ಆನೇಕಲ್ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಆನೇಕಲ್ ಪುರಸಭಾ ಸದಸ್ಯ ಸ್ಕ್ರ್ಯಾಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಪೊಲೀಸರು 30 ವರ್ಷದ ರೌಡಿ ಶೀಟರ್ ಒಬ್ಬನ ಕಾಲಿಗೆ ಗುಂಡಿನ ಹಾರಿಸಿ ಬಂಧನಕ್ಕೊಳಪಡಿಸಿದ್ದಾರೆ. ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಮಾರಕಾಸಗಳಿಂದ ಚುಚ್ಚಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಎಂಬುವರು ಸ್ವಯಂ ಆಗಿ ನ್ಯಾಯಾಲಯಕ್ಕೆ ಶರಣಾಗಿದ್ದರು. ಆದರೆ ಪ್ರಮುಖ ಆರೋಪಿ ಕಾರ್ತಿಕ್ ತಲೆ ಮರೆಸಿಕೊಂಡಿದ್ದನು ಎನ್ನಲಾಗಿದೆ.
ಆನೇಕಲ್ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್