ನ್ಯೂಸ್ ಕಡಬ

5 ಗಂಟೆಗೆ ರಾಜ್ಯವನ್ನು ಉದ್ದೇಶಿಸಿ ಸಿಎಂ ಬಿಎಸ್ ವೈ ಭಾಷಣ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿಗಳು ಫೇಸ್ ಬುಕ್, ಯೂಟ್ಯೂಬ್ ಮೂಲಕ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ. ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಲಾಕ್ ಡೌನ್ ಬುಧವಾರ ಬೆಳಗ್ಗೆ 5 ಗಂಟೆಗೆ ಮುಗಿಯಲಿದೆ. […]

5 ಗಂಟೆಗೆ ರಾಜ್ಯವನ್ನು ಉದ್ದೇಶಿಸಿ ಸಿಎಂ ಬಿಎಸ್ ವೈ ಭಾಷಣ Read More »

ಕರಾವಳಿ, ಕರ್ನಾಟಕ

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!!

(ನ್ಯೂಸ್ ಕಡಬ) newskadaba.com ಚೆನ್ನೈ: ಜು.21., ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಳಿನಿ ಶ್ರೀಹರನ್ ಅವರು ಸೋಮವಾರ ರಾತ್ರಿ ವೆಲ್ಲೂರು ಮಹಿಳಾ ಜೈಲಿನೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಕೆಯ ವಕೀಲರು ಮಂಗಳವಾರ ತಿಳಿಸಿದ್ದಾರೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ನಳಿನಿ ಪರ ವಕೀಲೆ ಪಿ ಪುಗಲೆಂತಿ ಅವರ ಪ್ರಕಾರ ” ನಳಿನಿ

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಉಡುಪಿ , ಜು.21:  ಕೃಷ್ಣ ನಗರಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಸದ್ದು ಮಾಡುತ್ತಲೇ ಇದೆ. ಇಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೂ ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ

ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸ್ ಠಾಣಾ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ➤ ಮುಂದಿನ 48 ಗಂಟೆಗಳ ಕಾಲ ಪುತ್ತೂರು ನಗರ ಪೊಲೀಸ್ ಠಾಣೆ ಮತ್ತೆ ಸೀಲ್‌ಡೌನ್

(ನ್ಯೂಸ್ ಕಡಬ) newskadaba.com ಪುತ್ತೂರು :ಜು.21., ಕಿಲ್ಲರ್ ಕೊರೋನಾ ಮತ್ತೆ ನಗರ ಪೊಲೀಸ್ ಠಾಣೆಯನ್ನು ಆವರಿಸಿದ್ದು, ಮತ್ತಿಬ್ಬರು ಸಿಬಂದಿಗಳಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇದೀಗ ಠಾಣೆಯನ್ನು ಮುಂದಿನ 48 ಗಂಟೆಗಳ ಕಾಲ ಮತ್ತೆ ಸೀಲ್‌ಡೌನ್ ಮಾಡಲಾಗಿದೆ. ಸೋಮವಾರ ಬೆಳಿಗ್ಗೆ ನಗರ ಠಾಣೆಯ ಮಹಿಳಾ ಕಾನ್‌ಸ್ಟೇಬಲ್ ಒಬ್ಬರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಸಂಜೆಯ ವೇಳೆಗೆ ಮತ್ತೆ ಇಬ್ಬರಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದ್ದು ಇದರಿಂದಾಗಿ ಠಾಣೆಯ ಒಟ್ಟು 6 ಮಂದಿ ಸಿಬಂದಿಗಳು ಕೊರೋನಾ ಸೋಂಕಿತರಾಗಿರುವುದು ದೃಢವಾಗಿದೆ.ಈ ನಿಟ್ಟಿನಲ್ಲಿ ನಗರ

ಪೊಲೀಸ್ ಠಾಣಾ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ➤ ಮುಂದಿನ 48 ಗಂಟೆಗಳ ಕಾಲ ಪುತ್ತೂರು ನಗರ ಪೊಲೀಸ್ ಠಾಣೆ ಮತ್ತೆ ಸೀಲ್‌ಡೌನ್ Read More »

ಕರಾವಳಿ

12 ಕಿ.ಮೀ. ದೂರ ಓಡಿ, ಕೊಲೆ ಆರೋಪಿ ಪತ್ತೆ ಮಾಡಿದ ಪೊಲೀಸ್ ಸ್ನೀಫರ್ ಡಾಗ್!

