ನ್ಯೂಸ್ ಕಡಬ

ಗಂಗೊಳ್ಳಿ : ಮಳೆಗೆ ಮನೆ ಕುಸಿದು ಬಿದ್ದು ಲಕ್ಷಾಂತರ ರೂ. ಹಾನಿ

(ನ್ಯೂಸ್ ಕಡಬ) newskadaba.com ಗಂಗೊಳ್ಳಿ ,ಜು.18: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಗಂಗೊಳ್ಳಿ ಗ್ರಾಮದಲ್ಲಿ ಮನೆ ಕುಸಿದು ಬಿದ್ದಿದ್ದು, ಲಕ್ಷಾಂತರ ರೂ. ಹಾನಿ ಸಂಭವಿಸಿದೆ.ಗಂಗೊಳ್ಳಿ ಗ್ರಾಮದ ಮೇಲ್‍ಗಂಗೊಳ್ಳಿ ರಾಮ ಪೈ ಮಠದ ಬಳಿಯ ನಿವಾಸಿ ಮುಕುಂದ ನಾಯಕ್ ಎಂಬುವರ ವಾಸ್ತವ್ಯದ ಮನೆ ಭಾರೀ ಮಳೆಗೆ ಗುರುವಾರ ರಾತ್ರಿ ಸಂಪೂರ್ಣವಾಗಿ ನೆಲಕಚ್ಚಿದೆ  .   ಬೆಲೆ ಬಾಳುವ ವಸ್ತುಗಳು, ಪೀಠೋಪಕರಣ ಸಹಿತ ಇನ್ನಿತರ ವಸ್ತುಗಳು ಮನೆಯ ಅವಶೇಷಗಳ ಅಡಿ ಸಿಲುಕಿ ಹಾನಿಗೊಳಗಾಗಿದೆ. ರಾತ್ರಿ ಸುಮಾರು 9 ಗಂಟೆ ಸುಮಾರಿಗೆ […]

ಗಂಗೊಳ್ಳಿ : ಮಳೆಗೆ ಮನೆ ಕುಸಿದು ಬಿದ್ದು ಲಕ್ಷಾಂತರ ರೂ. ಹಾನಿ Read More »

ಕರಾವಳಿ, ಕರ್ನಾಟಕ

ಅಪಾಯಕಾರಿ ಮರಗಳನ್ನ ತೆರವುಗೊಳಿಸಿದ ಉತ್ಸಾಹಿ ಯುವಕರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.17: ರಾಷ್ಟ್ರೀಯ ಹೆದ್ದಾರಿ 75ರ ಬೆಳ್ತಂಗಡಿ ತಾಲೂಕಿನ ಎಂಜಿರದಿಂದ ಅರಸಿನಮಕ್ಕಿ ಹೋಗುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಅಪಾಯದ ಅಂಚಿನಲ್ಲಿರುವ ಬೃಹದಾಕಾರದ ಮರವನ್ನು ರೆಖ್ಯಾದ ಗ್ರಾಮಸ್ಥರು, ಮೆಸ್ಕಾಂ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿ ಗುರುವಾರದಂದು ತೆರವುಗೊಳಿಸಿದ್ದಾರೆ.     ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಅಶೋಕ್ ಸಹಾಯಕ ಅಧಿಕಾರಿ ರಾಜೇಶ್, ವಿದ್ಯುತ್ ಇಲಾಖೆಯ ಲೈನ್ ಮ್ಯಾನ್ ಕುಮಾರ್ ಸೇರಿದಂತೆ ಗ್ರಾಮದ ಹಲವು ಉತ್ಸಾಹಿ ಯುವಕರು ಸೇರಿಕೊಂಡು ಅಪಾಯದಅಂಚಿನಲ್ಲಿದ್ದ ಮರಗಳನ್ನ

ಅಪಾಯಕಾರಿ ಮರಗಳನ್ನ ತೆರವುಗೊಳಿಸಿದ ಉತ್ಸಾಹಿ ಯುವಕರು Read More »

ಕರಾವಳಿ, ಕರ್ನಾಟಕ

ಪೊಲೀಸ್ ಸಿಬ್ಬಂದಿಗಳ ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ➤ ಕಾನ್‍ಸ್ಟೇಬಲ್ ಮೃತ್ಯು

