ನ್ಯೂಸ್ ಕಡಬ

ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ       ಯೆಲ್ಲೊ ಅಲರ್ಟ್ ಘೋಷಣೆ   

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಅಲ್ಲದೇ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ 25ರವರೆಗೂ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರಿಯುವ ಸಂಭವವಿದ್ದು, ಶುಕ್ರವಾರದಿಂದ ಮೂರು ದಿನಗಳು ಉಡುಪಿ, ದಕ್ಷಿಣ ಕನ್ನಡದ ಜತೆಗೆ ಉತ್ತರ ಕನ್ನಡ ಜಿಲ್ಲೆಗೂ […]

ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ       ಯೆಲ್ಲೊ ಅಲರ್ಟ್ ಘೋಷಣೆ    Read More »

ಕರ್ನಾಟಕ

ಬಸ್ ಅಪಘಾತ    35 ಪ್ರಯಾಣಿಕರು ಮೃತ್ಯು      

(ನ್ಯೂಸ್ ಕಡಬ) newskadaba.c0m ಇಸ್ಲಮಾಬಾದ್, ಆ. 22.  ಪಾಕಿಸ್ತಾನದಿಂದ ಇರಾಕ್‌ ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಇರಾನ್‌ ನ ಯಾಜ್ದ್ ಪ್ರಾಂತ್ಯದಲ್ಲಿ ಮಂಗಳವಾರ ಪಲ್ಟಿಯಾಗಿದ್ದು, ಪರಿಣಾಮ 35 ಪ್ರಯಾಣಿಕರು ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ 52 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಹೆಚ್ಚಿನವರು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಲರ್ಕಾನಾ ನಗರದವರು. ಅಪಘಾತದಲ್ಲಿ ಕನಿಷ್ಠ 18 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.    

ಬಸ್ ಅಪಘಾತ    35 ಪ್ರಯಾಣಿಕರು ಮೃತ್ಯು       Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜತಾಂತ್ರಿಕತೆ ಮತ್ತು ಮಾತುಕತೆ ಸಂಘರ್ಷದ ಶಾಂತಿಯುತ ಪರಿಹಾರ        ‘ಇದು ಯುದ್ಧದ ಯುಗವಲ್ಲ’- ಪ್ರಧಾನಿ ನರೇಂದ್ರ ಮೋದಿ 

(ನ್ಯೂಸ್ ಕಡಬ) newskadaba.c0m ವಾಸಾ, ಆ. 22.  ಉಕ್ರೇನ್ ಭೇಟಿಗೂ ಒಂದು ದಿನ ಮುನ್ನ ಪೋಲೆಂಡ್ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ ಶಾಂತಿಯನ್ನು ಬೆಂಬಲಿಸುತ್ತದೆ. ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಯಾವುದೇ ಸಂಘರ್ಷವನ್ನು ಪರಿಹರಿಸಬಹುದು. ಇದು ಯುದ್ಧದಯುಗವಲ್ಲ ಎಂದು ಹೇಳಿದರು. ವಾಸಾದಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ದೇಶಗಳಿಂದ ಅಂತರಕಾಯ್ದುಕೊಳ್ಳಬೇಕು ಎನ್ನುವುದು ಭಾರತ ದಶಕಗಳಿಂದ ಪಾಲಿಸಿಕೊಂಡು ಬಂದ ನೀತಿ. ಆದರೆ ಎಲ್ಲಾ ದೇಶಗಳಿಗೆ ಹತ್ತಿರವಾಗುವುದು ಇಂದಿನ ಭಾರತದ ನೀತಿ ಎಂದು ಹೇಳಿದರು.

ರಾಜತಾಂತ್ರಿಕತೆ ಮತ್ತು ಮಾತುಕತೆ ಸಂಘರ್ಷದ ಶಾಂತಿಯುತ ಪರಿಹಾರ        ‘ಇದು ಯುದ್ಧದ ಯುಗವಲ್ಲ’- ಪ್ರಧಾನಿ ನರೇಂದ್ರ ಮೋದಿ  Read More »

