ನ್ಯೂಸ್ ಕಡಬ

ಏನೇಕಲ್ಲು : ಮರವೊಂದು ಮುರಿದು ಬಿದ್ದು ಮನೆ ಭಾಗಶಃ ಹಾನಿ.!

(ನ್ಯೂಸ್ ಕಡಬ) newskadaba.com ಏನೇಕಲ್ಲು , ಸೆ.17: ಯೇನುಕಲ್ಲು ಗ್ರಾಮದ ಮಾವಂಜಿ ದಿ. ರಾಮಚಂದ್ರರವರ ಪತ್ನಿ ಶ್ರೀಮತಿ ಚಂದ್ರಾವತಿಯವರ ಮನೆಗೆ ಕಳೆದ ದಿನ ರಾತ್ರಿ ಮರವೊಂದು ಮನೆಯ ಮುಂಭಾಗಕ್ಕೆ ಮುರಿದು ಬಿದ್ದು ಭಾಗಶಃ ಹಾನಿಯುಂಟಾಗಿದೆ.   ಚಂದ್ರಾವತಿಯವರು ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದು, ಈಗಲೋ ಆಗಲೋ ಬೀಳುವಂತಿದೆ. ಮಾಡಿಂದ ನೀರು ಜನಿಯುವುದಕ್ಕೆ  ಮನೆಯ ಮೇಲೆ ಟರ್ಪಾಲು ಹೊದಿಸಲಾಗಿದೆ. ಸರಿಯಾದ ಮಾರ್ಗದ ವ್ಯವಸ್ಥೆಯಿಲ್ಲದೆ ಮನೆ ಕಟ್ಟಲು ಬೇಕಾದ ಸಾಮಾಗ್ರಿಗಳನ್ನು ತರಲು ಅನಾನುಕೂಲವಾಗಿರುವುದರಿಂದ ಹೊಸ ಮನೆ ನಿರ್ಮಿಸಲು ಆಗಲಿಲ್ಲ ಎಂಬುದು ಚಂದ್ರಾವತಿಯವರ […]

ಏನೇಕಲ್ಲು : ಮರವೊಂದು ಮುರಿದು ಬಿದ್ದು ಮನೆ ಭಾಗಶಃ ಹಾನಿ.! Read More »

ಕರಾವಳಿ, ಕರ್ನಾಟಕ

ಗೋಹತ್ಯೆ ಕಡಿವಾಣಕ್ಕೆ ಕೂಗು ➤ ಪೇಜಾವರ ಶ್ರೀಗಳಿಂದ ರಾಜ್ಯ ಸರ್ಕಾರಕ್ಕೆ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17:  ಗೋ ಹತ್ಯೆಗೆ ಕಡಿವಾಣ ಹಾಕಲು, ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ. ಪರಮ ಪೂಜ್ಯ ಪೇಜಾವರ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಯವರಿಂದ, “ರಾಜ್ಯದಲ್ಲಿ ಗೋ ಹತ್ಯಾ ನಿಷೇಧ ಕಾಯಿದೆಯನ್ನು ತಕ್ಷಣ ಜಾರಿಗೊಳಿಸುವಂತೆ ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.  ಒಂದು ವಾರದ ಹಿಂದೆ ಸಂಘಟನೆಯ ಪ್ರಮುಖರು ಸ್ವಾಮೀಜಿಯವರನ್ನು ಇದೇ ವಿಚಾರದಲ್ಲಿ ಭೇಟಿ ಮಾಡಿ

