ನ್ಯೂಸ್ ಕಡಬ

 ‘ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ’      ಸಿಎಂ ಸಿದ್ದರಾಮಯ್ಯ ಘೋಷಣೆ  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ ಹಂಚಿಕೊಂಡ ಸಿಎಂ, ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ […]

 ‘ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ’      ಸಿಎಂ ಸಿದ್ದರಾಮಯ್ಯ ಘೋಷಣೆ   Read More »

ಕರ್ನಾಟಕ

ಬಾಲಮಂದಿರದಿಂದ ಪರಾರಿಯಾಗಿ ಕಳ್ಳತನ 4 ಅಪ್ರಾಪ್ತರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಬಾಲಮಂದಿರದಿಂದ ತಪ್ಪಿಸಿಕೊಂಡು ಬಂದು ಮತ್ತೆ ಕಳ್ಳತನ ಮಾಡಿದ್ದ ನಾಲ್ವರು ಅಪ್ರಾಪ್ತರನ್ನು ಪೀಣ್ಯ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಸಂಬಂಧ ಅವರ ಪೋಷಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದಾರೆ. ಬಾಲಕರಿಂದ 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರ, 2 ದ್ವಿಚಕ್ರ ವಾಹನ ಹಾಗೂ 1 ಆಟೋರಿಕ್ಷಾ ವಶಕ್ಕೆ ಪಡೆಯಲಾಗಿದೆ. ಕೆಲ ದಿನಗಳ ಹಿಂದೆ ಕೆಂಪಯ್ಯ ಗಾರ್ಡನ್‌ ಬಳಿ ಮಹಿಳೆಯೊಬ್ಬರು ಬೆಳಗ್ಗೆ ಕೆಲಸಕ್ಕೆ ನಡೆದು ಹೋಗುತ್ತಿದ್ದಾಗ ದ್ವಿ-ಚಕ್ರ

ಬಾಲಮಂದಿರದಿಂದ ಪರಾರಿಯಾಗಿ ಕಳ್ಳತನ 4 ಅಪ್ರಾಪ್ತರ ಬಂಧನ Read More »

ಕರ್ನಾಟಕ

ಹವಾಮಾನ ವೈಪರೀತ್ಯ ವಯನಾಡು ಭೇಟಿ ಮುಂದೂಡಿದ ರಾಹುಲ್, ಪ್ರಿಯಾಂಕಾ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.31. ಹವಾಮಾನ ವೈಪರೀತ್ಯದಿಂದಾಗಿ ಭೂಕುಸಿತ ಪೀಡಿತ ವಯನಾಡು ಭೇಟಿಯನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಂದೂಡಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ವಯನಾಡಿಗೆ ತೆರಳುವುದು ಕಷ್ಟಕರವಾಗಿದೆ. ಆದಷ್ಟು ಬೇಗ ಜಿಲ್ಲೆಗೆ ಭೇಟಿ ನೀಡುವುದಾಗಿ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. ಆದಷ್ಟು ಬೇಗ ವಯನಾಡಿಗೆ ಭೇಟಿ ನೀಡುತ್ತೇನೆ. ಈ ಮಧ್ಯೆ ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇವೆ ಮತ್ತು ಅಗತ್ಯವಿರುವ

ಹವಾಮಾನ ವೈಪರೀತ್ಯ ವಯನಾಡು ಭೇಟಿ ಮುಂದೂಡಿದ ರಾಹುಲ್, ಪ್ರಿಯಾಂಕಾ Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ)newskadaba.com ಸುಳ್ಯ, ಜು.31. ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಶಯ ವ್ಯಕ್ತಪಡಿಸಲಾಗಿದೆ.

ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಭಾರೀ ಮಳೆ…! ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಭಾರಿ ಮಳೆ ಹಾಗೂ ಬಿರುಗಾಳಿಯಿಂದಾಗಿ ರಾಜ್ಯದ ಹಲವೆಡೆ ಸಾವಿರಾರು ವಿದ್ಯುತ್ ಕಂಬಗಳು, ಪರಿವರ್ತಕಗಳು ಮತ್ತು ವಿದ್ಯುತ್‌ ಸರಬರಾಜು ಮಾರ್ಗಗಳಿಗೆ ಹಾನಿಯಾಗಿದ್ದು, ವಿದ್ಯುತ್‌ ಸರಬರಾಜು ಕಂಪನಿಗಳಿಗೆ (ಎಸ್ಕಾಂ) ಒಟ್ಟು 96.61 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಹೇಳಿದರು. ಅತಿವೃಷ್ಟಿಯಿಂದ ಇಲಾಖೆಗೆ ಆಗಿರುವ ನಷ್ಟ ಮತ್ತು ವಿದ್ಯುತ್‌ ಪೂರೈಕೆಯಲ್ಲಿನ ಸಮಸ್ಯೆಗಳ ಕುರಿತು ಇಲಾಖೆ ಹಾಗೂ ಎಲ್ಲಾ ಎಸ್ಕಾಂಗಳ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು

ರಾಜ್ಯದಲ್ಲಿ ಭಾರೀ ಮಳೆ…! ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಯನಾಡು ಭೂಕುಸಿತ ; ಅನೇಕ ಮಂದಿ ಮೃತ್ಯು…!     ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು -ಕೇರಳ ಸಿಎಂ ಪಿಣರಾಯಿ    

