ನ್ಯೂಸ್ ಕಡಬ

ರಾಜ್ಯದಲ್ಲಿ ಈವರೆಗೆ 1,784 ಬ್ಲ್ಯಾಕ್ ಫಂಗಸ್ ಪತ್ತೆ..!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05:  ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ.ಇದರಲ್ಲಿ 1,564 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬ ಸೋಂಕಿತನಿಗೆ ಕನಿಷ್ಠ 2-3 ವಾರ ಚಿಕಿತ್ಸೆ ಬೇಕಾಗುತ್ತದೆ. ಸಂಪೂರ್ಣ ಗುಣಮುಖರಾಗಲು 5-6 ವಾರಗಳ ಕಾಲ ಚಿಕಿತ್ಸೆ ನೀಡಬೇಕಾಗುತ್ತದೆ. ಆದರೆ ದುರದೃಷ್ಟ 111 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.     ಮಧ್ಯಮ ವರ್ಗದವರು, ಬಡವರ್ಗದವರು ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದು, ಎಲ್ಲರಿಗೂ ಕಪ್ಪು […]

ರಾಜ್ಯದಲ್ಲಿ ಈವರೆಗೆ 1,784 ಬ್ಲ್ಯಾಕ್ ಫಂಗಸ್ ಪತ್ತೆ..! Read More »

ಕರ್ನಾಟಕ

ಒಂದೇ ದಿನ 210 ಮಂದಿಗೆ ಕೋವಿಡ್ ➤ ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್‍ಪಿ ನೆರವು

(ನ್ಯೂಸ್ ಕಡಬ) newskadaba,ಬೆಳ್ತಂಗಡಿ ಜೂ.01: ಒಂದೇ ದಿನ 210 ಮಂದಿಗೆ ಕೊರೊನಾ ಸೋಂಕು ತಗುಲುವ ಮೂಲಕ ಕೊರೊನಾ ಅಬ್ಬರದಿಂದ ನಲುಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನೆರಿಯಾ ಸಿಯೋನ್ ಆಶ್ರಮಕ್ಕೆ ನೆರಿಯ ವಿಶ್ವ ಹಿಂದೂ ಪರಿಷತ್ ಘಟಕ ನೆರವಾಗಿದೆ. ಸುಮಾರು 270 ಜನ ನಿರ್ಗತಿಕರು ಹಾಗೂ ವೃದ್ಧರಿರುವ ಈ ಆಶ್ರಮದಲ್ಲಿ ನಿನ್ನೆ ಬರೋಬ್ಬರಿ 210 ಮಂದಿಗೆಪಾಸಿಟಿವ್ ಆಗಿತ್ತು. ಹೀಗಾಗಿ ಇಂದು ವಿಎಚ್‍ಪಿ ಕಾರ್ಯಕರ್ತರು ಆಶ್ರಮವನ್ನು ಸಂಪೂರ್ಣ ಸ್ಯಾನಿಟೈಸೇಷನ್ ಮಾಡಿದ್ದಾರೆ. ಪಿಪಿಇ ಕಿಟ್ ಧರಿಸಿದ ಕಾರ್ಯಕರ್ತರು ತಮ್ಮ ಸ್ವಂತ ಖರ್ಚಿನಿಂದಲೇ

ಒಂದೇ ದಿನ 210 ಮಂದಿಗೆ ಕೋವಿಡ್ ➤ ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್‍ಪಿ ನೆರವು Read More »

ಕರಾವಳಿ, ಕರ್ನಾಟಕ

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ಪುತ್ರ ಯತೀಂದ್ರ ಅವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.       ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ತಪಾಸಣೆಗೆ ಒಳಗಾಗುತ್ತಿದ್ದು, ಪುತ್ರ ಡಾ.ಯಂತೀಂದ್ರ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯಕೀಯ ತಪಾಸಣೆ ನಂತರ ಅಡ್ಮಿಟ್ ಆಗಲು ಹೇಳಿದರೆ 2 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗುವ ಸಾಧ್ಯತೆ ಇದೆ.ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರು ಸಿಟಿ

