ನ್ಯೂಸ್ ಕಡಬ

ಗಂಡನ ಕೊಲೆ ಮಾಡಿ ಮನೆಯಲ್ಲೇ ಸಮಾಧಿ ಮಾಡಿದ ಪತ್ನಿ

(ನ್ಯೂಸ್ ಕಡಬ) newskadaba.com ತ್ರಿಪುರ, ಆ. 29: ತಾಳಿ ಕಟ್ಟಿದ ಗಂಡನನ್ನು ಪತ್ನಿಯೊಬ್ಬಳು ಕೊಲೆ ಮಾಡಿ ಮನೆಯಲ್ಲೇ ಸಮಾಧಿ ಮಾಡಿದ್ದಾಳೆ. ಕೌಟುಂಬಿಕ ಕಾರಣಗಳಿಂದ ತನ್ನ ಪತಿ ಸಂಜಿತ್ ರೆಂಗ್ ನನ್ನು ಪತ್ನಿ ಭಾರತಿ ಕೊಲೆ ಮಾಡಿದ್ದಾಳೆ ಎನ್ನಲಾಗಿದ್ದು, ನಿಖರ ಕಾರಣ ತಿಳಿದುಬಂದಿಲ್ಲ. ಕೊಲೆ ಮಾಡಿದ ಬಳಿಕ ಮನೆಯ ಬೆಡ್ ರೂಮಿನಲ್ಲಿ ಪತಿಯ ಶವವನ್ನು ಸಮಾಧಿ ಮಾಡಿದ್ದಾಳೆ. ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕೊಲೆ ಮಾಡಿದ ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾಳೆ.    

ಗಂಡನ ಕೊಲೆ ಮಾಡಿ ಮನೆಯಲ್ಲೇ ಸಮಾಧಿ ಮಾಡಿದ ಪತ್ನಿ Read More »

ಕರಾವಳಿ, ಕರ್ನಾಟಕ

ಗಾಯಕ ಜಗದೀಶ್ ಪುತ್ತೂರು ಅವರಿಗೆ ತುಳುನಾಡ ಗಾನ ಗಂಧರ್ವ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29: ಪುತ್ತೂರಿನ ಗಾಯಕ ಜಗದೀಶ್ ಪುತ್ತೂರು ಅವರಿಗೆ ಓಮನ್ ತುಳುವೆರ್ ಸಂಘಟನೆಯ ವತಿಯಿಂದ ತುಳುನಾಡ ಗಾನ ಗಂಧರ್ವ ಬಿರುದು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ನಿರ್ದೇಶಕ ಕೊಡಿಯಾಲ್‍ಬೈಲ್, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್, ನಿರ್ಮಾಪಕ ಕಿಶೋರ್.ಡಿ.ಶೆಟ್ಟಿ, ಸಂಗೀತ ನಿರ್ದೇಶಕ ಕಿಶೋರ್ ಹಾಗೂ ನಿರ್ಮಾಪಕ ಸಂದೇಶ್ ಬಂಗೇರ ಉಪಸ್ಥಿತರಿದ್ದರು.  

ಗಾಯಕ ಜಗದೀಶ್ ಪುತ್ತೂರು ಅವರಿಗೆ ತುಳುನಾಡ ಗಾನ ಗಂಧರ್ವ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ

ಎಸ್. ಅಂಗಾರರ ಆರೋಗ್ಯ ಸುದಾರಿಸಲು ಭಜನೆಯ ಮೂಲಕ ದೇವರಲ್ಲಿ ಪ್ರಾರ್ಥನೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 29. ಸುಳ್ಯದ ಶಾಸಕ ಎಸ್.ಅಂಗಾರರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರ ಆರೋಗ್ಯ ಶೀಘ್ರವಾಗಿ ಸುಧಾರಿಸಲೆಂದು ದೇವರಲ್ಲಿ ಪ್ರಾರ್ಥನೆಯನ್ನು ಕಳೆದ ದಿನ ಯೇನೆಕಲ್ಲಿನಲ್ಲಿ ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ಭಜನೆ ಮಾಡಿ ದೇವರಲ್ಲಿ ಪ್ರಾರ್ಥಿಸಲಾಯಿತು. ಭಜನಾ ಮಂದಿರದ ಅಧ್ಯಕ್ಷರು, ಸದಸ್ಯರು, ಊರಿನ ಕೆಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.    

