ನ್ಯೂಸ್ ಕಡಬ

ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು

(ನ್ಯೂಸ್ ಕಡಬ) newskadaba.com ಬೈಂದೂರು,ಜು.14:  ಪಡುಕೋಣೆಯ ಶ್ರೀರಾಮ ದೇವಸ್ಥಾನಕ್ಕೆ ಜು.13ರ ತಡರಾತ್ರಿ ನುಗ್ಗಿದ ಕಳ್ಳರು 1.5 ಲಕ್ಷ ಮೌಲ್ಯದ ಬೆಳ್ಳಿಯ ಪ್ರಭಾವಳಿಯನ್ನು ಕಳವು ಗೈದಿದ್ದಾರೆ.ದೇವಸ್ಥಾನದ ಮುಖ್ಯದ್ವಾರದ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಈ ಕೃತ್ಯವೆಸಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅರ್ಚಕರು ಪೂಜೆಗೆ ಬಂದಾಗ ಬಾಗಿಲು ಒಡೆದಿರುವುದು ಕಂಡು ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೈಂದೂರು ಸರ್ಕಲ್ ಇನ್ಸ್‍ಪೆಕ್ಟರ್ ಸುರೇಶ್, ಗಂಗೊಳ್ಳಿ ಠಾಣಾಧಿಕಾರಿ ಭೀಮಾಶಂಕರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ದೇವಸ್ಥಾನಗಳ ಭದ್ರತೆಗೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆಯಷ್ಟೇ […]

ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ದ.ಕ, ಉಡುಪಿ ಜಂಟಿ ಅಗ್ರ ಸ್ಥಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.14: ಈಗಾಗಲೇ ದ್ವಿತೀಯ ಪಿಯುಸಿ ಪಿ.ಯು.ಸಿ ಫಲಿತಾಂಶ ಹೊರಬಿದ್ದಿದ್ದು ಅಚ್ಚರಿಯ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಜಂಟಿಯಾಗಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ 90.71 ಫಲಿತಾಂಶ ಪಡೆದುಕೊಂಡರೆ ನಂತರದ ಸ್ಥಾನ ಕೊಡಗಿನ ಪಾಲಾಗಿದೆ 81.53, ಉತ್ತರ ಕನ್ನಡ 80.97,ಚಿಕ್ಕಮಗಳೂರು 79.11 ನಂತರದ ಸ್ಥಾನ ಪಡೆದ ಜಿಲ್ಲೆಗಳಾಗಿವೆ. ಈ ಬಾರಿಯೂ ಪಿಯುಸಿ ಫಲಿತಾಂಶದಲ್ಲಿ ಬಾಲಕಿಯರದ್ದೇ ಮೇಲುಗೈ ಆಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ದ.ಕ, ಉಡುಪಿ ಜಂಟಿ ಅಗ್ರ ಸ್ಥಾನ Read More »

ಕರಾವಳಿ

ಕೋವಿಡ್-19 ಇವತ್ತಿನಿಂದ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಯಂ ಪ್ರೇರಿತ ಬಂದ್

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಜು.14: ಕೋವಿಡ್-19 ದಿನನಿತ್ಯ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಶಾಸಕರ ಮತ್ತು ತೆಕ್ಕಾರು ಗ್ರಾಮ ಪಂಚಾಯತ್ ನಿರ್ದೇಶನದಂತೆ ತೆಕ್ಕಾರು ಗ್ರಾಮ ಪಂಚಾಯತ್ ಇವತ್ತಿನಿಂದ ಜುಲೈ 28 ರ ವರೆಗೆ ಸ್ವಯಂ ಪ್ರೇರಿತ ಬಂದ್ ನಡೆಸಲಾಗುವುದು ಎಂದು ತೆಕ್ಕಾರು ಗ್ರಾಮ ವರ್ತಕರ ಮುಖ್ಯಸ್ಥ ಎ.ಟಿ ಅಶ್ರಫ್ ತೆಕ್ಕಾರು ತಿಳಿಸಿದರು. ಇವತ್ತಿನಿಂದಲೇ ಮದ್ಯಾಹ್ನ 3 ರಿಂದ ಬೆಳಿಗ್ಗೆ 6ರ ವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗುತ್ತದೆ. ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ವೇಳೆಯಲ್ಲಿ ವಾಹನ