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ Read More »

ಕರ್ನಾಟಕ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜ.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಕಾರಣದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.   ರಾಜ್ಯದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ Read More »

ಕರಾವಳಿ

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಗರದ ಮೂರು ದೇವಸ್ಥಾನಗಳ ಕಾಣಿಕೆ ಡಬ್ಬಿಗೆ ಕಿಡಿಗೇಡಿಗಳು ನಕಲಿ ನೋಟು ಹಾಕಿದ್ದು, ಅದರಲ್ಲಿ ಧರ್ಮದ ಅವಹೇಳನ ಮಾಡುವ ಸಂದೇಶ ಹರಡಿದ್ದಾರೆ. ಹೀಗಾಗಿ, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಆಗ್ರಹಿಸಿದ್ದಾರೆ. ಹಾಗೂ ಕೃತ್ಯ ಎಸಗಿದವರನ್ನು ತಕ್ಷಣ ಪತ್ತೆ ಹಚ್ಚಿ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅ.ವಂ.ಡಾ.ಪೀಟರ್ ಪಾವ್ಲ್

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ Read More »

ಕರಾವಳಿ

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರು ಕುಟುಂಬ ಸಹಿತ ಸೋಮವಾರ ಬಂಟ್ವಾಳ ತಾಲೂಕಿನ ಪ್ರಸಿದ್ಧ ಕಾರಣಿಕದ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿದರು.   ಕ್ಷೇತ್ರದ ಕಾರಣಿಕ ಶಕ್ತಿಯನ್ನು ನಂಬಿ ಇಲ್ಲಿಗೆ ಬಂದಿದ್ದು, ಪಣೋಲಿಬೈಲಿನ ತಾಯಿ ದರ್ಶನ ಪಡೆಯುವುದಕ್ಕೆ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ ಎಂದು ಈ ಸಂದರ್ಭ ಅವರು ಹೇಳಿದರು. ತಾರ ಅವರ ತಾಯಿ ಪುಷ್ಪಮ್ಮ, ಉದ್ಯಮಿ ವೆಂಕಟೇಶ್,

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ Read More »

ಕರಾವಳಿ

ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27: 400 ವರ್ಷಗಳ ಪುರಾತನ ಕಾಸರಗೋಡಿನ ಎಡನೀರು ಮಠದ ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ದೊಡ್ಡ ಮಟ್ಟದಲ್ಲಿ ಅಧ್ಯಯನ ಪೀಠ ಸ್ಥಾಪಿಸುವ ಬಹುದೊಡ್ಡ ಬಯಕೆ ಇದೆ ಎಂದು ಎಡನೀರು ಸಂಸ್ಥಾನದ ನೂತನ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀಗಳು ತಿಳಿಸಿದರು.ಅವರು ಶನಿವಾರ ಸಂಜೆ ನಗರದ ಗಣಪತಿ ಹೈಸ್ಕೂಲ್ ರಸ್ತೆಯಲ್ಲಿರುವ ಶ್ವೇತಾ ಜುವೆಲ್ಲರ್ಸ್ ಸ್ವರ್ಣಾಭರಣ ಮಳಿಗೆಗೆ ಭೇಟಿ ನೀಡಿದ ಸಂದರ್ಭ ಆಶೀರ್ವಚನ ನೀಡಿದರು. ಕೇಶವಾನಂದ ಭಾರತಿ ಶ್ರೀಗಳು ತಮ್ಮ ಕಾರ್ಯಾವೈಕರಿಯಿಂದ

ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ Read More »