ಎಸ್. ಅಂಗಾರರ ಆರೋಗ್ಯ ಸುದಾರಿಸಲು ಭಜನೆಯ ಮೂಲಕ ದೇವರಲ್ಲಿ ಪ್ರಾರ್ಥನೆ Read More »

ಕರಾವಳಿ, ಕರ್ನಾಟಕ

ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಸಿಎಂ ಅನುಮತಿ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,28:  ಕೊರೊನಾದಿಂದಾಗಿ ನಿಂತುಹೋಗಿದ್ದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ಆಚರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ದೈವಾರಾಧನೆ, ನೇಮೋತ್ಸವ, ಮಾರಿಪೂಜೆ ಮತ್ತಿತರ ಶ್ರದ್ಧಾಭಕ್ತಿಯ ಆಚರಣೆಗಳಿಗೆ ಅನುಮತಿ ಕೋರಿ ಉಡುಪಿ ಶಾಸಕ ರಘುಪತಿ ಭಟ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು ಸಿಎಂ ಅವರು ಅನುಮತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಶಾಸಕ ರಘುಪತಿ ಭಟ್ ಅವರು, ಧಾರ್ಮಿಕ ಆಚರಣೆಗಳನ್ನು ಮುಂದುವರಿಸಲು ಮುಖ್ಯಮಂತ್ರಿಯವರು ಸರ್ಕಾರದ ಮುಖ್ಯ

ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಸಿಎಂ ಅನುಮತಿ Read More »

ಕರಾವಳಿ, ಕರ್ನಾಟಕ

ಲಾರಿಯಲ್ಲಿ ಸಾಗಿಸುತ್ತಿದ್ದ 24ಕ್ಕೂ ಹೆಚ್ಚು ಜಾನುವಾರು ರಕ್ಷಣೆ ➤ ನಾಲ್ವರು ಆರೋಪಿಗಳು ಪೋಲಿಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಪೊನ್ನಂಪೇಟೆ. ಆ,28:  ಕೇರಳದ ಕೊಲ್ಲಂಗೆ ಕೋಣಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಗಡಿಭಾಗ ಕುಟ್ಟ ಚೆಕ್‌ಪೋಸ್ಟ್ ಬಳಿ ಪೊಲೀಸರು ವಶಪಡಿಸಿಕೊಂಡು, ನಾಲ್ವರನ್ನು ಬಂಧಿಸಿದ್ದಾರೆ. ಲಾರಿಯಲ್ಲಿ ಸಾಗಿಸುತ್ತಿದ್ದ 24ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಕೊಲ್ಲಂ ನಿವಾಸಿ ನಿಜಾಮ್, ಮಧ್ಯಪ್ರದೇಶದ ಭೂಪಾಲ್‍ನ ಶಾನು, ಫೈಜಾನ್, ಮೊಹಮದ್ ರಫೀ ಎಂಬ ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಸಿಪಿಐ ಪರಶಿವಮೂರ್ತಿ ಅವರ ಮಾರ್ಗದರ್ಶನದಲ್ಲಿ ಕುಟ್ಟ ಪಿಎಸ್‌ಐ ಎಚ್.ಜೆ. ಚಂದ್ರಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.  

ಲಾರಿಯಲ್ಲಿ ಸಾಗಿಸುತ್ತಿದ್ದ 24ಕ್ಕೂ ಹೆಚ್ಚು ಜಾನುವಾರು ರಕ್ಷಣೆ ➤ ನಾಲ್ವರು ಆರೋಪಿಗಳು ಪೋಲಿಸರ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಸಕ ಎಸ್ ಅಂಗಾರರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ. ಆ,28:  ಶಾಸಕ ಎಸ್ ಅಂಗಾರರವರಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ.  ಅವರ ಕಾರಿನ ಚಾಲಕ ಮುರಳಿ ಎಂಬುವವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇದೀಗಾ ಶಾಸಕ ಎಸ್ ಅಂಗಾರರವರ ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಅತಂಕ ಎದುರಾಗಿದೆ.

ಶಾಸಕ ಎಸ್ ಅಂಗಾರರಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಕಡಬ ವ್ಯಾಪ್ತಿಯಲ್ಲಿ ಒಟ್ಟು 9 ಮಂದಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಆ. 28: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಒಟ್ಟು 29 ಪ್ರಕರಣಗಳು ಪತ್ತೆಯಾಗಿದೆ. ಕಡಬ ತಾಲೂಕಿನ ವ್ಯಾಪ್ತಿಯ ಆಲಂಕಾರು ನಿವಾಸಿ 32 ವರ್ಷದ ವ್ಯಕ್ತಿ ರಾಮಕುಂಜ ನಿವಾಸಿ 49 ವರ್ಷದ ಮಹಿಳೆ, ಪೆರಾಬೆ ನಿವಾಸಿ 53 ವರ್ಷದ ವ್ಯಕ್ತಿ ಗೋಳಿತೊಟ್ಟು ನಿವಾಸಿ 26 ವರ್ಷದ ಮಹಿಳೆ, ಕಡಬ ನಿವಾಸದ 45 ವರ್ಷದ ವ್ಯಕ್ತಿ, ನಿವಾಸಿ 80 ವರ್ಷದ ವೃಧ್ದ, ಕಾಮಣ ನಿವಾಸಿ 52 ವರ್ಷದ ವ್ಯಕ್ತಿ, ಬೆಳಂದೂರು

ಕಡಬ ವ್ಯಾಪ್ತಿಯಲ್ಲಿ ಒಟ್ಟು 9 ಮಂದಿಗೆ ಕೊರೋನಾ ದೃಢ Read More »

