ನ್ಯೂಸ್ ಕಡಬ

ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಅನುಮಾನಗಳಿವೆಯೇ? ►ಪರಿಹಾರಕ್ಕಾಗಿ 1950 ಸಂಖ್ಯೆಯನ್ನು ಸಂಪರ್ಕಿಸಿ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.07.ಮತದಾರರ ನೋಂದಣಿ, ಬದಲಾವಣೆಯನ್ನೊಳಗೊಂಡಂತೆ ಮತದಾರರ ಪಟ್ಟಿಗೆ ಸಂಬಂಧಸಿದಂತೆ ನೆರವಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲ ಜಿಲ್ಲಾ ಸಂಪರ್ಕ ಕೇಂದ್ರ ಆರಂಭಿಸಲಾಗಿದೆ. ಮತದಾರರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರು ದೂರವಾಣಿಯ ಮೂಲಕ ಅಥವಾ ಮೊಬೈಲ್ ಮೂಲಕ 1950 ಗೆ ಸಂಪರ್ಕಿಸಬಹುದಾಗಿದೆ. ಹಾಗೂ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಚುನಾವಣಾ ಕಂಟ್ರೋಲ್ ರೂಂ ನ ನೋಡಲ್ ಅಧಿಕಾರಿ ಹಾಗೂ ಸಹಾಯಕ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಪ್ರಮೀಳ ಇವರು ತಿಳಿಸಿದ್ದಾರೆ. ಜಿಲ್ಲೆಯೊಳಗಿನ ಮತದಾರರು ನೇರವಾಗಿ 1950 ಸಂಪರ್ಕಿಸಬಹುದು ಜಿಲ್ಲೆಯ ಹೊರಗಿನಿಂದ […]

ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಅನುಮಾನಗಳಿವೆಯೇ? ►ಪರಿಹಾರಕ್ಕಾಗಿ 1950 ಸಂಖ್ಯೆಯನ್ನು ಸಂಪರ್ಕಿಸಿ Read More »

ಕರಾವಳಿ

ಸದನದಲ್ಲಿ ಮುಂದುವರಿದ ಬಿ.ಜೆ.ಪಿ. ಪ್ರತಿಭಟನೆ

(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.07. ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಗುರುವಾರದ ಕಲಾಪದ ವೇಳೆ 175 ಶಾಸಕರ ಹಾಜರಿದ್ದರು. ಜೆಡಿಎಸ್ 25, ಕಾಂಗ್ರೆಸ್ 60, ಬಿಜೆಪಿ 90 ಶಾಸಕರು ಉಪಸ್ಥಿತರಿದ್ದರು. ಬುಧವಾರ ಗೈರಾಗಿದ್ದ ಸೌಮ್ಯಾರೆಡ್ಡಿ, ಕೃಷ್ಣಪ್ಪ ಹಾಜರಾಗಿದ್ದರೆ, ಕಾಂಗ್ರೆಸ್ ನಿಂದ ಇವತ್ತು ಪ್ರತಾಪ್ ಗೌಡ ಪಾಟೀಲ್ ಗೈರಾಗಿದ್ದಾರೆ. ಬಿಜೆಪಿ ಬಾಲಚಂದ್ರ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಅಶ್ವಥ್ ನಾರಾಯಣ್ ಗೈರು ಹಾಜರಿ ಹಾಕಿದ್ದಾರೆ.ಸದನ ಆರಂಭಗೊಳ್ಳುತ್ತಲೇ ಬಿಜೆಪಿ ಶಾಸಕರು ಸರ್ಕಾರಕ್ಕೆ ಶಾಸಕರ ಬೆಂಬಲ ಇಲ್ಲ. ಸಿಎಂ ಕುಮಾರಸ್ವಾಮಿ

ಸದನದಲ್ಲಿ ಮುಂದುವರಿದ ಬಿ.ಜೆ.ಪಿ. ಪ್ರತಿಭಟನೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ ಹೆಸರಿನಲ್ಲಿ ಭಕ್ತರಿಗೆ ವಂಚಿಸಿದ ಆರೋಪ► ಸಂಪುಟ ನರಸಿಂಹ ಸ್ವಾಮಿ ಮಠದ ವಿರುದ್ಧದ ಎಫ್‌ಐಆರ್ ಹೈಕೋರ್ಟ್ ತಡೆ

