ನ್ಯೂಸ್ ಕಡಬ

ಉಡುಪಿ :ಸಾಲಬಾಧೆಯಿಂದ ವ್ಯಕ್ತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.24: ಮನನೊಂದ ವ್ಯಕ್ತಿಯೋರ್ವರು ಮನೆಯ ಮಲಗುವ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ನಗರದ ಪುತ್ತೂರು ಗ್ರಾಮದ ನಾರಾಯಣ ನಗರದಲ್ಲಿ ಇಂದು ನಡೆದಿದೆ.   ವಿಠಲ ಪ್ರಭು ಎಂಬವರ ಮಗ ಕೃಷ್ಣ ಪ್ರಭು (53) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಸಾಲ ಬಾಧೆಯಿಂದ ಕಂಗೆಟ್ಟಿದ್ದರು ಎನ್ನಲಾಗಿದೆ.ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಜರು ಪ್ರಕ್ರಿಯೆಯನ್ನು ಪೋಲಿಸರು ನಡೆಸಿದರು.  

ಉಡುಪಿ :ಸಾಲಬಾಧೆಯಿಂದ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಅಪ್ರಾಪ್ತೆಯನ್ನು ವಿವಾಹವಾಗಿ ಬಳಿಕ ಕೊಂದು ಹೂತಿಟ್ಟ ಗಂಡ ➤ 15 ದಿನಗಳ ನಂತರ ಪ್ರಕರಣ ಬೆಳಕಿಗೆ

(ನ್ಯೂಸ್ ಕಡಬ) newskadaba.com ಮಧುಗಿರಿ , ಡಿ.24: ಕುಟುಂಬಸ್ಥರ ವಿರೋಧದ ನಡುವೆಯೂ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಕೊಲೆ ಮಾಡಿ ಮನೆಯಲ್ಲೇ ಹೂತುಹಾಕಿರುವ ಘಟನೆ ನಡೆದಿದ್ದು, ಆರೋಪಿ ಗಂಡ ತಲೆಮರೆಸಿಕೊಂಡಿದ್ದಾನೆ. ಮಧುಗಿರಿ ತಾಲೂಕಿನ ಹೊಸಇಟಕಲೋಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ತಪಾಸಣೆಯ ವೇಳೆ ಮನೆಯಲ್ಲೇ 16 ವರ್ಷದ ಬಾಲಕಿ ಶವ ಪತ್ತೆಯಾಗಿದ್ದು, ಮೃತ ಬಾಲಕಿಯ ಅಕ್ಕ ಶ್ವೇತಾಳಿಂದ ಪ್ರಕರಣ ಬೆಳಕಿಗೆ ಬಂದಿದೆ.   ಅಪ್ರಾಪ್ತ ವಯಸ್ಸಿನ ಬಾಲಕಿ ವಿವಾಹಿತೆಯೂ ಆಗಿದ್ದಳು. 9 ತಿಂಗಳ ಹಿಂದಷ್ಟೇ ಮದುವೆಯಾಗಿದ್ದಳು. ಬಾಲಕಿ

ಅಪ್ರಾಪ್ತೆಯನ್ನು ವಿವಾಹವಾಗಿ ಬಳಿಕ ಕೊಂದು ಹೂತಿಟ್ಟ ಗಂಡ ➤ 15 ದಿನಗಳ ನಂತರ ಪ್ರಕರಣ ಬೆಳಕಿಗೆ Read More »

ಕರ್ನಾಟಕ

ಬಂಟ್ವಾಳ :ತಡರಾತ್ರಿ ಟೆರೇಸ್ ನಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಕಳೆದ ದಿನ ತಡರಾತ್ರಿ ಯುವಕನೊಬ್ಬ ಟೆರೇಸ್ ನಿಂದ ಬಿದ್ದು ಮೃತಪಟ್ಟ ಘಟನೆ  ಬಂಟ್ವಾಳ ತಾಲೂಕಿನ ಕೇಪು ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಪ್ರಸಾದ್ ಆಚಾರ್ಯ(28) ಮೃತಪಟ್ಟವರು. ಅವರು ಕೇಪು ಕುಕ್ಕೆಬೆಟ್ಟುವಿನಲ್ಲಿ ಸಂಬಂಧಿಕರ ಮನೆಯಲ್ಲಿ ಚಿನ್ನದ ಕೆಲಸವನ್ನು ಮಾಡುತ್ತಿದ್ದರು.ಬುಧವಾರ ತಡರಾತ್ರಿ ಟೆರೇಸ್ ನಿಂದ ಬಿದ್ದಿದ್ದಾರೆ. ತತ್ ಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ವಿಟ್ಲದ ಕಡೆಗೆ ಬರುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದರು.ಘಟನೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಬಂಟ್ವಾಳ :ತಡರಾತ್ರಿ ಟೆರೇಸ್ ನಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ

