ನ್ಯೂಸ್ ಕಡಬ

ಉಜಿರೆ ಬಾಲಕನ ಅಪಹರಣ ಪ್ರಕರಣ ➤ ತನ್ನ ವ್ಯವಹಾರದಲ್ಲಿ ಯಾರಿಗೂ ಹಣ ಬಾಕಿಯಿಲ್ಲ , ಸುಳ್ಳು ಮಾಹಿತಿ ಹರಡದಂತೆ ಬಿಜಾಯ್ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25:ತನ್ನ ವ್ಯವಹಾರದಲ್ಲಿ ಯಾರಿಗೂ ಹಣ ಬಾಕಿಯಿಲ್ಲ. ಹಾಗೆಯೇ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಹರಡದಂತೆ ಅಪಹರಣಕೊಳಗಾಗಿದ್ದ ಉಜಿರೆಯ ಬಾಲಕನ ತಂದೆ ಬಿಜಾಯ್ ಮಾಧ್ಯಮಕ್ಕೆ ಮನವಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜಾಯ್, ನಾನು ಕೋಟ್ಯಂತರ ರೂಪಾಯಿ ಸಾಲವನ್ನು ಪಾವತಿಸಬೇಕಾಗಿದೆ ಎಂದು ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ ಹರಡುತ್ತಿದೆ. ನಾನು ಯಾರಿಗಾದರೂ ಹಣ ನೀಡಲು ಬಾಕಿಯಿದೆ ಎಂದು ಅವರು ಸಾಕ್ಷಿ ಸಮೇತ ಪೊಲೀಸರಿಗೆ ಸಾಬೀತುಪಡಿಸಿದರೆ ನಾನು ಮೊತ್ತವನ್ನು ಅವರಿಗೆ ನೀಡಲು ಸಿದ್ದನಿದ್ದೇನೆ ಎಂದು ತಿಳಿಸಿದರು. ಬಿಟ್ ಕಾಯಿನ್ […]

ಉಜಿರೆ ಬಾಲಕನ ಅಪಹರಣ ಪ್ರಕರಣ ➤ ತನ್ನ ವ್ಯವಹಾರದಲ್ಲಿ ಯಾರಿಗೂ ಹಣ ಬಾಕಿಯಿಲ್ಲ , ಸುಳ್ಳು ಮಾಹಿತಿ ಹರಡದಂತೆ ಬಿಜಾಯ್ ಮನವಿ Read More »

ಕರಾವಳಿ

ರಂಗತ್ತಮಲೆ :ನಿಯಂತ್ರಣ ತಪ್ಪಿ ತೋಟಕ್ಕೆ ಬಿದ್ದ ಜೀಪು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.25: ಸುಳ್ಯದಿಂದ ಆಲೆಟ್ಟಿ ರಸ್ತೆ ಮೂಲಕ ರಂಗತ್ತಮಲೆಗೆ ಸಂಚರಿಸುತ್ತಿದ್ದ ಜೀಪು ಚಾಲಕನ ನಿಯಂತ್ರಣ ತಪ್ಪಿ ಆಲೆಟ್ಟಿ ರಾಧಾಕೃಷ್ಣ ರೈ ಯವರ ತೋಟಕ್ಕೆ ಬಿದ್ದ ಘಟನೆ ನಡೆದಿದೆ.   ಜೀಪಿನ ಚಾಲಕ ರವಿ ಸೇರಿ ೩ ಮಂದಿ ಪ್ರಯಾಣಿಕರು ಜೀಪಿನಲ್ಲಿದ್ದರು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸದೆ ಪ್ರಯಾಣಿಕರು ಪಾರಾಗಿದ್ದಾರೆ.

ರಂಗತ್ತಮಲೆ :ನಿಯಂತ್ರಣ ತಪ್ಪಿ ತೋಟಕ್ಕೆ ಬಿದ್ದ ಜೀಪು Read More »