(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.07.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಭಕ್ತರಿಗೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಪುಟನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಹಾಗೂ ಮುಂದಿನ ವಿಚಾರಣೆಗೆ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ. ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠ ಹಾಗೂ ಸಂಪುಟ ಟ್ರಸ್ಟ್‌ನ ಕಾರ್ಯನಿರ್ವಾಹಕ ಅಧಿಕಾರಿ ಆರ್.ಸಂತೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಪೀಠ, ಮಠದ ವಿರುದ್ಧ ದಾಖಲಾಗಿರುವ  ಎ ಪ್ ಐ

ಕುಕ್ಕೆ ಸುಬ್ರಹ್ಮಣ್ಯ ಹೆಸರಿನಲ್ಲಿ ಭಕ್ತರಿಗೆ ವಂಚಿಸಿದ ಆರೋಪ► ಸಂಪುಟ ನರಸಿಂಹ ಸ್ವಾಮಿ ಮಠದ ವಿರುದ್ಧದ ಎಫ್‌ಐಆರ್ ಹೈಕೋರ್ಟ್ ತಡೆ Read More »

ಕರಾವಳಿ

ಮುಂಗಾರು ಆರಂಭವಾಗುವ ತನಕ► ಕುಮಾರಪರ್ವತ ಚಾರಣ ನಿಷೇಧ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಫೆ.07.ಪಶ್ಚಿಮ ಘಟ್ಟಗಳಿಂದ ಆವೃತವಾಗಿರುವ ಕುಕ್ಕೆಯ ಕುಮಾರ ಪರ್ವತವಿರುವ ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯೊಳಕ್ಕೆ ಸಾರ್ವಜನಿಕರ ಪ್ರವೇಶವನ್ನು ಫೆ. 1ರಿಂದ ವನ್ಯಜೀವಿ ವಿಭಾಗ ನಿಷೇಧಿಸಿದೆ. ಕುಮಾರ ಪರ್ವತಕ್ಕೆ ತೆರಳಲು ಚಾರಣಿಗರಿಗೂ ಅವಕಾಶವಿಲ್ಲ. ರಾಜ್ಯದ 21 ವನ್ಯಜೀವಿ ಅಭಯಾರಣ್ಯಗಳ ಪೈಕಿ ಪುಷ್ಪಗಿರಿ ವನ್ಯಜೀವಿ  ಅಭಯಾರಣ್ಯವೂ ಒಂದು. ಇದು ಕೊಡಗಿನ ಸೋಮವಾರ ಪೇಟೆ ವ್ಯಾಪ್ತಿಯಲ್ಲಿದೆ. ಇದು 102 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಪಸರಿಸಿದೆ. ಒಂದೆಡೆ ಹಸುರು, ಇನ್ನೊಂದಡೆ ಮುಳಿ ಹುಲ್ಲಿನಿಂದ ಕೂಡಿದ ನುಣುಪಾದ ಶಿಖರ. ಬಂಡೆಗಳ ಕಡಿದಾದ ಪ್ರದೇಶವೂ

ಮುಂಗಾರು ಆರಂಭವಾಗುವ ತನಕ► ಕುಮಾರಪರ್ವತ ಚಾರಣ ನಿಷೇಧ Read More »

ಕರಾವಳಿ

ಜಂಕ್ ಆಹಾರ ಸೇವಿಸಬೇಡಿ► ಡಾ| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.07.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ನಾರ್ಲ – ಪಡೀಲ್, ತಲಪಾಡಿ ಇಲ್ಲಿ ದಿನಾಂಕ 05/02/2019ರಂದು ಚೂಂತಾರು ಸರೋಜಿನಿ ಪ್ರತಿಷ್ಠಾನ ಭಟ್ ವತಿಯಿಂದ ಉಚಿತ ದಂತ ಆರೋಗ್ಯ ಮಾಹಿತಿ ಶಿಬಿರ ಮತ್ತು ಟೂತ್ ಪೇಸ್ಟ್ ವಿತರಣಾ ಕಾರ್ಯಕ್ರಮ ಜರುಗಿತು. ಸುರಕ್ಷಾ ದಂತ ಚಿಕಿತ್ಸಾಲಯ ಇದರ ಹಿರಿಯ ದಂತ ವೈದ್ಯರು ಮತ್ತು ಬಾಯಿ ಮುಖ ದವಡೆ ಶಸ್ತ್ರ ಚಿಕಿತ್ಸಕರಾದ ಡಾ|ಮುರಲೀ ಮೋಹನ್ ಚೂಂತಾರು ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.   ಡಾ|

ಜಂಕ್ ಆಹಾರ ಸೇವಿಸಬೇಡಿ► ಡಾ| ಚೂಂತಾರು Read More »