ಕೋವಿಡ್-19 ಇವತ್ತಿನಿಂದ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಯಂ ಪ್ರೇರಿತ ಬಂದ್ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ಕೋವಿಡ್ -19 ಕಾಟ ➤ ಜಿಲ್ಲೆಯಲ್ಲಿ 50ಕ್ಕೇರಿದ ಮೃತರ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 131 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಇದೇ ವೇಳೆ ಜಿಲ್ಲೆಯಲ್ಲಿ ನಾಲ್ವರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ. ಬಾಧಿತರ ಪೈಕಿ 16 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಕೋವಿಡ್ 19 ತಗಲಿದೆ. ವಿದೇಶದಿಂದ ಆಗಮಿಸಿದ್ದ ನಾಲ್ವರಿಗೆ, ಇನ್‌ಫ್ಲೂಯೆನ್ಷಾ ಲೈಕ್‌ ಇಲ್‌ನೆಸ್‌ನಿಂದ ಬಳಲುತ್ತಿದ್ದ 63 ಮಂದಿಗೆ ಹಾಗೂ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 10 ಮಂದಿಗೆ ಕೋವಿಡ್ 19 ಪಾಸಿಟಿವ್‌ ಬಂದಿದೆ. 38 ಮಂದಿಯ ಸಂಪರ್ಕವನ್ನು

ದಕ್ಷಿಣ ಕನ್ನಡದಲ್ಲಿ ಕೋವಿಡ್ -19 ಕಾಟ ➤ ಜಿಲ್ಲೆಯಲ್ಲಿ 50ಕ್ಕೇರಿದ ಮೃತರ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಕರಾವಳಿ ಜನರಿಗೆ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತಂದುಕೊಟ್ಟ ಸಚಿವರು➤ ದ.ಕ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.14:  ಕೊರೊನಾ ರೋಗಿಗಳಿಗೆ ಆಸ್ಪತ್ರೆಗಳ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದು, ರೋಗಿಗಳು ತಮ್ಮ ಆಧಾರ್ ಕಾರ್ಡ್ ತೋರಿಸಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದ್ದಾರೆ. ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಮತ್ತು ಸಾಮರ್ಥ್ಯ ಪರಿಶೀಲಿಸಿದ ಬಳಿಕ

ಕರಾವಳಿ ಜನರಿಗೆ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತಂದುಕೊಟ್ಟ ಸಚಿವರು➤ ದ.ಕ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ Read More »

ಕರಾವಳಿ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ,ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು,ಜು.14: ಕಾರಿನಲ್ಲಿ ಅಕ್ರಮವಾಗಿ ಭಾರೀ ಪ್ರಮಾಣದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೀಯಪದವು ನಿವಾಸಿ 28 ವರ್ಷದ ಕೂಳೂರಿನ ನವೀನ್ ಶೆಟ್ಟಿ ಎಂದು ಗುರುತಿಸಲಾಗಿದೆ.   ಇನ್ನು, ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಅಂಗಡಿಮೊಗರು ಸೇತುವೆಯಲ್ಲಿ ಇನ್ನೋವಾಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ.  ಕಾರಿನಲ್ಲಿ 51 ಬಾಕ್ಸ್ ಗಳಲ್ಲಿ 2668 ಬಾಟಲ್‌ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕದಿಂದ ಅಕ್ರಮ ಮದ್ಯ ತಂದು ದಾಸ್ತಾನಿಟ್ಟು ವಿವಿದೆಡೆಗೆ ಪೂರೈಕೆ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ,ಓರ್ವನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ತಡರಾತ್ರಿ ತಲವಾರ್ ಹಿಡಿದು ದಾಂಧಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.14: ತಲವಾರು ಹಿಡಿದ ಯುವಕರ ತಂಡ ಇನ್ನೊಂದು ಕೋಮಿನ ಮನೆಯೊಂದಕ್ಕೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ‌. ಮಂಗಳೂರು  ತಡರಾತ್ರಿ ಮಂಗಳೂರು ನಗರದ ಬಜಿಲಕೇರಿ ಎಂಬಲ್ಲಿ ಘಟನೆ ನಡೆದಿದ್ದು ಎರಡು ಕಾರಿನಲ್ಲಿ ಬಂದಿದ್ದ ಆರೇಳು ಮಂದಿ ಗಾಂಜಾ ವ್ಯಸನಿಗಳು ಕೃತ್ಯ ಎಸಗಿದ್ದಾರೆ. ಅಜಯ್ ಎಂಬಾತನ ಮನೆಗೆ ನುಗ್ಗಿದ ಯುವಕರ ತಂಡ  ದಾಂಧಲೆ ಮಾಡಿದೆ. ಈ ವೇಳೆ, ಅಜಯ್ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಆಗಮಿಸಿ ಸ್ಥಳದಲ್ಲಿ ಸೇರಿದ್ದ ಎರಡೂ