(ನ್ಯೂಸ್ ಕಡಬ) newskadaba.com.ಮಂಡ್ಯ,ಜು.16:  ಪೊಲೀಸ್ ಸಿಬ್ಬಂದಿ ಸಂಚರಿಸುತ್ತಿದ್ದ ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ಪೇದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಎಎಸ್ಐ ಗಂಭೀರ ಗಾಯಗೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಮದ್ದೂರು ತಾಲೂಕು ತೊರೆಶೆಟ್ಟಹಳ್ಳಿ ಗ್ರಾಮದಲ್ಲಿ ಇಂದು ಈ ಅವಘಡ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಪೇದೆ ಅರುಣ್(26) ಮೃತರು. ಕೆಸ್ತೂರಿನ ಎಎಸ್ಐ ಬಾಲಯ್ಯ ಗಾಯಗೊಂಡಿದ್ದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತೊಪ್ಪನಹಳ್ಳಿಯ ವ್ಯಕ್ತಿಗೆ ಅರುಣ್ ಗನ್‌ಮ್ಯಾನ್ ಆಗಿದ್ದರು. ಕಾರ್ಯನಿಮಿತ್ತ ತೊರೆಶೆಟ್ಟಹಳ್ಳಿಗೆ ಆಗಮಿಸಿದ್ದರು. ಈ ವೇಳೆ ಪೇದೆ ಸವಾರಿ ಮಾಡುತ್ತಿದ್ದ ಬೈಕ್​ ಮತ್ತು ಎಎಸ್​ಐ

ಪೊಲೀಸ್ ಸಿಬ್ಬಂದಿಗಳ ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ➤ ಕಾನ್‍ಸ್ಟೇಬಲ್ ಮೃತ್ಯು Read More »

ಕರ್ನಾಟಕ

ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಕಾರ ಮಳೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.16: ಕಳೆದೊಂದು ವಾರದಿಂದ ಬೆಂಗಳೂರು ಜತೆಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.   ಇದರಿಂದ ಕೊರೊನಾ ರೋಗ ಹರಡುವ ಭಯದಲ್ಲಿ ಜನ ಕಾಲ ಕಳೆಯುವಂತಾಗಿದೆ. ಶಿವಮೊಗ್ಗ, ಮಂಗಳೂರು, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ. ಇನ್ನು, ರಾಜ್ಯದಲ್ಲಿ ಒಂದಷ್ಟು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಇದು ಮಳೆಗಾಲವಾಗಿದ್ದು, ಮುಂಗಾರು ನಂತರ ಬರುವ ಮಳೆಯಾಗಿದೆ. ಈ ಮಳೆ ಹೆಚ್ಚಿರುವ ತಾಪಮಾನವನ್ನು ಈ ಮಳೆ ಕಡಿಮೆ ಮಾಡುತ್ತದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಕಾರ ಮಳೆ Read More »

ಕರಾವಳಿ, ಕರ್ನಾಟಕ

ನೀರಿನ ಹೊಂಡಕ್ಕೆ ಬಿದ್ದ ಕರುವಿನ ರಕ್ಷಣೆ ➤ ಯುವಕನ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.16: ನೀರಿನ ಹೊಂಡಕ್ಕೆ ಬಿದ್ದು ಜೀವಣ್ಮರಣ ಸ್ಥಿತಿಯಲ್ಲಿದ್ದ ಕರುವೊಂದನ್ನು ದಾರಿಹೋಕರೊಬ್ಬರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಮಂಗಳೂರು ಹೊರವಲಯದ ತಣ್ಣೀರುಬಾವಿ ಬೀಚ್ ಗೆ ಹೋಗುವ ರಸ್ತೆ ಬದಿಯಲ್ಲಿ ಈ ಘಟನೆ ನಡೆದಿದೆ. ಗುತ್ತಿಗೆ ಕಾರ್ಮಿಕರು ತೋಡಿದ ಗುಂಡಿಗೆ ಕರುವೊಂದು ಬಿದ್ದಿತ್ತು, ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ನಿಖಿಲ್ ಪೂಜಾರಿ ಈ ಸುದ್ದಿ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿ ನೀರು ತುಂಬಿದ ಹೊಂಡಕ್ಕೆ ಇಳಿದು ಒದ್ದಾಡುತ್ತಿದ್ದ ಕರುವನ್ನ ಮೇಲೆಕೆತ್ತಿ ರಕ್ಷಣೆ ಮಾಡಿದ್ದಾರೆ.ಇವರಿಗೆ ಸ್ಥಳೀಯ ಯುವಕರು , ಅಗ್ನಿ

ನೀರಿನ ಹೊಂಡಕ್ಕೆ ಬಿದ್ದ ಕರುವಿನ ರಕ್ಷಣೆ ➤ ಯುವಕನ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ Read More »

ಕರಾವಳಿ, ಕರ್ನಾಟಕ

ಉಡುಪಿ :ಆರಕ್ಕೇರಿದ ಕೊರೊನಾ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಉಡುಪಿ ,ಜು.16: ಕೊರೊನಾ ವೈರಸ್‌ಗೆ ಉಡುಪಿಯಲ್ಲಿ ಇಂದು (ಗುರುವಾರ) 6ನೇ ಬಲಿ ಪಡೆದಿದೆ. ಮೃತರನ್ನು ಉಡುಪಿ ನಿವಾಸಿ 49 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ.   ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಇವರು ಮಧುಮೇಹ ಮತ್ತು ಉಸಿರಾಟದ ಸಮಸ್ಯೆಗಳಂತಹ ಇತರ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದರು. ಜುಲೈ 15 ರ ಬುಧವಾರ ರಾತ್ರಿ ಅವರ ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರನ್ನು ಉಡುಪಿಯ ಡಾ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು .

ಉಡುಪಿ :ಆರಕ್ಕೇರಿದ ಕೊರೊನಾ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಕಾಣಿಯೂರಿನ ಯುವಕನಲ್ಲಿ ಕೊರೋನಾ ದೃಢ ➤ ಯುವಕ ಭೇಟಿ ನೀಡಿದ್ದ ಖಾಸಗಿ ಆಸ್ಪತ್ರೆ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಾಣಿಯೂರು ,ಜು.16: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಯುವಕನೋರ್ವನಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತ ತೆರಳಿದ್ದ ಕಾಣಿಯೂರಿನ ಖಾಸಗಿ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಯುವಕ ಮಂಗಳೂರಿನ ಆಹಾರ ತಯಾರಿಕೆಯ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಆತನಿಗೆ ಆರೋಗ್ಯ ಸಮಸ್ಯೆ ಬಂದಿದ್ದರಿಂದ ಕಾಣಿಯೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ರಕ್ತ ಪರೀಕ್ಷಾ ಲ್ಯಾಬ್ ತೆರಳಿದ್ದಾರೆ.ಬಳಿಕ ಯುವಕ ಕಾಣಿಯೂರು ಪೇಟೆಯಲ್ಲಿರುವ ಹಲವು ಅಂಗಡಿಗಳಿಗೆ ಹಾಗೂ ಬ್ಯಾಂಕ್ ಗಳಿಗೆ ತೆರಳಿರುವ ಬಗ್ಗೆ

ಕಾಣಿಯೂರಿನ ಯುವಕನಲ್ಲಿ ಕೊರೋನಾ ದೃಢ ➤ ಯುವಕ ಭೇಟಿ ನೀಡಿದ್ದ ಖಾಸಗಿ ಆಸ್ಪತ್ರೆ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ

ವೈದ್ಯರು, ನರ್ಸ್ ಸೇರಿದಂತೆ 14 ಮಂದಿಗೆ ಕೊರೊನಾ ಅಜ್ಜರಕಾಡು ಆಸ್ಪತ್ರೆ 2ದಿನ ಸೀಲ್ ಡೌನ್

(ನ್ಯೂಸ್ ಕಡಬ) newskadaba.com. ಉಡುಪಿ,ಜು.16: ಕೊರೊನಾ ಬಾಧೆಯಿಂದಾಗಿ ಈಗಾಗಲೇ ಹಲವು ಭಾಗಗಳಲ್ಲಿ ಆಸ್ಪತ್ರೆ, ಮನೆ, ಪೊಲೀಸ್ ಸ್ಟೇಷನ್,ಬ್ಯಾಂಕ್, ಅಂಗಡಿ ಮುಂಗಟ್ಟು ಸೀಲ್ ಡೌನ್ ಆಗಿತ್ತು ಇದೀಗ ಅಂತದ್ದೆ ಇನ್ನೊಂದು ಪ್ರಕರಣ ಉಡುಪಿಯಲ್ಲಿ ವರದಿಯಾಗಿದೆ. ಗ್ಯಾಂಗ್ರಿನ್‌‌ ಸಮಸ್ಯೆಯಿಂದ ದಾಖಲಾಗಿದ್ದ ರೋಗಿಯಿಂದ ಕೊರೊನಾ ಹರಡಿದೆ ಎಂದು ಶಂಕಿಸಲಾಗಿದೆ. ಶಸ್ತ್ರಚಿಕಿತ್ಸೆಯ ಬಳಿಕ ರೋಗಿಗೆ ಜ್ವರ ಕಾಣಿಸಿಕೊಂಡಿದ್ದು, ಗಂಟಲ ದ್ರವ ಪರೀಕ್ಷೆಯ ಬಳಿಕ ರೋಗಿಗೆ ಕೊರೊನಾ ದೃಢಪಟ್ಟಿತ್ತು, ಈತನ ವಾರ್ಡ್‌‌ನಲ್ಲಿದ್ದ 9 ರೋಗಿಗಳಿಗೂ ಕೊರೊನಾ ಸೋಂಕು ತಗುಲಿದೆ. ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಇಬ್ಬರು

