ನ್ಯೂಸ್ ಕಡಬ

ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿ ಗಂಡ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಮಂಡ್ಯ, ಆ. 21.  ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿದ ಗಂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಸ್ವಾತಿ (21) ಎಂದು ಗುರುತಿಸಲಾಗಿದೆ. ಮೋಹನ್ (26) ಎಂಬ ವ್ಯಕ್ತಿಯು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ನಂತರ ಗಂಡ ಮೋಹನ್ ಹಾಗೂ ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಇದಾದ ಕೆಲವೇ […]

ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿ ಗಂಡ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಬಕಾರಿ ನೀತಿ ಹಗರಣ ಪ್ರಕರಣ..!     ಆಗಸ್ಟ್ 27ರವರೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ..!

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 21.  ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಆಗಸ್ಟ್ 27ರವರೆಗೆ ವಿಸ್ತರಿಸಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ತೀರ್ಪು ನೀಡಿದ್ದಾರೆ.  

ಅಬಕಾರಿ ನೀತಿ ಹಗರಣ ಪ್ರಕರಣ..!     ಆಗಸ್ಟ್ 27ರವರೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ..! Read More »

ರಾಷ್ಟ್ರೀಯ ನ್ಯೂಸ್

’ಕಾಂಗ್ರೆಸ್ಸಿನವರದು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯೇ- ಸರಕಾರಿ ಪ್ರಾಯೋಜಿತ ಬೆದರಿಕೆಯೇ’        ಸಿ.ಟಿ. ರವಿ ಪ್ರಶ್ನೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 21.  ಕಾಂಗ್ರೆಸ್ಸಿನವರದು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯೇ ಅಥವಾ ಸರಕಾರಿ ಪ್ರಾಯೋಜಿತ ಬೆದರಿಕೆಯೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಾಸಿಕ್ಯೂಶನ್‍ಗೆ ರಾಜ್ಯಪಾಲರು ಅನುಮತಿ ಕೊಟ್ಟದ್ದನ್ನೇ ಅಪರಾಧ ಎಂದು ಬಿಂಬಿಸಿ ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವ ಮಾತು ದುರುದೃಷ್ಟಕರ ಮತ್ತು ಸಂವಿಧಾನ ವಿರೋಧಿ ಎಂದು ಆಕ್ಷೇಪಿಸಿದರು.

’ಕಾಂಗ್ರೆಸ್ಸಿನವರದು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯೇ- ಸರಕಾರಿ ಪ್ರಾಯೋಜಿತ ಬೆದರಿಕೆಯೇ’        ಸಿ.ಟಿ. ರವಿ ಪ್ರಶ್ನೆ Read More »

ಕರ್ನಾಟಕ

‘ಕೊರಗ ಸಮುದಾಯವರ ಭೂಮಿ ಸಮಸ್ಯೆಯನ್ನ ಪರಿಹರಿಸಿ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಿ’      ಎ.ಕಿರಣ್ ಕುಮಾರ್ ಕೊಡ್ಗಿ 

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 21.  ಕೊರಗ ಸಮುದಾಯವರ ಭೂಮಿ ಸಮಸ್ಯೆಯನ್ನು ಅರಣ್ಯ ಇಲಾಖೆ, ಕಂದಾಯ ಇಲಾಖೆ ಸಮನ್ವಯತೆಯಿಂದ ವಿಶೇಷ ಆಧ್ಯತೆಯನ್ನಾಗಿ ತುರ್ತು ಪರಿಹರಿಸಿ, ಹೊಸ ಡೀಮ್ಡ್ ಪಟ್ಟಿಯನ್ನು ಪರಾಮರ್ಶಿಸಿ, ಭಾಗಶಃ ಡೀಮ್ಡ್ ಇರುವಲ್ಲಿ ಹಕ್ಕುಪತ್ರವನ್ನು ನೀಡಲು ಅವಕಾಶ ಇರುವಲ್ಲಿ ಕೂಡಲೇ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಿ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧಿಕಾರಿಗಳಿಗೆ ಸೂಚಿಸಿದರು. ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೊರಗ ಸಮುದಾಯ