ಕರಾವಳಿ

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಡಿ. 25 ರಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಡಿಸೆಂಬರ್ 25 ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ. ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮಾಸ್ಕ್ ಧರಿಸಿ ಮತ್ತು ಸ್ಯಾನಿಟೈಸರನ್ನು ಕಡ್ಡಾಯವಾಗಿ ಬಳಸಿ ವೀಕ್ಷಿಸಬಹುದಾಗಿದೆ ಎಂದು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಗೋಕುಲ್ ದಾಸ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಡಿ. 25 ರಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯ Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ ಸರಳವಾಗಿ ಕ್ರಿಸ್ ಮಸ್ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.25: ವಿಶ್ವದೆಲ್ಲೆಡೆ ಇಂದು ಕ್ರಿಸ್ ಮಸ್ ಸಂಭ್ರಮಾಚರಣೆ ಜೋರಾಗಿ ನಡೆಯುತ್ತಿದೆ. ಜಗತ್ತಿಗೆ ಶಾಂತಿಮಂತ್ರ ಬೋಧಿಸಿದ ಯೇಸು ಕ್ರಿಸ್ತನ ಹುಟ್ಟುಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ.ಕಡಬ, ಕೋಡಿಂಬಾಳ ಕುಟ್ರುಪಾಡಿ ಕುಂತೂರು ನೆಲ್ಯಾಡಿ ಸೇರಿದಂತೆ ಬಹುತೇಕ ಎಲ್ಲ ಚರ್ಚ್‍ಗಳನ್ನು ವಿದ್ಯುತ್ ದೀಪ ಸಕ್ಷತ್ರಗಳಿಂದ ಅಲಂಕಾರಿಸಲಾಗಿದೆ. ಚರ್ಚ್ ಆವರಣದಲ್ಲಿ ಮತ್ತು ಕೈಸ್ತರ ಮನೆ ಆವರಣದಲ್ಲಿ ಆಕರ್ಷಕ ಗೋದಲಿಗಳನ್ನು ನಿರ್ಮಿಸಲಾಗಿತ್ತು. ಬಾಲಯೇಸು ಮೂರ್ತಿಯನ್ನು ಇಟ್ಟು, ದೇವರ ಸ್ತುತಿ, ಜೋಗುಳದ ಮೂಲಕ ಭಕ್ತರು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿ ಹೂವು

ಕಡಬದಲ್ಲಿ ಸರಳವಾಗಿ ಕ್ರಿಸ್ ಮಸ್ ಸಂಭ್ರಮಾಚರಣೆ Read More »

ಕರಾವಳಿ, ಕರ್ನಾಟಕ

ಜನವರಿ 8, 9, ಮತ್ತು 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಸ್ತುತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜನವರಿ 8, 9, ಮತ್ತು 10 ರಂದು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ.   ಡಿಸೆಂಬರ್ 30 ರ ನಂತರವೂ ಪ್ರವೇಶ ಪತ್ರ ತಲುಪದಿರುವ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ಕಾಳಿದಾಸ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿನ

ಜನವರಿ 8, 9, ಮತ್ತು 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಬ್ರಿಟನ್ ನಿಂದ ಮತ್ತೆ 8 ಮಂದಿ ದ.ಕ. ಜಿಲ್ಲೆಗೆ ಆಗಮನ ➤ಇನ್ನುಂದೆ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆಗೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಇಂಗ್ಲೆಂಡ್‌ನಲ್ಲಿ ರೂಪಾಂತರಿತ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಎಚ್ಚರವಹಿಸಲಾಗಿದ್ದು, ಬ್ರಿಟನ್ ನಿಂದ ಮತ್ತೆ ಎಂಟು ಮಂದಿ ದ.ಕ. ಜಿಲ್ಲೆಗೆ ಆಗಮಿಸಿದ್ದಾರೆ. ಈ ಎಲ್ಲರನ್ನೂ ಇದೀಗ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ‌ ನೀಡಿದೆ. ಈ ಎಂಟು ಮಂದಿಯ ವರದಿ ಮುಂದಿನ ಶುಕ್ರವಾರ ಬರಲಿದೆ. ಬ್ರಿಟನ್‌ನಿಂದ ಜಿಲ್ಲೆಗೆ ಆಗಮಿಸಿದ ಎಲ್ಲರ ಪರೀಕ್ಷೆ ನಡೆಸಲಾಗಿದ್ದು, ಎಲ್ಲರ ವರದಿಯೂ ನೆಗೆಟಿವ್ ಬಂದಿದೆ‌ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ. ಈ

ಮಂಗಳೂರು: ಬ್ರಿಟನ್ ನಿಂದ ಮತ್ತೆ 8 ಮಂದಿ ದ.ಕ. ಜಿಲ್ಲೆಗೆ ಆಗಮನ ➤ಇನ್ನುಂದೆ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆಗೆ ಕಡ್ಡಾಯ Read More »

