ನ್ಯೂಸ್ ಕಡಬ

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.26. ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ಅಟೋ ರಿಕ್ಷಾ ಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22)  ಎಂದು ಗುರುತಿಸಲಾಗಿದೆ. ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ […]

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಪೈಲಟ್‌ ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

(ನ್ಯೂಸ್ ಕಡಬ)newskadaba.com ಉಡುಪಿ, ಜು.25. ಮತ್ಸ್ಯಗಂಧ ಎಕ್ಸ್‌ ಪ್ರೆಸ್ ರೈಲಿನ ಲೋಕೋ ಪೈಲಟ್ ಮತ್ತು ಅವರ ಸಹಾಯಕನ ಸಮಯಪ್ರಜ್ಞೆ ಉಡುಪಿ ರೈಲು ನಿಲ್ದಾಣದ ಬಳಿ ಭಾರೀ ಅವಘಡ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಳಿಗಳ ಮೇಲೆ ಬೃಹತ್ ಮರ ಬಿದ್ದಿರುವುದನ್ನು ಗಮನಿಸಿದ ಅವರು ಸರಿಯಾದ ಸಮಯಕ್ಕೆ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ರೈಲ್ವೇ ಪ್ರಕಟಣೆ ತಿಳಿಸಿದೆ.    

ಉಡುಪಿ: ಪೈಲಟ್‌ ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ Read More »

ಕರಾವಳಿ

ಪ್ರವಾಹ ತಗ್ಗಿಸಲು ಆಲಮಟ್ಟಿ ಜಲಾಶಯದಿಂದ ನೀರು ಬಿಡಿ ಕರ್ನಾಟಕಕ್ಕೆ ಮಹಾರಾಷ್ಟ್ರ ಸರ್ಕಾರ ಮನವಿ

(ನ್ಯೂಸ್ ಕಡಬ)newskadaba.com ಮುಂಬೈ, ಜು.25. ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ಭಾರಿ ಮಳೆಯ ಪರಿಣಾಮ ಸಾಂಗ್ಲಿ, ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿಯನ್ನು ತಡೆಯುವುದಕ್ಕೆ ಆಲಮಟ್ಟಿ ಜಲಾಯಶಯದಿಂದ ನೀರು ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರ ಮನವಿ ಮಾಡಿದೆ. ಈ ಬಗ್ಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮಾಹಿತಿ ನೀಡಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ (ಆಲಮಟ್ಟಿ ಡ್ಯಾಮ್) ಕೃಷ್ಣಾ ನದಿಗೆ ಕಟ್ಟಲಾಗಿರುವ ಜಲಾಶಯವಾಗಿದ್ದು, ಜಲವಿದ್ಯುತ್ ಯೋಜನೆಯದ್ದಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಜಿತ್ ಪವಾರ್, ‘ಆಲಮಟ್ಟಿ ಅಣೆಕಟ್ಟಿನಿಂದ ನೀರು ಹರಿಸುವುದನ್ನು

ಪ್ರವಾಹ ತಗ್ಗಿಸಲು ಆಲಮಟ್ಟಿ ಜಲಾಶಯದಿಂದ ನೀರು ಬಿಡಿ ಕರ್ನಾಟಕಕ್ಕೆ ಮಹಾರಾಷ್ಟ್ರ ಸರ್ಕಾರ ಮನವಿ Read More »

ರಾಷ್ಟ್ರೀಯ ನ್ಯೂಸ್

‘ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ವಿಪಕ್ಷಗಳ ಧರಣಿ’    ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.25. ನನ್ನ ಹೆಸರಿಗೆ ಮಸಿ ಬಳಿಯಲು, ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ವಿಪಕ್ಷಗಳು ಮುಡಾ ಹಗರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ವಿಪಕ್ಷಗಳ ಪ್ರತಿಭಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ವಿರುದ್ದ ಕಿಡಿಕಾರಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅವರು ವಿಷಯವೇ ಇಲ್ಲದ್ದನ್ನ ವಿಷಯ ಮಾಡ್ತಿದ್ದಾರೆ. ಸುಮ್ಮನೆ ಮುಡಾ ವಿಷಯ ಇಟ್ಟುಕೊಂಡು ಪ್ರತಿಭಟನೆ ಮಾಡ್ತಿದ್ದಾರೆ. ನಿಯಮಾವಳಿ ಪ್ರಕಾರವೇ ಸೈಟ್ ಪಡೆಯಲಾಗಿದೆ. ಕಾನೂನು ಪ್ರಕಾರವೇ ಎಲ್ಲಾ ಆಗಿದೆ.

