ನ್ಯೂಸ್ ಕಡಬ

ಕಾಳಿಂಗ ಸರ್ಪವನ್ನೇ ನುಂಗಲು ಯತ್ನಿಸಿದ ಹೆಬ್ಬಾವು

(ನ್ಯೂಸ್ ಕಡಬ)newskadaba.comಕುಂದಾಪುರ, ಆ.09. ಹೆಬ್ಬಾವು 12 ಅಡಿ ಉದ್ದದ ಕಾಳಿಂಗ ಸರ್ಪವನ್ನೇ ನುಂಗಲು ಯತ್ನಿಸಿದ ಘಟನೆ ಕುಂದಾಪುರದಲ್ಲಿ ವರದಿಯಾಗಿದೆ. ಕಾಳಿಂಗ ಸರ್ಪವನ್ನು ನುಂಗಲಾಗದೇ ಹೆಬ್ಬಾವು ತನ್ನ ಪ್ರಯತ್ನವನ್ನ ಕೈಬಿಟ್ಟ ನಂತರ ಸ್ನೇಕ್ ಶಂಕರ್ ಅವರು ಎರಡೂ ಹಾವುಗಳನ್ನು ಬೇರ್ಪಡಿಸಿದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಎರಡೂ ಹಾವುಗಳನ್ನು ಆನೆ ಝರಿ ಸಮೂಪದ ಕಾಡಿಗೆ ಕೊಂಡೊಯ್ದು ಬಿಟ್ಟಿದ್ದಾರೆ ಎನ್ನಲಾಗಿದೆ.    

ಕಾಳಿಂಗ ಸರ್ಪವನ್ನೇ ನುಂಗಲು ಯತ್ನಿಸಿದ ಹೆಬ್ಬಾವು Read More »

ಕರಾವಳಿ

ನಟ ದರ್ಶನ್ ಗೆ ಜೈಲೂಟವೇ ಸಾಕು, ಮನೆಯೂಟ ಬೇಡ                ಹೈಕೋರ್ಟ್ ಗೆ ವರದಿ ಸಲ್ಲಿಕೆ                  

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.08. ಜೈಲೂಟ ರುಚಿಸುತ್ತಿಲ್ಲ, ತೂಕ ಕಳೆದುಕೊಳ್ಳುತ್ತಿದ್ದೇನೆ, ಮನೆಯಿಂದ ಊಟ, ಹಾಸಿಗೆ ತರಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಮಾಡಿದ್ದ ಮನವಿಗೆ ಸಂಬಂಧಪಟ್ಟಂತೆ ಜೈಲು ಅಧಿಕಾರಿಗಳು ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದಾರೆ. ನಟ ದರ್ಶನ್ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದ ಮನೆ ಊಟದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ, ಈ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಅರ್ಜಿ ಸಲ್ಲಿಸುವಂತೆಯೂ ನಟ ದರ್ಶನ್ ಪರ

ನಟ ದರ್ಶನ್ ಗೆ ಜೈಲೂಟವೇ ಸಾಕು, ಮನೆಯೂಟ ಬೇಡ                ಹೈಕೋರ್ಟ್ ಗೆ ವರದಿ ಸಲ್ಲಿಕೆ                   Read More »

ಕರ್ನಾಟಕ

ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ             ನವವಧು ಮೃತ್ಯು              

(ನ್ಯೂಸ್ ಕಡಬ)newskadaba.com ಕೋಲಾರ, ಆ.08. ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಪರಸ್ಪರ ಹೊಡೆದಾಡಿಕೊಂಡಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಮತ್ತು ವರನ ಸ್ಥಿತಿ ಗಂಭೀರವಾಗಿದೆ. 27 ವರ್ಷದ ನವೀನ್ ಹಾಗೂ 20 ವರ್ಷದ ಲಿಖಿತ ಅವರು ಇಂದು ಸಪ್ತಪದಿ ತುಳಿದಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ಅದೇನಾಯ್ತೋ ಏನೋ ರೂಮ್​ ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.    

ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ             ನವವಧು ಮೃತ್ಯು               Read More »

ಕರ್ನಾಟಕ

‘ಕುಸ್ತಿ ನನ್ನ ವಿರುದ್ದ ಗೆದ್ದಿದೆ’            ಕುಸ್ತಿಪಟು ವಿನೇಶ್ ಫೋಗಟ್‌

(ನ್ಯೂಸ್ ಕಡಬ)newskadaba.com ನವದೆಹಲಿ, ಆ.08. ಪ್ಯಾರಿಸ್ ಒಲಿಂಪಿಕ್ಸ್‌ ನ ಕುಸ್ತಿ ಫೈನಲ್‌ ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ. ಫೈನಲ್‌ ಪ್ರವೇಶಿಸಿ ಇತಿಹಾಸ ಬರೆಯಬೇಕಿದ್ದ ಭಾರತದ ಹೆಮ್ಮೆಯ ಪುತ್ರಿ ಕುಸ್ತಿಪಟು ವಿನೇಶ್‌ ಫೋಗಾಟ್‌ ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿತ್ತು. ವಿನೇಶ್ ಫೋಗಟ್ ಟ್ವೀಟ್ ಮಾಡಿ ನಿವೃತ್ತಿ ಘೋಷಣೆ ಮಾಡಿದ್ದಾರೆ, “ಕುಸ್ತಿ ನನ್ನ ವಿರುದ್ದ ಗೆದ್ದಿದೆ. ನಾನು ಸೋತಿದ್ದೇನೆ. ನಿಮ್ಮ ಕನಸು ಹಾಗೂ ನನ್ನ ಧೈರ್ಯ ಎಲ್ಲವೂ ನುಚ್ಚುನೂರಾಯಿತು

‘ಕುಸ್ತಿ ನನ್ನ ವಿರುದ್ದ ಗೆದ್ದಿದೆ’            ಕುಸ್ತಿಪಟು ವಿನೇಶ್ ಫೋಗಟ್‌ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಪಿಎಂ ಕುಸುಮ್ ಯೋಜನೆ’ ಕರ್ನಾಟಕದಿಂದಲೇ 1.79 ಲಕ್ಷ ರೈತರ ಬೇಡಿಕೆ               

(ನ್ಯೂಸ್ ಕಡಬ)newskadaba.com ನವದೆಹಲಿ, ಆ.08. ಪಿಎಂ ಕುಸುಮ್ ಯೋಜನೆಯಡಿ ಸೋಲಾರ್ ಪಂಪ್‌ಸೆಟ್‌ ಅಳವಡಿಕೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರು ಬೇಡಿಕೆ ಇಟ್ಟಿದ್ದಾರೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರು ತಿಳಿಸಿದ್ದಾರೆ.ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಜೋಶಿ,, ಕರ್ನಾಟಕದಿಂದ ಬರೋಬ್ಬರಿ 1,79,588 ಸೋಲಾರ್ ಪಂಪ್‌ ಅಳವಡಿಕೆಗೆ ಬೇಡಿಕೆ ಬಂದಿದೆ ಎಂದು ಮಾಹಿತಿ ನೀಡಿದರು. ವಿಪಕ್ಷದವರು ಪಿಎಂ ಕುಸುಮ್ ಯೋಜನೆ ಬಗ್ಗೆ ಇಲ್ಲ-ಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಹಾಗೊಂದು ವೇಳೆ ಈ ಯೋಜನೆ ವಿಫಲವಾಗಿದ್ದರೆ ಪ್ರಸ್ತುತ

‘ಪಿಎಂ ಕುಸುಮ್ ಯೋಜನೆ’ ಕರ್ನಾಟಕದಿಂದಲೇ 1.79 ಲಕ್ಷ ರೈತರ ಬೇಡಿಕೆ                Read More »

ಕರ್ನಾಟಕ

2024ರ ‘ಕಲ್ಲಚ್ಚು ಪ್ರಶಸ್ತಿ’ಗೆ ಡಾ.ನಾಗೇಶ್ ಪ್ರಭು ಆಯ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.08. ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿಯಲ್ಲಿ ಹಿರಿಯ ಪತ್ರಕರ್ತರು ಮತ್ತು ಲೇಖಕರಾಗಿರುವ ಡಾ. ನಾಗೇಶ್ ಪ್ರಭು ಅವರು ಮಂಗಳೂರಿನ ಕಲ್ಲಚ್ಚು ಪ್ರಕಾಶನದ 15ನೇ ಆವೃತ್ತಿಯ 2024ರ ಪ್ರತಿಷ್ಠಿತ “ಕಲ್ಲಚ್ಚು ಪ್ರಶಸ್ತಿ”ಗೆ ಆಯ್ಕೆ ಆಗಿದ್ದು ಅಗಸ್ಟ್ ತಿಂಗಳ ಕೊನೆಯ ವಾರದಲ್ಲಿ ಗಣ್ಯ ಆತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುವುದೆಂದು ಪ್ರಕಾಶನದ ಮುಖ್ಯಸ್ಥ ಸಾಹಿತಿ ಮಹೇಶ ಆರ್. ನಾಯಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಪ್ರಸ್ತುತ, ಡಾ ನಾಗೇಶ್ ಪ್ರಭು “ದಿ ಹಿಂದೂ” ಪತ್ರಿಕೆಯ ಬೆಂಗಳೂರು