ಕರಾವಳಿ

ಮಂಗಳೂರು: ನೂತನ ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ  ಆದ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.06. ಮಂಗಳೂರಿನಲ್ಲಿ ರೂ. 150.00 ಲಕ್ಷ ವೆಚ್ಚದಲ್ಲಿ ಬಾಲಕಿಯರಿಗಾಗಿ ಪ್ರತ್ಯೇಕ ಕ್ರೀಡಾ ವಸತಿ ನಿಲಯ ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ರಹೀಂ ಖಾನ್ ಹೇಳಿದರು. ಅವರಿಂದು ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕ್ರೀಡಾಸಕ್ತರು ಮತ್ತು ತರಬೇತುದಾರರೊಡನೆ ಮಾತುಕತೆ ನಡೆಸಿ ಸ್ಟೇಡಿಯಂ ಪರಿಶೀಲನೆ ನಡೆಸಿದರು.ಕ್ರೀಡಾ ಹಾಸ್ಟೆಲ್‍ಗಳಿಗೆ ತರಬೇತುದಾರರ ನೇಮಕ ಸೇರಿದಂತೆ, ಗುಣಮಟ್ಟದ ಆಹಾರ ಪೂರೈಕೆ ಬಾಲಕ ಬಾಲಕಿಯರ ಪ್ರತ್ಯೇಕ ಹಾಸ್ಟೇಲ್ ಸಹಿತ ಕ್ರೀಡಾ ಕ್ಷೇತ್ರದ ಸಮಗ್ರ ಅಭಿವೃದ್ಧಿ

ಮಂಗಳೂರು: ನೂತನ ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ  ಆದ್ಯತೆ Read More »

ಕರಾವಳಿ

ಕಡಬ: ಕೇಂದ್ರದ ಬಜೆಟ್‍ನ ಕಿಸಾನ್ ಸಮ್ಮಾನ್ ಅಲ್ಲ ಅದು ಕಿಸಾನ್ ನಿರ್ನಾಮ್► ರೈತ ಸಂಘ ಲೇವಡಿ

(ನ್ಯೂಸ್ ಕಡಬ) newskadaba.comಕಡಬ,ಫೆ.06.ಕೇಂದ್ರ ಸರಕಾರ ಮಂಡಿಸಿರುವ ಬಜೆಟ್‍ನಲ್ಲಿ ರೈತರ ಖಾತೆ ನೇರವಾಗಿ 6000 ರೂ ಜಮೆ ಮಾಡುವ ಕಿಸಾನ್ ಸಮ್ಮಾನ್ ಯೋಜನೆ ರೈತರ ಅಭ್ಯುದಯಕ್ಕೆಪ್ರೇರಣೆಯಾಗುವುದಿಲ್ಲ, ಅದು ರೈತರ ಸಮ್ಮಾನ್ ಬದಲು ರೈತರ ನಿರ್ಮಾಮ್‍ಎಂದು ಗೋಚರಿಸುತ್ತದೆ, ಇದು ಸ್ವಾಭಿಮಾನಿ ರೈತರಿಗೆ ಮಾಡಿದ ಅಪಮಾನ ಎಂದು ರಾಜ್ಯ ರೈತ ಸಂಘ ಹಸಿರು ಸೇನೆಯ ಕಡಬ ತಾಲುಕು ಅಧ್ಯಕ್ಷ ವಿಕ್ಟರ್ ಮಾರ್ಟಿಸ್ ಲೇವಡಿ ಮಾಡಿದರು.   ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರೈತರಿಗಾಗಿ ಘೋಷಿಸಿರುವ ಕೇಂದ್ರ ಯೋಜನೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ದೇಶದ

ಕಡಬ: ಕೇಂದ್ರದ ಬಜೆಟ್‍ನ ಕಿಸಾನ್ ಸಮ್ಮಾನ್ ಅಲ್ಲ ಅದು ಕಿಸಾನ್ ನಿರ್ನಾಮ್► ರೈತ ಸಂಘ ಲೇವಡಿ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಸೈಕಲ್ ವಿತರಣೆ

(ನ್ಯೂಸ್ ಕಡಬ) newskadaba.comರಾಮಕುಂಜ,ಫೆ.06.  ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಸೈಕಲ್ ವಿತರಣಾ ಕಾರ್ಯಕ್ರಮ ನಡೆಯಿತು.ರಾಮಕುಂಜ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ .ಆರ್.ಕೆ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಶುಭಹಾರೈಸಿದರು. ಶಾಲಾ ಮುಖ್ಯಗುರು ಸತೀಶ್.ಭಟ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ  ಗಣೇಶ್ ಕಟ್ಟಪುಣಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರೇಯಾ ಮತ್ತು ಮಯೂರಿ ಪ್ರಾರ್ಥಿಸಿದರು. ಶಿಕ್ಷಕಿ ರಶ್ಮಿ.ಬಿ.ಎಸ್ ವಂದಿಸಿದರು. ಶಿಕ್ಷಕಿ ನಿಶ್ಚಿತಾ.ಎಸ್.ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಸೈಕಲ್ ವಿತರಣೆ Read More »