‘ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ವಿಪಕ್ಷಗಳ ಧರಣಿ’    ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ 10 ಲಕ್ಷ ಸಾಲ   

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಸರ್ಕಾರಿ ಯೋಜನೆಗಳು ಮತ್ತು ನೀತಿಗಳ ಅಡಿಯಲ್ಲಿ ಯಾವುದೇ ಪ್ರಯೋಜನಕ್ಕೆ ಅನರ್ಹರಾಗಿರುವ ವಿದ್ಯಾರ್ಥಿಗಳು ಈಗ ದೇಶೀಯ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಶೇಕಡಾ 3ರ ಬಡ್ಡಿದರದಲ್ಲಿ 10 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆಯಬಹುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2024ರಲ್ಲಿ ಘೋಷಿಸಿದ್ದಾರೆ ಎನ್ನಲಾಗಿದೆ. ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ನೇರ ಇ-ವೋಚರ್‌ಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು. ಸರ್ಕಾರವು ಯುವಜನರಿಗೆ ಕೌಶಲ್ಯ ಮತ್ತು ಅವಕಾಶಗಳನ್ನು ಒದಗಿಸುವ ಉದ್ದೇಶವನ್ನು

ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ 10 ಲಕ್ಷ ಸಾಲ    Read More »

ಕರ್ನಾಟಕ

ಜೈಲಿನಿಂದ ತಪ್ಪಿಸಿಕೊಂಡ ಆರು ವರ್ಷಗಳ ನಂತರ ಸಿಕ್ಕಿಬಿದ್ದ ಅಪರಾಧಿ ಮತ್ತೆ ಸೆರೆಮನೆ ವಾಸ ಫಿಕ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಟ್ರಾಫಿಕ್ ಕೋರ್ಟ್‌ ನಿಂದ ಪರಾರಿಯಾಗಿದ್ದ ರಸ್ತೆ ಅಪಘಾತದಲ್ಲಿ ಶಿಕ್ಷೆಗೊಳಗಾಗಿದ್ದ ಅಪರಾಧಿಯನ್ನು ಜೀವನ್ ಭೀಮಾ ನಗರ ಸಂಚಾರ ಪೊಲೀಸರು ಪತ್ತೆಹಚ್ಚಿದ್ದಾರೆ ಎನ್ನಲಾಗಿದೆ. 2015ರಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಆರೋಪಿ ದಿನೇಶ್ (32) ಮೊಪೆಡ್‌ನಲ್ಲಿದ್ದ ಗುರುಪ್ಪ (54) ಅವರಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಪೊಲೀಸರು ಐಪಿಸಿಯ ಸೆಕ್ಷನ್ 279 (ನಿರ್ಲಕ್ಷ್ಯದ ಸವಾರಿ) ಮತ್ತು 304 (ಎ) (ಸಾವಿಗೆ ಕಾರಣ)

ಜೈಲಿನಿಂದ ತಪ್ಪಿಸಿಕೊಂಡ ಆರು ವರ್ಷಗಳ ನಂತರ ಸಿಕ್ಕಿಬಿದ್ದ ಅಪರಾಧಿ ಮತ್ತೆ ಸೆರೆಮನೆ ವಾಸ ಫಿಕ್ಸ್ Read More »

