ನ್ಯೂಸ್ ಕಡಬ

ಮಂಗಳೂರು: ಭೂಕುಸಿತಗೊಂಡ ಕೆತ್ತಿಕಲ್ ಗುಡ್ಡಕ್ಕೆ ಡಿಸಿ ಭೇಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29. ಭೂಕುಸಿತ ಸಂಭವಿಸಿರುವ ಕೆತ್ತಿಕಲ್ ಗುಡ್ಡ ಪ್ರದೇಶಕ್ಕೆ ಡಿಸಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ. ಸಮಸ್ಯೆಗೆ ಕಾರಣ ಹಾಗೂ ಪರಿಹಾರಕ್ಕೆ ಸಮಗ್ರ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.   ಸ್ಥಳದಲ್ಲಿದ್ದ ಎನ್‌ಎಚ್‌ಐ ಅಧಿಕಾರಿಗಳನ್ನು ಡಿಸಿ ತರಾಟೆಗೆ ತೆಗೆದುಕೊಂಡರು. ಸಮಸ್ಯೆಯ ಕುರಿತು ಸಮಗ್ರ ವರದಿ ನೀಡಲು ಎಂಸಿಸಿಗೆ ಸೂಚನೆಗಳನ್ನು ನೀಡಲಾಗಿದೆ. ಎಸಿ ಹರ್ಷವರ್ಧನ್, ಎಂಸಿಸಿ ಜಿಲ್ಲಾಧಿಕಾರಿ, ಎಂಜಿನಿಯರ್ ಮತ್ತು ಎನ್‌ಎಚ್‌ಐ ಅಧಿಕಾರಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ. […]

ಮಂಗಳೂರು: ಭೂಕುಸಿತಗೊಂಡ ಕೆತ್ತಿಕಲ್ ಗುಡ್ಡಕ್ಕೆ ಡಿಸಿ ಭೇಟಿ Read More »

ಕರಾವಳಿ

ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತಪಟ್ಟ ಘಟನೆ ವಿಟ್ಲದ ಪರ್ತಿಪ್ಪಾಡಿಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟ ಬಾಲಕಿಯನ್ನು ಗ್ಲೀನಾ ಡಿಸೋಜಾ(14) ಎಂದು ಗುರುತಿಸಲಾಗಿದೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಈಕೆಯನ್ನು ಕೆಲ ದಿನಗಳ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ

ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಪ್ರವಹಿಸಿ ಪೈಂಟರ್ ಮೃತ್ಯು

(ನ್ಯೂಸ್ ಕಡಬ)newskadaba.com ಬೈಂದೂರು, ಜು.27. ಲಾರಿ ಚಾಸಿಸ್ ಪೇಂಟ್ ಮಾಡುವ ವೇಳೆ ವಿದ್ಯುತ್ ಆಘಾತದಿಂದ ಪೈಂಟರೊಬ್ಬರು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಮೃತರನ್ನು ಗಂಗೊಳ್ಳಿ ನಿವಾಸಿ ಸಂದೀಪ್( 40 ) ಎಂದು ಗುರುತಿಸಲಾಗಿದೆ. ಇವರು ಟ್ರಾನ್ಸ್ಪೋರ್ಟ್ ಸಂಸ್ಥೆಯೊಂದರ ಲಾರಿಗಳ ಪೇಂಟಿಂಗ್ ಮಾಡಲು ಆಗಮಿಸಿದ್ದು, ಈ ವೇಳೆ ಪೇಂಟಿಂಗ್ ಕಂಪ್ರೆಸರ್ ಯಂತ್ರದಲ್ಲಿ ವಿದ್ಯುತ್ ಹರಿದ ಪರಿಣಾಮ ವಿದ್ಯುತ್ ಶಾಕ್‌ಗೆ ಒಳಗಾದ ಇವರು ತೀವ್ರವಾಗಿ ಅಸ್ವಸ್ಥಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ

ವಿದ್ಯುತ್ ಪ್ರವಹಿಸಿ ಪೈಂಟರ್ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಕಸ್ಮಿಕ ಅಗ್ನಿ ಅವಘಡ      ಲಕ್ಷಾಂತರ ರೂ. ನಷ್ಟ       

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.27. ಕುಕ್ಕುಂದೂರು ಗ್ರಾಮ ಪಂಚಾಯತ್ ವಾಪ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆಯ ಬಳಿ ಹೊಸದಾಗಿ ನಿರ್ಮಿಸಿರುವ ಮನೆವೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗ್ಗೆ ಸಂಭವಸಿದೆ ಎಂದು ವರದಿ ತಿಳಿಸಿದೆ. ಆಲ್ಫಾ ಕಾಟೇಜ್ ಆಯೀಝ್ ಹಬೀದ್ ಖಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಸುಮಾರು 2,00,000 ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.  

