ನ್ಯೂಸ್ ಕಡಬ

ಧರ್ಮಸ್ಥಳ: ತಮ್ಮನಿಂದ ಅಣ್ಣನಿಗೆ ಆಸಿಡ್ ದಾಳಿ

(ನ್ಯೂಸ್ ಕಡಬ) newskadaba.com, ಬೆಳ್ತಂಗಡಿ , ಡಿ.4  ಅಣ್ಣನಿಗೆ ತಮ್ಮನು ರಬ್ಬರ್ ಹಾಲಿಗೆ ಬೆರಸಲು ಬಳಸುವ ರಾಸಾಯನಿಕ ದ್ರಾವಣವನ್ನು ಎರಚಿ ಜೀವ ಬೆದರಿಕೆ ಒಡ್ಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕಡೆಂಬಿಲಡ್ಕ ಮನೆಯಲ್ಲಿ ನಡೆದಿದೆ. ಚೀಂಕ್ರ ಎಂಬವರು ತನ್ನ ಪತ್ನಿ ಚಂದ್ರಾವತಿ ಮತ್ತು ಮಗಳು ಸೌಮ್ಯ ಎಂಬವಳೊಂದಿಗೆ ತನ್ನ ಮನೆಯಲ್ಲಿ ಮಾತನಾಡಿಕೊಂಡಿರುವಾಗ, ತಮ್ಮ ಗಣೇಶ ಮತ್ತು ಆತನ ಪತ್ನಿ ಅಮಿತಾ ಎಂಬವರು ಏಕಾಎಕಿ ಮನೆಯ ಒಳಗಡೆ ಬಂದು ಅಮಿತಾಳು ಚಂದ್ರಾವತಿಯ ಕುತ್ತಿಗೆಗೆ ಕೈಹಾಕಿ ಇವತ್ತು ನಿನ್ನನ್ನು ಜೀವ […]

ಧರ್ಮಸ್ಥಳ: ತಮ್ಮನಿಂದ ಅಣ್ಣನಿಗೆ ಆಸಿಡ್ ದಾಳಿ Read More »

ಕರಾವಳಿ

 ಡಿ. 3 ರಿಂದ 6 ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.3   ಹವಾಮಾನ ಇಲಾಖೆ, ಬೆಂಗಳೂರು, ಇವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಡಿಸೆಂಬರ್ 3, 4, 5 ಮತ್ತು 6 ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಈ ಮೂಲಕ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.  

 ಡಿ. 3 ರಿಂದ 6 ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ Read More »

ಕರಾವಳಿ

“ಅನಾಥ ಮಕ್ಕಳ ರಹಿತ ಭಾರತ ನಮ್ಮದಾಗಬೇಕು”

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.2  ಇತ್ತೀಚೆಗೆ ಸೌಜನ್ಯ ಮಹಿಳಾ ಮಂಡಲ(ರಿ) ಹೊೈಗೆಬೈಲ್ ಇವರು “ಇನ್ನರ್ ವೀಲ್ ಕ್ಲಬ್ ಮಂಗಳೂರು ಉತ್ತರ” ಇವರೊಂದಿಗೆ ಜಂಟಿಯಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಕ್ಲಬ್‍ನ ಮಾಜಿ ಅಧ್ಯಕ್ಷೆ ಹಾಗೂ ಮಿಶನ್ ಮಮತಾದ ಸಂಯೋಜಕಿ ರಮಾಮಣಿ ಭಟ್ ಇವರು ಸೌಜನ್ಯದ ಸದಸ್ಯೆಯರನ್ನು ಉದ್ದೇಶಿಸಿ ಮಾತನಾಡುತ್ತಾ “ಅನಾಥ ಮಕ್ಕಳ ರಹಿತ ಭಾರತ ನಮ್ಮದಾಗಬೇಕು.” ಮಿಶನ್ ಮಮತಾ ಯೋಜನೆಯ ಮೂಲಕ ಸರಕಾರದ ಸಹಕಾರದೊಂದಿಗೆ ಈ ಕೆಲಸವನ್ನು ಆರಂಭಿಸಲಿದ್ದೇವೆ, ಈಗಾಗಲೇ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡು ನಾವು

