ನ್ಯೂಸ್ ಕಡಬ

ಮೇಯಲು ಬಿಟ್ಟಿದ್ದ ದನ ಕರುಗಳ ಕಳವು – ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಆ.17. ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕಳವು ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರು ಮತ್ತು ಎರಡು ದನಗಳು ಕಳವಾಗಿದ್ದು, ಮೇಯಲು ಹೋಗಿದ್ದ ದನ ಕರುಗಳ ಪೈಕಿ 2 ದನಗಳು ಮನೆಗೆ ಮರಳಿದ್ದು, ಒಂದು ಕರು ವಾಪಸಾಗಿಲ್ಲ. ಈ ಕುರಿತು ಹುಡುಕಾಟ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಸಮೀಪದಲ್ಲಿರುವ ಅಂಗಡಿಯ ಸಿಸಿ ಕ್ಯಾಮೆರಾ ಪರಿಶೀಲಿಸುವಂತೆ ತಿಳಿಸಿದ್ದರು. ಅದರಂತೆ ಸಿಸಿ ಕ್ಯಾಮರಾ ಪರಿಶೀಲಿಸಿದಾಗ […]

ಮೇಯಲು ಬಿಟ್ಟಿದ್ದ ದನ ಕರುಗಳ ಕಳವು – ಪ್ರಕರಣ ದಾಖಲು Read More »

ಕರಾವಳಿ

ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ – ಅಧಿಕಾರಿ ನಾಪತ್ತೆ – ದಾಖಲೆ ಪರಿಶೀಲನೆ

(ನ್ಯೂಸ್ ಕಡಬ)newskadaba. com ರಾಮನಗರ, ಆ.17. ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕನಕಪುರದಲ್ಲಿರುವ ಬಿಬಿಎಂಪಿ ಅಧಿಕಾರಿ ನಟರಾಜ್ ಅವರ ಮನೆ ಹಾಗೂ ಫಾರಂ ಹೌಸ್‌ ಗೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ರಾಮನಗರ ಲೋಕಾಯುಕ್ತ ಎಸ್ಪಿ ನೇತೃತ್ವದ ತಂಡ ಅಪಾರ ಪ್ರಮಾಣದ ಅಕ್ರಮ‌ ಆಸ್ತಿ ಸಂಪಾದನೆ ಆರೋಪ‌‌ ಹಿನ್ನೆಲೆ ಮನೆ ಜೊತೆಗೆ ಫಾರಂ ಹೌಸ್ ಮೇಲೂ ದಾಳಿ ಮಾಡಿದ್ದು, ಬಳಿಕ ಅಧಿಕಾರಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ – ಅಧಿಕಾರಿ ನಾಪತ್ತೆ – ದಾಖಲೆ ಪರಿಶೀಲನೆ Read More »

ಕರ್ನಾಟಕ

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.17. BMTC ಬಸ್ ಹರಿದು 4ರ ಹರೆಯದ ಬಾಲಕಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತ ಬಾಲಕಿಯನ್ನು ಪೂರ್ವಿ ರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳನ್ನು ಶಾಲೆಗೆ ಬಿಡಲೆಂದು ತಂದೆ ಪ್ರಸನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಮುಖ್ಯರಸ್ತೆಯ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ವೇಳೆ ಪ್ರಸನ್ನ ಅವರು ಎಡಬದಿಗೆ

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.16. MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ‘‘ಡ್ರಗ್ಸ್ ಫ್ರಿ ಮಂಗಳೂರು’’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಗಿದೆ. ನಾಲ್ವರನ್ನು ಬಂಧಿಸಿದ ಪೊಲೀಸರು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ ಎನ್ನಲಾಗಿದೆ. ಬೆಂಗಳೂರಿನಿಂದ ಎಂಡಿಎಂ ಮಾದಕ

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ Read More »

ಕರಾವಳಿ

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪಣಂಬೂರು, ಆ.15. ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪಣಂಬೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಾಲಕಿ ಸಹಿತ ಆರೋಪಿಯನ್ನು ಬಂಧಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಮುಹಮ್ಮದ್‌ ಸರ್ಫರಾಝ್‌ ಯಾನೆ ಚಪ್ಪು (22) ಎಂದು ಗುರುತಿಸಲಾಗಿದೆ. ಆರೋಪಿಯು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಅಪಹರಣ ಮಾಡಿರುವುದಾಗಿ ಬಾಲಕಿಯ ಪೋಷಕರು ಪಣಂಬೂರು ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ

ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ – ಆರೋಪಿ ಅರೆಸ್ಟ್ Read More »

ಕರಾವಳಿ

ಕರ್ನಾಟಕದಲ್ಲಿ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.15. ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನವನ್ನು ರದ್ದು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿದ ಹಿರಿಯ ನಾಯಕ ರೆಹಮಾನ್ ಖಾನ್, ಆರ್‌ಎಸ್‍ಎಸ್ ಕಾರ್ಯಸೂಚಿಯ ಭಾಗವಾಗಿರುವ ಎನ್‍ಇಪಿಯನ್ನು ರಾಜ್ಯದಲ್ಲಿ ಕೈಬಿಡಬೇಕು ಎಂದು ಆಗ್ರಹಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷದಿಂದ ಎನ್‍ಇಪಿ ರದ್ದು ಮಾಡುತ್ತೇವೆ. ಸಂವಿಧಾನಕ್ಕೆ ಪೂರಕವಾದ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತೇವೆ ಎಂದರು ಎನ್ನಲಾಗಿದೆ. ಎನ್‍ಇಪಿ ಗೆ

ಕರ್ನಾಟಕದಲ್ಲಿ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಸುಳ್ಯ: ಅನೈತಿಕ ಪೊಲೀಸ್ ಗಿರಿ – ಓರ್ವ ಆರೋಪಿ ವಶಕ್ಕೆ

(ನ್ಯೂಸ್ ಕಡಬ)newskadaba. com ಸುಳ್ಯ, ಆ.13. ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ವರದಿಯಗಿದ್ದು, ಮಹಿಳೆಯೊಬ್ಬರಿಗೆ ಸುಳ್ಯದಲ್ಲಿ ತಂಗಲು ರೂಂ ಕೊಡಿಸಲು ಜೊತೆಗೆ ತೆರಳಿದ್ದ ಯುವಕನಿಗೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಬಗ್ಗೆ ತಿಳಿದುಬಂದಿದೆ. ಸುಳ್ಯ ಠಾಣಾ ವ್ಯಾಪ್ತಿಯ ಅರಂತೋಡು ಸಮೀಪ ಮಣಪ್ಪುರಂ ನಿವಾಸಿ ಅರಂತೋಡಿನಲ್ಲಿ ಲೀಸ್‌ ಗೆ ತೋಟ ನಡೆಸುತ್ತಿರುವ ಜಲೀಲ್ ಮೇಲೆ ಹಲ್ಲೆ ನಡೆದಿದ್ದು, ಜಲೀಲ್‌ಗೆ ಕೇರಳದಲ್ಲಿ ಪರಿಚಯವಿದ್ದ ಮಹಿಳೆಯೊಬ್ಬರು ಮಡಿಕೇರಿಗೆ ಬಂದಿದ್ದು,ಅಲ್ಲಿಂದ ಊರಿಗೆ ಹಿಂದಿರುಗುವ ವೇಳೆ ಸುಳ್ಯದಲ್ಲಿ ಫ್ರೆಶ್ ಅಪ್ ಆಗಲು ರೂಮ್

ಸುಳ್ಯ: ಅನೈತಿಕ ಪೊಲೀಸ್ ಗಿರಿ – ಓರ್ವ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ

ಕಡಬಕ್ಕೆ ನೂತನ ತಹಸೀಲ್ದಾರ್ ನೇಮಕಗೊಳಿಸಿದ ಸರಕಾರ

(ನ್ಯೂಸ್ ಕಡಬ)newskadaba.com ಕಡಬ, ಆ.12. ಕಡಬ ಗ್ರೇಡ್ 1 ತಹಸೀಲ್ದಾರ್ ಆಗಿ  ಪ್ರಭಾಕರ ಖಜೂರೆ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ. ತಹಸೀಲ್ದಾರ್ ಆಗಿದ್ದ ರಮೇಶ್ ಬಾಬು ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ನೂತನ  ತಹಸೀಲ್ದಾರ್ ನೇಮಕಗೊಳಿಸಿ ಸರಕಾರ ಆದೇಶಿಸಿದೆ. ರಮೇಶ್ ಬಾಬು ಅವರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು ಎನ್ನಲಾಗಿದೆ.  