ಗೋಹತ್ಯೆ ಕಡಿವಾಣಕ್ಕೆ ಕೂಗು ➤ ಪೇಜಾವರ ಶ್ರೀಗಳಿಂದ ರಾಜ್ಯ ಸರ್ಕಾರಕ್ಕೆ ಪತ್ರ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಂಗಳೂರು ವಿ. ವಿ : ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17:  ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಬುಧವಾರ ಆರಂಭಗೊಂಡಿದೆ. ಯುಜಿಯಲ್ಲಿ ಒಟ್ಟು 22,745 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 757 ಮಂದಿ ಗೈರುಹಾಜರಾಗಿದ್ದಾರೆ. ಪಿಜಿ ವಿಭಾಗದಲ್ಲಿ 3,470 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 11 ಮಂದಿ ಗೈರಾಗಿದ್ದಾರೆ.   ಗ್ರಾಮೀಣ ಭಾಗದ ಕಾಲೇಜುಗಳ ಸುಮಾರು 500 ವಿದ್ಯಾರ್ಥಿಗಳ ವಿವರ ಲಭಿಸಿಲ್ಲ. ಒಟ್ಟು 205 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ ಎಂದು ವಿವಿ ಪರೀಕ್ಷಾಂಗ ಕುಲಸಚಿವ ಡಾ.ಪಿ.ಎಲ್.ಧರ್ಮ ತಿಳಿಸಿದ್ದಾರೆ. ಪರೀಕ್ಷೆಗೂ

ಮಂಗಳೂರು ವಿ. ವಿ : ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಆರಂಭ Read More »

ಕರಾವಳಿ, ಕರ್ನಾಟಕ

ಚರಂಡಿಯಲ್ಲಿಯೇ ವಿದ್ಯುತ್ ಕಂಬ ಅಳವಡಿಕೆ ➤ ಅಪಾಯಕ್ಕೆ ಆಹ್ವಾನ , ಸ್ಥಳೀಯರ ಆಕ್ರೋಶ..!

(ನ್ಯೂಸ್ ಕಡಬ) newskadaba.com ಎಲಿಮಲೆ, ಸೆ.16:  ಸೋಣಂಗೇರಿ ಸುಬ್ರಹ್ಮಣ್ಯ ರಸ್ತೆಯ ಎಲಿಮಲೆಯಲ್ಲಿ ಮೆಸ್ಕಾಂ ವತಿಯಿಂದ ಹೊಸ ಹೆಚ್.ಟಿ. ಲೈನ್ ತಂತಿ ಅಳವಡಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ಕಂಬ ಅಳವಡಿಸಿ ಹೈ ಟೆನ್ಶನ್ ತಂತಿ ಎಳೆಯಲಾಗಿದೆ.  ಆದರೆ ವಿದ್ಯುತ್ ಕಂಬಗಳನ್ನು ಮಾತ್ರ ರಸ್ತೆಬದಿಯಲ್ಲಿ ನೀರು ಹೋಗುವ ಚರಂಡಿಯಲ್ಲಿಯೇ ಹಾಕಲಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.   ವಿದ್ಯುತ್ ಕಂಬಗಳನ್ನು ರಸ್ತೆ ಬದಿಯಲ್ಲಿ ನೀರು ಹೋಗುವ ಚರಂಡಿಯಲ್ಲಿ ಹಾಕಿ ಎಡವಟ್ಟು ಆಗಿದೆ. ಮಳೆಗಾಲದಲ್ಲಿ ಸಾಕಷ್ಟು ನೀರು ಈ ಚರಂಡಿಯಲ್ಲಿ ಹರಿಯುತ್ತಿದ್ದು

ಚರಂಡಿಯಲ್ಲಿಯೇ ವಿದ್ಯುತ್ ಕಂಬ ಅಳವಡಿಕೆ ➤ ಅಪಾಯಕ್ಕೆ ಆಹ್ವಾನ , ಸ್ಥಳೀಯರ ಆಕ್ರೋಶ..! Read More »

ಕರಾವಳಿ

ಕೋವಿಡ್ ಕೇಸ್ : ಇಂದು (ಸೆ.16) ಒಟ್ಟು 31 ಮಂದಿಯಲ್ಲಿ ಕೋರೊನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.16:  ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು  31 ಮಂದಿಗೆ ಕೊರೋನಾ ದೃಢಗೊಂಡಿದೆ. ಕಡಬ ತಾಲೂಕಿನ ಬಲ್ಯದ 59 ವರ್ಷದ ಪುರುಷ, ಆಲಂಕಾರಿನ 40 ವರ್ಷದ ಮಹಿಳೆ, ಬಿಳಿನೆಲೆಯ 24ವರ್ಷದ ಯುವತಿ, ಶಿರಾಡಿಯ 43 ವರ್ಷದ ಮಹಿಳೆ, 63 ವರ್ಷದ ವ್ಯಕ್ತಿ, 50 ವರ್ಷದ ಮಹಿಳೆ, 60 ವರ್ಷದ ಮಹಿಳೆ, 55 ವರ್ಷದ ವ್ಯಕ್ತಿ, ಕೌಕ್ರಾಡಿ ಯ 68 ವರ್ಷದ ವ್ಯಕ್ತಿ, ನೆಲ್ಯಾಡಿಯ ವರ್ಷದ 27 ವರ್ಷದ