ಮಂಗಳೂರು : ತಡರಾತ್ರಿ ತಲವಾರ್ ಹಿಡಿದು ದಾಂಧಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಒಂದು ವಾರವಷ್ಟೇ ಲಾಕ್‍ಡೌನ್ ➤ ಸಿಎಂ ಬಿಎಸ್‍ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.13: ಸದ್ಯ ಸಿಲಿಕಾನ್ ಸಿಟಿಯಲ್ಲಿ ವಿಧಿಸಲಾಗುತ್ತಿರುವ ಲಾಕ್‍ಡೌನ್ ಒಂದು ವಾರವಷ್ಟೇ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇಂದು ಟಾಸ್ಕ್ ಫೋರ್ಸ್, ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ 1 ವಾರದ ಲಾಕ್ ಡೌನ್ ಅನ್ನು ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ಆತಂಕಪಡದೆ, ವದಂತಿಗಳಿಗೆ ಕಿವಿಗೊಡದೆ, ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದ್ದಾರೆ.  

ಬೆಂಗಳೂರಿನಲ್ಲಿ ಒಂದು ವಾರವಷ್ಟೇ ಲಾಕ್‍ಡೌನ್ ➤ ಸಿಎಂ ಬಿಎಸ್‍ವೈ Read More »

ಕರಾವಳಿ, ಕರ್ನಾಟಕ

ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.13: ಒಂದೆಡೆ ಕೊರೊನ ದಿನ ಕಳೆದಂತೆ ಏರಿಕೆ ಕಾಣುತ್ತಿರುವುದರಿಂದ ಇತ್ತ ಜುಲೈ 16 ರಿಂದ 27ರವರೆಗೆ ನಿಗಧಿಯಾಗಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ರದ್ದುಮಾಡಲಾಗಿದೆ. ಈ ಹಿಂದೆ ಈ ಪರೀಕ್ಷೆಯನ್ನು ಮುಗಿಸಿ ಜುಲೈ 30 ರಂದು ಫಲಿತಾಂಶವನ್ನು ಪ್ರಕಟಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣದಿಂದ ಈ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ತೇರ್ಗಡೆಗೊಳಿಸಲಾಗುತ್ತದೆ. ಆದರೆ ಹಾಜರಾತಿಯ ಕೊರತೆಯಿಂದ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ಪಡೆಯದ ವಿದ್ಯಾರ್ಥಿಗಳು

ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು Read More »

ಕರ್ನಾಟಕ

ಪಂಜ :ಕೊರೋನಾ ಸೋಂಕಿತನ ಮನೆ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಪಂಜ,ಜು.13: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ, ಇವತ್ತೊಕ್ಲು ಹಾಗೂ ಕಲ್ಮಡ್ಕ ಗ್ರಾಮದ ನಡುವಿನ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. .ಡಯಾ¼ಲಿಸಿಸ್ ಗಗಿ ಅವರು ತಾಲ್ಲೂಕು ಆರೋಗ್ಯ ಕೇಂದ್ರ ಸುಳ್ಯಕ್ಕೆ ಹೋಗುತ್ತಿದ್ದರು. ಸುಳ್ಯ ಆಸ್ಪತ್ರೆ ಸೀಲ್ ಡೌನ್ ಆದ ಖಾರಣ ಮಂಗಳೂರಿನ ಆಸ್ಪತ್ರೆಗೆ ತೆರಳಿರುವ ವೇಳೆ ಅವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಅವರಿಗೆ ಕೊರೋನಾ ದೃಢಪಟ್ಟಿದೆ. ಗೊಳಿಯಡಿಗೆ ಪಂಜ ಗ್ರಾಮ ಪಂಚಾಯತ್ ಕಾರ್ಯನಿರ್ವಾಹಣ ಅಧಿಕಾರಿ ಸೇರಿದಂತೆ ಪಂಜ ಆರೋಗ್ಯಧೀಕಾರಿಗಳೂ ಸೋಂಕಿತರ ಮನೆಗೆ ಭೇಟಿ

ಪಂಜ :ಕೊರೋನಾ ಸೋಂಕಿತನ ಮನೆ ಸೀಲ್ ಡೌನ್ Read More »

ಕರಾವಳಿ, ಕರ್ನಾಟಕ
Scroll to Top