ಮಂಗಳೂರು: ತುಳು ಅಭಿವೃದ್ದಿ ಪ್ರಾಧಿಕಾರ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಬಿ.ಕೆ ಹರಿಪ್ರಸಾದ್ ಒತ್ತಾಯ
(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ರವರು ರಾಜ್ಯ ಸರ್ಕಾರ ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚನೆಯ ಬೆನ್ನಲ್ಲೇ ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ಅಭಿವೃದ್ಧಿಗೆ ನಿಜವಾದ ಕೊಡುಗೆ ನೀಡಿದವರು ತುಳುವರು. ಅವರನ್ನು ಸರ್ಕಾರ ಕಡೆಗಣಿಸಿದೆ. ಹೀಗಾಗಿ ಕೊಡುವ ಇತ್ಯಾದಿ ಕರ್ನಾಟಕ ಅಂತರ್ಗತವಾದ ಸ್ಥಳೀಯ ಭಷೆಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಮಂಗಳೂರು: ತುಳು ಅಭಿವೃದ್ದಿ ಪ್ರಾಧಿಕಾರ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಬಿ.ಕೆ ಹರಿಪ್ರಸಾದ್ ಒತ್ತಾಯ Read More »
ಕರಾವಳಿ