ಕರಾವಳಿ, ಕರ್ನಾಟಕ

ಬನ್ನೇರುಘಟ್ಟ ಪಾರ್ಕ್ ಆನೆ ಮರಿಗೆ “ಸುಧಾಮೂರ್ತಿ” ಹೆಸರು ನಾಮಕರಣದ ಮೂಲಕ ಗೌರವ

(ನ್ಯೂಸ್ ಕಡಬ) newskadaba.com ಆನೇಕಲ್. ಆ,28:  ಇತ್ತೀಚೆಗೆ ತಾನೇ ಕೇವಲ ತಿಂಗಳ ಅಂತರದಲ್ಲಿ ಉದ್ಯಾನವನದ ಎರಡು ಸಾಕಾನೆಗಳು ಮುದ್ದಾದ ಮರಿಗಳಿಗೆ ಜನ್ಮ ನೀಡಿದ್ದವು. ವನ್ಯಜೀವಿ ಸಂರಕ್ಷಣೆಗಾಗಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ನೀಡಿರುವ ಕೊಡುಗೆ ಹಿನ್ನಲೆಯಲ್ಲಿ ಅವರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಆನೆ ಮರಿಯೊಂದಕ್ಕೆ ಸುಧಾ ಮೂರ್ತಿ ಹೆಸರಿಡಲಾಗಿದೆ.     ಹೌದು, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 45 ವರ್ಷದ ಸುವರ್ಣ ಎಂಬ ಆನೆ, ಹೆಣ್ಣು ಮರಿಗೆ ಜನ್ಮ ನೀಡಿದ್ದು, ಈ ಆನೆ ಮರಿಗೆ ಸುಧಾ ಮೂರ್ತಿ

ಬನ್ನೇರುಘಟ್ಟ ಪಾರ್ಕ್ ಆನೆ ಮರಿಗೆ “ಸುಧಾಮೂರ್ತಿ” ಹೆಸರು ನಾಮಕರಣದ ಮೂಲಕ ಗೌರವ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲೊಂದು ಹೃದಯವಿದ್ರಾವಕ ಘಟನೆ ➤ ಮಗನಿಗೆ ಕೊರೊನಾ ಸೊಂಕು ಮನನೊಂದು ತಂದೆ ಆತ್ಮಹತ್ಯೆ.!

(ನ್ಯೂಸ್ ಕಡಬ) newskadaba.com ಉಡುಪಿ. ಆ,28:  ಮಗನಿಗೆ ಕೊರೊನಾ ಸೊಂಕು ಬಂದ ಹಿನ್ನಲೆ ಮನನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರ್ವಾದ ಕಳತ್ತೂರು ಗ್ರಾಮದ ಜ್ಯೋತಿ ನಗರ ಎಂಬಲ್ಲಿ ನಡೆದಿದೆ. ಸುಂದರಮೂಲ್ಯ (60) ಮನನೊಂದು ಆತ್ಮಹತ್ಯೆ ಮಾಡಿಕೊಂಡವರು.   ಇವರು ಬಿಪಿ, ಶುಗರ್ ಖಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಚಿಕಿತ್ಸೆಯಲ್ಲಿದ್ದರು. ಈ ನಡುವೆ ಇವರು ಪುತ್ರ ಶ್ವಾಸಕೋಶಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದರು. ಮಣಿಪಾಲದ ಕೆಎಮ್ ಸಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಅವರಲ್ಲಿ

ಕರಾವಳಿಯಲ್ಲೊಂದು ಹೃದಯವಿದ್ರಾವಕ ಘಟನೆ ➤ ಮಗನಿಗೆ ಕೊರೊನಾ ಸೊಂಕು ಮನನೊಂದು ತಂದೆ ಆತ್ಮಹತ್ಯೆ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಸುಳ್ಯ ಮೂಲದ ನ್ಯಾಯವಾದಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,28:  ನಗರದ ಬಿಜೈ KSRTC  ಬಳಿ ಬುಧವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನ್ಯಾಯವಾದಿ ಬಿಎಂ ದುಗ್ಗಪ್ಪ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ‌ ನಿಧನರಾಗಿದ್ದಾರೆ.   ಸುಳ್ಯ ಮೂಲದ ಇವರು ನಗರದ ಆಕಾಶಭವನ ಬಳಿ ನೆಲೆಸಿದ್ದರು. ಬುಧವಾರ ಸಂಜೆ  ತನ್ನ ಮನೆಯಿಂದ ಬೆಸೆಂಟ್ ಶಿಕ್ಷಣ ಸಂಸ್ಥೆಯ ಬಳಿ ಇರುವ ಕಚೇರಿಗೆ ತೆರಳುತ್ತಿದ್ದಾಗ ಇವರು ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇವರನ್ನು ಖಾಸಗಿ

ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಸುಳ್ಯ ಮೂಲದ ನ್ಯಾಯವಾದಿ ಮೃತ್ಯು Read More »

ಕರಾವಳಿ, ಕರ್ನಾಟಕ
Scroll to Top