ನ್ಯೂಸ್ ಕಡಬ

ಮಂಗಳೂರು: ಗಣರಾಜ್ಯೋತ್ಸವ ಹಿನ್ನೆಲೆ ➤ ಈ ಭಾರಿ ಫಲಪುಷ್ಪ ಪ್ರದರ್ಶನ ರದ್ದು ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25:  ನಗರದ ಕದ್ರಿ ಪಾರ್ಕ್‌ನಲ್ಲಿ ಪ್ರತಿ ವರ್ಷ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗುತ್ತಿದ್ದ ಜಿಲ್ಲಾಮಟ್ಟದ ಫಲಪುಷ್ಪ ಪ್ರದರ್ಶನ ರದ್ದುಗೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ತೋಟಗಾರಿಕಾ ಇಲಾಖೆ ಅಧಿಕಾರಿಗಳು, ಕೊರೊನಾ ಹಿನ್ನೆಲೆಯಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆಗೆ ಸರ್ಕಾರದ ಅನುಮತಿ, ಅನುದಾನ ಸಿಗುವುದು ಕಷ್ಟ. ಸದ್ಯ ಬೆಳಗ್ಗೆ ಮತ್ತು ಸಂಜೆ ವೇಳೆ ಮಾತ್ರ ಕದ್ರಿ ಪಾರ್ಕ್ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಇತ್ತ ಫಲಪುಷ್ಪ ಪ್ರದರ್ಶನ ನಡೆಸಲು ನಾಲ್ಕು ತಿಂಗಳ […]

ಮಂಗಳೂರು: ಗಣರಾಜ್ಯೋತ್ಸವ ಹಿನ್ನೆಲೆ ➤ ಈ ಭಾರಿ ಫಲಪುಷ್ಪ ಪ್ರದರ್ಶನ ರದ್ದು ಸಾಧ್ಯತೆ Read More »

ಕರಾವಳಿ

‘ಕೋಟಿ ಚೆನ್ನಯ್ಯ’ ಏರ್ ಪೋರ್ಟ್ ಗೆ ಸುಸ್ವಾಗತ’ ➤ ಹೋರ್ಡಿಂಗ್ಸ್ ಗಳನ್ನ ಅಳವಡಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಆರಾಧನಾ ಪುರುಷರಾದ ಕೋಟಿ ಚೆನ್ನಯ್ಯರ ಹೆಸರಿಡಬೇಕೆಂದು ಹೋರಾಟ ನಡೆಸುತ್ತಿದ್ದ ಕಾಂಗ್ರೆಸ್ ಇದೀಗ ಬೇರೆ ರೀತಿಯಲ್ಲಿಯೇ ಪ್ರತಿಭಟನೆ ನಡೆಸುತ್ತಿದೆ. ಯುವ ಕಾಂಗ್ರೆಸ್ ಇದೀಗ ‘ಕೋಟಿ ಚೆನ್ನಯ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಸ್ವಾಗತ’ ಅನ್ನೋ ಹೋರ್ಡಿಂಗ್ಸ್ ಗಳನ್ನ ಅಳವಡಿಸಿದ್ದು ಗಮನಸೆಳೆದಿದೆ.   ವಿಮಾನ ನಿಲ್ದಾಣದ ಪ್ರವೇಶ ದ್ವಾರ, ನಿರ್ಗಮನ ದ್ವಾರ ಹಾಗೂ ಪ್ರಮುಖ ರಸ್ತೆಯ ಬಳಿ ದೊಡ್ಡದಾದ ಮೂರು ಹೋರ್ಡಿಂಗ್ಸ್ ಗಳನ್ನ ಅಳವಡಿಸಿದೆ. ಕಳೆದ

‘ಕೋಟಿ ಚೆನ್ನಯ್ಯ’ ಏರ್ ಪೋರ್ಟ್ ಗೆ ಸುಸ್ವಾಗತ’ ➤ ಹೋರ್ಡಿಂಗ್ಸ್ ಗಳನ್ನ ಅಳವಡಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಪ್ರವಾಸಿಗರಿಗೆ ಜೆಲ್ ಫಿಶ್ ಕಾಟ ➤ ಸೈಂಟ್ ಮೇರೀಸ್ ದ್ವೀಪ ಅವ್ಯವಸ್ಥೆಗೆ ಆಕ್ರೋಶ