(ನ್ಯೂಸ್ ಕಡಬ)newskadaba.com ಕೇರಳ, ಜು.31. ವಯನಾಡಿನಲ್ಲಿ ನಡೆದ ಭೂಕುಸಿತ ದುರಂತದಲ್ಲಿ ಈವರೆಗೆ ಅನೇಕ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದೇ ಅಂತಿಮ ಅಂಕಿ-ಅಂಶವಲ್ಲ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಆತಂಕ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಯನಾಡಲ್ಲಿ ಪ್ರಕೃತಿ ಪ್ರಕೋಪ ಆಗಿದ್ದು, ನಸುಕಿನ ಜಾವ 2 ಗಂಟೆ ಸುಮಾರಿಗೆ ಮೊದಲ ಜಲ ಸ್ಫೋಟ ಸಂಭವಿಸಿತ್ತು. 4.10ಕ್ಕೆ ಎರಡನೇ ಸ್ಫೋಟ ಉಂಟಾಗಿತ್ತು. ಐವರು ಸಚಿವರು ಸತತವಾಗಿ ಕೆಲಸ ಮಾಡುತ್ತಿದ್ದಾರೆ. 18 ಮೃತದೇಹಗಳನ್ನು ಕುಟುಂಬದವರಿಗೆ

ವಯನಾಡು ಭೂಕುಸಿತ ; ಅನೇಕ ಮಂದಿ ಮೃತ್ಯು…!     ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು -ಕೇರಳ ಸಿಎಂ ಪಿಣರಾಯಿ     Read More »

ಕರಾವಳಿ

ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳಿಗೆ ಕ್ರಮ…!     ಸಿಎಂ ಖಡಕ್ ಸೂಚನೆ 

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು ಈ ಕುರಿತು ಸಹ ಜಿಲ್ಲಾಧಿಕಾರಿಗಳು ಎಚ್ಚರವಹಿಸುವಂತೆ ತಿಳಿಸಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ

ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳಿಗೆ ಕ್ರಮ…!     ಸಿಎಂ ಖಡಕ್ ಸೂಚನೆ  Read More »

ಕರ್ನಾಟಕ

ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…!

(ನ್ಯೂಸ್ ಕಡಬ)newskadaba.com ಕೊಡಗು, ಜು.30. ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಹರಿದು 6 ಜಾನುವಾರು (ಹಸು, ಕರುಗಳು ) ಬಲಿ ಯಾಗಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ. ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಮೇಯಲು ಬಿಟ್ಟಿದ್ದ ಜಾನುವಾರುಗಳು ಸಂಜೆ 7 ಗಂಟೆಯಾದರೂ ಮನೆಗೆ ಹಿಂತಿರುಗದಿದ್ದಾಗ ಮಾಲೀಕರು ಜಾನುವಾರುಗಳು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಬಳಿಕ ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಸರಬರಾಜು ನಿಗಮದ

ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದುರಂತ ಭೂಮಿಯಾದ ವಯನಾಡು…! ಮೃತರ ಸಂಖ್ಯೆ ಏರಿಕೆ

(ನ್ಯೂಸ್ ಕಡಬ)newskadaba.com ಕೇರಳ, ಜು.30. ಕೇರಳದ ವಯನಾಡು ಪ್ರಕೃತಿ ವಿಕೋಪದಿಂದ ದುರಂತ ಭೂಮಿಯಾಗಿ ಮಾರ್ಪಾಡಾಗಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ನಸುಕಿನ ಜಾವ ಭೂಕುಸಿತ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿದ್ದು ಅನೇಕ ಊರುಗಳ ಚಿತ್ರಣವೇ ಬದಲಾಗಿವೆ. ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು

ದುರಂತ ಭೂಮಿಯಾದ ವಯನಾಡು…! ಮೃತರ ಸಂಖ್ಯೆ ಏರಿಕೆ Read More »

ಕ್ರೈಮ್ ನ್ಯೂಸ್

ಮಂಗಳೂರು: ‘ಆಪರೇಷನ್ ಟೈಗರ್’ ಕಾರ್ಯಾಚರಣೆ…!    ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.30. ‘ಆಪರೇಷನ್ ಟೈಗರ್’ ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದ್ದು, ಇದನ್ನು ಖಂಡಿಸಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಗೆ ಬೀದಿ ಬದಿ ವ್ಯಾಪಾರಿಗಳು ಮುತ್ತಿಗೆ ಹಾಕಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಟೈಗರ್ ಕಾರ್ಯಾಚರಣೆ ನಿಲ್ಲಿಸಬೇಕು ಮತ್ತು ಬೀದಿಬದಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಆಯುಕ್ತರ ಕಚೇರಿ ಮುಂದೆ ಧರಣಿ ಆರಂಭಿಸಿದ್ದಾರೆ. ನಿನ್ನೆ ನಡೆದ ಟೈಗರ್ ಕಾರ್ಯಾಚರಣೆಯಲ್ಲಿ ತಳ್ಳುಗಾಡಿ, ಗೂಡಂಗಡಿಗಳು, ಸಾಮಗ್ರಿಗಳಿಗೆ ಹಾನಿ ಮಾಡಿದ್ದಲ್ಲದೆ ಆಹಾರ, ತಿಂಡಿತಿನಿಸುಗಳನ್ನು ನಾಶಪಡಿಸಿರುವುದರ ವಿರುದ್ಧ ಪ್ರತಿಭಟನಾಕಾರರು

ಮಂಗಳೂರು: ‘ಆಪರೇಷನ್ ಟೈಗರ್’ ಕಾರ್ಯಾಚರಣೆ…!    ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ Read More »

ಕರಾವಳಿ
Scroll to Top