‘ಕೊರಗ ಸಮುದಾಯವರ ಭೂಮಿ ಸಮಸ್ಯೆಯನ್ನ ಪರಿಹರಿಸಿ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಿ’      ಎ.ಕಿರಣ್ ಕುಮಾರ್ ಕೊಡ್ಗಿ  Read More »

ಕರಾವಳಿ

ವಿದ್ಯಾರ್ಥಿಗಳ ಬ್ಯಾಡ್ಮಿಂಟನ್‌ ತಂಡಕ್ಕೆ ರಾಕೆಟ್ ಬಾಲ್ ವಿತರಣೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 21.  ಸರಕಾರಿ ಪ್ರೌಢಶಾಲೆ, ನಾಲ್ಯ ಪದವು ವಿದ್ಯಾರ್ಥಿಗಳ ಬಾಲ್‌ ಬ್ಯಾಡ್ಮಿಂಟನ್‌ ತಂಡಕ್ಕೆ ಸ್ಥಳೀಯ ದಾನಿಗಳ ನೆರವಿನಿಂದ ರ್‍ಯಾಕೆಟ್‌ ಮತ್ತು ಬಾಲ್‌ಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು. ಸುಮಾರು 30ಸಾವಿರ ಮೌಲ್ಯದ ಬ್ಯಾಡ್ಮಿಂಟನ್‌ ರ್‍ಯಾಕೆಟ್‌ಗಳು ಹಾಗೂ ಬಾಲ್‌ಗಳನ್ನು ಶಿಕ್ಷಣಾಸ್ತಕರು ಹಾಗೂ ದಾನಿಗಳಾದ  ವಿದ್ಯಾದೀವಿಗೆ ಚಾರಿಟೇಬಲ್‌ ಟ್ರಸ್ಟ್‌  ಅಧ್ಯಕ್ಷಕರು ದೇವಾನಂದ, ಸಿವಿಲ್‌ ಕಂಟ್ರಾಕ್ಟರ್‌ ಅಸೋಸಿಯೇಶನ್‌ ಸದಸ್ಯರಾದ ನಾರಾಯಣ ದೇವಾಡಿಗ, ಭವಾನಿ ಶಂಕರ, ಲಕ್ಷ್ಮೀ ಪ್ರಸಾದ್‌ , ಕೇಶವ ಕೆ. ಹಾಗೂ ಚಂದನ್‌ ದಾಸ್‌ ಇವರ ನೆರವಿನೊಂದಿಗೆ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ವಿದ್ಯಾರ್ಥಿಗಳ ಬ್ಯಾಡ್ಮಿಂಟನ್‌ ತಂಡಕ್ಕೆ ರಾಕೆಟ್ ಬಾಲ್ ವಿತರಣೆ Read More »

ಕರಾವಳಿ

ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ    

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 21. ಗೃಹಿಣಿ ರೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಹಳೆ ಸೂರ್ಲುವಿನ ಬಟ್ಟಂಪಾರೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು ೧೧. ೩೦ ರ ಬಳಿಕ ಇವರು ಮನೆಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಶೋಧ ನಡೆಸಿದ್ದರು, ಈ ನಡುವೆ ತಡರಾತ್ರಿ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.  

ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ     Read More »

ಕರಾವಳಿ, ಕ್ರೈಮ್ ನ್ಯೂಸ್

4 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ..! ಪೊಲೀಸರ ಮೇಲೆ ಕಲ್ಲು ತೂರಾಟ..!

(ನ್ಯೂಸ್ ಕಡಬ) newskadaba.c0m ಮುಂಬೈ, ಆ. 21. ನರ್ಸರಿಯಲ್ಲಿ 4 ವರ್ಷದ ಇಬ್ಬರು ಬಾಲಕಿಯರ ಮೇಲೆ ಸ್ವಚ್ಛತಾ ಸಿಬ್ಬಂದಿ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಆಂಗ್ಲ ಮಾಧ್ಯಮ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ 23 ವಯಸ್ಸಿನ ಸ್ವಚ್ಛತಾ ಸಿಬ್ಬಂದಿ 4 ವರ್ಷದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಶೌಚಾಲಯದ ಒಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆ ಖಂಡಿಸಿ ಸಾರ್ವಜನಿಕರು ಹಾಗೂ ಪೋಷಕರು ಮುಂಬೈನ ಬಾದಲ್‌ಪುರ ಎಂಬಲ್ಲಿ ರೈಲು ಮಾರ್ಗದ ಬಳಿ ಪ್ರತಿಭಟನೆ ನಡೆಸಿದರು. ಮಕ್ಕಳ