ವೈದ್ಯರು, ನರ್ಸ್ ಸೇರಿದಂತೆ 14 ಮಂದಿಗೆ ಕೊರೊನಾ ಅಜ್ಜರಕಾಡು ಆಸ್ಪತ್ರೆ 2ದಿನ ಸೀಲ್ ಡೌನ್ Read More »

ಕರ್ನಾಟಕ

ಕುಖ್ಯಾತ ದರೋಡೆಕೋರನ ಬಂಧಿಸಿದ ಪಣಂಬೂರು ಪೊಲೀಸರು

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.16: ದರೋಡೆ, ಹಲ್ಲೆ, ಅಪಘಾತ ಸಹಿತ ಹತ್ತಕ್ಕೂ ಅಧಿಕ ಅಪರಾಧ ಪ್ರಕರಣದಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ದರೋಡೆಕೋರ ಶಮ್ಮಿ ಯಾನೇ ಶಮೀರ್ ಕಾಟಿಪಳ್ಳ (30)ನನ್ನು ಬೆಳ್ಳಿಯಪ್ಪ ನೇತೃತ್ವದ ಪಣಂಬೂರು ರೌಡಿ ನಿಗ್ರಹದಳ ಹಾಗೂ ಪಣಂಬೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈತ ಪಣಂಬೂರು ಬಂದರು ವ್ಯಾಪ್ತಿಯಲ್ಲಿ ಬರುವ ಲಾರಿ ಚಾಲಕರಿಗೆ ಹಲ್ಲೆಗೈದು ದರೋಡೆ ಮಾಡಿ ಪರಾರಿಯಾಗುತ್ತಿದ್ದ. ಈ ಹಿಂದೆ ಎಎಸ್ಐ ಒಬ್ಬರಿಗೆ ರಾಡ್ ನಿಂದ ಮಾರಣಾಂತಿಕ ಹಲ್ಲೆಗೈದಿದ್ದ. ಬೆಂಜನ ಪದವಿನಲ್ಲಿ ದ್ವಿಚಕ್ರ ವಾಹನಕ್ಕೆ ತನ್ನ ವಾಹನ

ಕುಖ್ಯಾತ ದರೋಡೆಕೋರನ ಬಂಧಿಸಿದ ಪಣಂಬೂರು ಪೊಲೀಸರು Read More »

ಕರ್ನಾಟಕ

ಗುಡಿಸಲಲ್ಲಿ ವಾಸವಿದ್ದ ಕುಟುಂಬಕ್ಕೆ ಸುಸಜ್ಜಿತ ಮನೆ ಹಸ್ತಾಂತರ ➤ ವೀರಕೇಸರಿ ಮತ್ತು ಸ್ಪಂದನ ಸೇವಾ ಸಂಘದಿಂದ ಮನೆ ನಿರ್ಮಾಣ

(ನ್ಯೂಸ್ ಕಡಬ) newskadaba.com ಪಟ್ರಮೆ ,ಜು.16: ವೀರಕೇಸರಿ ಸಂಘಟನೆ ಅನಾರು, ಪಟ್ರಮೆ ಹಾಗೂ ಸ್ಪಂದನ ಸೇವಾ ಸಂಘ ಬೆಳ್ತಂಗಡಿ ಹಾಗೂ ಊರಿನ ಸಹೃದಯಿಗಳ ಸಹಾಯದಿಂದ ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬವೊಂದಕ್ಕೆ, 2 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮನೆಯನ್ನು ನಿರ್ಮಿಸಿಕೊಟ್ಟ ಪ್ರಶಂಶನೀಯ ಘಟನೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಮೈಕೆ ಎಂಬಲ್ಲಿ ನಡೆದಿದೆ.   ಕಳೆದ ಹಲವಾರು ವರ್ಷಗಳಿಂದ ಗಿರಿಜ ಎಂಬುವರು ಯಾವುದೇ ರೀತಿಯ ಮೂಲ ಸೌಕರ್ಯಗಳಿಲ್ಲದೆ ನಿರ್ಗತಿಕರಂತೆ ಗುಡಿಸಲಲ್ಲಿ ವಾಸಮಾಡುತ್ತಿದ್ದರು. ಇವರ ಕಷ್ಟವನ್ನು ಗಮನಿಸಿದ ವೀರಕೇಸರಿ ಸಂಘಟನೆ ಹಾಗೂ

ಗುಡಿಸಲಲ್ಲಿ ವಾಸವಿದ್ದ ಕುಟುಂಬಕ್ಕೆ ಸುಸಜ್ಜಿತ ಮನೆ ಹಸ್ತಾಂತರ ➤ ವೀರಕೇಸರಿ ಮತ್ತು ಸ್ಪಂದನ ಸೇವಾ ಸಂಘದಿಂದ ಮನೆ ನಿರ್ಮಾಣ Read More »

ಕರಾವಳಿ, ಕರ್ನಾಟಕ
Scroll to Top