“ಅನಾಥ ಮಕ್ಕಳ ರಹಿತ ಭಾರತ ನಮ್ಮದಾಗಬೇಕು” Read More »

ಕರಾವಳಿ

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸಮ್ಮೇಳನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.2.  ಕಾಲೇಜ್ ಆಫ್ ಮ್ಯಾನೇಜ್‍ಮೆಂಟ್ ಆ್ಯಂಡ್ ಕಾಮರ್ಸ್ ಶ್ರೀನಿವಾಸ್ ವಿಶ್ವವಿದ್ಯಾನಿಲಯ ಸಿಟಿ ಕ್ಯಾಂಪಸ್‍ನಲ್ಲಿ ಶನಿವಾರದಂದು ಬ್ಯಾಂಕಿಂಗ್, ನಿರ್ವಹಣೆ, ಐಟಿ, ಶಿಕ್ಷಣ, ಸಮಾಜ ವಿಜ್ಞಾನದಲ್ಲಿ ನವೀನ ಅಭ್ಯಾಸ (ಇನೋವೇಟಿವ್ ಪ್ರಾಕ್ಟೀಸ್ ಇನ್ ಬ್ಯಾಂಕಿಗ್, ಮ್ಯಾನೇಜ್‍ಮೆಂಟ್, ಐಟಿ, ಎಜುಕೇಶನ್ ಆ್ಯಂಡ್ ಸೋಶಿಯಲ್ ಸೈನ್ಸ್ ಎಂಬ ವಿಷಯದಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯಿತು. ಮುಖ್ಯ ಅತಿಥಿಗಳಾಗಿ ಆಮಿಸಿದ ಮಂಗಳ ಗಂಗೋತ್ರಿಯ ವಾಣಿಜ್ಯ ನಿಕಾಯದ ಡೀನ್ ಡಾ. ಟಿ. ಎನ್ ಶ್ರೀಧರ್‍ರವರು ವಿವಿಧ ಕ್ಷೇತ್ರಗಳಲ್ಲಾಗುವ ಆವಿಷ್ಕಾರಗಳ ಬಗ್ಗೆ ತಿಳಿಸಿದರು.

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸಮ್ಮೇಳನ Read More »

ಕರಾವಳಿ

ಕನ್ನಡ ಕಲಿಸದ ಸಿಬಿಎಸ್‍ಇ ಶಾಲೆಗಳಿಗೆ ನೋಟೀಸ್

 (ನ್ಯೂಸ್ ಕಡಬ) newskadaba.com,ಮಂಗಳೂರು , ನ.29.  ಕನ್ನಡ ಭಾಷೆ ಕಲಿಸದ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡ ಕಲಿಸದ ಸಿಬಿಎಸ್‍ಇ ಸಿಲಬಸ್ ಹೊಂದಿರುವ ಶಾಲೆಗಳಿಗೆ ನೋಟೀಸ್ ಜಾರಿ ಮಾಡಲು ಅಪರ ಜಿಲ್ಲಾಧಿಕಾರಿ ರೂಪಾ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಸಿಬಿಎಸ್‍ಇ ಶಿಕ್ಷಣ ವ್ಯವಸ್ಥೆಯ ಶಾಲೆಗಳಲ್ಲಿ ಕನ್ನಡವನ್ನು ದ್ವಿತೀಯ ಭಾಷೆಯನ್ನಾಗಿ ಕಡ್ಡಾಯವಾಗಿ ಕಲಿಸಬೇಕಿದೆ. ಆದರೆ, ನಗರದ ಕೆಲವು ಸಿಬಿಎಸ್‍ಇ ಶಾಲೆಗಳಲ್ಲಿ ಕನ್ನಡವನ್ನು ತೃತೀಯ ಭಾಷೆಯನ್ನಾಗಿ ಕಲಿಸುತ್ತಿರುವ ಬಗ್ಗೆ