(ನ್ಯೂಸ್ ಕಡಬ) newskadaba.com ಉಡುಪಿ ನ. 25:  ಉಡುಪಿಯ ಮಲ್ಪೆ ಸೈಂಟ್ ಮೇರೀಸ್ ದ್ವೀಪ ಅವ್ಯವಸ್ಥೆಗಳ ಆಗರವಾಗಿದ್ದು, ಪ್ರವಾಸಿಗರು ಎಚ್ಚರ ವಹಿಸಬೇಕಾಗಿದೆ ಎಂದು ಮುಲ್ಕಿ ಸಮೀಪದ ಶಿಮಂತೂರಿನ ಸಾಮಾಜಿಕ ಕಾರ್ಯಕರ್ತ ಸುಧೀರ್ ಶೆಟ್ಟಿ ಹೇಳಿದ್ದಾರೆ.     ಸೈಂಟ್ ಮೇರೀಸ್ ದ್ವೀಪದಲ್ಲಿ ಸ್ನಾನ ಮಾಡುವ ಪ್ರವಾಸಿಗರಿಗೆ ಜೆಲ್ ಫಿಶ್ ಕಚ್ಚುತ್ತಿದ್ದು, ತುಂಬಾ ನೋವು ಅನುಭವಿಸಬೇಕಾಗುತ್ತದೆ. ಕಳೆದ ದಿನದ ಹಿಂದೆ ಸುಧೀರ್ ಶೆಟ್ಟಿ ಶಿಮಂತೂರ್ ಕುಟುಂಬ ಮಲ್ಪೆ ಸೈಂಟ್‌ ಮೇರೀಸ್ ದ್ವೀಪಕ್ಕೆ ತೆರಳಿ ಸ್ನಾನಕ್ಕೆ ನೀರಿಗೆ ಇಳಿದಿದ್ದರು. ಅಲ್ಲಿ ಅವರ

ಪ್ರವಾಸಿಗರಿಗೆ ಜೆಲ್ ಫಿಶ್ ಕಾಟ ➤ ಸೈಂಟ್ ಮೇರೀಸ್ ದ್ವೀಪ ಅವ್ಯವಸ್ಥೆಗೆ ಆಕ್ರೋಶ Read More »

ಕರಾವಳಿ, ಕರ್ನಾಟಕ

ಫೀಸ್ ಕಟ್ಟದ ಮಕ್ಕಳನ್ನು ಫೇಲ್ ಮಾಡುವಂತಿಲ್ಲ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಡಕ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 25: ಈ ವರ್ಷ ಶಾಲಾ ಶುಲ್ಕ ಕಟ್ಟದ ಮಕ್ಕಳನ್ನು ಮುಂದಿನ ವರ್ಷಕ್ಕೆ ಪಾಸ್ ಮಾಡಲ್ಲ ಎಂದು ಖಾಸಗಿ ಶಾಲೆಗಳು ಯಾವುದೇ ಕಾರಣಕ್ಕೂ ಹೇಳುವಂತಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.   ಬಳಿಕ ಖಾಸಗಿ ಶಾಲೆಗಳ ಶುಲ್ಕ ವಸೂಲಿ ವಿಚಾರದ ಬಗ್ಗೆಯೂ ಮಾತನಾಡಿ, ಸೆಕೆಂಡ್ ಟರ್ಮ್ ಫೀಸ್ ಕಲೆಕ್ಟ್ ಮಾಡಲು ಖಾಸಗಿ ಶಾಲೆಗಳು ಅನುಮತಿ ಕೇಳಿವೆ. ಸರ್ಕಾರ ಇನ್ನೂ ಅನುಮತಿ ಕೊಟ್ಟಿಲ್ಲ. ಫೀಸ್ ಕಲೆಕ್ಟ್ ಮಾಡಿದ ತಕ್ಷಣ

ಫೀಸ್ ಕಟ್ಟದ ಮಕ್ಕಳನ್ನು ಫೇಲ್ ಮಾಡುವಂತಿಲ್ಲ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಡಕ್ ಸೂಚನೆ Read More »

