ನ್ಯೂಸ್ ಕಡಬ

ಯುವಕನಿಂದ ಅನುಚಿತ ವರ್ತನೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.07. ಮನೆಯ ಕೋಣೆಯಲ್ಲಿ ಕಿಟಕಿಯ ಬಳಿ ಕುಳಿತು ಓದುತ್ತಿರುವಾಗ ವೇಳೆ ಆರೋಪಿಯೋರ್ವ ಮನೆಯ ಹೊರಗೆ ನಿಂತು ಕಿಟಕಿಯ ಮೂಲಕ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ ಘಟನೆ ವರದಿಯಾಗಿದೆ. ಆರೋಪಿಯು ಕೆಲವು ಸಮಯಗಳಿಂದ ದೂರದಾರರನ್ನು ಪ್ರೀತಿಸುವುದಾಗಿ ಹೇಳುತ್ತಾ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದು, ಕಿಟಕಿಯ ಮೂಲಕ ಮೈಗೆ ಕೈಹಾಕಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನಿಂದ ಅನುಚಿತ ವರ್ತನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ಜೋಡುಕರೆ ಕಂಬಳ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.07. ಕರಾವಳಿಯ ಪ್ರಸಿದ್ದ ಜಾನಪದ ಕ್ರೀಡೆ ಕಂಬಳ ಕಂಪು ರಾಜಧಾನಿ ಬೆಂಗಳೂರಿಗೂ ಪಸರಿಸಲಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಆಯೋಜಿಸುವ ಚಿಂತನೆ ನಡೆದಿದ್ದು, ಇದಕ್ಕೆ ಪೂರಕ ಸಿದ್ಧತೆಗಳು ಆರಂಭಗೊಂಡಿದೆ. ರಾಜ್ಯ ರಾಜಧಾನಿಯಲ್ಲಿ ತುಳುಕೂಟದ ಸುವರ್ಣ ಸಂಭ್ರಮದ ಹಿನ್ನಲೆಯಲ್ಲಿ ಕಂಬಳಾ ಆಯೋಜನೆಗೆ ನಿರ್ಧರಿಸಲಾಗಿದ್ದು, ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಪೂರಕ ಸಿದ್ಧತೆ ನಡೆಯುತ್ತಿದೆ. ಕಂಬಳ ಕರೆಗೆ ರಾಜ ಮಹಾರಾಜ ‘ಜಯಚಾಮರಾಜೇಂದ್ರ ಒಡೆಯರ್‌ ಜೋಡುಕರೆ ಕಂಬಳ’ ಎಂದು ಹೆಸರಿಡಲು ತೀರ್ಮಾನಿಸಲಾಗಿದ್ದು, ಅರಮನೆ ಮೈದಾನದಲ್ಲಿ

ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ಜೋಡುಕರೆ ಕಂಬಳ ! Read More »

ಕರ್ನಾಟಕ

ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆಯಡಿ ಮಂಗಳೂರು ರೈಲ್ವೆ ನಿಲ್ದಾಣದ ಆಧುನೀಕರಣದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಯಿತು. ನವದೆಹಲಿ ವಿಡಿಯೋ ಕಾನ್ಫೆರೆನ್ಸ್(ವರ್ಚುವಲ್) ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದರು ಎನ್ನಲಾಗಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಆವರಣದಲ್ಲಿ ನಡೆದ ಸಮಾರಂಭವನ್ನು ಸಂಸದ ನಳಿನ್ ಕುಮಾರ್ ಕಟೀಲು ಜ್ಯೋತಿ ಬೆಳಗಿಸಿ ಉದ್ಘಾಟಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ರೂ.19.32 ಕೋಟಿ

ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ Read More »

ಕರಾವಳಿ

ಶಂಕಿತ ಉಗ್ರರು ಎನ್‌ಐಎ ತಂಡದ ವಶಕ್ಕೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.07. ರಾಜ್ಯದ ಹಲವೆಡೆ ಬಾಂಬ್‌ ಸ್ಫೋಟಿಸಲು ಸಂಚು ರೂಪಿಸಿದ್ದ ಶಂಕಿತ ಆರು ಮಂದಿ ಉಗ್ರರರನ್ನು ಹೆಚ್ಚಿನ ವಿಚಾರಣೆಗಾಗಿ ಎನ್‌ಐಎ ಸದ್ಯದಲ್ಲೇ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಸಿಸಿಬಿ ಪೊಲೀಸರ ತನಿಖೆ ಪೂರ್ಣಗೊಂಡು ಆರೋಪಿಗಳನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೀಗಾಗಿ, ಕೇಂದ್ರ ಗೃಹ ಸಚಿವಾಲಯ ಅಥವಾ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಎನ್‌ಐಎ ಅಧಿಕಾರಿಗಳು ಆರೋಪಿಗಳನ್ನು ವಶಕ್ಕೆ ಪಡೆಯಲಿದ್ದಾರೆ. ವಿದೇಶದಿಂದ‌ ಆರ್ಥಿಕ ನೆರವು ಮತ್ತು ವಿಧ್ವಂಸಕ ಕೃತ್ಯಕ್ಕೆ ಗ್ರೆನೇಡ್ ಪೂರೈಕೆ ಮಾಡಿರುವುದನ್ನು ಎನ್‌ಐಎ ಗಂಭೀರವಾಗಿ

