ನ್ಯೂಸ್ ಕಡಬ

ತಡರಾತ್ರಿ ನಿವೃತ್ತ ಪ್ರಾಂಶುಪಾಲರ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 21:  ವೃದ್ಧ ನಿವೃತ್ತ ಪ್ರಾಂಶುಪಾಲರೊಬ್ಬರನ್ನು ಅವರ ನಿವಾಸದಲ್ಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಮೈಸೂರಿನ ನಿವೇದಿತಾ ನಗರದಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ಸುಮಾರಿಗೆ ಆಗಮನಿಸಿದ ಇಬ್ಬರು ಹಂತಕರು ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ ಅವರ ಮನೆಗೆ ಆಗಮಿಸಿ ಕಾಲಿಂಗ್‌ ಬೆಲ್‌ ಒತ್ತಿದ್ದಾರೆ. ಬಳಿಕ ಬಾಗಿಲು ತೆರೆಯುತ್ತಿದ್ದಂತೆ ಪರಶಿವಮೂರ್ತಿ ಅವರಿಗೆ ಇರಿದಿದ್ದಾರೆ. ಎದೆ, ಹೊಟ್ಟೆ ಮತ್ತು ಕುತ್ತಿಗೆ ಭಾಗಗಳಿಗೆ ಮನಸೋ ಇಚ್ಛೆ ಚುಚ್ಚಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದೊಂದಿಗೆ ಮನೆಯ ಹಾಲ್‌ಗೆ ಬಂದ […]

ತಡರಾತ್ರಿ ನಿವೃತ್ತ ಪ್ರಾಂಶುಪಾಲರ ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಪಾರ್ಕಿಂಗ್‌ ಮಾಡಿದ್ದ ಓಮ್ನಿ ಕಳವು -ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.20: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸವಾರಿ ಮಂಟಪದಲ್ಲಿ ಪಾರ್ಕಿಂಗ್‌ ಮಾಡಿದ್ದ ಓಮ್ನಿ ಕಳವಾದ ಘಟನೆ ಕಳೆದ ದಿನ ನಡೆದಿದೆ. ಬೆಳ್ತಂಗಡಿಯ ಬಳ್ಳಮಂಜದ ಕುಟುಂಬದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಬಂದು ಓಮ್ನಿಯನ್ನು ( KA 21 P 1467) ಸುಬ್ರಹ್ಮಣ್ಯದ ಸವಾರಿ ಮಂಟಪದಲ್ಲಿ ನಿಲ್ಲಿಸಿ ದೇವರ ದರ್ಶನಕ್ಕಾಗಿ ದೇವಸ್ಥಾನಕ್ಕೆ ತೆರಳಿದ್ದಾರೆ. ವಾಪಸ್ಸು ಸುಮಾರು 10.30 ರ ವೇಳೆಗೆ ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಕಾರು ಇರಲಿಲ್ಲ. ಎಷ್ಟು ಹುಡುಕಾಡಿದರೂ ಪತ್ತೆಯಾಗದ ಕಾರಣ ಕಳ್ಳರು

ಸುಬ್ರಹ್ಮಣ್ಯ: ಪಾರ್ಕಿಂಗ್‌ ಮಾಡಿದ್ದ ಓಮ್ನಿ ಕಳವು -ಪ್ರಕರಣ ದಾಖಲು Read More »

ಕರಾವಳಿ

ಪುತ್ತೂರು : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಅಕ್ಕಿ ಸಹಿತ ಲಾರಿ ಪೊಲೀಸ್ ವಶಕ್ಕೆ..!!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 21:  ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಕಳೆದ ರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ಧಾರೆ. ದಾಖಲೆ ಪತ್ರಗಳಿಲ್ಲದೆ 9,250 ಕಿಲೋ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ಪುತ್ತೂರು ನಗರಠಾಣೆ ಪೊಲೀಸರು ಭಾನುವಾರ ರಾತ್ರಿ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.     ಮಾಣಿ-ಮೈಸೂರು ಹೆದ್ದಾರಿಯ ಪೋಳ್ಯದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಪುತ್ತೂರು ಕಡೆಯಿಂದ ಬಂದ ಕೆಎ 21 ಸಿ 4647 ನೋಂದಣಿ ಸಂಖ್ಯೆಯ ಲಾರಿಯನ್ನು ತಡೆಯಲಾಗಿತ್ತು. ಪರಿಶೀಲಿಸಿದಾಗ ಅವರ

ಪುತ್ತೂರು : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಅಕ್ಕಿ ಸಹಿತ ಲಾರಿ ಪೊಲೀಸ್ ವಶಕ್ಕೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಡಮಂಗಲ: ಕಾಣೆಯಾಗಿದ್ದ ವಿವಾಹಿತೆ ಮಂಡ್ಯದಲ್ಲಿ ಪತ್ತೆ.!