ರಾಷ್ಟ್ರೀಯ ನ್ಯೂಸ್

ಯಕ್ಷಗಾನ ಸಂಘಟಕ ಕಲಾಪೋಷಕ ಹೃದಯಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಯಕ್ಷಗಾನ ದಿಗ್ಗಜ ಕುರಿಯ ವಿಠಲ ಶಾಸ್ತ್ರೀ ಮನೆತನದವರಾಗಿದ್ದ ಯಕ್ಷಗಾನ ಸಂಘಟಕ ಕಲಾಪೋಷಕ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ( 65) ಅಗಸ್ಟ್ 21ರಂದು ಹೃದಯಾಘಾತದಿಂದ ನಿಧನರಾದರು. ಕುರಿಯ ಹವ್ಯಕ ಘಟಕದ ಗುರಿಕ್ಕಾರರಾಗಿ, ಸ್ವರ್ಣ ಭಿಕ್ಷಾ ಉತ್ಸವದ ಗೌರವಾಧ್ಯಕ್ಷರಾಗಿ,‌ ಕೋಳ್ಯೂರ ಹವ್ಯಕ ವಲಯ ಅಧ್ಯಕ್ಷರಾಗಿ ಹತ್ತು ಹಲವು ಜವಾಬ್ದಾರಿಯನ್ನು ಹೊತ್ತು ಯಶಸ್ವಿಯಾಗಿ ನಿರ್ವಹಿಸಿದ್ದರು.  

ಯಕ್ಷಗಾನ ಸಂಘಟಕ ಕಲಾಪೋಷಕ ಹೃದಯಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

 ಮನೆ ದರೋಡೆಗೆ ಯತ್ನ ಪ್ರಕರಣ..!       ಇಬ್ಬರು ಆರೋಪಿಗಳು ಆರೆಸ್ಟ್..!          

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 22.  ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ತಾಲೂಕಿನ ಕೋಟದ ಮಣೂರು ಗ್ರಾಮದ ಮಣೂರು ಬಸ್ ನಿಲ್ದಾಣದ ಬಳಿಯ ಕವಿತಾ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ವಿಫ್ಟ್ ಮತ್ತು ಇನ್ನೋರ್ವ ಕಾರುಗಳಲ್ಲಿ ಆಗಮಿಸಿದ ಸುಮಾರು 6-8 ಅಪರಿಚಿತ ವ್ಯಕ್ತಿಗಳ ಗುಂಪು, ಮನೆ ಗೇಟ್ ಹಾರಿ, ಅಕ್ರಮವಾಗಿ ಆವರಣಕ್ಕೆ ನುಗ್ಗಿ, ಮನೆ ಬಾಗಿಲು ತೆರೆಯಲು ವಿಫಲ ಯತ್ನ ನಡೆಸಿದೆ ಎನ್ನಲಾಗಿದೆ.

 ಮನೆ ದರೋಡೆಗೆ ಯತ್ನ ಪ್ರಕರಣ..!       ಇಬ್ಬರು ಆರೋಪಿಗಳು ಆರೆಸ್ಟ್..!           Read More »

ಕರಾವಳಿ, ಕ್ರೈಮ್ ನ್ಯೂಸ್

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ     ತುರ್ತು ಪರಿಸ್ಥಿತಿ ಘೋಷಣೆ        

(ನ್ಯೂಸ್ ಕಡಬ) newskadaba.c0m ತಿರುವನಂತಪುರ, ಆ. 22.  ಮುಂಬೈನಿಂದ ಬಂದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದರು. ವಿಮಾನವು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿದಿದ್ದು, ಪ್ರಯಾಣಿಕರನ್ನು ಇಳಿಸಿದ ನಂತರ, ಶಿಷ್ಟಾಚಾರದಂತೆ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಒಯ್ಯಲಾಗಿದೆ ಎಂದು ವರದಿ ತಿಳಿಸಿದೆ.  

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ     ತುರ್ತು ಪರಿಸ್ಥಿತಿ ಘೋಷಣೆ         Read More »

ಕರ್ನಾಟಕ

ಮಣಿಪಾಲ: ಡಾ. ವಸುಂಧರಾ ದೊರೆಸ್ವಾಮಿಯವರ ‘ಕಿತ್ತೂರು ರಾಣಿ ಚೆನ್ನಮ್ಮ’ ಏಕವ್ಯಕ್ತಿ ನೃತ್ಯನಾಟಕ ಪ್ರದರ್ಶನ