ಕನ್ನಡ ಕಲಿಸದ ಸಿಬಿಎಸ್‍ಇ ಶಾಲೆಗಳಿಗೆ ನೋಟೀಸ್ Read More »

ಕರಾವಳಿ

ಬೆಳ್ಮ ಗ್ರಾ.ಪಂ- ಬಹಿರಂಗ ಏಲಂ

(ನ್ಯೂಸ್ ಕಡಬ) newskadaba.com, ಮಂಗಳೂರು , ನ.28.  ಬೆಳ್ಮ ಗ್ರಾಮ ಪಂಚಾಯತ್‍ನ ಹಳೆ ಕಟ್ಟಡ ಕೆಡಹುವ ಬಗ್ಗೆ ಬಹಿರಂಗ ಏಲಂ ಏರ್ಪಡಿಸಲಾಗಿದ್ದು, ಆಸಕ್ತರಿಂದ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಫಾರ್ಮ್ ಸಲ್ಲಿಸಲು ಪ್ರಾರಂಭದ ದಿನ ಡಿಸೆಂಬರ್ 4. ಟೆಂಡರ್ ಫಾರ್ಮ್ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 5. ಡಿಸೆಂಬರ್ 6ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ಮ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಬಹಿರಂಗ ಏಲಂ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಬೆಳ್ಮ ಗ್ರಾಮ ಪಂಚಾಯತ್ ಕಾರ್ಯಾಲಯ ದೇರಳಕಟ್ಟೆ ಮಂಗಳೂರು ದೂರವಾಣಿ ಸಂಖ್ಯೆ

ಬೆಳ್ಮ ಗ್ರಾ.ಪಂ- ಬಹಿರಂಗ ಏಲಂ Read More »

ಕರಾವಳಿ

ಧೂಳಿನ ಅಲರ್ಜಿಗೆ ಮನೆಮದ್ದು

 (ನ್ಯೂಸ್ ಕಡಬ) newskadaba.com, ಆರೋಗ್ಯ ಮಾಹಿತಿ, ನ.28.    ಇತ್ತೀಚಿನ ದಿನಗಳಲ್ಲಿ ಅಪಾಯದ ಮಟ್ಟವನ್ನು ತಲುಪುತ್ತಿರುವ ಧೂಳಿನ ಕಣಗಳಿಂದ ಉಂಟಾಗುವ ಅಲರ್ಜಿಯು ಹೆಚ್ಚುತ್ತಿರುವ ವಾಹನಗಳ ಬಳಕೆ, ರಾಸಾಯನಿಕಗಳ ಬಳಕೆ, ಕಾರ್ಖಾನೆಗಳ ಹೊಗೆ ಹೀಗೆ ಹಲವು ಕಾರಣಗಳಿಂದಾಗಿ ವಾತಾವರಣದಲ್ಲಿ ಧೂಳು ಹೆಚ್ಚುತ್ತಿದೆ. ಮನೆಗಳಲ್ಲಿ ಸಹ ಜಿರಳೆಗಳು, ಸ್ಪೈಡರ್, ಮೋಲ್ಡ, ಯೀಸ್ಟ್‌ ನಂಥ ಫಂಗಸ್ ಗಳು, ಪ್ರಾಣಿ -ಪಕ್ಷಿಗಳ ಕೂದಲು ಸಹ ಅಪಾಯಕಾರಿ ಧೂಳನ್ನು ಉತ್ಪತ್ತಿಮಾಡುತ್ತದೆ. ಈ ಅಲರ್ಜಿಯಿಂದ ನಿರಂತವಾಗಿ ಕಾಡುವ ನೆಗಡಿ, ತ್ವಚೆಯ ಮೇಲೆ ಹೆಚ್ಚಾಗುವ ಕೆರೆತ, ಉಸಿರಾಟದ ಸಮಸ್ಯೆ,

ಧೂಳಿನ ಅಲರ್ಜಿಗೆ ಮನೆಮದ್ದು Read More »

