ನ್ಯೂಸ್ ಕಡಬ

ಕರ್ನಾಟಕ ಬಂದ್ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ➤ ಎಂದಿನಂತೆ ಜನಜೀವನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್ ಗೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.   ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು ಎಂದಿನಂತಿವೆ. ಜಿಲ್ಲೆಯ ಯಾವುದೇ ಸಂಘಟನೆಗಳು ಇಂದಿನ ಬಂದ್ ಗೆ ಬೆಂಬಲ ಸೂಚಿಸಿಲ್ಲ. ಖಾಸಗಿ, ಸರಕಾರಿ ಬಸ್, ಆಟೋ ಮತ್ತಿತರ ವಾಹನಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಕೊರೊನಾದಿಂದಾಗಿ ದುಡಿಮೆ ಇಲ್ಲದೆ ಕಂಗೆಟ್ಟ ಹೋಟೆಲ್ […]

ಕರ್ನಾಟಕ ಬಂದ್ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ➤ ಎಂದಿನಂತೆ ಜನಜೀವನ Read More »

ಕರಾವಳಿ

ಕಾರ್ಕಳ: ಅಕ್ರಮ ಕರು ಮಾರಾಟ ➤ ಆರೋಪಿಗಳ ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 05: ಕರುವೊಂದನ್ನು ಮಾರಾಟ ಮಾಡಿ ಹಾಗೂ ಖರೀದಿ ಮಾಡಿದ ಆರೋಪದಡಿಯಲ್ಲಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಕೇಸು ದಾಖಲಾಗಿದೆ. ಆರೋಪಿಗಳನ್ನು ಈದು ಗ್ರಾಮದ ಬೊಳ್ಯೊಟ್ಟು ಮನೆಯ ಅಲಾಫ್ ಅಲಿಯಾಸ್ ಗೌಸ್ ಮತ್ತು ಈದು ಗ್ರಾಮದ ಬಟ್ಟೆನಿ ನಿವಾಸಿ ಶೇಖರ್ ಶೆಟ್ಟಿ ಎಂದು ಗುರುತಿಸಲಾಗಿದೆ.     ಅಕ್ರಮ ಕಸಾಯಿ ಖಾನೆಗೆ ಕರುವೊಂದನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರುವೊಂದನ್ನು ರೂ.2000 ಗೆ ಖರೀದಿಸಿ ಸಾಗಾಟ ಮಾಡುತ್ತಿದ್ದುದನ್ನು ಕಂಡು ಇಬ್ಬರ ವಿರುದ್ಧ

ಕಾರ್ಕಳ: ಅಕ್ರಮ ಕರು ಮಾರಾಟ ➤ ಆರೋಪಿಗಳ ವಿರುದ್ಧ ಕೇಸು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಕಳೆದ ದಿನ ರಾ. ಹೆದ್ದಾರಿ 66 ರ ಕುಂಪಲ ಬೈಪಾಸ್‍ನಲ್ಲಿ ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.     ಗಾಯಗೊಂಡ ಬಾಲಕನನ್ನು ಐಯಾನ್(16) ಎಂದು ಗುರುತಿಸಲಾಗಿದೆ. ಐಯಾನ್ ಅಂಗಡಿಗೆ ತೆರಳಿ ವಾಪಾಸ್ಸಾಗುತ್ತಿದ್ದ ಸಂದರ್ಭ ಕಾರೊಂದು ಈತನ ಮನೆಯ ಎದುರುಗಡೆಯೇ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಾಲಕನಿಗೆ ಢಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.  

ಮಂಗಳೂರು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಬಾಲಕ ಸಹಿತ 7 ಮಂದಿಗೆ ಕಚ್ಚಿದ ಹುಚ್ಚುನಾಯಿ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 05: ವಿಟ್ಲ ಪರಿಸರದಲ್ಲಿ ಹುಚ್ಚುನಾಯಿಗಳ ಕಾಟ ಹೆಚ್ಚಾಗಿದ್ದು, ಶುಕ್ರವಾರ ಏಳು ಮಂದಿಗೆ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ. ಹುಚ್ಚುನಾಯಿ ದಾಳಿಗೆ ಒಳಗಾದವರನ್ನು ಚಂದಳಿಕೆ ನಿವಾಸಿ ಅಹರಾಜ್(6), ಬೊಬ್ಬೆಕೇರಿ ನಿವಾಸಿ ಮೌಸೀಫ್(16), ಇರಾ ನಿವಾಸಿ ಮುಸ್ತಫಾ(31), ವಿಟ್ಲ ಕಸಬಾ ನಿವಾಸಿ ಅನಿರುದ್ಧ್ (27), ಕಡಂಬು ನಿವಾಸಿ ರಾಧಾಕೃಷ್ಣ(52), ಅಳಿಕೆ ನಿವಾಸಿ ಭಾಸ್ಕರ್(49) ಎಂದು ತಿಳಿದು ಬಂದಿದ್ದು, ಎಲ್ಲರೂ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದರು. ಈ ಪೈಕಿ ಗಂಭೀರ ಗಾಯಗೊಂಡಿರುವ ಇಬ್ಬರು