ಮಂಗಳೂರು :ಶಕ್ತಿ ವಸತಿ ಶಾಲೆಯಲ್ಲಿ ಕ್ರಿಸ್‍ಮಸ್‍ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಪ್ರಸ್ತುತ ದಿನದ ಒತ್ತಡದಿಂದ ಶಾಲೆಯ ವಾತಾವರಣ ಮನೋರಂಜನೆಯಿಂದ ವಂಚಿತರಾದ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸಂಸ್ಥೆಯು ಆನ್‍ಲೈನ್ ತರಗತಿಯ ಮೂಲಕ ಶಿಕ್ಷಣವನ್ನು ನೀಡುವುದರ ಜೊತೆಗೆ ಹಲವಾರು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಏರ್ಪಡಿಸುತ್ತಾ ಬಂದಿದ್ದು, ರಾಷ್ಟ್ರೀಯ ಹಬ್ಬಗಳ ಸಂದರ್ಭ ಬಗೆ ಬಗೆಯ ಸ್ಪರ್ಧೆಯನ್ನು ಏರ್ಪಡಿಸಿತ್ತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಪ್ರತೀ ವರ್ಷದಂತೆ ‘ಶಕ್ತಿ ಸಿರಿ, ಶಕ್ತಿ ಶ್ರೀ’ ಎಂಬ ಸ್ಪರ್ಧೆಯನ್ನು ಏರ್ಪಡಿಸಿ ಸುಂದರವಾದ ಉಡುಪು, ಅಲಂಕಾರದೊಂದಿಗೆ ರ್ಯಾಂಪ್ ವಾಕ್ ಮಾಡಿ

ಮಂಗಳೂರು :ಶಕ್ತಿ ವಸತಿ ಶಾಲೆಯಲ್ಲಿ ಕ್ರಿಸ್‍ಮಸ್‍ಆಚರಣೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ :ಮುಂಜಾನೆ ಅಡಿಕೆ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24:ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದಲ್ಲಿ ಇಂದು (ಗುರುವಾರ) ಮುಂಜಾನೆ ಓರ್ವ ಕಳ್ಳನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.ಮಚ್ಚಿನ ಗ್ರಾಮದ ಪುಂಚಪಾದೆ ಎಂಬಲ್ಲಿ 50 ಕೆ.ಜಿ. (14) ಗೋಣಿ ಅಡಿಕೆ ಸಹಿತ ಇಬ್ಬರು ಆರೋಪಿಗಳನ್ನು ಸ್ಥಳೀಯರಾದ ಕರಾಟೆ ಕಿಟ್ಟ ಎಂಬುವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಒಂದೂವರೆ ತಿಂಗಳುಗಳಿಂದ ಪಿಲಿಗೂಡು, ದೇವರುಪಲಿಕೆ ಆಸುಪಾಸಿನಲ್ಲಿ ಅಡಿಕೆ ಕಳ್ಳ ಸಾಗಾಣಿಕೆ ನಡೆಯುತ್ತಿದ್ದು, ಕಳ್ಳರ ಪತ್ತೆಗಾಗಿ ಸ್ಥಳೀಯರೇ ಕಾರ್ಯಾಚರಣೆಗೆ ಇಳಿದಿದ್ದರು. ಚುನಾವಣೆ ಸಮಯವಾದ್ದರಿಂದ ಕೃಷಿಕರ ಬಂದೂಕು

ಬೆಳ್ತಂಗಡಿ :ಮುಂಜಾನೆ ಅಡಿಕೆ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು Read More »

