂಗಡಿಯಲ್ಲಿ ಡಿ.28 ರ ಸೋಮವಾರ ಮಹಾಲಸ ಕಾಂಪ್ಲೆಕ್ಸ್, ಶೆನೈ ಹಾಸ್ಪಿಟಲ್ ಎದುರುಗಡೆ ಹೊಸದಾಗಿ ಬ್ರೈಟ್ ಎಲೆಕ್ಟ್ರಾನಿಕ್ಸ್ & ಗಿಫ್ಟ್ ,ಪಿ ಎಸ್ ವಾಚ್ ವರ್ಕ್ಸ್ ಶುಭಾರಂಭಗೊಳ್ಳಲಿದೆ .ನೂತನ ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ ಸಂಬಂದಿಸಿದ ಎಲ್ಲಾ ವಸ್ತುಗಳು ಗಿಫ್ಟ್ ಐಟಂಗಳು ಹಾಗೂ ಎಲ್ಲಾ ರೀತಿಯ ವಾಚ್ , ಗಡಿಯಾರ ಮುಂತಾದ ವಸ್ತುಗಳು ಗ್ರಾಹಕರ

ಡಿ.28 ರಂದು ಉಪ್ಪಿನಂಗಡಿಯಲ್ಲಿ ನೂತನ ಬ್ರೈಟ್ ಎಲೆಕ್ಟ್ರಾನಿಕ್ಸ್ & ಗಿಫ್ಟ್ ,ಪಿ ಎಸ್ ವಾಚ್ ವರ್ಕ್ಸ್ ಶುಭಾರಂಭ Read More »

ಕರಾವಳಿ

ಕುತ್ತಾರು :ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಅಪಘಾತ ನಡೆಸಿ, ಚೂರಿಯಿಂದ ಇರಿದ ದುಷ್ಕರ್ಮಿಗಳು.?!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಇನ್ನೊಂದು ಬೈಕಿನಲ್ಲಿ ಬಂದ ತಂಡವೊಂದು ಅಪಘಾತ ನಡೆಸಿ, ಇಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿ ಎಂಬಲ್ಲಿ ಕಳೆದ ದಿನ ತಡರಾತ್ರಿ ಸಂಭವಿಸಿದೆ.   ಸೇವಂತಿಗುಡ್ಡೆ ನಿವಾಸಿ ಆದಿತ್ಯ (23) ಮತ್ತು ಪಂಡಿತ್ ಹೌಸ್ ನಿವಾಸಿ ಪವನ್ (27) ಚೂರಿ ಇರಿತಕ್ಕೊಳಗಾದವರು .ಆದಿತ್ಯ ಮತ್ತು ಪವನ್ ಅವರು ಕ್ಯಾಟ್ರಿಂಗ್ ನಲ್ಲಿ ಕೆಲಸಕ್ಕಿದ್ದ ಸ್ನೇಹಿತನನ್ನು ಕರೆ ತರಲು ಕುತ್ತಾರ್ ನಿಂದ

ಕುತ್ತಾರು :ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಅಪಘಾತ ನಡೆಸಿ, ಚೂರಿಯಿಂದ ಇರಿದ ದುಷ್ಕರ್ಮಿಗಳು.?! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top