ಕರ್ನಾಟಕ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 25: ಕನ್ನಡ ಸಾಹಿತ್ಯ ಆಭಿಮಾನಿಗಳಿಗೆ ಸಿಹಿ ಸುದ್ದಿ ದೊರೆತಿದ್ದು, 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗಧಿಯಾಗಿದೆ. ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಹಾವೇರಿಯಲ್ಲಿ ನಡೆಸಲು ಸಿದ್ಧತೆ ನಡೆಸಿದ್ದು, 2021ರ ಫೆಬ್ರವರಿ 26, 27 ಮತ್ತು 28ರಂದು ದಿನಾಂಕ ನಿಗಧಿ ಪಡಿಸಲಾಗಿದೆ.   ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಗಾರ್ ಅಧ್ಯಕ್ಷತೆಯಲ್ಲಿ, ಮಂಗಳವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಪ್ರಕಟ Read More »

ಕರ್ನಾಟಕ

ಮೂಡಬಿದಿರೆ: ಮದುವೆ ಸಮಾರಂಭಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಜಲಸಮಾಧಿ

(ನ್ಯೂಸ್ ಕಡಬ) newskadaba.com ಮೂಡಬಿದಿರೆ ನ. 25: ಕಡಂದಲೆ ತುಲೆಮುಗೇರ್ ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ನೀರೂಪಾಲದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದೆ.     ಮೃತಪಟ್ಟವರನ್ನು ವಾಮಂಜೂರು ಮೂಡುಶೆಡ್ಡೆ ನಿಖಿಲ್ (18), ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹರ್ಷಿತಾ ( 20), ಡಿಪ್ಲೊಮಾ ವಿದ್ಯಾರ್ಥಿ ವೇಣೂರಿನ ಸುಭಾಸ್ ಅಚಾರ್ಯ (19), ಬಜ್ಪೆ ಪೆರಾರದ ರವಿ (30)ಎಂದು ಗುರುತಿಸಲಾಗಿದೆ.‌ ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು

ಮೂಡಬಿದಿರೆ: ಮದುವೆ ಸಮಾರಂಭಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಜಲಸಮಾಧಿ Read More »

ಕರಾವಳಿ

ಹಿರಿಯ ಕಾಂಗ್ರೇಸ್ ನಾಯಕ ಅಹ್ಮದ್ ಪಟೇಲ್ ನಿಧನ

(ನ್ಯೂಸ್ ಕಡಬ) newskadaba.com ನವದೆಹಲಿ ನ. 25: ರಾಜ್ಯಸಭಾ ಸದಸ್ಯ, ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್(71) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.       ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಜೊತೆಗೆ ತಿಂಗಳ ಹಿಂದೆ ಕೋವಿಡ್ 19 ಪಾಸಿಟಿವ್ ಬಂದಾಗ ಅವರನ್ನು ಹೆಗಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗುರು ಗ್ರಾಮದ ಮೆದಾಂತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಿಂದ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಸಾವು ಬದುಕಿನ ನಡುವೆ ಸೆಣಸಾಡಿದ ಅಹಮದ್

ಹಿರಿಯ ಕಾಂಗ್ರೇಸ್ ನಾಯಕ ಅಹ್ಮದ್ ಪಟೇಲ್ ನಿಧನ Read More »

ರಾಷ್ಟ್ರೀಯ ನ್ಯೂಸ್

ಐಎಂಎ ಹಗರಣ ➤ ಐಪಿಎಸ್​ ಅಧಿಕಾರಿ ಅಜಯ್​ ಹಿಲೋರಿಗೆ ಸಿಬಿಐ ನೋಟೀಸ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 24: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ. ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಜತೆ ಡೀಲ್ ನಡೆಸಿದ್ದರೆನ್ನುವ ಆರೋಪ ಹಿಲೋರಿ ಅವರ ಮೇಲಿದ್ದು ಈ ಬಗ್ಗೆ ವಿಚಾರಣೆ ನಡೆಸಲು ಸಿಬಿಐ ಹಿಲೋರಿಗೆ ನೋಟೀಸ್ ಕೊಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ (ಹೆಚ್ಚುವರಿ ಪೊಲೀಸ್​ ಆಯುಕ್ತ ,ಆಡಳಿತ), ಬೆಂಗಳೂರು ನಗರ ಪೊಲೀಸ್​

ಐಎಂಎ ಹಗರಣ ➤ ಐಪಿಎಸ್​ ಅಧಿಕಾರಿ ಅಜಯ್​ ಹಿಲೋರಿಗೆ ಸಿಬಿಐ ನೋಟೀಸ್ Read More »