ಕರಾವಳಿ, ಕ್ರೈಮ್ ನ್ಯೂಸ್

ನೈಟ್ ಕರ್ಫ್ಯೂ ವಿಚಾರವನ್ನು ಜಾತಿ-ಧರ್ಮದ ಬಣ್ಣದಲ್ಲಿ ನೋಡಬೇಡಿ ➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ವಿಚಾರವನ್ನು ಜಾತಿ, ಧರ್ಮದ ಬಣ್ಣದಲ್ಲಿ ನೋಡಬಾರದು. ಯಾವುದೇ ಜಾತಿ, ಮತ, ಧರ್ಮಗಳು ರೋಗಕ್ಕಿಲ್ಲ. ಆದರಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರೋಗಾಣು ಎಲ್ಲರಿಗೂ ಬಂದೇ ಬರುತ್ತದೆ. ರಾಜ್ಯದಲ್ಲಿ ಆಡಳಿತ ನಡೆಸುವವರಿಗೆ ಪ್ರತಿಯೊಬ್ಬರ ಪ್ರಾಣ ಮುಖ್ಯವಾಗೊದೆ. ಡಬ್ಲ್ಯುಹೆಚ್‌ಒ ಮಾರ್ಗಸೂಚಿ ಪ್ರಕಾರ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದರು.

ನೈಟ್ ಕರ್ಫ್ಯೂ ವಿಚಾರವನ್ನು ಜಾತಿ-ಧರ್ಮದ ಬಣ್ಣದಲ್ಲಿ ನೋಡಬೇಡಿ ➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ, ಕರ್ನಾಟಕ

ನೈಟ್‌ ಕರ್ಫ್ಯೂ ಹಿನ್ನಲೆ ➤ ಕಟೀಲು ಮೇಳದ ಎಲ್ಲಾ ಪ್ರದರ್ಶನಗಳು ಕಾಲಮಿತಿ ಯಕ್ಷಗಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ರಾಜ್ಯಾದ್ಯಂತ ಡಿ.24 ರಿಂದ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಕಟೀಲು ಯಕ್ಷಗಾನ ಮೇಳದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಕಾಲಮಿತಿ ಯಕ್ಷಗಾನವನ್ನು ಪ್ರದರ್ಶಿಸಲಿದೆ. ಕಟೀಲು ದೇವಸ್ಥಾನದ ಎಲ್ಲಾ ಆರು ಯಕ್ಷಗಾನ ಮೇಳಗಳು ಡಿಸೆಂಬರ್ 24ರ ಗುರುವಾರದಿಂದ ಸಂಜೆ 4 ಗಂಟೆಗೆ ಚೌಕಿ ಪೂಜೆ ನಡೆದು ಬಳಿಕ ಯಕ್ಷಗಾನ ಪ್ರಸಂಗ ಆರಂಭಿಸಲಿದೆ. ರಾತ್ರಿ 9:45 ಕ್ಕೆ ಮಂಗಳ ಹಾಡುವುದರ ಮೂಲಕ ಯಕ್ಷಗಾನ ಕೊನೆಗೊಳ್ಳಲಿದೆ. ಎಲ್ಲ ಕಲಾವಿದರು ಮಧ್ಯಾಹ್ನ 2:30ಕ್ಕೆ ಚೌಕಿಯಲ್ಲಿ ಹಾಜರಿರಲು ಸೂಚಿಸಲಾಗಿದೆ. ಇಂದಿನಿಂದ

ನೈಟ್‌ ಕರ್ಫ್ಯೂ ಹಿನ್ನಲೆ ➤ ಕಟೀಲು ಮೇಳದ ಎಲ್ಲಾ ಪ್ರದರ್ಶನಗಳು ಕಾಲಮಿತಿ ಯಕ್ಷಗಾನ Read More »