ಶಂಕಿತ ಉಗ್ರರು ಎನ್‌ಐಎ ತಂಡದ ವಶಕ್ಕೆ..! Read More »

ಕರ್ನಾಟಕ

ಲೋಕಸಭೆ ಸದಸ್ಯತ್ವ ಪುನಃಸ್ಥಾಪನೆ..! –  ಇಂದಿನ ಕಲಾಪದಲ್ಲಿ ರಾಹುಲ್ ಗಾಂಧಿ ಭಾಗಿ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.07. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದ್ದು, ಇಂದಿನಿಂದ ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿ ಸೂರತ್‌ ನ್ಯಾಯಾಲಯವು ಕಾಂಗ್ರೆಸ್‌ ಮುಖಂಡ ರಾಹುಲ್‌ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂ ಕೋರ್ಟ್‌ ತಡೆಯಾಜ್ಞೆ ವಿಧಿಸಿದ ಬೆನ್ನಲ್ಲೇ, ರಾಹುಲ್ ಸಂಸತ್ತ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುನಃ ಸ್ಥಾಪಿಸಿದ್ದಾರೆ. ರಾಹುಲ್‌ ಗಾಂಧಿ ಅವರಿಗೆ ಗರಿಷ್ಠ ಶಿಕ್ಷೆ ವಿಧಿಸಲು ಅಧೀನ

ಲೋಕಸಭೆ ಸದಸ್ಯತ್ವ ಪುನಃಸ್ಥಾಪನೆ..! –  ಇಂದಿನ ಕಲಾಪದಲ್ಲಿ ರಾಹುಲ್ ಗಾಂಧಿ ಭಾಗಿ Read More »

ರಾಷ್ಟ್ರೀಯ ನ್ಯೂಸ್

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್- ಅರ್ಜಿ ನೋಂದಾಯಿಸಿದ್ದರೂ ಎಂದಿನಂತೆ ಬಂದ ಕರೆಂಟ್ ಬಿಲ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 07. ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾಗಿದ್ದರೂ ಕೆಲವು ಗ್ರಾಹಕರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ಬದಲಿಗೆ ಬಳಕೆ ಮಾಡಿದ ವಿದ್ಯುತ್ ಬಿಲ್ ನೀಡಲಾಗಿದೆ. ಇಂಧನ ಇಲಾಖೆಯ ಆದೇಶದ ಪ್ರಕಾರ ಜುಲೈ 27ಕ್ಕೆ ಮೊದಲೇ ನೋಂದಣಿ ಮಾಡಿಸಿಕೊಂಡಿದ್ದರೂ ಎಂದಿನಂತೆಯೇ ಬಿಲ್ ಬಂದಿದ್ದು, ಕೆಲವು ಗ್ರಾಹಕರು ಬಿಲ್ ಪಾವತಿಸಬೇಕೆ, ಬೇಡವೇ ಎನ್ನುವ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಸಂಪರ್ಕ ಪಡೆದ 2.16 ಕೋಟಿ ಗ್ರಾಹಕರಲ್ಲಿ 2.14 ಕೋಟಿ ಮಂದಿ 200 ಯೂನಿಟ್ ಗಿಂತ

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್- ಅರ್ಜಿ ನೋಂದಾಯಿಸಿದ್ದರೂ ಎಂದಿನಂತೆ ಬಂದ ಕರೆಂಟ್ ಬಿಲ್..! Read More »

ಕರ್ನಾಟಕ

ಬೆಳ್ತಂಗಡಿ: ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವಿಗೆ ಆದೇಶ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 07. ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹಾಕಿರುವ ಬ್ಯಾನರ್‌ ಗಳ ತೆರವಿಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ಞಾವಂತ ನಾಗರಿಕರು, ಬೆಳ್ತಂಗಡಿ ಎಂಬ ಹೆಸರಿನಲ್ಲಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವು ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು‌ ನೀಡಲಾಗಿತ್ತು. ಈ ದೂರಿನಲ್ಲಿ ಕು. ಸೌಜನ್ಯ ಪ್ರಕರಣದ ತೀರ್ಪನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ಸಮಾಜದಲ್ಲಿ ಶಾಂತಿ

