ನ್ಯೂಸ್ ಕಡಬ

ಬಜೆಟ್ ದಾಖಲೆ ಹಿಡಿದು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.23. ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಒಪ್ಪಿಗೆಯನ್ನು ಪಡೆದ ಬಳಿಕ ಸಂಸತ್‌ ಗೆ ಆಗಮಿಸಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ಭವನಕ್ಕೆ ಆಗಮಿಸಿದ್ದಾರೆ ಎಂದು ವರದಿ ತಿಳಿಸಿದೆ. ವಿತ್ತ ಸಚಿವೆ ಕೆಂಪು ವಸ್ತ್ರದಲ್ಲಿ ಸುತ್ತಿರುವ ಬಜೆಟ್‌ ದಾಖಲೆ (ಬಹಿ ಖಾತಾ) ಕೈಯಲ್ಲಿ ಹಿಡಿದುಕೊಂಡು ನಗುಮುಖದೊಂದಿಗೆ ಸಂಸತ್ತನ್ನು ಪ್ರವೇಶಿಸಿದ್ದು, ಈ ಬಜೆಟ್‌ ಮಂಡನೆಗೂ ಮುನ್ನ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಯಲಿದೆ. ಸಭೆಯ ಬಳಿಕ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಬಜೆಟ್ […]

ಬಜೆಟ್ ದಾಖಲೆ ಹಿಡಿದು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು : ಎಎಸ್ ಐ ಸುಂದರ ಕಾನಾವು ನಿಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಜು. 22. ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಇಂದು ನಿಧನ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ. ಮೂರು ದಿನಗಳಿಂದ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಅವರನ್ನು ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು : ಎಎಸ್ ಐ ಸುಂದರ ಕಾನಾವು ನಿಧನ Read More »

ಕರಾವಳಿ

ನಿಯಂತ್ರಣ ತಪ್ಪಿ ಚರಂಡಿಗಿಳಿದ ಬಸ್  ವಿದ್ಯಾರ್ಥಿಗಳು ಗಂಭೀರ !

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.22. ಶಿವಮೊಗ್ಗ ಕಡೆಯಿಂದ ಬೈಂದೂರು ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಘಟನೆ ವರದಿಯಾಗಿದೆ. ಖಾಸಗಿ ಬಸ್ಸು ಶಿವಮೊಗ್ಗದಿಂದ ಬೈಂದೂರಿಗೆ ಬರುತ್ತಿತ್ತು. ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಚರಂಡಿಗೆ ಇಳಿದು ಓರೆಯಾಗಿ ಮರಕ್ಕೆ ತಾಗಿ ನಿಂತಿದೆ. ಬಸ್ಸಿನಲ್ಲಿ ಕೊಲ್ಲೂರು ಮೂಕಾಂಬಿಕ ಹೈಸ್ಕೂಲ್ ನ 6 ವಿದ್ಯಾರ್ಥಿಗಳು ಹಾಗೂ ಪಿಯುಸಿಯ 11 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ನಿಯಂತ್ರಣ ತಪ್ಪಿ ಚರಂಡಿಗಿಳಿದ ಬಸ್  ವಿದ್ಯಾರ್ಥಿಗಳು ಗಂಭೀರ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಬೈಕ್ ನಿಂದ ರಸ್ತೆಗೆ ಬಿದ್ದು ಯುವಕ ಮೃತ್ಯು ಓರ್ವ ಗಂಭೀರ….!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ಬೈಕ್ ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಯುವಕನೋರ್ವ ಮೃತಪಟ್ಟಿದ್ದು, ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ವಿಘ್ನೇಶ್ (26) ಎಂದು ಗುರುತಿಸಲಾಗಿದೆ. ಗಾಯಗೊಂಡಾತನನ್ನು ಶ್ರೀ ನಿಧಿ (25) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 1.30 ರ ಸುಮಾರಿಗೆ ವಿಘ್ನೇಶ್ ಮತ್ತು ಶ್ರೀ ನಿಧಿ ರೆಸ್ಟೋರೆಂಟ್‌ ನಲ್ಲಿ ಊಟ ಮುಗಿಸಿ ಮನೆಗೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿ ಬೈಕ್ ನಿಂದ ರಸ್ತೆಗೆ ಬಿದ್ದು ಯುವಕ ಮೃತ್ಯು ಓರ್ವ ಗಂಭೀರ….! Read More »

ಕರಾವಳಿ, ಕ್ರೈಮ್ ನ್ಯೂಸ್

ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು     

(ನ್ಯೂಸ್ ಕಡಬ)newskadaba.com ಕೇರಳ, ಜು.22. ನಿಫಾ ಸೋಂಕು ತಗುಲಿದ್ದ 14 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವರದಿಯಾಗಿದ್ದು, ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ನೀಡಿದ್ದು, ನಿಫಾ ಸೋಂಕು ತಗುಲಿದ್ದ ಬಾಲಕ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಬಾಲಕನಿಗೆ ನಿಫಾ ವೈರಸ್ ಇರುವುದು ದೃಢಪಡಿಸಿತ್ತು. ಬಾಲಕನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ. ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ಬಳಿಕ ಅಂತ್ಯಕ್ರಿಯೆಯ ಕುರಿತು ನಿರ್ಧಾರ

ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.22. ಮನೆಯೊಂದರ ಮುಖ್ಯ ಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್‌ ನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ ನಿಂದ ಒಡೆಯಲು ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ರಾತ್ರಿ 1.45 ರ ವೇಳೆಗೆ ಈ ಘಟನೆ ನಡೆದಿದ್ದು, ಈ ವೇಳೆ ಎಚ್ಚರಗೊಂಡು ಎಲ್ಲ ಲೈಟ್ ಹಾಕಿ ಮನೆ ಮಂದಿ ಕೂಗಿ ಕೊಂಡಾಗ ಕಳ್ಳರು ಓಡಿ ಹೋಗಿದ್ದಾರೆ.  ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.      

ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.! Read More »

ಕರಾವಳಿ, ಕ್ರೈಮ್ ನ್ಯೂಸ್

ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಫೋನ್ ಪೇ ಸಿಇಒ..!     ಟ್ವೀಟ್ ಮೂಲಕ ಕ್ಷಮೆಯಾಚನೆ.!

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಫೋನ್ ಪೇ ಸಿಇಒ ಸಮೀರ್ ನಿಗಮ್ ಕ್ಷಮೆಯಾಚಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತಲೆಬಾಗಿದ್ದು, “ನನ್ನ ಉದ್ದೇಶ ಕರ್ನಾಟಕ ಅಥವಾ ಕನ್ನಡಿಗರನ್ನು ಅವಮಾನಿಸುವುದಲ್ಲ. ನನ್ನ ಮಾತು ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ” ಎನ್ನುವ ಮೂಲಕ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಅನೇಕ ಕನ್ನಡಿಗರು ಫೋನ್ ಪೇ ಆ್ಯಪ್ ಅನ್ನು ಅನ್ಇನ್ಸ್ಟಾ ಲ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿ ಬಾಯ್ಕಟ್ ಅಭಿಯಾನ ಆರಂಭವಾಗಿದ್ದೇ ತಡ ಇದೀಗ ಟ್ವೀಟ್ ಮೂಲಕ ಕನ್ನಡಿಗರಲ್ಲಿ

ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಫೋನ್ ಪೇ ಸಿಇಒ..!     ಟ್ವೀಟ್ ಮೂಲಕ ಕ್ಷಮೆಯಾಚನೆ.! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ.ಕ ಜಿಲ್ಲೆಯಲ್ಲಿ ಕಡಿಮೆಯಾದ ಮಳೆ ಅಬ್ಬರ ನದಿಗಳಲ್ಲಿ ತಗ್ಗಿದ ನೀರಿನ ಮಟ್ಟ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.20. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೋರಾಗಿದ್ದ ಮಳೆ ಅಬ್ಬರ ಇಂದು ಕಡಿಯಾದಂತಿದ್ದು, ಬೆಳಿಗ್ಗೆಯಿಂದಲೇ ಬಿಸಿಲಿನ ಕೂಡಿದ ವಾತವರಣ ಕಂಡುಬಂದಿದೆ. ಅಪಾಯದ ಮಟ್ಟ ಮೀರಿ 8.6ಮೀ ವರೆಗೂ ತಲುಪಿದ್ದ ನೀರಿನ ಹರಿವಿನ ಮಟ್ಟ7.4 ಮೀ ಗೆ ಇಳಿಕೆಯಾಗಿದ್ದು, ಜಿಲ್ಲೆಯ ನೇತ್ರಾವತಿ, ಕುಮಾರಧಾರ, ನಂದಿನಿ ಹಾಗೂ ಶಾಂಭವಿ ನದಿಗಳಲ್ಲೂ ನೀರು ಹರಿವಿನ ಮಟ್ಟ ತಗ್ಗಿರುವ ಬಗ್ಗೆ ವರದಿಯಾಗಿದೆ.  

ದ.ಕ ಜಿಲ್ಲೆಯಲ್ಲಿ ಕಡಿಮೆಯಾದ ಮಳೆ ಅಬ್ಬರ ನದಿಗಳಲ್ಲಿ ತಗ್ಗಿದ ನೀರಿನ ಮಟ್ಟ.! Read More »

ಕರಾವಳಿ

ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20. ಮನೆಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ವೆಂಕಟೇಶ್ ಅಲಿಯಾಸ್ ವೆಂಕಿ(21), ಸಾಗರ್ (21), ರಂಜಿತ್(20) ಎಂದು ಗುರುತಿಸಲಾಗಿದೆ. ಉರ್ವ ಠಾಣಾ ವ್ಯಾಪ್ತಿಯ ಕೋಡಿಕಲ್ ವಿವೇಕಾನಂದ ನಗರ ಎಂಬಲ್ಲಿ ಮನೆಗೆ ನುಗ್ಗಿ ಕಳ್ಳರು 80 ಗ್ರಾಂನಷ್ಟು ಚಿನ್ನಾಭರಣ ಕಳವು ಮಾಡಿದ್ದು, ಸದ್ಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಕಳವುಗೈದ ಸುಮಾರು 4,64,750 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ

ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆ ಆಯುಕ್ತನ ಮನೆ ಮೇಲೆ ಲೋಕಾಯುಕ್ತ ದಾಳಿ…!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20. ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದ್ದು, ಅಧಿಕಾರಿಗಳಿಗೆ ಶಾಕ್ ನೀಡಿದೆ. ಪಾಲಿಕೆ ಆಯುಕ್ತ ಕೆಎ ಎಸ್ ಗ್ರೇಡ್ ಅಧಿಕಾರಿ ಆನಂದ್ ರವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಕಮಿಷನರ್ ಕಚೇರಿ ಹಾಗೂ ಮನೆಗೂ ದಾಳಿ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ. 52 ಕಡೆಗಳಲ್ಲಿ ಏಕಕಾಲಕ್ಕೆ ನೂರಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎನ್ನಲಾಗಿದೆ.  

ಮಂಗಳೂರು: ಮಹಾನಗರ ಪಾಲಿಕೆ ಆಯುಕ್ತನ ಮನೆ ಮೇಲೆ ಲೋಕಾಯುಕ್ತ ದಾಳಿ…! Read More »

ಕರಾವಳಿ
Scroll to Top