2024ರ ‘ಕಲ್ಲಚ್ಚು ಪ್ರಶಸ್ತಿ’ಗೆ ಡಾ.ನಾಗೇಶ್ ಪ್ರಭು ಆಯ್ಕೆ Read More »

ಕರಾವಳಿ

‘ಭಂಡ ಕಾಂಗ್ರೆಸ್ ಸರಕಾರದಿಂದ ನಾಡಿನ ಜನತೆಗೆ ಒಳ್ಳೆಯದಾಗಲು ಸಾಧ್ಯವಿಲ್ಲ        ಶಾಸಕ ವಿಜಯೇಂದ್ರ                       

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.08. ಅಹಿಂದ ಹೆಸರು ಹೇಳಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಹಲವು ಭ್ರಷ್ಟಾಚಾರ ಹಗರಣಗಳಲ್ಲಿ ಸಿಲುಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು. ಐದನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯು ಮುಂದುವರೆಯಿತು. ಈ ಸಂದರ್ಭದಲ್ಲಿ ಮಂಡ್ಯದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ವಾಲ್ಮೀಕಿ ನಿಗಮದ ಹಗರಣ, ಮೈಸೂರಿನ ಸಾವಿರಾರು ಕೋಟಿಯ ಮೂಡ ನಿವೇಶನ ಹಗರಣ ಇರಬಹುದು; ಇಂಥ ಭ್ರಷ್ಟ, ದುಷ್ಟ ಕಾಂಗ್ರೆಸ್

‘ಭಂಡ ಕಾಂಗ್ರೆಸ್ ಸರಕಾರದಿಂದ ನಾಡಿನ ಜನತೆಗೆ ಒಳ್ಳೆಯದಾಗಲು ಸಾಧ್ಯವಿಲ್ಲ        ಶಾಸಕ ವಿಜಯೇಂದ್ರ                        Read More »

ಕರ್ನಾಟಕ

ಸಂತೆಕಟ್ಟೆ ಸರ್ವಿಸ್ ರಸ್ತೆಯಲ್ಲಿ ಭಾರಿ ವಾಹನಗಳ ದಟ್ಟಣೆ       ಕುಸಿತದ ಆತಂಕ                     

(ನ್ಯೂಸ್ ಕಡಬ)newskadaba.com ಉಡುಪಿ, ಆ.08. ಭಾರೀ ವಾಹನಗಳ ದಟ್ಟಣೆಯಿಂದಾಗಿ ಸಂತೆಕಟ್ಟೆಯ ಸರ್ವಿಸ್ ರಸ್ತೆಯು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ನಿರ್ಮಾಣ ಚಟುವಟಿಕೆಗಳು ನಡೆಯುತ್ತಿರುವ ನಡುವೆಯೇ ಇರುವ ಸುರಕ್ಷತಾ ಕಾಳಜಿಯನ್ನು  ಹೆಚ್ಚಿಸುತ್ತಿದೆ. ವಾಹನ ಸಂಚಾರಕ್ಕೆ ಮುಕ್ತವಾಗಿರುವ ಅಂಡರ್‌ಪಾಸ್‌ ಹೊಂಡಗಳಿಂದ ಕೂಡಿದ್ದು, ಪ್ರಯಾಣ ಅಪಾಯಕಾರಿಯಾಗಿದೆ. ಪರಿಣಾಮವಾಗಿ, ಅನೇಕ ಚಾಲಕರು ಪರ್ಯಾಯ ಮಾರ್ಗವಾಗಿ ಸರ್ವಿಸ್ ರಸ್ತೆಯನ್ನು ಆರಿಸಿಕೊಳ್ಳುತ್ತಿದ್ದಾರೆ. ಭಾರವಾದ ಹೊರೆಗಳಿಂದಾಗಿ ರಸ್ತೆ ಕುಸಿತದ ಅಪಾಯವನ್ನು ಇದು ತೀವ್ರಗೊಳಿಸಿದೆ, ಇದು ಗಮನಾರ್ಹ ಹಾನಿಗೆ ಕಾರಣವಾಗಬಹುದು ಎಂಬುದು ಆತಂಕ.  