4 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ..! ಪೊಲೀಸರ ಮೇಲೆ ಕಲ್ಲು ತೂರಾಟ..! Read More »

ಕ್ರೈಮ್ ನ್ಯೂಸ್

ಉಡುಪಿ: ಮೌನ ಪ್ರತಿಭಟನೆಯನ್ನು ಹಿಂಪಡೆದ ಕೆನರಾ ಬಸ್ ಮಾಲಕರ ಸಂಘ

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 21. ಹೆಜಮಾಡಿ ಮತ್ತು ಸಾಸ್ತಾನದ ಟೋಲ್‌ಗೇಟ್‌ಗಳಲ್ಲಿ ಸಂಚರಿಸುವ ಬಸ್‌ಗಳಿಗೆ ದುಪ್ಪಟ್ಟು ಶುಲ್ಕ ವಿಧಿಸುವುದನ್ನು ವಿರೋಧಿಸಿ ಆ.23ರಂದು ಕೈಗೊಳ್ಳಲು ಉದ್ದೇಶಿಸಿದ್ದ ಮೌನ ಪ್ರತಿಭಟನೆಯನ್ನು ಕೆನರಾ ಬಸ್‌ ಮಾಲಕರ ಸಂಘವು ಹಿಂಪಡೆದುಕೊಂಡಿದೆ ಎನ್ನಲಾಗಿದೆ. ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸದ್ಯಕ್ಕೆ ಹೆಚ್ಚುವರಿ ಶುಲ್ಕ ವಸೂಲಾತಿಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಿರುವುದಾಗಿ ಮಾಹಿತಿ ನೀಡಿದೆ. ಒಂದು ವೇಳೆ ಮತ್ತೆ ಹೆಚ್ಚುವರಿ ಶುಲ್ಕ ವಿಧಿಸಿದರೆ ಪುನಃ ಪ್ರತಿಭಟನೆ ನಡೆಸುವುದಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್‌ ನಾಯಕ್‌

ಉಡುಪಿ: ಮೌನ ಪ್ರತಿಭಟನೆಯನ್ನು ಹಿಂಪಡೆದ ಕೆನರಾ ಬಸ್ ಮಾಲಕರ ಸಂಘ Read More »

ಕರಾವಳಿ

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 21. ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತಕಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ ಎನ್ನಲಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ಎಸ್.ಪಿ ಬಾಲಕೃಷ್ಣ ಭಟ್(73) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅತಿ ಹೆಚ್ಚು EV ಚಾರ್ಜಿಂಗ್ ಸ್ಟೇಷನ್ – ದೇಶದಲ್ಲಿ ಕರ್ನಾಟಕ ನಂ.1                

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20. ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಕ್ರಾಂತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ವಿದ್ಯುತ್ ಸಚಿವಾಲಯದ ಅಡಿಯಲ್ಲಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ (BEE) ಯ ಇತ್ತೀಚಿನ ವರದಿಯ ಪ್ರಕಾರ, ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು (PEVCS) ಹೊಂದಿದೆ, ಅವುಗಳಲ್ಲಿ ಹೆಚ್ಚಿನವು ಬೆಂಗಳೂರಿನಲ್ಲಿವೆ. ರಾಜ್ಯದಲ್ಲಿ 5,765 ಪಿಇವಿಸಿಎಸ್‌ಗಳಿದ್ದು, ಅದರಲ್ಲಿ 4,462 ಬೆಂಗಳೂರು ನಗರವೊಂದರಲ್ಲೇ ಇವೆ. 2023 ಮತ್ತು 2024 ರಲ್ಲಿ ಕ್ರಮವಾಗಿ ವಾಹನ್ ಮತ್ತು ಯಾತ್ರಾ ಪೋರ್ಟಲ್‌ಗಳು

ಅತಿ ಹೆಚ್ಚು EV ಚಾರ್ಜಿಂಗ್ ಸ್ಟೇಷನ್ – ದೇಶದಲ್ಲಿ ಕರ್ನಾಟಕ ನಂ.1                 Read More »

ಕರ್ನಾಟಕ
Scroll to Top