ಕೋವಿಡ್ ಕೇಸ್ : ಇಂದು (ಸೆ.16) ಒಟ್ಟು 31 ಮಂದಿಯಲ್ಲಿ ಕೋರೊನಾ ದೃಢ Read More »

ಕರಾವಳಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಎರಡು ಅಂಗಡಿಯಲ್ಲಿ ಅಪಾರ ಹಾನಿ!

(ನ್ಯೂಸ್ ಕಡಬ) newskadaba.com ಉಡುಪಿ, ಸೆ.16:  ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದಾಗಿ ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಸುಮಾರು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಂದು ಮುಂಜಾನೆ ಈ ಅವಘಡ ಉಂಟಾಗಿದೆ ಎಂದು ಹೇಳಲಾಗಿದ್ದು 2 ಅಂಗಡಿ ಸಂಪೂರ್ಣ ಸುಟ್ಟುಹೋಗಿವೆ. ಸ್ಥಳಕ್ಕೆ ನಗರ ಸಭಾ ಸದಸ್ಯರಾದ ಟಿ ಜಿ ಹೆಗಡೆ , ನಗರ ಸಭೆಯ ಅಧಿಕಾರಿಗಳು ಬೇಟಿ ನೀಡಿದ್ದಾರೆ.    

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಎರಡು ಅಂಗಡಿಯಲ್ಲಿ ಅಪಾರ ಹಾನಿ! Read More »

ಕರಾವಳಿ

ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16:  ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ತಗುಲಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೊಲೇಷನ್‌ನಲ್ಲಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದ ಶಾಸಕರಾಗಿರೋ ಸಚಿವ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಸಚಿವ ಬೊಮ್ಮಾಯಿ ಬೆಂಗಳೂರಿನ ನಿವಾಸದಲ್ಲಿ ಪ್ರತ್ಯೇಕವಾಗಿರೋದಾಗಿ ಮಾಹಿತಿ ನೀಡಿದ್ದಾರೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲದೆ ಆರೋಗ್ಯವಾಗಿದ್ದೇನೆ ಎಂದಿರುವ ಅವರು ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ತಪಾಸಣೆ ಮಾಡಿಸಿಕೊಂಡು ಮುಂಜಾಗ್ರತಾ ಕ್ರಮ

ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೋವಿಡ್ ದೃಢ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪಂಜಿಮೊಗರು ಬಳಿ ಗುಡ್ಡೆಯ ತಡೆಗೋಡೆ ಕುಸಿತ ➤ ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.16:  ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಹಾಮಳೆಗೆ ಪಂಜಿಮೊಗರು ವಾರ್ಡಿನ ಉರುಂದಾಡಿ ಗುಡ್ಡೆ ನಿವಾಸಿಯಾದ ಜಯಂತ್ ಅವರ ಮನೆಯ ತಡೆಗೋಡೆ ಕುಸಿದಿದ್ದು, ಬಿ,ಕೆ . ಇಂದಿರಾ ಸುರೇಶ್ ಅವರ ಮನೆಯ ತಡೆಗೋಡೆ ಕುಸಿದಿದೆ.     ಕುಸಿದ ಪರಿಣಾಮಕ್ಕೆ ಪಕ್ಕದ ಮನೆಗೆ ಹಾನಿಯಾಗಿದ್ದು ಹಾಗೂ ಗುಡ್ಡೆಯಂಗಡಿ ನಿವಾಸಿಯಾದ ಚಂದ್ರ ಅವರ ಮನೆಯ ಹಿಂದಿನ ಗುಡ್ಡೆ ಕುಸಿದು ಮನೆಗೆ ಭಾಗಶಃ ಹಾನಿಯಾಗಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.

