ನ್ಯೂಸ್ ಕಡಬ

ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ..!         ಬೃಹತ್ ಪ್ರತಿಭಟನೆ     

(ನ್ಯೂಸ್ ಕಡಬ)newskadaba.com ಕೋಲ್ಕತ್ತ, ಆ.10. ಸರ್ಕಾರಿ ಸ್ವಾಮ್ಯದ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿಯ ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆಕೆಯ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.ಈ ಮಧ್ಯೆ ಪಶ್ಚಿಮ ಬಂಗಾಳದಾದ್ಯಂತ ರಸ್ತೆ ತಡೆ ನಡೆಸುವುದಾಗಿ ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ಶನಿವಾರ ತಿಳಿಸಿದ್ದು, ಉತ್ತರ ಕೋಲ್ಕತ್ತಾದ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ಡಾಕ್ಟರ್ ಅರೆ ನಗ್ನ ಶವ ಪತ್ತೆಯಾಗಿತ್ತು. ಹತ್ಯೆಯನ್ನು […]

ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ..!         ಬೃಹತ್ ಪ್ರತಿಭಟನೆ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ನಮ್ಮ ಹೂಡಿಕೆ-ಆಸ್ತಿ ರಕ್ಷಣೆ ವಿಶೇಷ ಮಸೂದೆ ಜಾರಿಗೆ ತನ್ನಿ..! ಪ್ರಧಾನಿ ಮೋದಿಗೆ NRIಗಳ ಆಗ್ರಹ..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ವಂಚನೆಯಿಂದಾಗಿ ಅನಿವಾಸಿ ಭಾರತೀಯರು ಅಪಾರ ಪ್ರಮಾಣದ ಆರ್ಥಿಕ ನಷ್ಟ ಅನುಭವಿಸುತ್ತಿದ್ದು, ತಮ್ಮ ಹೂಡಿಕೆ, ಉಳಿತಾಯ ಹಾಗೂ ಆಸ್ತಿ-ಪಾಸ್ತಿಗಳ ರಕ್ಷಣೆಗೆ ವಿಶೇಷ ಮಸೂದೆ ಜಾರಿಗೆ ತರುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ವಿಜಯಪುರದ ಬಿಜೆಪಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ರಮೇಶ ಜಿಗಜಿಣಗಿ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ಮಸೂದೆ ಕುರಿತು ಚರ್ಚಿಸಲು ತುರ್ತು ಸಭೆ ನಡೆಸುವಂತೆ ಮನವಿ ಮಾಡಿಕೊಂಡಿದ್ದಾರೆ. NRI ಕುಂದುಕೊರತೆಗಳ ಗುಂಪಿನ

ಭಾರತದಲ್ಲಿ ನಮ್ಮ ಹೂಡಿಕೆ-ಆಸ್ತಿ ರಕ್ಷಣೆ ವಿಶೇಷ ಮಸೂದೆ ಜಾರಿಗೆ ತನ್ನಿ..! ಪ್ರಧಾನಿ ಮೋದಿಗೆ NRIಗಳ ಆಗ್ರಹ..! Read More »

ರಾಷ್ಟ್ರೀಯ ನ್ಯೂಸ್

ಬಾಡಿಗೆ ಮನೆಯಲ್ಲಿ ವ್ಯಕ್ತಿಯೋರ್ವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಆ.10. ನಗರದ ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೊಟೇಲಿನ ಎದುರುಗಡೆ ಇರುವ ನಾಗರಾಜ ಎಂಬವರಿಗೆ ಸೇರಿದ ಬಾಡಿಗೆ ಕಟ್ಟಡದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್‌ ಆಚಾರ್ಯ ಎಂಬವರು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿದ್ದು ಅವಿವಾಹಿತರಾಗಿದ್ದರು. ಸಂತೋಷ ಆಚಾರ್ಯ ಕಳೆದ 25 ವರ್ಷಗಳಿಂದ ಕುಂದಾಪುರ ನಗರದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದರು. ವಾರಕ್ಕೊಮ್ಮೆ ಬ್ರಹ್ಮಾವರ ಬಳಿಯ ಉಪ್ಪೂರಿನಲ್ಲಿರುವ ತನ್ನ ಮನೆಗೆ ಹೋಗಿ ಬರುತ್ತಿದ್ದರು. ನಾಗರ ಪಂಚಮಿಯ ಪ್ರಯುಕ್ತ ಅಣ್ಣ ಮನೆಗೆ ಬರಲಿಲ್ಲವೆಂದು