ಕರಾವಳಿ

ಶಾಸಕ ಖಾದರ್ ಕಾರು ಹಿಂಬಾಲಿಸಿದಾತನ ಬಂಧಿಸಿ ಬಿಡುಗಡೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಶಾಸಕ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರನ್ನು ಅಪರಿಚಿತರು ಹಿಂಬಾಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದಾರೆ. ಬೋಳೂರು ನಿವಾಸಿ ಅನೀಸ್ ಪೂಜಾರಿ (28) ವಿಚಾರಣೆಗೊಳಗಾಗಿ ಬಿಡುಗಡೆಯಾದ ಯುವಕ. ಈತ ಬೋಳೂರು ವಾರ್ಡ್‌ನ ಕಾಂಗ್ರೆಸ್‌ನ ಕಾರ್ಯಕರ್ತೆಯೊಬ್ಬರ ಮಗ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ಆತನಿಂದ‌ಮುಚ್ಚಳಿಗೆ ಬರೆಸಿ ಬಿಡುಗಡೆ ಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.ಶಾಸಕ ಯು.ಟಿ. ಖಾದರ್ ಬುಧವಾರ ಸಂಜೆ ದೇರಳಕಟ್ಟೆಯಲ್ಲಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳಲು ಮಂಗಳೂರು ವಿಮಾನ

ಶಾಸಕ ಖಾದರ್ ಕಾರು ಹಿಂಬಾಲಿಸಿದಾತನ ಬಂಧಿಸಿ ಬಿಡುಗಡೆ.! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಡಿವೈಎಫ್ಐ ಕಾರ್ಯಕರ್ತನ ಕೊಲೆ ಪ್ರಕರಣ ➤ಮೂವರ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.25: ಡಿವೈಎಫ್ಐ ಕಾರ್ಯಕರ್ತ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಯೂತ್ ಲೀಗ್ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯೂತ್ ಲೀಗ್ ಕಾರ್ಯಕರ್ತರಾದ ಇರ್ಷಾದ್, ಹಸನ್, ಇಸ್ಹಾಕ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೃತ್ಯಕ್ಕೆ ರಾಜಕೀಯ ದ್ವೇಷ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಕಣ್ಣೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ಚಂದ್ರ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ವೇಳೆ ಇರ್ಷಾದ್ ಎಂಬಾತನಿಗೂ ಗಾಯವಾಗಿದ್ದು, ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ಕಾಸರಗೋಡು: ಡಿವೈಎಫ್ಐ ಕಾರ್ಯಕರ್ತನ ಕೊಲೆ ಪ್ರಕರಣ ➤ಮೂವರ ವಿರುದ್ಧ ಕೇಸ್ Read More »

ಕರಾವಳಿ

ಮಂಗಳೂರು :ಮದುವೆ ಪ್ರಪೋಸ್, ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಸಾಮಾಜಿಕ ಜಾಲತಾಣ ಫೇಸ್ ಬುಕ್ನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸುವುದಲ್ಲದೆ, ಮದುವೆ ಪ್ರಸ್ತಾಪ, ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಕುರುಬನಹಳ್ಳಿ ನಿವಾಸಿ ಪರಮೇಶ್ವರಪ್ಪ ರಂಗಪ್ಪ (23) ಬಂಧಿತ ಆರೋಪಿ. ಮ್ಯಾಟ್ರೊಮೊನಿಯಲ್ ನಲ್ಲಿ ಆರೋಪಿಯು ತಾನು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ಎಂಬುದಾಗಿ ಬಿಂಬಿಸಿದ್ದ.ಈತ 20 ನಕಲಿ ಖಾತೆ ಸೃಷ್ಟಿಸಿ ಸರ್ಕಾರಿ ಇಲಾಖೆಗಳ ಉತ್ತಮ ದರ್ಜೆಯ

ಮಂಗಳೂರು :ಮದುವೆ ಪ್ರಪೋಸ್, ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.24: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿಯಾಗಿ ಸುಮಾರು 100 ಅಡಿ ಆಳಕ್ಕೆ ನದಿಗೆ ಉರುಳಿ ಬಿದ್ದಿದೆ. ಟ್ಯಾಂಕರ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅರ್ಧದಷ್ಟು ಡಾಂಬರು ಸೋರಿಕೆಯಾಗಿ ನದಿನೀರಿನಲ್ಲಿ ಸೇರಿಕೊಂಡಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಬೆದ್ರೋಡಿಯ ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ನದಿ ಪಾತ್ರದತ್ತ ಸಂಚರಿಸಿ ನೂರು ಅಡಿ ದೂರದಲ್ಲಿನ ನೇತ್ರಾವತಿ ನದಿಯಲ್ಲಿ ಮಗುಚಿ ಬಿದ್ದಿದ್ದು, ನುಜ್ಜುಗುಜ್ಜಾಗಿದೆ. ಟ್ಯಾಂಕರ್‌ ಚಾಲಕರಾದ

ಉಪ್ಪಿನಂಗಡಿ: ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿ Read More »

ಕರಾವಳಿ
Scroll to Top