(ನ್ಯೂಸ್ ಕಡಬ) newskadaba.com ದಾವಣಗೆರೆ, ಜು.21:  ಪೊಲೀಸ್ ಸ್ನಿಫರ್ ಶ್ವಾನವೊಂದು ಸುಮಾರು 12 ಕಿ. ಮೀ. ದೂರ ಓಡುವ ಮೂಲಕ ವಾರದ ಹಿಂದಷ್ಟೇ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯೊಬ್ಬನನ್ನು ಪೊಲೀಸರು ಕಂಡುಹಿಡಿದು ಬಂಧಿಸುವಲ್ಲಿ ನೆರವಾಗಿದೆ. ಈ ಮೂಲಕ ಹಿರೋ ಆಗಿ ಹೊರಹೊಮ್ಮಿದೆ. ದಾವಣಗೆರೆ ಜಿಲ್ಲೆಯ ಬಸವಪಟ್ಟಣದಲ್ಲಿ ಜುಲೈ 10 ರಂದು ಈ ಘಟನೆ ನಡೆದಿದೆ. ಸಾಲದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಒಬ್ಬಾತ ಪೊಲೀಸ್ ಠಾಣೆಯಿಂದ ಕಳವು ಮಾಡಲಾಗಿದ್ದ ರಿವಾಲ್ವರ್ ನಿಂದ ಮತ್ತೊರ್ವನನ್ನು ಗುಂಡಿಕ್ಕಿ ಹತ್ಯೆ

12 ಕಿ.ಮೀ. ದೂರ ಓಡಿ, ಕೊಲೆ ಆರೋಪಿ ಪತ್ತೆ ಮಾಡಿದ ಪೊಲೀಸ್ ಸ್ನೀಫರ್ ಡಾಗ್! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ ಕೋರ್ಟ್ ನ ನ್ಯಾಯಾಧೀಶರಿಗೆ ಕೋವಿಡ್ ಸೋಂಕು ದೃಢ ➤ ಕೋರ್ಟ್ ಎರಡು ದಿನ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಉಡುಪಿ, ಜು.21: ಇಲ್ಲಿನ ನ್ಯಾಯಾಲಯದ ನ್ಯಾಯಾಧೀಶರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಉಡುಪಿ ನ್ಯಾಯಾಲಯ ಸಂಕೀರ್ಣವನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ನ್ಯಾಯಾಧೀಶರಿಗೆ ಕೋವಿಡ್ -19 ಸೋಂಕು ದೃಢವಾದ ಹಿನ್ನಲೆಯಲ್ಲಿ ಕೋರ್ಟ್ ಆವರಣವನ್ನು ಎರಡು ದಿನ ಸೀಲ್ ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗುವುದು. ಜು. 21 ಮತ್ತು 22ರಂದು ಕೋರ್ಟ್ ಸೀಲ್ ಡೌನ್ ಆಗಿರಲಿದೆ ಎಂದು ವರದಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆಯಲ್ಲಿ ಮತ್ತೆ

ಉಡುಪಿ ಕೋರ್ಟ್ ನ ನ್ಯಾಯಾಧೀಶರಿಗೆ ಕೋವಿಡ್ ಸೋಂಕು ದೃಢ ➤ ಕೋರ್ಟ್ ಎರಡು ದಿನ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ಕ್ಷಣ ಗಣನೆ ಪ್ರಾರಂಭ ➤ ಉಡುಪಿ ಕ್ಷೇತ್ರದಿಂದ ಮಣ್ಣು ಸಂಗ್ರಹ

(ನ್ಯೂಸ್ ಕಡಬ) newskadaba.com ಉಡುಪಿ :ಜು.21., ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ದಿನ ಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಪುಣ್ಯ ಕ್ಷೇತ್ರಗಳಿಂದ ಮಣ್ಣು ಹಾಗೂ ನೀರು ಸಂಗ್ರಹದ ಕಾರ್ಯವನ್ನು ವಿಶ್ವ ಹಿಂದೂ ಪರಿಷತ್ ಮಾಡುತ್ತಿದೆ. ಕೃಷ್ಣ ನಗರಿ ಉಡುಪಿಯಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ ಪವಿತ್ರ ಮಣ್ಣಿಗೆ ಪರ್ಯಾಯ ಅದಮಾರು ಶ್ರೀ ಗಳಾದ ಈಶಪ್ರೀಯತೀರ್ಥ ಸ್ವಾಮೀಜಿ ಪ್ರಾರ್ಥನೆ ಸಲ್ಲಿಸಿ ಪೂಜೆ ನೆರವೇರಿಸಿ, ಕೃಷ್ಣನ ಗಂಧ ಪ್ರಸಾದ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿ ಪವಿತ್ರ ಮಣ್ಣುನ್ನು ವಿಹಿಂಪ

ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ಕ್ಷಣ ಗಣನೆ ಪ್ರಾರಂಭ ➤ ಉಡುಪಿ ಕ್ಷೇತ್ರದಿಂದ ಮಣ್ಣು ಸಂಗ್ರಹ Read More »