(ನ್ಯೂಸ್ ಕಡಬ) newskadaba.c0m ಮಣಿಪಾಲ, ಆ. 22.  ಮಣಿಪಾಲ ವಿಶ್ವವಿದ್ಯಾನಿಲಯದ ಸಾಂಸ್ಕೃತಿಕ ವಿಭಾಗವು ಸಂಜೆ 6.30ಕ್ಕೆ ಸರಿಯಾಗಿ ಟಿ.ಎಂ.ಎ ಪೈ ಸಭಾಂಗಣದಲ್ಲಿ ಹಿರಿಯ ನೃತ್ಯಕಲಾವಿದೆ, ಗುರು ಡಾ. ವಸುಂಧರಾ ದೊರೆಸ್ವಾಮಿಯವರ ‘ಕಿತ್ತೂರು ರಾಣಿ ಚೆನ್ನಮ್ಮ’ ಎಂಬ ಏಕವ್ಯಕ್ತಿ ನೃತ್ಯನಾಟಕ ಪ್ರದರ್ಶನವನ್ನು ವಿದ್ಯಾರ್ಥಿಗಳಿಗೆ ಹಾಗೂ ಊರಿನ ಕಲಾಸಕ್ತರಿಗಾಗಿ ಆಯೋಜಿಸಿದೆ. ಪ್ರೊ. ಜ್ಯೋತಿ ಶಂಕರ್ ಅವರು ರಚಿಸಿ, ವಿದ್ವಾನ್ ಡಿ.ಎಸ್ ಶ್ರೀವತ್ಸ ಅವರ ಸಂಗೀತ ಸಂಯೋಜನೆಯ ಈ ನೃತ್ಯನಾಟಕದಲ್ಲಿ ಡಾ.ವಸುಂಧರಾ ಅವರ ನೃತ್ಯ-ನಾಟಕ-ಸಮರಕಲೆಗಳ ಸಿದ್ಧಿಯ ಸಮನ್ವಯವನ್ನು ಪ್ರದರ್ಶನ ಮಾಡಲಿದ್ದಾರೆ.  

ಮಣಿಪಾಲ: ಡಾ. ವಸುಂಧರಾ ದೊರೆಸ್ವಾಮಿಯವರ ‘ಕಿತ್ತೂರು ರಾಣಿ ಚೆನ್ನಮ್ಮ’ ಏಕವ್ಯಕ್ತಿ ನೃತ್ಯನಾಟಕ ಪ್ರದರ್ಶನ Read More »

ಕರಾವಳಿ

32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟಿನ ಆರೋಪಿಯನ್ನು ಪತ್ತೆ ಮಾಡಿದ್ದು, ಮಣಿಪಾಲ ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 1992 ರಲ್ಲಿ, ಶಿವರಾಮ ಎಂಬವರು ಮಣಿಪಾಲ ಠಾಣೆಯಲ್ಲಿ ಪ್ರಕರಣ 12 ಜನರ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಗಣೇಶ್‌ ಪ್ರಭು (54), ಬಡಗಬೆಟ್ಟು, ಮಣಿಪಾಲ, ಉಡುಪಿ, ಅವರು 2001 ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.  

32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು – ಕುಳೂರು ಸೇತುವೆ ದುರಸ್ತಿ ಕಾರ್ಯ ವಾಹನ ಸಂಚಾರ ಸ್ಥಗಿತ                        

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ಕುಳೂರು ಹಳೆ ಸೇತುವೆಯ ದುರಸ್ತಿ ಕಾಮಗಾರಿ ಆರಂಭವಾಗಿದ್ದು, ನಂತೂರು ಮತ್ತು ಸುರತ್ಕಲ್ ನಡುವೆ ದಿನವಿಡೀ ಸಂಚಾರ ವ್ಯತ್ಯಯ ಉಂಟಾಗಿದೆ. ಈ ಕಾರಣದಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಸೇತುವೆಯ ಕೆಳಭಾಗಕ್ಕೆ ಡಾಂಬರು ಹಾಕಲು ಮತ್ತು ಪ್ಲಾಸ್ಟರಿಂಗ್ ಮಾಡಲು ಹಳೇ ಕುಳೂರು ಸೇತುವೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹಗಲಿನಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ವಾಹನಗಳು ಎರಡೂ ದಿಕ್ಕಿಗೆ ಒಂದೇ ಸೇತುವೆಯನ್ನು ಬಳಸುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ

ಮಂಗಳೂರು – ಕುಳೂರು ಸೇತುವೆ ದುರಸ್ತಿ ಕಾರ್ಯ ವಾಹನ ಸಂಚಾರ ಸ್ಥಗಿತ                         Read More »

ಕರಾವಳಿ

ಬಸ್ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಆ.12ರಂದು ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ಮೃತಪಟ್ಟಿದ್ದಾರೆ. ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಬೈಕ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಮೃತಪಟ್ಟವರನ್ನು ಮುಜ್ಜಾಂಬಿಲ್ ಎಂದು ಗುರುತಿಸಲಾಗಿದೆ.  

ಬಸ್ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top