ಆರೋಗ್ಯ ಮಾಹಿತಿ

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com, ಕುಂತೂರು, ನ.28.  ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಪ್ರಶಿಕ್ಷಣಾರ್ಥಿಗಳಿಗೆ “ಸಮಯ ನಿರ್ವಹಣೆ” ಎಂಬ  ಶೀರ್ಷಿಕೆಯಡಿಯಲ್ಲಿ ಮಾಹಿತಿ ಕಾರ್ಯಗಾರ ನಡೆಸಲಾಯಿತು. ಕಾಲೇಜಿನ ಸಂಚಾಲಕರಾದ ರೆ/ಫಾ/ಡಾ/ಎಲ್ದೋ ಪುತ್ತನ್ ಕಂಡತ್ತಿಲ್ ಅವರು ಸಮಯ ನಿರ್ವಹಣೆಯ ಕುರಿತಂತೆ ಸವಿವರವಾದ ಮಹಿತಿಗಳೊಂದಿಗೆ ಕಾರ್ಯಗಾರ ನಡೆಸಿಕೊಟ್ಟರು. ಬಿ.ಎಡ್. ಪ್ರಶಿಕ್ಷಣಾರ್ಥಿ ಕುಮಾರಿ ಹರ್ಷಿತಾ ಸ್ವಾಗತಿಸಿ, ಉಪನ್ಯಾಸಕಿ ಕುಮಾರಿ ತೃಪ್ತಿ ಎಮ್ ಶೆಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರಿಮತಿ ಉಷಾ ಎಮ್. ಎಲ್ ಹಾಗೂ ಉಪನ್ಯಾಸಕ ವರ್ಗದವರು ಹಾಜರಿದ್ದು, ಕಾರ್ಯಗಾರದಲ್ಲಿ ಸಹಕರಿಸಿದರು.

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಗಾರ Read More »

ಕರಾವಳಿ

ಗ್ರಾಮೀಣ ರಸ್ತೆಗಳ ತ್ವರಿತ ದುರಸ್ತಿ: ಸಚಿವ ಕೋಟ ಸೂಚನೆ 

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.27.   ಪ್ರಾಕೃತಿಕ ವಿಕೋಪಗಳಿಂದ ಹಾನಿಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳ ದುರಸ್ತಿ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮೀನುಗಾರಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ರಸ್ತೆಗಳು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿವೆ. ವಿಪತ್ತು ಪರಿಹಾರ ನಿಧಿಯಿಂದ ರಸ್ತೆ ದುರಸ್ತಿಗೆ

ಗ್ರಾಮೀಣ ರಸ್ತೆಗಳ ತ್ವರಿತ ದುರಸ್ತಿ: ಸಚಿವ ಕೋಟ ಸೂಚನೆ  Read More »

ಕರಾವಳಿ

ಗೃಹರಕ್ಷಕರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ

 (ನ್ಯೂಸ್ ಕಡಬ) newskadaba.com ಮಂಗಳೂರು ನ.26.   ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ವತಿಯಿಂದ 2019-20ನೇ ಸಾಲಿನ ಗೃಹರಕ್ಷಕರ ವಾರ್ಷಿಕ ಕ್ರೀಡಾಕೂಟವು ಮೇರಿಹಿಲ್‍ನ ಜಿಲ್ಲಾ ಕಚೇರಿಯಲ್ಲಿ  ಇಂದು ಮತ್ತು ನಾಳೆ  ನಡೆಯಲಿದೆ. ಕ್ರೀಡಾಕೂಟದ ಸಮಾರೋಪ ಸಮಾರಂಭವು ನವೆಂಬರ್ 27 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಚೇರಿಯಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಸಮಾದೇಷ್ಟರಾದ ಡಾ: ಮುರಲೀ ಮೋಹನ ಚೂಂತಾರು ವಹಿಸಲಿದ್ದಾರೆ ಎಂದು ಜಿಲ್ಲಾ ಗೃಹರಕ್ಷಕ ದಳದ ಪ್ರಕಟಣೆಯಲ್ಲಿ ತಿಳಿಸಿದೆ.

ಗೃಹರಕ್ಷಕರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ
Scroll to Top