ಕರಾವಳಿ

ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮದ್ರಸ ಅಧ್ಯಾಪಕನ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ , ಜು.21: ತನ್ನ ಹದಿನಾರು ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಗೂನಡ್ಕ ಮೂಲದವನಾದ ಈತ ಇಲ್ಲಿಯೂ ಒಂದು ವಿವಾಹವಾಗಿದ್ದು, ಕಾಞಂಗಾಡ್ ನಲ್ಲಿ ಮತ್ತೊಂದು ವಿವಾಹವಾಗಿದ್ದ. ಈತನ ಮೇಲೆ ಈ ಹಿಂದೆಯೂ ಪೋಕ್ಸೋ ಕೇಸು ಸಹಿತ ನಾಲ್ಕು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು. ಈತನ 16 ವರ್ಷದ ಮಗಳು ತನ್ನ ಮಾವನ ಸಹಕಾರದೊಂದಿಗೆ ನೀಲೇಶ್ವರ ಪೊಲೀಸರಿಗೆ ದೂರು ನೀಡಿದ್ದು, ಕಳೆದ ಕೆಲವು ವರ್ಷಗಳಿಂದ

ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮದ್ರಸ ಅಧ್ಯಾಪಕನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ :ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ➤ ಗೂಸ ತಿಂದ ಮುಖಂಡ

(ನ್ಯೂಸ್ ಕಡಬ) newskadaba.com ಸುಳ್ಯ, ಜು.21:  ವಿವಾಹಿತ ಮಹಿಳೆಯೊಂದಿಗೆ ಚೆಲ್ಲಾಟವಾಡುತ್ತಿದ್ದ ಸಮಯದಲ್ಲಿ ಪಕ್ಷದ ಮುಖಂಡನೋರ್ವ ಧರ್ಮದೇಟು ತಿಂದ ಘಟನೆ ಪೆರುವಾಜೆ ಗ್ರಾಮದ ಕುಂಡಡ್ಕದಿಂದ ವರದಿಯಾಗಿದೆ. ಸುಳ್ಯ ಶಾಸಕರ ಮಾಜಿ ಆಪ್ತ ಕಾರ್ಯದರ್ಶಿ ಎನ್ನಲಾದ ಹಾಗೂ ಪಕ್ಷವೊಂದರಲ್ಲಿ ಸಕ್ರಿಯವಾಗಿರುವ ವ್ಯಕ್ತಿಯೋರ್ವ ವಿವಾಹಿತ ಮಹಿಳೆಯೊಬ್ಬರ ಜತೆ ಇರುವುದನ್ನು ಕಂಡು ಆ ಮಹಿಳೆಯ ಪತಿಯ ಸಹೋದರ ಕೈಯಲ್ಲಿದ್ದ ದೊಣ್ಣೆಯಿಂದ ಅವರಿಗೆ ಬಾರಿಸಿದರೆಂದು ಗಾಯಗೊಂಡ ಆತ ಅಲ್ಲಿಂದ ಓಡಿ ತಪ್ಪಿಸಿಕೊಂಡರೆಂದು ಹೇಳಲಾಗಿದೆ.ಅನೈತಿಕ ಸಂಬಂಧದ ವಿರುದ್ಧ ಈ ಹಿಂದೆಯೂ ಹಲವು ಬಾರಿ ಇವರಿಗೆ ಎಚ್ಚರಿಕೆ

ಸುಳ್ಯ :ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ➤ ಗೂಸ ತಿಂದ ಮುಖಂಡ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗರ್ಭಿಣಿಯರ ಚಿಕಿತ್ಸೆ ನೀಡದಿದ್ದರೆ ಕಠಿಣ ಕ್ರಮ ➤ ದ.ಕ ಉಸ್ತುವರಿ ಸಚಿವರಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು , ಜು.21:  ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಸಂದರ್ಭದಲ್ಲಿ ಕೋವಿಡ್ ಸೋಂಕಿತರೆಂಬ ಕಾರಣಕ್ಕೆ ಗರ್ಭಿಣಿಯರಿಗೆ ಚಿಕಿತ್ಸೆ ನೀಡದೆ ಬೇರೆಡೆಗೆ ಕಳುಹಿಸುವಂತಿಲ್ಲ. ಹೆರಿಗೆ ವಿಚಾರದಲ್ಲಿ ಖಾಸಗೀ ಆಸ್ಪತ್ರೆಗಳು ಸತಾಯಿಸದೆ ಹೆರಿಗೆ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಗರ್ಭಿಣಿಯರಿಗೆ ಖಾಸಗೀ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಸತಾಯಿಸಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ವ್ಯವಸ್ಥಿತವಾಗಿ ಹೆರಿಗೆ ಮಾಡಿಸಲು ಆಯಾ ಆಸ್ಪತ್ರೆಗಳು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು.

ಗರ್ಭಿಣಿಯರ ಚಿಕಿತ್ಸೆ ನೀಡದಿದ್ದರೆ ಕಠಿಣ ಕ್ರಮ ➤ ದ.ಕ ಉಸ್ತುವರಿ ಸಚಿವರಿಂದ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ
Scroll to Top