ನ್ಯೂಸ್ ಕಡಬ

ರಷ್ಯಾ -ಉಕ್ರೇನ್ ಯುದ್ಧದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19.  ರಷ್ಯಾ ಜೊತೆಗಿನ ಯುದ್ಧದ ನಂತರ ಈ ತಿಂಗಳ ಅಂತ್ಯಕ್ಕೆ ಉಕ್ರೇನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.ಭೇಟಿಯ ಕಾರಣ ಇನ್ನೂ ಬಹಿರಂಗಗೊಂಡಿಲ್ಲ. ಉಕ್ರೇನ್ ಭೇಟಿಯನ್ನು ವಿದೇಶಾಂಗ ಸಚಿವಾಲಯ ಅಧಿಕೃತವಾಗಿ ತಿಳಿಸಿದ್ದು ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ. ಪ್ರವಾಸದ ವಿವರಗಳನ್ನು ನಂತರ ತಿಳಿಸಲಾಗುವುದು ಎಂಬುವುದಾಗಿ ವಿದೇಶಾಂಗ ಸಚಿವಾಲಯ ಉಲ್ಲೇಖಿಸಿದೆ. ಉಕ್ರೇನ್‌ಗೆ ಭೇಟಿ ನೀಡಿದ ಬಳಿಕ ಮೋದಿ ಪೋಲೆಂಡ್‌ಗೆ ಭೇಟಿ ನೀಡಲಿದ್ದಾರೆ.      

ರಷ್ಯಾ -ಉಕ್ರೇನ್ ಯುದ್ಧದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಚೀನಾದ ಹಡಗಿಗೆ ಫಿಲಿಪೈನ್ ಹಡಗು ಉದ್ದೇಶಪೂರ್ವಕ ಡಿಕ್ಕಿ            ಎಚ್ಚರಿಕೆ ನೀಡಿದ ಚೀನಾ                   

(ನ್ಯೂಸ್ ಕಡಬ) newskadaba.c0m ಚೀನಾ, ಆ. 19.  ಫಿಲಿಪೈನ್ಸ್ ನೌಕೆಯು ವಿವಾದಿತ ದಕ್ಷಿಣ ಚೀನಾ ಸಮುದ್ರದಲ್ಲಿ ಅಪಾಯಕಾರಿ ರೀತಿಯಲ್ಲಿ ಚೀನಾದ ಹಡಗಿನೊಂದಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದೆ ಎಂದು ಚೀನಾದ ಕೋಸ್ಟ್ ಗಾರ್ಡ್ ವರದಿ ತಿಳಿಸಿದೆ. ಚೀನಾ ಫಿಲಿಪೈನ್ ಮೇಲೆ ಮತ್ತೊಂದು ಆರೋಪ ಮಾಡುತ್ತಿದೆ. ಈ ಕುರಿತು ಚೈನಾ ಕೋಸ್ಟ್ ಗಾರ್ಡ್‌ನ ಸಾಮಾಜಿಕ ಮಾಧ್ಯಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿ ವೀಡಿಯೋ ಮೂಲಕ ಸಮರ್ಥಿಸಿಕೊಂಡಿದೆ. ಚೀನಾ ಕೋಸ್ಟ್ ಗಾರ್ಡ್ ವಕ್ತಾರ ಗಾನ್ ಯು ಹೇಳಿಕೆ ನೀಡಿದ ಪ್ರಕಾರ, ಮುಂಜಾನೆ

ಚೀನಾದ ಹಡಗಿಗೆ ಫಿಲಿಪೈನ್ ಹಡಗು ಉದ್ದೇಶಪೂರ್ವಕ ಡಿಕ್ಕಿ            ಎಚ್ಚರಿಕೆ ನೀಡಿದ ಚೀನಾ                    Read More »

ರಾಷ್ಟ್ರೀಯ ನ್ಯೂಸ್

ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ    ಪ್ರಧಾನಿಗೆ ಪತ್ರ ಬರೆದ 70ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರು   

(ನ್ಯೂಸ್ ಕಡಬ) newskadaba.c0m ದೆಹಲಿ, ಆ. 19.  ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪದ್ಮ ಪ್ರಶಸ್ತಿ ಪುರಸ್ಕೃತ 70ಕ್ಕೂ ಹೆಚ್ಚು ವೈದ್ಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಆರೋಗ್ಯ ಸಿಬ್ಬಂದಿಯನ್ನು ಹಿಂಸಾಚಾರದಿಂದ ರಕ್ಷಿಸಲು ಸುಗ್ರೀವಾಜ್ಞೆ ಮೂಲಕ ಪ್ರತ್ಯೇಕ ಕಾನೂನು ಜಾರಿಗೆ ತರಬೇಕು. ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಂದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.      

ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ    ಪ್ರಧಾನಿಗೆ ಪತ್ರ ಬರೆದ 70ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರು    Read More »

ಕರ್ನಾಟಕ

ನೋಂದಣಿಯಾಗದ ಹೋಟೆಲ್‌-ಹೋಂ ಸ್ಟೇ ಬಂದ್ ಮಾಡಲು ಸರ್ಕಾರ ಆದೇಶ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ರಾಜ್ಯದಲ್ಲಿ ನೋಂದಣಿಯಾಗದ ಹೋಟೆಲ್‌ಗಳು, ಹೋಂಸ್ಟೇಗಳು ಮತ್ತು ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಸಭೆ ನಡೆಸಿದ್ದು, ಸಭೆಯಲ್ಲಿ ನೋಂದಾವಣಿಯಾಗದ ಎಲ್ಲಾ ಹೋಟೆಲ್, ಹೋಂ ಸ್ಟೇಗಳು ಮತ್ತು ರೆಸಾರ್ಟ್ ಗಳನ್ನು ಬಂದ್ ಮಾಡಲು ಹಾಗೂ ಈ ಅಂಶವನ್ನು ತನ್ನ ನೀತಿಯಲ್ಲಿ ಅಳವಡಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.    

ನೋಂದಣಿಯಾಗದ ಹೋಟೆಲ್‌-ಹೋಂ ಸ್ಟೇ ಬಂದ್ ಮಾಡಲು ಸರ್ಕಾರ ಆದೇಶ..! Read More »

ಕರ್ನಾಟಕ

ಮೇಲ್ಸೇತುವೆಯಿಂದ ಸ್ಕೂಟರ್ ಎಸೆತ       ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!       

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ಸ್ಕೂಟರ್ ಗಳನ್ನು ಮೇಲ್ಸೇತುವೆಯಿಂದ ಕೆಳಗೆ ಎಸೆದವರ ವಿರುದ್ಧವೂ ಮಾದನಾಯಕನಹಳ್ಳಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಯುವಕರು ವ್ಹೀಲಿಂಗ್ ಮಾಡುತ್ತಿದ್ದರು. ಇದರಿಂದ ಆಕ್ರೋಶಗೊಂಡ ಕೆಲವರು ಅಡಕಮಾರನಹಳ್ಳಿಯ ಮೇಲ್ಸೇತುವೆಯಿಂದ ವಾಹನಗಳನ್ನು ಕೆಳಗೆ ಎಸೆದಿದ್ದರು.    

ಮೇಲ್ಸೇತುವೆಯಿಂದ ಸ್ಕೂಟರ್ ಎಸೆತ       ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!        Read More »

ಕರ್ನಾಟಕ

”ರಾಷ್ಟ್ರೀಯ ಪ್ರಶಸ್ತಿ ಬಗ್ಗೆ ಕನಸಲ್ಲೂ ಊಹಿಸಿರಲಿಲ್ಲ”        ಸಿನಿಮಾ ನಿರ್ದೇಶಕ ದಿನೇಶ್ ಶೆಣೈ      

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಕನ್ನಡದ ಮಧ್ಯಂತರ ಕಿರು ಚಿತ್ರಕ್ಕೆ 2 ರಾಷ್ಟ್ರೀಯ ಪ್ರಶಸ್ತಿಗಳು ಒಲಿದಿದ್ದು, ಪ್ರಶಸ್ತಿ ಘೋಷಣೆಯಾದಾಗ ಸಿನಿಮಾ ನಿರ್ದೇಶಕ ದಿನೇಶ್ ಶೆಣೈ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ ಚಿತ್ರೀಕರಣದಲ್ಲಿ ವ್ಯಸ್ತರಾಗಿದ್ದರು. ಮೊದಲು ತಮ್ಮ ಕಿರು ಚಿತ್ರಕ್ಕೆ ಅತ್ಯುತ್ತಮ ಸಂಕಲನ ವಿಭಾಗದಲ್ಲಿ ಸಂಕಲನಕಾರ ಸುರೇಶ್ ಅವರಿಗೆ ಪ್ರಶಸ್ತಿ ಘೋಷಣೆಯಾಗಿದ್ದಕ್ಕೆ ದಿನೇಶ್ ಶೆಣೈ ಸುರೇಶ್ ಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು. ಇದಾದ ಕೆಲವೇ ಕ್ಷಣಗಳಲ್ಲಿ ದಿನೇಶ್ ಗೆ ಕರೆ ಮಾಡಿದ ಸುರೇಶ್ ಅರಸ್ ಹೊಸ

”ರಾಷ್ಟ್ರೀಯ ಪ್ರಶಸ್ತಿ ಬಗ್ಗೆ ಕನಸಲ್ಲೂ ಊಹಿಸಿರಲಿಲ್ಲ”        ಸಿನಿಮಾ ನಿರ್ದೇಶಕ ದಿನೇಶ್ ಶೆಣೈ       Read More »