ಬಾಡಿಗೆ ಮನೆಯಲ್ಲಿ ವ್ಯಕ್ತಿಯೋರ್ವ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಿಜಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ..!      ಬಿಬಿಎಂಪಿ ಆಯುಕ್ತರು..!               

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಬಿಬಿಎಂಪಿ ಇದೀಗ ನಗರ ವ್ಯಾಪ್ತಿಯಲ್ಲಿ ‘ಪೇಯಿಂಗ್‌ ಗೆಸ್ಟ್‌’ (ಪಿಜಿ)ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಬಿಬಿಎಂಪಿ ಕಾಯ್ದೆ–2020ರ ಸೆಕ್ಷನ್‌ 305ರ ಪ್ರಕಾರ, ಪಿಜಿಗಳಿಗೆ ಉದ್ದಿಮೆ ಪರವಾನಗಿ ನೀಡುವಾಗ ಪಾಲನೆ ಮಾಡಬೇಕಾದ ಮಾರ್ಗಸೂಚಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತರು ಹೊರಡಿಸಿದ್ದಾರೆ. ಈಗಾಗಲೇ ಉದ್ದಿಮೆ ಪರವಾನಗಿ ಪಡೆದಿರುವ ಪಿಜಿಗಳೂ ನವೀಕರಣ ಸಂದರ್ಭದಲ್ಲಿ ಈ ಮಾರ್ಗಸೂಚಿಗಳನ್ನು ಪಾಲಿಸಿರಬೇಕು. ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ಸೂಚಿಸಲಾಗಿದೆ.  

ಪಿಜಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ..!      ಬಿಬಿಎಂಪಿ ಆಯುಕ್ತರು..!                Read More »

ಕರ್ನಾಟಕ

ಮತ್ತೇ ರೈಲು ಮಾರ್ಗದಲ್ಲಿ ಭೂಕುಸಿತ..! ಬೆಂಗಳೂರು- ಮಂಗಳೂರು ರೈಲು ಸಂಚಾರ ರದ್ದು      

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ಎರಡು ದಿನದ ಹಿಂದಷ್ಟೇ ಆರಂಭಗೊಂಡ ಬೆಂಗಳೂರು-ಮಂಗಳೂರು ರೈಲು ಸೇವೆ ತಾತ್ಕಾಲಿಕವಾಗಿ ಮತ್ತೆ ರದ್ದುಗೊಳಿಸಿದ್ದು, ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ ಪರಿಣಾಮ ರೈಲುಗಳ ಸಂಚಾರ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ. ಶನಿವಾರ ಮುಂಜಾನೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ಮಾರ್ಗ ಮಧ್ಯೆ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಶುಕ್ರವಾರ(ಆ.09) ದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮುರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ ಎಂದು ವರದಿ ತಿಳಿಸಿದೆ.