ಕರ್ನಾಟಕ

ಇಂದು – ನಾಳೆ ಶಾಸಕರಿಗೆ ಕಾಂಗ್ರೆಸ್’ನಿಂದ ವಿಪ್ ಜಾರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಮಳೆಗಾಲದ ಅಧಿವೇಶನ ಮುಗಿಯಲು 2 ದಿನ ಬಾಕಿ ಇರುವಂತೆ ರಾಜ್ಯ ಸರ್ಕಾರ ಪ್ರಮುಖ ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು 26 ರಂದು ಪರಿಷತ್ತಿನ ಕಾಂಗ್ರೆಸ್ ಪಕ್ಷದ ಎಲ್ಲಾ ಸದರ್ಯರು ಕಡ್ಡಾಯವಾಗಿ ಹಾಜರಿರುವಂತೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ವಿಪ್ ನೀಡಿದ್ದಾರೆ. ಇನ್ನೆರಡು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಸರ್ಕಾರ ಸುಮಾರು 10 ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆಯಬೇಕಾಗಿರುವುದರಿಂದ ಸದಸ್ಯರ ಹಾಜರಾತಿ ಕಡ್ಡಾಯಗೊಳಿಸಿ ವಿಪ್ ನೀಡಲಾಗಿದೆ ಎಂದು

ಇಂದು – ನಾಳೆ ಶಾಸಕರಿಗೆ ಕಾಂಗ್ರೆಸ್’ನಿಂದ ವಿಪ್ ಜಾರಿ Read More »

ಕರ್ನಾಟಕ

ತಂದೆಯ ಕಿರುಕುಳ ತಾಳಲಾರದೆ ಪುತ್ರ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಹಾಸನ, ಜು.25. ಕೌಟುಂಬಿಕ ವಿಚಾರಕ್ಕೆ ತಂದೆಯ ನಿರಂತರ ಕಿರುಕುಳ ತಾಳಲಾರದೆ ಪುತ್ರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತನನ್ನು ಅಕಿಲ್ ಪಾಶ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ತಂದೆ ಸೈಯದ್ ಪಾಷಾ ಹಲವು ಸಂದರ್ಭಗಳಲ್ಲಿ ಕೌಟುಂಬಿಕ ವಿಚಾರವಾಗಿ ತನ್ನ ಮಗ ಮತ್ತು ಸೊಸೆ ವಿರುದ್ಧ ಅವಾಚ್ಯ ಶಬ್ಧಗಳಿಂದ ಜಗಳವಾಡುತ್ತಿದ್ದ ಎನ್ನಲಾಗಿದೆ. ಸಂಬಂಧಿಕರು ಮತ್ತು ನೆರೆಹೊರೆಯವರು ಪೊಲೀಸರ ಸಹಾಯದಿಂದ ಸೈಯದ್ ಪಾಷಾ ಮತ್ತು ಅವರ ಮಗನನ್ನು ಸಮಾಧಾನಪಡಿಸಲು ಹಲವು ಬಾರಿ ಪ್ರಯತ್ನಿಸಿದರೂ

ತಂದೆಯ ಕಿರುಕುಳ ತಾಳಲಾರದೆ ಪುತ್ರ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದ ಪ್ರಿಯಕರ ಆರೋಪಿ ಅರೆಸ್ಟ್….!

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜು.25. ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಕೊಲೆ ಆರೋಪಿ ಶಿವಮೊಗ್ಗದ ಸಾಗರ ಮೂಲದ ಸೃಜನ್ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಸೃಜನ್ ಸೌಮ್ಯಳ ಮೃತದೇಹವನ್ನು ಹೂತಿಟ್ಟಿದ್ದನು. ಯುವತಿಯ

ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದ ಪ್ರಿಯಕರ ಆರೋಪಿ ಅರೆಸ್ಟ್….! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯಪಾಲರನ್ನು ದಿಢೀರ್ ಭೇಟಿಯಾದ ಸಿದ್ದರಾಮಯ್ಯ   ಕುತೂಹಲ ಮೂಡಿಸಿದ ಸಿಎಂ ನಡೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ದಿಢೀರ್ ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.   ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮುಡಾ ಅಕ್ರಮಗಳ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಯಾಗಿ ಚರ್ಚೆ

ರಾಜ್ಯಪಾಲರನ್ನು ದಿಢೀರ್ ಭೇಟಿಯಾದ ಸಿದ್ದರಾಮಯ್ಯ   ಕುತೂಹಲ ಮೂಡಿಸಿದ ಸಿಎಂ ನಡೆ.! Read More »

ಕರ್ನಾಟಕ
Scroll to Top