ಕರಾವಳಿ, ಕರ್ನಾಟಕ

ಮಲಯಾಳಂನ ಖ್ಯಾತ ನಿರ್ದೇಶಕ ನರನಿಪುಳ ಶಾನವಾಸ್‌ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಕೊಚ್ಚಿ, ಡಿ.24:ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ನರನಿಪುಳ ಶಾನವಾಸ್‌ (40) ನಿಧನರಾಗಿದ್ದಾರೆ.ಶಾನವಾಸ್‌ ಅವರಿಗೆ ಶೂಟಿಂಗ್ ವೇಳೆ ಹೃದಯಾಘಾತ ಉಂಟಾಗಿ, ಆಸ್ಪತ್ರೆ ಸೇರಿದ್ದು ಬಳಿಕ ಬ್ರೈನ್ ಡೆಡ್ ಆಗಿ ಬುಧವಾರ ಸಾವಿಗೀಡಾಗಿದ್ದಾರೆ. ‘ಗಾಂಧಿರಾಜನ್‌’ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದ ವೇಳೆ, ಚಿತ್ರೀಕರಣದ ಸೆಟ್‌ನಲ್ಲೇ ಅವರಿಗೆ ಮಂಗಳವಾರ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಚಿಂತಾಜನಕ ಸ್ಥಿತಿಯಲ್ಲಿ ಇದ್ದ ಅವರನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಕೊಚ್ಚಿ ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯದಲ್ಲೇ ಅವರಿಗೆ ಎರಡನೇ

ಮಲಯಾಳಂನ ಖ್ಯಾತ ನಿರ್ದೇಶಕ ನರನಿಪುಳ ಶಾನವಾಸ್‌ ಹೃದಯಾಘಾತದಿಂದ ನಿಧನ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು :ಬನ್ನೂರಿನಲ್ಲಿ ನಸುಕಿನ ಜಾವ ಚಿರತೆ ಪ್ರತ್ಯಕ್ಷ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.24: ಡಿ.23ರ ಕಳೆದ ದಿನ ಬೆಳಿಗ್ಗೆ ಬನ್ನೂರು ಹಲಂಗದಲ್ಲಿ ಚಿರತೆಯೊಂದು ಕಾಣಿಸಿ ಕೊಂಡಿರುವುದಾಗಿ ವರದಿಯಾಗಿದೆ. ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನಕ್ಕೆ ನಸುಕಿನ ಜಾವ ಭಕ್ತರೊಬ್ಬರು ಹೋಗುತ್ತಿದ್ದ ವೇಳೆ ಅವರಿಗೆ ಚಿರತೆಯೊಂದು ಕಾಣಿಸಿಕೊಂಡಿದೆ. ಬಳಿಕ ಮಧ್ಯಾಹ್ನ ಮಾಜಿ ಪುರಸಭಾ ಸದಸ್ಯ ಹಲಂಗ ರಾಮಣ್ಣ ಗೌಡರ ಮನೆಯ ಬಳಿಯೂ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆಯು ಮಾಜಿ ಪುರಸಭಾ ಸದಸ್ಯ ಹಲಂಗ ರಾಮಣ್ಣ ಗೌಡರ ಮನೆಯ ಬಳಿಯಿಂದ ಪಕ್ಕದ ತೆಂಗಿನ ಕೊಪ್ಪಳಕ್ಕೆ ಹೋಗಿದ್ದು ಅಲ್ಲಿಂದ ಡಂಪಿಂಗ್ ಯಾರ್ಡ್

ಪುತ್ತೂರು :ಬನ್ನೂರಿನಲ್ಲಿ ನಸುಕಿನ ಜಾವ ಚಿರತೆ ಪ್ರತ್ಯಕ್ಷ Read More »

ಕರಾವಳಿ

ನಿಟ್ಟೆ :ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾರ್ ಮ್ಯಾನೇಜರ್ .!

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಡಿ.24:ಬಾರೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಕಳ ಸಮೀಪದ ನಿಟ್ಟೆ ನಿವಾಸಿ ಸುರೇಶ್ ಶೆಟ್ಟಿ ಎಂಬವರೆ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು,ಇವರು ಪಡುಬಿದ್ರಿ ಡೌನ್ ಟೌನ್ ಬಾರಿನಲ್ಲಿ ಮ್ಯಾನೇಜರ್ ಹುದ್ದೆಯಲ್ಲಿದ್ದು ಪಡುಬಿದ್ರಿ ಸಮೀಪದ ಅಡ್ವೆಯ ಲಾಡ್ಜಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.    

ನಿಟ್ಟೆ :ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾರ್ ಮ್ಯಾನೇಜರ್ .! Read More »

ಕರಾವಳಿ
Scroll to Top