(ನ್ಯೂಸ್ ಕಡಬ) newskadaba.com ಎಡಮಂಗಲ, ಸೆ.21: ಎಡಮಂಗಲ ಗ್ರಾಮದ ಎರಿಂಬಿಲ ಮೋಹನ ಎ. ಎಂಬವರ ಪತ್ನಿ ಮಂಜುಳ(28) ರವರು ಸೆ.13 ರಂದು ಮನೆಯಿಂದ ಕಾಣೆಯಾಗಿದ್ದಾರೆ ಎಂದು ಪತಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು.   ಇದೀಗ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯನ್ನು ಮಂಡ್ಯದ ಬಡಾವಣೆಯಲ್ಲಿ ಪತ್ತೆ ಹಚ್ಚಿ ಸುಳ್ಯಕ್ಕೆ ಕರೆದುಕೊಂಡು ಬಂದು ಮನೆಯವರೊಂದಿಗೆ ಕಳುಹಿಸಿರುವುದಾಗಿ ತಿಳಿದು ಬಂದಿದೆ.  

ಎಡಮಂಗಲ: ಕಾಣೆಯಾಗಿದ್ದ ವಿವಾಹಿತೆ ಮಂಡ್ಯದಲ್ಲಿ ಪತ್ತೆ.! Read More »

ಕರಾವಳಿ

ಪುತ್ತೂರು :ಗಾಂಜಾ ನಶೆಯಲ್ಲಿದ್ದ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.21: ಮುಕ್ರಂಪಾಡಿ ಬಸ್‌ ತಂಗುದಾಣದಲ್ಲಿ ಗಾಂಜಾ ನಶೆಯಲ್ಲಿದ್ದ ವೇಳೆ ಬಂಧಿತರಾಗಿರುವ ಆರೋಪಿಗಳಿಬ್ಬರನ್ನು ನ್ಯಾಯಾಲಯ ಒಂದು ದಿನದವಧಿಗೆ ಪೊಲೀಸ್‌ ಕಸ್ಟಡಿಗೆ ನೀಡಿದೆ.ಮಂಜೇಶ್ವರ ತಾಲೂಕು ಉಪ್ಪಳ ಪಪ್ಪಾಯಿತೊಟ್ಟಿಯ ರಹಿಮಾನ್‌ ಖಾನ್(44ವ.) ಹಾಗೂ ಮಂಜೇಶ್ವರ ತಾಲೂಕು ಹೊಸಂಗಡಿ ಬಜ್ಜೆಂಗಳ ಅಬ್ದುಲ್ಲಾ ರವರು ಕಳೆದ ದಿನದಂದು ಸಂಜೆ ಮುಕ್ರಂಪಾಡಿ ಬಸ್‌ ತಂಗುದಾಣದ ಬಳಿ ನಿಲ್ಲಿಸಿದ್ದ ಕಾರೊಂದರ ಬಳಿ ಗಾಂಜಾ ನಶೆಯಲ್ಲಿದ್ದು ಅನುಚಿತವಾಗಿ ವರ್ತಿಸುತ್ತಿದ್ದ ಕುರಿತು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಎಸ್‌.ಐ. ಜಂಬುರಾಜ್‌ ಮಹಾಜನ್‌

ಪುತ್ತೂರು :ಗಾಂಜಾ ನಶೆಯಲ್ಲಿದ್ದ ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ➤ ದಡ ಸೇರಿದ ಬೋಟುಗಳು

(ನ್ಯೂಸ್ ಕಡಬ) newskadaba.com ಕಾರವಾರ, ಸೆ. 21:  ತಡರಾತ್ರಿ ಬೀಸಿದ ಭಾರೀ ಪ್ರಮಾಣದ ಗಾಳಿಯಿಂದಾಗಿ ಎರಡು ಮೀನುಗಾರಿಕಾ ಬೋಟುಗಳು ದಡಕ್ಕೆ ತೇಲಿಬಂದ ಘಟನೆ ನಗರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ನಡೆದಿದೆ. ಆಯಂಕರ್ ತುಂಡಾದ ಪರಿಣಾಮ ಈ ಅವಘಡ ಸಂಭವಿಸಿದೆ.   ಬಂದರು ಪ್ರದೇಶದ ಸಮುದ್ರದಲ್ಲಿ ಲಂಗರು ಹಾಕಿದ್ದ ಮಲ್ಪೆ ಭಾಗದ ಮಜ್ದೂರ್ ಹಾಗೂ ಪ್ರಾವಿನೆನ್ಸ್ ಹೆಸರಿನ ಬೋಟುಗಳು ಇವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಹಿನ್ನಲೆ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆ,

ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ➤ ದಡ ಸೇರಿದ ಬೋಟುಗಳು Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಮುಂದುವರೆದ ವರುಣನ ಅಬ್ಬರ ➤ ಹೈಅಲರ್ಟ್ ಘೋಷಣೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21:  ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಸೇರಿದಂತೆ 9 ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೊಡಗು, ಮಡಿಕೇರಿ, ದಕ್ಷಿಣ ಕನ್ನಡ, ಉಡುಪಿ ಗಡಿಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಅಲ್ಲದೆ, ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ ಮಳೆ 66.75 ಮಿ.ಮೀ. ಮಳೆ ಸುರಿದಿದೆ.ದಕ್ಷಿಣ