ಆಕಸ್ಮಿಕ ಅಗ್ನಿ ಅವಘಡ      ಲಕ್ಷಾಂತರ ರೂ. ನಷ್ಟ        Read More »

ಕರ್ನಾಟಕ

ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಬೆಂಗಳೂರು,  ಜು.27. ಅಡುಗೆ ಅನಿಲದ ಸಿಲಿಂಡರ್​ ಸ್ಫೋಟಗೊಂಡು ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯಗಳಾದ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಎಸ್.ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳಿಗೆ ಬೆಂಕಿ ತಗುಲಿ ಗಂಭೀರ ಸುಟ್ಟ ಗಾಯಗಳಾಗಿವೆ. ಪತಿ ಮದನ್ ಚೌಹಾರ (32), ಹೆಂಡತಿ ಪ್ರೇಮ್ ಜಾಲ (28), ಮಕ್ಕಳಾದ ಹಿರದ್ (12), ಪ್ರಶಾಂತ್ (6) ಹಾಗೂ ಅನಿತಾ (8) ಗಂಭೀರ ಗಾಯಗೊಂಡವರು ಎಂದು ಗುರುತಿಸಲಾಗಿದೆ. ನೇಪಾಳ ಮೂಲದ ಈ ಕುಟುಂಬ

ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೇಮಾವತಿ ಪ್ರವಾಹದಿಂದ ಸಕಲೇಶಪುರ ಮುಳುಗಡೆ         ಜನಜೀವನ, ಸಂಚಾರ ಅಸ್ತವ್ಯಸ್ತ                

(ನ್ಯೂಸ್ ಕಡಬ)newskadaba.com ಹಾಸನ, ಜು.27. ಸಕಲೇಶಪುರ ಪಟ್ಟಣದ ಆಜಾದ್ ರಸ್ತೆಯಲ್ಲಿ ಹೇಮಾವತಿ ನದಿ ನೀರಿನಿಂದ ಸಂಪೂರ್ಣ ಜಲಾವೃತಗೊಂಡಿದ್ದರಿಂದ ನಿವಾಸಿಗಳು ಹಾಗೂ ಅಂಗಡಿ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲು ತಾಲೂಕು ಆಡಳಿತ ಕ್ರಮ ಕೈಗೊಳ್ಳುತ್ತಿದೆ. ಸಕಲೇಶಪುರದ ಹೇಮಾವತಿ ನದಿ ತೀರದಲ್ಲಿರುವ ಶತಮಾನದಷ್ಟು ಹಳೆಯದಾದ ಹೊಳೆಮಲ್ಲೇಶ್ವರ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದೇವಾಲಯದೊಳಗೆ ಭಕ್ತರ ಪ್ರವೇಶವನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ.                            

ಹೇಮಾವತಿ ಪ್ರವಾಹದಿಂದ ಸಕಲೇಶಪುರ ಮುಳುಗಡೆ         ಜನಜೀವನ, ಸಂಚಾರ ಅಸ್ತವ್ಯಸ್ತ                 Read More »

ಕರ್ನಾಟಕ

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ;     16 ಸದಸ್ಯರ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು 3 ವರ್ಷಗಳ ಅವಧಿಗೆ ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎನ್ನಲಾಗಿದೆ. ಸಂರಕ್ಷಣಾ ವಿಶೇಷ ತಜ್ಞರು, ಜೀವಿಶಾಸ್ತ್ರಜ್ಞರು, ಪರಿಸರವಾದಿಗಳ ಕೋಟಾದಡಿಯಲ್ಲಿ ಸಚಿವರ, ಶಾಸಕರ ಮಕ್ಕಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಸಚಿವ ಎಂ.ಬಿ. ಪಾಟೀಲ್ ಪುತ್ರ ಧ್ರುವ್ ಎಂ ಪಾಟೀಲ್, ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿ ಮಂಡಳಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ. ರಾಜ್ಯ ವನ್ಯಜೀವಿ ಮಂಡಳಿಗೆ ಸಿಎಂ ಅಧ್ಯಕ್ಷರಾಗಿರುತ್ತಾರೆ. ಅರಣ್ಯ ಸಚಿವರು