ಮತ್ತೇ ರೈಲು ಮಾರ್ಗದಲ್ಲಿ ಭೂಕುಸಿತ..! ಬೆಂಗಳೂರು- ಮಂಗಳೂರು ರೈಲು ಸಂಚಾರ ರದ್ದು       Read More »

ಕರ್ನಾಟಕ

‘ಸಿದ್ದರಾಮಯ್ಯ ಮನೆಗೆ ಹೋಗೋ ಕಾಲ ಹತ್ತಿರವಾಗಿದೆ’            ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ        

(ನ್ಯೂಸ್ ಕಡಬ)newskadaba.com ಮೈಸೂರು, ಆ.09. ಪಾಪ ಅವರು ನಿವೃತ್ತಿ ತಗೊಂಡು ಮನೆಗೆ ಹೋಗುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಯಾರು ನಿವೃತ್ತಿಯಾಗ್ತಾರೆ, ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಅವರು ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ. ಮುಡಾದಲ್ಲಿ ನಡೆದ ಅಕ್ರಮ ಹಗರಣ ಖಂಡಿಸಿ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಭಾಗಿಯಾಗಲು ಮೈಸೂರಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಚಾಮುಂಡೇಶ್ವರಿ ದರ್ಶನ ಪಡೆದರು ಎಂದು ವರದಿಯಾಗಿದೆ.

‘ಸಿದ್ದರಾಮಯ್ಯ ಮನೆಗೆ ಹೋಗೋ ಕಾಲ ಹತ್ತಿರವಾಗಿದೆ’            ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ         Read More »

ಕರ್ನಾಟಕ

ಟೊಮೇಟೊ ಬೆಲೆ ಕುಸಿತ ಆಕ್ರೋಶ ವ್ಯಕ್ತಪಡಿಸಿದ ರೈತರು

(ನ್ಯೂಸ್ ಕಡಬ)newskadaba.com ಗದಗ, ಆ.09. ಟೊಮೆಟೋ ಬೆಳೆಗೆ ದಿಢೀರನೆ ಬೆಲೆ ಕುಸಿದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸಗಟು ಮಾರುಕಟ್ಟೆಗೆ ಹೋಗುವ ರಸ್ತೆಗಳಲ್ಲಿ ಟೊಮೆಟೋ ಸುರಿದ ರೈತರು, ವರ್ತಕರ ಮೇಲೆ ಆಕ್ರೋಶಗೊಂಡ ವ್ಯಕ್ತಪಡಿಸಿದರು ಎನ್ನಲಾಗಿದೆ. ಲಾಭದ ನಿರೀಕ್ಷೆಯಲ್ಲಿ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಸಮೀಪದ ಇತರೆ ಗ್ರಾಮಗಳ ಅನೇಕ ರೈತರು ಬೆಳಗ್ಗೆಯೇ ಮಾರುಕಟ್ಟೆಗೆ ಟೊಮೆಟೊ ತಂದಿದ್ದರು. ಆದರೆ, ಒಂದು ಕ್ರೇಟ್ ಟೊಮೇಟೊ ಬೆಲೆ 20 ರಿಂದ 30 ರೂ.ವರೆಗೆ ಇದೆ ಎಂದು ವ್ಯಾಪಾರಿಗಳು ಹೇಳಿದಾಗ, ಆಘಾತಕ್ಕೊಳಗಾದರು ಎಂ ವರದಿ

ಟೊಮೇಟೊ ಬೆಲೆ ಕುಸಿತ ಆಕ್ರೋಶ ವ್ಯಕ್ತಪಡಿಸಿದ ರೈತರು Read More »