ಪಂಜಿಮೊಗರು ಬಳಿ ಗುಡ್ಡೆಯ ತಡೆಗೋಡೆ ಕುಸಿತ ➤ ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ, ಪರಿಶೀಲನೆ Read More »

ಕರಾವಳಿ

ಮಣಿಪಾಲ :ಆರ್ಥಿಕ ಸಮಸ್ಯೆಯಿಂದ ಆತ್ಯಹತ್ಯೆಗೆ ಶರಣಾದ ಟ್ಯಾಕ್ಸಿ ಚಾಲಕ

(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ.16:  ಆರ್ಥಿಕ ಸಮಸ್ಯೆಯಿಂದ ಹೌಸಿಂಗ್ ಲೋನ್ ಕಟ್ಟಲಾಗದೆ ನೊಂದು ಟ್ಯಾಕ್ಸಿ ಚಾಲಕರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದ ಸುವಿಧಾ ಅಪಾಟ್ಮೆಂಟ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.   ಮೃತ ವ್ಯಕ್ತಿಯನ್ನು ಕುಂದಾಪುರ ಮೂಲದ ರಾಘವೇಂದ್ರ ಎಂದು ಗುರುತಿಸಲಾಗಿದೆ. ಮೃತ ರಾಘವೇಂದ್ರ ಅವರು ಬ್ಯಾಂಕೊಂದರಲ್ಲಿ ಹೌಸಿಂಗ್ ಲೋನ್ ಮಾಡಿದ್ದು ಆರ್ಥಿಕ ಸಮಸ್ಯೆಯಿಂದ ಅದನ್ನು ಕಟ್ಟಲಾಗಿದೆ, ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ರಾಘವೇಂದ್ರ ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಅಗಲಿದ್ದಾರೆ.ಪ್ರಕರಣಕ್ಕೆ ಸಂಬಂಧ ಪಟ್ಟಂತೆ

ಮಣಿಪಾಲ :ಆರ್ಥಿಕ ಸಮಸ್ಯೆಯಿಂದ ಆತ್ಯಹತ್ಯೆಗೆ ಶರಣಾದ ಟ್ಯಾಕ್ಸಿ ಚಾಲಕ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ಲಾಸ್ಮಾದಾನ ಮಾನವೀಯತೆ ಮೆರೆದ ಕಡಬದ ಬ್ಯಾಂಕ್ ಸಿಬ್ಬಂದಿ ➤ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಕಡಬ, ಸೆ.16:  ಕೊರೊನಾ ಸೋಂಕಿಗೊಳಗಾಗಿದ್ದ ವ್ಯಕ್ತಿಯೊಬ್ಬರಿಗೆ, ಕಡಬದ ಸಹಕಾರಿ ಬ್ಯಾಂಕ್‍ನ ಸಿಬ್ಬಂದಿಯೋರ್ವರು ಪ್ಲಾಸ್ಮಾದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.   ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿ ರಾಧೇಶ್ ನಿಡ್ಡೋ ರವರು ನಿವೃತ್ತ ಅರಣ್ಯ ರಕ್ಷಕರಾದ ಗೋಳಿತ್ತೊಟ್ಟು ನಿವಾಸಿ ಜತ್ತಣ್ಣ ಗೌಡರಿಗೆ o+ ಪ್ಲಾಸ್ಮಾ ದಾನ ಮಾಡಿದ್ದಾರೆ. ಜತ್ತಣ್ಣ ಗೌಡರು ಎಜೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕಳೆದ ದಿನ ಪ್ಲಾಸ್ಮಾದಾನ ಮಾಡಿದ್ದಾರೆ. ಇವರು ಮಾಡಿದ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ

ಪ್ಲಾಸ್ಮಾದಾನ ಮಾನವೀಯತೆ ಮೆರೆದ ಕಡಬದ ಬ್ಯಾಂಕ್ ಸಿಬ್ಬಂದಿ ➤ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ Read More »

ಕರಾವಳಿ
Scroll to Top