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ;     16 ಸದಸ್ಯರ ನೇಮಕ Read More »

ಕರ್ನಾಟಕ

ಡೆಂಗ್ಯೂ ಸೋಂಕಿದ್ದವರ ಮೇಲೆ 14 ದಿನಗಳ ನಿಗಾ ಕಡ್ಡಾಯ     ರಾಜ್ಯ ಸರ್ಕಾರ          

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಡೆಂಗ್ಯೂ ಸೋಂಕಿಗೊಳಗಾದವರ ಮೇಲೆ 14 ದಿನಗಳ ವರೆಗಿನ ನಿಗಾ ಕಡ್ಡಾಯ ಎಂದು ರಾಜ್ಯ ಸರ್ಕಾರ ಹೇಳಿದೆ. ಬೆಂಗಳೂರಿನ ಯಲಹಂಕದದಲ್ಲಿ ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದು ಹೇಳಿದರು. ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು.                          

ಡೆಂಗ್ಯೂ ಸೋಂಕಿದ್ದವರ ಮೇಲೆ 14 ದಿನಗಳ ನಿಗಾ ಕಡ್ಡಾಯ     ರಾಜ್ಯ ಸರ್ಕಾರ           Read More »

ಕರ್ನಾಟಕ

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ 2.5 ಕೆಜಿ ಚಿನ್ನ ಕಳ್ಳ ಸಾಗಣೆ        ಆರೋಪಿಗಳಿಬ್ಬರು ಅರೆಸ್ಟ್     

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ದುಬೈಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದಿಳಿದ ವಿಮಾನದ ಇಬ್ಬರು ಪ್ರಯಾಣಿಕರ ಬಳಿ 1,68,95,725 ರೂ. ಮೌಲ್ಯದ 2.5 ಕೆಜಿ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ದುಬೈಯಿಂದ ಕೆಐಎಗೆ ಬಂದ ಪ್ರಯಾಣಿಕರನ್ನು ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ಸ್ಕಾನಿಂಗ್ ಮಾಡಿ ತಪಾಸಣೆ ನಡೆಸುತ್ತಿದ್ದರು. ಈ ಇಬ್ಬರ ಬಟ್ಟೆಯಲ್ಲಿ ಲೋಹ ಬಚ್ಚಿಟ್ಟಿರುವುದು ಗೊತ್ತಾಗಿದೆ ಎನ್ನಲಾಗಿದೆ.                                                             

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ 2.5 ಕೆಜಿ ಚಿನ್ನ ಕಳ್ಳ ಸಾಗಣೆ        ಆರೋಪಿಗಳಿಬ್ಬರು ಅರೆಸ್ಟ್      Read More »

ಕರ್ನಾಟಕ

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ)newskadaba.com ಉಡುಪಿ, ಜು.27. ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು, ಪ್ರಕರಣದ ವಿಚಾರಣೆ ವೇಳೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಮಹತ್ವ ಕಾರ್ಯಚರಣೆ ನಡೆಸಿ 27 ವರ್ಷಗಳ ಬಳಿಕ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಹುಡುಗಿ ದಿನಾಂಕ ಆಗಸ್ಟ್ 07 ರಂದು ಅವಳ ಮನೆಗೆ ಹೋಗುವಾಗ ದಾರಿ ತಪ್ಪಿ ಮಣಿಪಾಲದಲ್ಲಿ ನಿಂತಿದ್ದಾಗ ಆರೋಪಿ ಕುಂದಾಪುರದ ನಿವಾಸಿ ಜಮಾಲ್ ಎಂಬಾತನು ಮೋಟಾರು ಸೈಕಲಿನಲ್ಲಿ ಬಂದು ಹುಡುಗಿಯನ್ನು ಪುಸಲಾಯಿಸಿ ಮಣಿಪಾಲದ ಲಾಡ್ಜ್ ಒಂದರಲ್ಲಿ ರೂಂ ನಲ್ಲಿ ಸುಮಾರು 12

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top