ಕರಾವಳಿ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com  ನ. 24: ಕಳೆದ ದಿನ ರಾತ್ರಿ ಕುಂಬಳೆ ಕಂಚಿಕಟ್ಟೆ ಸೇತುವೆಯ ಸಮೀಪ ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 288 ಬಾಟ್ಲಿ ವಿದೇಶಿ ಮದ್ಯವನ್ನು ಕುಂಬಳೆ ಪೊಲೀಸರು ವಶಕ್ಕೆ ಪಡೆದುಕೊಂಡು ಓರ್ವನನ್ನು ಬಂಧಿಸಿದ್ದಾರೆ.     ಬಂಧಿತ ಆರೋಪಿಯನ್ನು ಕುಂಬಳೆಯ ನಿತೇಶ್ (27) ಎಂದು ಗುರುತಿಸಲಾಗಿದೆ. ಕಂಚಿಕಟ್ಟೆ ಸೇತುವೆ ಸಮೀಪ ಕಾರನ್ನು ತಪಾಸಣೆ ನಡೆಸಿದಾಗ ಕಾರಿನ ಡಿಕ್ಕಿ ಹಾಗೂ ಹಿಂಬದಿ ಸೀಟಿನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇದರಿಂದ ಆತನನ್ನು ಪೊಲೀಸರು ಬಂಧಿಸುವಲ್ಲಿ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ➤ ಆರೋಪಿ ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

“ಫೆವಿಕಲ್” ಯಕ್ಷಗಾನ ಜಾಹಿರಾತು ವಿರುದ್ದ ಕರಾವಳಿಯಲ್ಲಿ ಆಕ್ರೋಶ ➤ ಜಾಹಿರಾತು ಹಿಂಪಡೆದು ಕರಾವಳಿಗರಲ್ಲಿ ಬಹಿರಂಗವಾಗಿ ಕ್ಷಮೆಗೆ ಶಾಸಕ ಕಾಮತ್ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ‘ಫೆವಿಕಾಲ್’ ಗಮ್ ಗೆ ಸಂಬಂಧಿಸಿದ ಹೊಸ ಜಾಹೀರಾತೊಂದು ಇದೀಗ ಕರಾವಳಿ ಭಾಗದ ಮಂದಿಯ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ರಾಜ್ಯ ಮಟ್ಟದ ವಾಹಿನಿಯಲ್ಲೂ ಬಿತ್ತರವಾಗುತ್ತಿರುವ ಈ ಜಾಹೀರಾತಿನಲ್ಲಿ ಕರಾವಳಿ ಕರ್ನಾಟಕದ ಗಂಡು ಕಲೆ ಎಂದು ಗುರುತಿಸಿಕೊಂಡ ಯಕ್ಷಗಾನಕ್ಕೆ ಅವಮಾನಿಸಲಾಗಿದೆ ಅನ್ನೋದೆ ಆಕ್ರೋಶಕ್ಕೆ ಕಾರಣ. ಜಾಹೀರಾತಿನಲ್ಲಿ ಯಕ್ಷಗಾನದ ವೇಷಧಾರಿಗಳನ್ನು ಹಾಗೂ ಭಾಗವತರು ಮತ್ತಿತರರನ್ನು ತಮಾಷೆಯ ರೀತಿಯಲ್ಲಿ ಬಿಂಬಿಸಲಾಗಿದ್ದು, ಜಾಹೀರಾತಿಗಾಗಿ ಯಕ್ಷಗಾನ ಕಲೆಯನ್ನು ದುರ್ಬಳಕೆ ಮಾಡಲಾಗಿದೆ ಅನ್ನೋದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ.ಜಾಹಿತಾರು ಹಿಂಪಡೆದು ಕರಾವಳಿಗರಲ್ಲಿ ಬಹಿರಂಗವಾಗಿ

“ಫೆವಿಕಲ್” ಯಕ್ಷಗಾನ ಜಾಹಿರಾತು ವಿರುದ್ದ ಕರಾವಳಿಯಲ್ಲಿ ಆಕ್ರೋಶ ➤ ಜಾಹಿರಾತು ಹಿಂಪಡೆದು ಕರಾವಳಿಗರಲ್ಲಿ ಬಹಿರಂಗವಾಗಿ ಕ್ಷಮೆಗೆ ಶಾಸಕ ಕಾಮತ್ ಆಗ್ರಹ Read More »

ಕರಾವಳಿ, ಕರ್ನಾಟಕ
Scroll to Top