ರಾಜ್ಯದಲ್ಲಿ ಮುಂದುವರೆದ ವರುಣನ ಅಬ್ಬರ ➤ ಹೈಅಲರ್ಟ್ ಘೋಷಣೆ..!! Read More »

ಕರಾವಳಿ, ಕರ್ನಾಟಕ

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್‌.ಡಿ ದೇವೇಗೌಡರು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ20:  ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ರಾಜ್ಯಸಭಾ ಸದಸ್ಯರಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.   ರಾಜ್ಯಸಭೆಯ ಸಭಾಧ್ಯಕ್ಷರೂ ಆಗಿರುವ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಪ್ರಮಾಣವಚನ ಬೋಧಿಸಿದರು. ದೇವೇಗೌಡರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ‘ನಮ್ಮ ಸದನಕ್ಕೆ ಉತ್ತಮ ವ್ಯಕ್ತಿಯ ಸೇರ್ಪಡೆಯಾಗಿದೆ. ಮಾಜಿ ಪ್ರಧಾನಿ ಹಾಗೂ ದೇಶದ ಹಿರಿಯ ರಾಜಕೀಯ ನಾಯಕರಲ್ಲಿ ಒಬ್ಬರಾಗಿರುವ ಎಚ್.ಡಿ. ದೇವೇಗೌಡ ಅವರು ಈಗ ನಮ್ಮ ಸದನಕ್ಕೆ ಬಂದಿದ್ದಾರೆ’ ಎಂದು ಉಪ

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್‌.ಡಿ ದೇವೇಗೌಡರು Read More »

ರಾಷ್ಟ್ರೀಯ ನ್ಯೂಸ್

ಚಾಲಕನ ಅತಿವೇಗದ ಪರಿಣಾಮ ಸುಳ್ಯದಲ್ಲಿ ಸರಣಿ ಅಪಘಾತ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ20:  ಮಳೆಯ ಅಬ್ಬರದ ನಡುವೆಯು ಸರಣಿ ಅಪಘಾತಗಳು ಬೆಳಕಿಗೆ ಬರುತ್ತಿದೆ. ಇಂದು ಹೋಂಡಾ, ಡಿಯೋ, ಟೊಯೊಟೊ ಇನ್ನೋವಾ ಕಾರು ಮತ್ತು ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಸುಳ್ಯ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನಡೆದಿದೆ.   ಮಂಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಇನೋವಾ ಕಾರು ಅಯ್ಯಪ್ಪ ಮಂದಿರದ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಸಂಚರಿಸಿ ಎದುರಿನಿಂದ ಬರುತ್ತಿದ್ದ ಸ್ಕೂಟಿಸಯ ಹಿಂಬದಿಯಲ್ಲಿ ಬರುತ್ತಿದ್ದ ಜೀಪಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸರಣಿ

ಚಾಲಕನ ಅತಿವೇಗದ ಪರಿಣಾಮ ಸುಳ್ಯದಲ್ಲಿ ಸರಣಿ ಅಪಘಾತ Read More »

ಕರಾವಳಿ, ಕರ್ನಾಟಕ

ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್‌ ತಂಡ , ಹೆಲಿಕಾಪ್ಟರ್ ನಿಯೋಜನೆ ➤ ಸಂಸದೆ ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ20:  ಉಡುಪಿ ಜೆಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯಾದ್ಯಂತ ಹಲವಾರು ತಗ್ಗು ಪ್ರದೇಶಗಳಲ್ಲಿ ಮನೆಗಳು ಆಸ್ತಿ-ಪಾಸ್ತಿ ಮುಳುಗಡೆಯಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಿ ಅಗತ್ಯದ ಕ್ರಮಗಳನ್ನು ಕೈಗೊಳ್ಳಲಾಗಿದೆ.ತುರ್ತು ಪರಿಹಾರ ಕಾರ್ಯಕ್ಕೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ತಂಡವನ್ನು ಕಳಿಸಿಕೊಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ತಿಳಿಸಿದ್ದು ಮಂಗಳೂರಿನಿಂದ ಎನ್‌ಡಿಆರ್‌ಎಫ್‌ ತಂಡ ಕಳುಹಿಸಿದ್ದಾರೆ. 20 ಸಿಬ್ಬಂದಿಯನ್ನೊಳಗೊಂಡ ಮತ್ತೊಂದು ಎನ್‌ಡಿಆರ್‌ಎಫ್‌

ರಕ್ಷಣಾ ಕಾರ್ಯಕ್ಕೆ ಎನ್‌ಡಿಆರ್‌ಎಫ್‌ ತಂಡ , ಹೆಲಿಕಾಪ್ಟರ್ ನಿಯೋಜನೆ ➤ ಸಂಸದೆ ಶೋಭಾ ಕರಂದ್ಲಾಜೆ Read More »

ಕರಾವಳಿ, ಕರ್ನಾಟಕ
Scroll to Top