ಬೆಳ್ತಂಗಡಿ: ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವಿಗೆ ಆದೇಶ..! Read More »

ಕರಾವಳಿ

ಚಂದ್ರನ ಕಕ್ಷೆ ಪ್ರವೇಶಿಸಿರುವ ನೌಕೆ..! –  ಸೆರೆ ಹಿಡಿದ ಮೊದಲ ಚಿತ್ರ ಬಿಡುಗಡೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.07. ಚಂದ್ರಯಾನ-3 ಚಂದ್ರನ ಕಕ್ಷೆ ಪ್ರವೇಶಿಸಿರುವ ಬಾಹ್ಯಾಕಾಶ ನೌಕೆ ಸೆರೆ ಹಿಡಿದಿರುವ ಚಂದ್ರನ ಮೊದಲ ಚಿತ್ರವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬಿಡುಗಡೆಗೊಳಿಸಿದೆ ಎಂದು ವರದಿ ತಿಳಿಸಿದೆ. ಇಸ್ರೋ ಚಂದ್ರನ ಫೋಟೋವನ್ನು ಎಕ್ಸ್‌(ಟ್ವಿಟರ್‌)ನಲ್ಲಿ ಹಂಚಿಕೊಂಡಿದ್ದು, ಇದು ನೌಕೆ ಕಕ್ಷೆ ಪ್ರವೇಶಿಸಿದ ಸಂದರ್ಭದಲ್ಲಿ ಸೆರೆ ಹಿಡಿಯಲಾದ ಫೋಟೋ ಎಂದು ಹೇಳಿದೆ. ಆ. 05ರಂದು ಚಂದ್ರನ ಆರ್ಬಿಟ್ ಅಳವಡಿಕೆ (LOI) ಸಮಯದಲ್ಲಿ ಚಂದ್ರಯಾನ -3 ಬಾಹ್ಯಾಕಾಶ ನೌಕೆಯಿಂದ ಚಂದ್ರನನ್ನು ವೀಕ್ಷಿಸಲಾಗಿದೆ ಎಂದು ಮಿಷನ್‌ನ ಅಧಿಕೃತ

ಚಂದ್ರನ ಕಕ್ಷೆ ಪ್ರವೇಶಿಸಿರುವ ನೌಕೆ..! –  ಸೆರೆ ಹಿಡಿದ ಮೊದಲ ಚಿತ್ರ ಬಿಡುಗಡೆ Read More »

ರಾಷ್ಟ್ರೀಯ ನ್ಯೂಸ್

‘ಸರ್ಕಾರಿ ಆಸ್ಪತ್ರೆ’ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿಯರಿಗೆ AIDS ಸೋಂಕು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಆ. 07. ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕಳೆದ 16 ತಿಂಗಳಲ್ಲಿ 60ಕ್ಕೂ ಹೆಚ್ಚು ಗರ್ಭಿಣಿಯರಿಗೆ ಎಚ್‌ಐವಿ ಪಾಸಿಟಿವ್ ಕಂಡುಬಂದಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ತಿಳಿಸಿದೆ. ಮೀರತ್ ನ ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನ ಎ.ಆರ್.ಟಿ. ಕೇಂದ್ರದ ವರದಿಯ ನಂತರ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಬೆಳಕಿಗೆ ಬಂದಿವೆ. ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನಲ್ಲಿ ಮಕ್ಕಳ ಹೆರಿಗೆಗಾಗಿ ಬಂದ 81 ಗರ್ಭಿಣಿ ಮಹಿಳೆಯರಲ್ಲಿ ಎಚ್‌ಐವಿ ದೃಢಪಟ್ಟಿದ್ದು,

‘ಸರ್ಕಾರಿ ಆಸ್ಪತ್ರೆ’ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿಯರಿಗೆ AIDS ಸೋಂಕು..! Read More »

ರಾಷ್ಟ್ರೀಯ ನ್ಯೂಸ್

ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಓರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಲ್ಡರ್ ಮೋಹನ್ ಅಮೀನ್ (66) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. 17 ಮಹಡಿಯಲ್ಲಿ ವಾಸವಿದ್ದ ಅವರು ಅಪಾರ್ಟ್‌ಮೆಂಟ್ ನ ಟೆರೆಸ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮೋಹನ್ ಅಮೀನ್ ಅವರ ಆತ್ಮಹತ್ಯೆ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top