ಕರ್ನಾಟಕ

ಅಕ್ಟೋಬರ್ ನಿಂದ BSNL 4G ಸೇವೆಗಳು ಪ್ರಾರಂಭ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19.  ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಅಕ್ಟೋಬರ್ ನಿಂದ 4G ಸೇವೆಗಳನ್ನು ದೇಶಾದ್ಯಂತ ಪ್ರಾರಂಭಿಸಲಿದೆ. ಟೆಲಿಕಾಂ ಸಂಸ್ಥೆ 4 ಜಿ ಸೇವೆಗಳನ್ನು ಪರೀಕ್ಷಾರ್ಥ ಪ್ರಯೋಗಿಸಿದ್ದು, ಫಲಿತಾಂಶ ನಿರೀಕ್ಷಿತವಾಗಿದೆ ಎಂದು ಸಂಸ್ಥೆ ತಿಳಿಸಿದೆ. ದೇಶಾದ್ಯಂತ 25,000 4G ಟವರ್ ಗಳನ್ನು ಸ್ಥಾಪಿಸಿದೆ. ಇದರ ಜೊತೆಗೆ ಬಿಎಸ್ಎನ್ಎಲ್ 4G ಸಿಮ್ ಗಳನ್ನು ಗ್ರಾಹಕರಿಗೆ ನೀಡುತ್ತಿದೆ ಎಂದು ವರದಿ ತಿಳಿಸಿದೆ.  

ಅಕ್ಟೋಬರ್ ನಿಂದ BSNL 4G ಸೇವೆಗಳು ಪ್ರಾರಂಭ Read More »

ರಾಷ್ಟ್ರೀಯ ನ್ಯೂಸ್

‘ಲ್ಯಾಟರಲ್ ಎಂಟ್ರಿ’ ನೇಮಕಾತಿ  ರಾಹುಲ್ ಗಾಂಧಿ ವಾಗ್ದಾಳಿ..!       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19.  ಲ್ಯಾಟರಲ್ ಎಂಟ್ರಿ ಮೂಲಕ ಸರ್ಕಾರಿ ನೌಕರರನ್ನು ನೇಮಕ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಕ್ರಮ “ದೇಶವಿರೋಧಿ ಕ್ರಮ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ಬಹಿರಂಗವಾಗಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ, ” ಕೇಂದ್ರ ಲೋಕಸೇವಾ ಆಯೋಗದ ಬದಲಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ಸಾರ್ವಜನಿಕ ಸೇವಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ

‘ಲ್ಯಾಟರಲ್ ಎಂಟ್ರಿ’ ನೇಮಕಾತಿ  ರಾಹುಲ್ ಗಾಂಧಿ ವಾಗ್ದಾಳಿ..!        Read More »

ರಾಷ್ಟ್ರೀಯ ನ್ಯೂಸ್

ಐಫೋನ್‌ ಗಾಗಿ ಯುವಕನೋರ್ವ ಮೂರು ದಿನಗಳ ಉಪವಾಸ             

(ನ್ಯೂಸ್ ಕಡಬ) newskadaba.c0m ದೆಹಲಿ, ಆ. 19.  ಬೆಲೆ ಬಾಳುವ ಐಫೋನ್‌ ಗಾಗಿ ಯುವಕನೋರ್ವ ಮೂರು ದಿನಗಳ ಉಪವಾಸ ಮಾಡಿ ದೇವಸ್ಥಾನದ ಹೊರಗೆ ಹೂ ವ್ಯಾಪಾರ ಮಾಡುವ ತನ್ನ ತಾಯಿಯನ್ನು ಒಪ್ಪಿಸಿದ್ದಾನೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವೈರಲ್ ಆದ ವಿಡಿಯೋದಲ್ಲಿ ‘ಹೂವು ಮಾರಾಟ ಮಾಡುವ ತಾಯಿ ಹಾಗೂ ಆಕೆಯ ಮಗ ಮೊಬೈಲ್ ಖರೀದಿಸಲು ಅಂಗಡಿಗೆ ಬಂದಿದ್ದಾರೆ. ಈ ವೇಳೆ ಆತನ ತಾಯಿ ತಾನು ದೇವಸ್ಥಾನದ ಹೊರಗೆ

ಐಫೋನ್‌ ಗಾಗಿ ಯುವಕನೋರ್ವ ಮೂರು ದಿನಗಳ ಉಪವಾಸ              Read More »

ಕರ್ನಾಟಕ

ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆ..!     

(ನ್ಯೂಸ್ ಕಡಬ) newskadaba.c0m ಭುವನೇಶ್ವರ, ಆ. 19.  ಒಡಿಶಾದ ಐದು ಜಿಲ್ಲೆಗಳಲ್ಲಿ ಸಿಡಿಲು ಬಡಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2 ದಿನದಲ್ಲಿ ಸಿಡಿಲಿನಿಂದ ಬಲಿಯಾದವರ ಸಂಖ್ಯೆ 15ಕ್ಕೆ ಏರಿದೆ ಎಂದು ವರದಿಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ 9 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಸಿಡಿಲು ಬಡಿದು ಹಲವರು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಿಡಿಲಿನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 4

ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆ..!      Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top