ಸಂತೆಕಟ್ಟೆ ಸರ್ವಿಸ್ ರಸ್ತೆಯಲ್ಲಿ ಭಾರಿ ವಾಹನಗಳ ದಟ್ಟಣೆ       ಕುಸಿತದ ಆತಂಕ                      Read More »

ಕರಾವಳಿ

ಏಷ್ಯಾದ ಅತಿದೊಡ್ಡ ಮೀನುಗಾರಿಕೆ ಕೇಂದ್ರ ಮಲ್ಪೆ ಬಂದರಿನಲ್ಲಿ ಸ್ವಚ್ಛತಾ ಅಭಿಯಾನ

(ನ್ಯೂಸ್ ಕಡಬ)newskadaba.com ಉಡುಪಿ, ಆ.08.  ಏಷ್ಯಾದ ಅತಿ ದೊಡ್ಡ ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಇಲಾಖೆಯು ಸಾಮಾಜಿಕ ಕಾರ್ಯಕರ್ತರು ಹಾಗೂ ಸ್ಥಳೀಯ ಮೀನುಗಾರರ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಮಳೆಗಾಲದಲ್ಲಿ, ಗಮನಾರ್ಹ ಪ್ರಮಾಣದ ತ್ಯಾಜ್ಯವು ಸಮುದ್ರಕ್ಕೆ ಸೇರುತ್ತದೆ ಮತ್ತು ಮಲ್ಪೆ ಬಂದರು ಪ್ರದೇಶದಲ್ಲಿ ಸೆಡಿಮೆಂಟೇಶನ್ ಮೂಲಕ ಗಣನೀಯ ಪ್ರಮಾಣದ ಕಸದ ಶೇಖರಣೆ ಕಂಡುಬಂದಿದೆ. ಮೀನುಗಾರಿಕೆ ಚಟುವಟಿಕೆಗಳು ಪುನರಾರಂಭಗೊಳ್ಳುವುದರೊಂದಿಗೆ, ಬಂದರು ಲಕ್ಷಾಂತರ ಸಂದರ್ಶಕರು ಪ್ರತಿದಿನ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದನ್ನು ನೋಡಬಹುದು. ಪರಿಸ್ಥಿತಿಯನ್ನು ಪರಿಹರಿಸಲು,

ಏಷ್ಯಾದ ಅತಿದೊಡ್ಡ ಮೀನುಗಾರಿಕೆ ಕೇಂದ್ರ ಮಲ್ಪೆ ಬಂದರಿನಲ್ಲಿ ಸ್ವಚ್ಛತಾ ಅಭಿಯಾನ Read More »

ಕರಾವಳಿ

 ಶಿರಾಡಿಘಾಟ್​​ನಲ್ಲಿ ಎಲ್ಲಾ ವಾಹನಗಳಿಗೂ ಸಂಚಾರಕ್ಕೆ ಅವಕಾಶ

(ನ್ಯೂಸ್ ಕಡಬ)newskadaba.com ಹಾಸನ, ಆ.08.  ಕಳೆದ ಕೆಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಲವು ವಾಹನಗಳ ಮೇಲೆ ಮಣ್ಣು ಕುಸಿದಿದ್ದು, ಗುಡ್ಡ ಕುಸಿದಿದ್ದರಿಂದ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ವಾಹನಗಳ ಓಡಾಟದ ಬಗ್ಗೆ ಸಕಲೇಶಪುರ ಎಸಿ ಶೃತಿ ಅವರು ಮಾಹಿತಿ ನೀಡಿದ್ದಾರೆ.  

 ಶಿರಾಡಿಘಾಟ್​​ನಲ್ಲಿ ಎಲ್ಲಾ ವಾಹನಗಳಿಗೂ ಸಂಚಾರಕ್ಕೆ ಅವಕಾಶ Read More »

ಕರ್ನಾಟಕ
Scroll to Top