ಬೆಳ್ತಂಗಡಿ: ಮಾರಿಗುಡಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 04: ಕಳೆದ ದಿನ ರಾತ್ರಿ ಬೆಳ್ತಂಗಡಿ ತಾಲೂಕಿನ ಮಹಮ್ಮಾಯಿ ಮಾರಿಗುಡಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ದೇವಸ್ಥಾನದ ಆವರಣ ಗೋಡೆಯೊಳಗೆ ನುಗ್ಗಿದ ಕಳ್ಳರು ದೇವಸ್ಥಾನದ ಮಾಡಿನ ಹಂಚು ತೆಗೆದು ಒಳನುಗ್ಗಿ ಕಳ್ಳತನಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಆದರೇ ಯಾವುದೇ ವಸ್ತು ಕಳವಾಗಿಲ್ಲ ಹಾಗೂ ಯಾವುದೇ ಕೇಸು ದಾಖಲಾಗಿಲ್ಲ. ಇದರಿಂದಾಗಿ ತಾಲೂಕಿನಾದ್ಯಂತ ಅಲ್ಲಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.
ಬೆಳ್ತಂಗಡಿ: ಮಾರಿಗುಡಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ Read More »
ಕರಾವಳಿ