ಕಡಬಕ್ಕೆ ನೂತನ ತಹಸೀಲ್ದಾರ್ ನೇಮಕಗೊಳಿಸಿದ ಸರಕಾರ Read More »

ಕರಾವಳಿ

ಕಡಬ: ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಆನೆ ಶಿಬಿರದಲ್ಲಿ ಸಾವು

(ನ್ಯೂಸ್ ಕಡಬ)newskadaba.com ಕಡಬ, ಆ.12. ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದ ಕಾರಣಕ್ಕೆ ಕೊಂಬಾರು ಸಮೀಪ ಸೆರೆ ಹಿಡಿಯಲಾಗಿದ್ದ ಕಾಡಾನೆಯೊಂದು ಕೊಡಗಿನ ಮತ್ತಿಗೋಡು ಆನೆ ಶಿಬಿರದಲ್ಲಿ ಮೃತಪಟ್ಟಿದೆ ಎಂದು ವರದಿಯಾಗಿದೆ. ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆಯನ್ನು ಕೊಡಗಿನ ಮತ್ತಿಗೋಡು ಆನೆ ಶಿಬಿರಕ್ಕೆ ಸೇರಿಸಲಾಗಿತ್ತು. ಆನೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸುವ ಕಾರ್ಯ ಮಾಡಲಾಗಿದೆ. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲದಲ್ಲಿ ಫೆಬ್ರವರಿ 20ರಂದು ಬೆಳ್ಳಂ ಬೆಳಗ್ಗೆ  ಕಾಡಾನೆ ದಾಳಿಗೆ ರಂಜಿತಾ (24)

ಕಡಬ: ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಆನೆ ಶಿಬಿರದಲ್ಲಿ ಸಾವು Read More »

ಕರಾವಳಿ

ನಾನು ಸಲಿಂಗಕಾಮಿ ಅಲ್ಲ ಎನ್ನುತ್ತಲೇ ಕಟ್ಟಡದಿಂದ ಹಾರಿದ ವಿದ್ಯಾರ್ಥಿ

(ನ್ಯೂಸ್ ಕಡಬ)newskadaba.com ಕಲ್ಕತ್ತಾ, ಆ.12. 18 ವರ್ಷದ ಜಾಧವ್‍ ಪುರ್ ವಿಶ್ವ ವಿದ್ಯಾಲಯದ ಮೊದಲ ವರ್ಷದ ವಿದ್ಯಾರ್ಥಿ ಸ್ವಾಪ್ನೋದೀಪ್ ಕುಂಡು, ಹಾಸ್ಟೆಲ್ ಕಟ್ಟಡದ ಎರಡನೇ ಮಹಡಿಯಿಂದ ಹಾರುವ ಮುನ್ನ ‘ನಾನು ಸಲಿಂಗಕಾಮಿ ಅಲ್ಲ’ ಎಂದು ಪದೇ ಪದೇ ಹೇಳುತ್ತಾ ಹೇಳಿದ್ದು ಪ್ರಾಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಕಟ್ಟಡದಿಂದ ಹಾರುವ ಮೊದಲು, ಸ್ವಾಪ್ಲೋದೀಪ್ ತನ್ನ ಸಹ ವಿದ್ಯಾರ್ಥಿಗಳಿಗೆ ‘ನಾನು ಸಲಿಂಗಕಾಮಿ ಅಲ್ಲ’ ಎಂದು ಹೇಳಿದ್ದು ಬಾಲ್ಕನಿಯಿಂದ ಹಾರಿದ್ದ ಯುವಕನ ದೇಹವು ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು

ನಾನು ಸಲಿಂಗಕಾಮಿ ಅಲ್ಲ ಎನ್ನುತ್ತಲೇ ಕಟ್ಟಡದಿಂದ ಹಾರಿದ ವಿದ್ಯಾರ್ಥಿ Read More »

ರಾಷ್ಟ್ರೀಯ ನ್ಯೂಸ್
Scroll to Top