ಕರಾವಳಿ

ಕೆ.ವಿ.ಜಿ. ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕುರುಂಜಿ ಪುತ್ಥಳಿಗೆ ಹಾರಾರ್ಪಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.27: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಸಂಸ್ಥಾಪಕ, ಶಿಕ್ಷಣ ಬ್ರಹ್ಮ ಡಾ. ಕುರುಂಜಿ ವೆಂಕಟ್ರಮಣ ಗೌಡರ 92 ನೇ ಜನ್ಮದಿನಾಚರಣೆಯನ್ನು ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕೆ.ವಿ.ಜಿ. ಕ್ಯಾಂಪಸ್‌ನಲ್ಲಿರುವ ಡಾ. ಕುರುಂಜಿಯವರ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹಾರಾರ್ಪಣೆ ಮಾಡಿ ಮಾತನಾಡಿ, ಡಾ. ಕುರುಂಜಿಯವರ ಆದರ್ಶಗಳನ್ನು ನಾವು ಮೈಗೂಡಿಸಿಕೊಳ್ಳುವ ಮೂಲಕ ಅವರ ಸಂಸ್ಮರಣೆ ಮಾಡಿದರೆ ಹೆಚ್ಚು ಅರ್ಥಪೂರ್ಣವಾಗುತ್ತದೆ. ಪ್ರಪಂಚದಾದ್ಯಂತ

ಕೆ.ವಿ.ಜಿ. ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕುರುಂಜಿ ಪುತ್ಥಳಿಗೆ ಹಾರಾರ್ಪಣೆ Read More »

ಕರಾವಳಿ

ಡಿವೈಎಫ್‌ಐ ಕಾರ್ಯಕರ್ತನ ಹತ್ಯೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.27: ಡಿವೈಎಫ್‌ಐ ಕಾರ್ಯಕರ್ತ ಕಲ್ಲೂರಾವಿ ಹಳೆ ಕಡಪ್ಪುರದ ಅಬ್ದುಲ್ ರಹಮಾನ್ (30) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ತನಿಖಾ ತಂಡ ಬಂಧಿಸಿದೆ. ಬಂಧಿತರನ್ನು ಇರ್ಷಾದ್, ಹಸನ್ ಹಾಗೂ ಆಶೀರ್ ಎಂದು ಗುರುತಿಸಲಾಗಿದೆ. ಮೂವರು ಕೃತ್ಯದಲ್ಲಿ ನೇರವಾಗಿ ಶಾಮೀಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘರ್ಷಣೆ ಸಂದರ್ಭದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಇರ್ಷಾದ್‌ನನ್ನು ಶುಕ್ರವಾರ ಬೆಳಗ್ಗೆ ಕಾಸರಗೋಡಿಗೆ ಕರೆತರಲಾಯಿತು. ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಧೀಶರ ಮುಂದೆ

ಡಿವೈಎಫ್‌ಐ ಕಾರ್ಯಕರ್ತನ ಹತ್ಯೆ ಪ್ರಕರಣ ➤ ಮೂವರ ಬಂಧನ Read More »

ಕರ್ನಾಟಕ

ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತ್ಯು.!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.27: ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತಪಟ್ಟ ಘಟನೆ ಶನಿವಾರ ಸಂಜೆ ನಗರ ಹೊರವಲಯದ ಅಣಂಗೂರುನಲ್ಲಿ ನಡೆದಿದೆ. ಅಣಂಗೂರು ಗ್ರೀನ್ ಪಾರ್ಕ್ ಪ್ಲಾಟ್‌ನ ತ್ವಾಹಿರ್ ಬಾನುರವರ ಪುತ್ರ ಮುಹಮ್ಮದ್ ಇಬುಹಾ ಮೃತಪಟ್ಟ ಬಾಲಕ. ಆಟವಾಡುತ್ತಿದ್ದ ಬಾಲಕ ಸಮೀಪದ ಅಂಗಡಿಯೊಂದರ ಗ್ರಿಲ್ಸ್ ಸ್ಪರ್ಶಿಸಿದಾಗ ಈ ಘಟನೆ ನಡೆದಿದೆ.ಗ್ರಿಲ್ಸ್‌ಗೆ ವಿದ್ಯುತ್ ಪ್ರವಹಿಸುತ್ತಿತ್ತು ಎನ್ನಲಾಗಿದೆ. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತ್ಯು.! Read More »

ಕರ್ನಾಟಕ
Scroll to Top