ವಿಟ್ಲ: ಬಾಲಕ ಸಹಿತ 7 ಮಂದಿಗೆ ಕಚ್ಚಿದ ಹುಚ್ಚುನಾಯಿ Read More »

ಕರಾವಳಿ

ಉಪ್ಪಿನಂಗಡಿ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಮಹಮ್ಮದ್ ಓಟೆಚ್ಚಾರು ಆಯ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 04: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಮುಳುಗುತಜ್ಞರಾಗಿ ನದಿ ನೀರಿನಲ್ಲಿ ಅಪಾಯದಲ್ಲಿ ಸಿಲುಕಿದ ಜೀವಗಳನ್ನು ರಕ್ಷಣೆ ಮಾಡಿರುವ ಬಂದಾರು ಗ್ರಾಮದ ವಿ. ಮಹಮ್ಮದ್ ಓಟೆಚ್ಚಾರು ಅವರನ್ನು ಈ ವರ್ಷದ ರಾಜ್ಯ ಮಟ್ಟದ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.     ಅತ್ಯುತ್ತಮ ಈಜುಪಟುವಾಗಿರುವ ಮಹಮ್ಮದ್ ಓಟೆಚ್ಚಾರು ರವರು ಡಿ.10 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯವರು ಸನ್ಮಾನಿಸಿ ಗೌರವಿಸಲಿದ್ದಾರೆ. ಇವರು ನದಿ ನೀರಿನಲ್ಲಿ ಅಪಾಯದಲ್ಲಿ ಸಿಲುಕಿದವರ

ಉಪ್ಪಿನಂಗಡಿ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಮಹಮ್ಮದ್ ಓಟೆಚ್ಚಾರು ಆಯ್ಕೆ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 5 ಮಂದಿಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ , ಡಿ. 04: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 5 ಮಂದಿಯಲ್ಲಿ ಕೋವಿಡ್ 19 ದೃಢಪಟ್ಟಿದೆ.     ಕಡಬ ತಾಲೂಕಿನ ಚಾರ್ವಕದ 40 ವರ್ಷದ ಮಹಿಳೆ, ನೆಲ್ಯಾಡಿಯ 73 ವರ್ಷದ ವ್ಯಕ್ತಿ, ಕೊಣಾಲು ನಿವಾಸಿ 50 ವರ್ಷದ ಮಹಿಳೆಯಲ್ಲಿ ಕೊರೋನಾ ಪತ್ತೆಯಾಗಿದೆ. ಇನ್ನು ಪುತ್ತೂರು ತಾಲೂಕಿನ ಪಡುವನ್ನೂರು ನಿವಾಸಿ 10 ವರ್ಷದ ಬಾಲಕನಲ್ಲಿ ಕೊರೋನಾ ದೃಢಗೊಂಡಿದೆ.    

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 5 ಮಂದಿಗೆ ಕೋವಿಡ್ ದೃಢ Read More »

ಕರಾವಳಿ

ಕಾಸರಗೋಡು: ಆಕಸ್ಮಿಕವಾಗಿ ಅಶ್ರುವಾಯು (ಗ್ರನೇಡ್) ಸ್ಪೋಟ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 04: ಕಾಸರಗೋಡು ಸಶಸ್ತ್ರ ಮೀಸಲು ಪಡೆಯ ಮೈದಾನದಲ್ಲಿ ಆಕಸ್ಮಿಕವಾಗಿ ಗ್ರನೇಡ್ (ಅಶ್ರುವಾಯು) ಸ್ಪೋಟಗೊಂಡು ಇಬ್ಬರು ಪೊಲೀಸರು ಗಾಯಗೊಂಡ ಘಟನೆ ಇಂದು ನಡೆದಿದೆ. ಗಾಯಗೊಂಡ ವ್ಯಕ್ತಿಗಳನ್ನು ಸುಧಾಕರ ಹಾಗೂ ಪವಿತ್ರ ಎಂದು ಗುರುತಿಸಲಾಗಿದೆ.     ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಹಿನ್ನಲೆಯಲ್ಲಿ ತರಭೇತಿ ನಡೆಯುತ್ತಿದ್ದಾಗ ಆಕಸ್ಮಿಕವಾಗಿ ಗ್ರನೇಡ್ ಸ್ಪೋಟಿಸಿ ಈ ಅವಘಡ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಕಾಸರಗೋಡಿನ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಸುಧಾಕರ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ

ಕಾಸರಗೋಡು: ಆಕಸ್ಮಿಕವಾಗಿ ಅಶ್ರುವಾಯು (ಗ್ರನೇಡ್) ಸ್ಪೋಟ…! Read More »

ಕರ್ನಾಟಕ

ಐವರ್ನಾಡು: ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ತೆರವು

(ನ್ಯೂಸ್ ಕಡಬ) newskadaba.com ಐವರ್ನಾಡು, ಡಿ. 04: ಕಳೆದ ದಿನ ಐವರ್ನಾಡು ಗ್ರಾಮದ ಕುದುಂಗು-ಕೊಚ್ಚಿವರೆಗಿನ ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ತಾಗಿಕೊಂಡಿದ್ದ ಅಪಾಯಕಾರಿ ಮರಗಳನ್ನು ತೆರವುಗೊಳಿಸಲಾಯಿತು.     ಮೆಸ್ಕಾಂ ಸಿಬ್ಬಂದಿ ನವೀನ್ ಹಾಗೂ ಊರವರು ಈ ಸಂದರ್ಭದಲ್ಲಿ ಜೊತೆಗೂಡಿ ಮರಗಳನ್ನು ತೆರವುಗೊಳಿಸುವಲ್ಲಿ ಸಹಕರಿಸಿದರು.  

ಐವರ್ನಾಡು: ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ತೆರವು Read More »

ಕರಾವಳಿ

ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ’ಗಿಣಿ’

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.04: ಡ್ರಗ್ಸ್ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿಗೆ ಇನ್ನೂ ಒಂದು ತಿಂಗಳು ಜೈಲು ಫಿಕ್ಸ್ ಆಗಿದೆ. ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಇದೇ ವೇಳೆ ಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಸಿಬಿ ಪೊಲೀಸರಿಗೂ ನೋಟಿಸ್ ನೀಡಿದೆ. ಅಲ್ಲದೆ ಅರ್ಜಿ ವಿಚಾರಣೆಯನ್ನು ಮುಂದಿನ ತಿಂಗಳಿಗೆ

ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ’ಗಿಣಿ’ Read More »

ಕರಾವಳಿ, ಕರ್ನಾಟಕ

ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಆರೋಪಿ ಪರ ವಕಾಲತ್ತು ವಹಿಸದಂತೆ ರಾಮ್ ಸೇನಾ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04: ನಗರದ ಪ್ರಮುಖ ಬೀದಿಗಳ ಗೋಡೆಗಳಲ್ಲಿ ‘ಉಗ್ರ’ ಸಂಘಟನೆ ಪರ ಮತ್ತು ವಿವಾದಾತ್ಮಕ ಬರವಣಿಗೆ ಪ್ರಕರಣ ಸಂಬಂಧ ಬಂಧಿತನಾದ ಆರೋಪಿ ಮೊಹಮ್ಮದ್ ನಝೀರ್ ಪರ ವಕಾಲತ್ತು ವಹಿಸದಂತೆ ರಾಮ್ ಸೇನಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವಕೀಲರ ಸಂಘವನ್ನ ಒತ್ತಾಯಿಸಿದೆ.   ಮಂಗಳೂರು ವಕೀಲರ ಸಂಘದ ಪ್ರದಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ ಅವರನ್ನು ಭೇಟಿಯಾದ ರಾಮ್ ಸೇನಾ ಮುಖಂಡರು ಈ ಕುರಿತು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ರಾಮ್ ಸೇನಾ ಜಿಲ್ಲಾ

ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಆರೋಪಿ ಪರ ವಕಾಲತ್ತು ವಹಿಸದಂತೆ ರಾಮ್ ಸೇನಾ ಆಗ್ರಹ Read More »

ಕರಾವಳಿ
Scroll to Top