ಕರ್ನಾಟಕ

ಒಡಿಶಾದಲ್ಲಿ ಭಾರತದ ಮೊದಲ ಅಕ್ಕಿ ಎಟಿಎಂ ನಿರ್ಮಾಣ

(ನ್ಯೂಸ್ ಕಡಬ)newskadaba.comಒಡಿಶಾ, ಆ.09. ಭಾರತದ ಮೊದಲ ಅಕ್ಕಿ ಎಟಿಎಂ ಒಡಿಶಾದಲ್ಲಿ ನಿರ್ಮಾಣವಾಗಿದ್ದು, ಆಹಾರ ಸರಬರಾಜು ಮತ್ತು ಗ್ರಾಹಕರ ಕಲ್ಯಾಣ ಸಚಿವ ಕೃಷ್ಣ ಚಂದ್ರ ಪಾತ್ರ ಅವರು ಅಕ್ಕಿ ಎಟಿಎಂಗೆ ಚಾಲನೆ ನೀಡಿದರು ಎನ್ನಲಾಗಿದೆ. ಮಂಚೇಶ್ವರದಲ್ಲಿರುವ ಗೋದಾಮಿನಲ್ಲಿ ಅಕ್ಕಿ ಎಟಿಎಂ ಯಂತ್ರವನ್ನು ಅಳವಡಿಸಲಾಗಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್)ಯಲ್ಲಿ ಅಕ್ಕಿ ವಿತರಣೆಯನ್ನು ಸರಳೀಕರಿಸಲು ಈ ಯಂತ್ರವನ್ನು ವಿನ್ಯಾಸಗೊಳಿಸಲಾಗಿದೆ. ಅಕ್ಕಿ ಎಟಿಎಂ ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿ ಸಂಖ್ಯೆಯನ್ನು ಟಚ್‌ ಸ್ಕ್ರೀನ್ ನಲ್ಲಿ ನಮೂದಿಸಬೇಕು. ನಮೂದಿಸಿದಾಗ 25ಕೆಜಿವರೆಗೆ ಅಕ್ಕಿಯನ್ನು

ಒಡಿಶಾದಲ್ಲಿ ಭಾರತದ ಮೊದಲ ಅಕ್ಕಿ ಎಟಿಎಂ ನಿರ್ಮಾಣ Read More »

ರಾಷ್ಟ್ರೀಯ ನ್ಯೂಸ್

ಸಿಎಂ ಸಿದ್ದರಾಮಯ್ಯ ವಿರುದ್ಧ CBI ತನಿಖೆ ಪ್ರಕರಣ     ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ       

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಷಿಕ್ಯೂಷನ್‌ ಗೆ ಅನುಮತಿ ಕೋರಿ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಮನವಿ ಸಂಬಂಧ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಇನ್ನು ಕ್ರಮ ಕೈಗೊಂಡಿಲ್ಲ. ಈ ನಡುವಲ್ಲೇ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ತನಿಖೆಗೆ ವಹಿಸುವ ಕುರಿತು ಚಿಂತನೆ ನಡೆಸುತ್ತಿದ್ದಾರೆಂಬ ಊಹಾಪೋಹಗಳು ಶುರುವಾಗಿವೆ. ಅಬ್ರಹಾಂ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಅದೇ ದಿನ ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ನಡೆದ ಸಚಿವ

ಸಿಎಂ ಸಿದ್ದರಾಮಯ್ಯ ವಿರುದ್ಧ CBI ತನಿಖೆ ಪ್ರಕರಣ     ಕುತೂಹಲ ಮೂಡಿಸಿದ ರಾಜ್ಯಪಾಲರ ನಡೆ        Read More »

ಕರ್ನಾಟಕ
Death, deadbody, Waterfall

ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ತೀವ್ರ ಜ್ವರದಿಂದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಮೃತ ಪಟ್ಟವರನ್ನು ಸುಬ್ರಹ್ಮಣ್ಯ ನಾಯ್ಕ್ (52) ಎಂದು ಗುರುತಿಸಲಾಗಿದ್ದು, ಲೆಪ್ಟೊಸ್ಪೈರೋಸಿಸ್ (ಇಲಿ ಜ್ವರ) ದಿಂದ ನಿಧನರಾದರು ಎಂದು ತಿಳಿದುಬಂದಿದೆ. ಆರಂಭದಲ್ಲಿ, ಅವರಿಗೆ ಜ್ವರ ಕಾಣಿಸಿಕೊಂಡಿತ್ತು , ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇತರೆ ಬಂಧು ಮಿತ್ರರನ್ನು ಅಗಲಿದ್ದಾರೆ.

ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top