ಕರಾವಳಿ

ಗಂಡಿಬಾಗಿಲು-ನೆಹರು ತೋಟ-ವಳಕಡಮ ರಸ್ತೆಗೆ ದುರಸ್ತಿಗೆ ಒಟ್ಟು 40 ಲಕ್ಷ ರೂ► ಕೊೈಲ ಫಾರ್ಮ್‍ನೊಳಗಿನ ರಸ್ತೆ ಸಮಸ್ಯೆಗೆ ಸಚಿವರ ಭೇಟಿ: ಶಾಸಕ ಅಂಗಾರ ಭರವಸೆ

(ನ್ಯೂಸ್ ಕಡಬ) newskadaba.comನೂಜಿಬಾಳ್ತಿಲ,ಫೆ.06. ತೀರಾ ಹದಗೆಟ್ಟಿರುವ ಕೊೈಲ ಗ್ರಾಮದ ಗಂಡಿಬಾಗಿಲಿನಿಂದ ನೆಹರು ತೋಟ ತನಕ ರಸ್ತೆಗೆ ಹದಿನೈದು ಲಕ್ಷ ರೂ ಹಾಗೂ ನೆಹರು ತೋಟದಿಂದ ವಳಕಡಮ ಶಾಲಾ ಬಳಿಯವರೆಗಿನ ರಸ್ತೆಗೆ ಇಪ್ಪತೈದು ಲಕ್ಷ ರೂ ಅನುದಾನವನ್ನು ಮಳೆಹಾನಿ ಯೋಜನೆಯಲ್ಲಿ ಮಂಜೂರು ಮಾಡಲಾಗಿದೆ, ಕೊೈಲ ಕೆ.ಸಿ.ಫಾರ್ಮ್‍ನೊಳಗಿನ ರಸ್ತೆ ಸಮಸ್ಯೆಗೆ ಪರಿಹಾರಕ್ಕೆ ಸಚಿವರ ಮಟ್ಟದಲ್ಲಿ ಒತ್ತಡ ಹಾಕುವುದಾಗಿ ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.   ಕೊೈಲ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಕೊೈಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಹೇಮಾಮೋಹನ್‍ದಾಸ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ

ಗಂಡಿಬಾಗಿಲು-ನೆಹರು ತೋಟ-ವಳಕಡಮ ರಸ್ತೆಗೆ ದುರಸ್ತಿಗೆ ಒಟ್ಟು 40 ಲಕ್ಷ ರೂ► ಕೊೈಲ ಫಾರ್ಮ್‍ನೊಳಗಿನ ರಸ್ತೆ ಸಮಸ್ಯೆಗೆ ಸಚಿವರ ಭೇಟಿ: ಶಾಸಕ ಅಂಗಾರ ಭರವಸೆ Read More »

ಕರಾವಳಿ

ಮದ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ► ಮದ್ಯವರ್ಜನ ಶಿಬಿರ ಸಮಾರೋಪ ಸಮಾರಂಭದಲ್ಲಿ ಬಾಲಕೃಷ್ಣ ಬಳ್ಳೇರಿ

(ನ್ಯೂಸ್ ಕಡಬ) ‌‌‌‌‌ newskadaba.com ಕಡಬ, ಫೆ.06. ನಾವು ಎಷ್ಟೇ ಪ್ರಯತ್ನಪಟ್ಟರೂ ಮದ್ಯಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತಿಲ್ಲ, ದುಷ್ಚಟಗಳ ಮಹಾಮಾರಿಯಾಗಿರುವ ಮದ್ಯವ್ಯಸನದ ನಿರ್ಮೂಲನೆ ಮಾಡಿ ಸಮೃದ್ಧ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಬಾಲಕೃಷ್ಣ ಗೌಡ ಬಳ್ಳೇರಿ ಹೇಳಿದರು. ಅವರು ಮಂಗಳವಾರ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಒಂದು ವಾರದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ

ಮದ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ► ಮದ್ಯವರ್ಜನ ಶಿಬಿರ ಸಮಾರೋಪ ಸಮಾರಂಭದಲ್ಲಿ ಬಾಲಕೃಷ್ಣ ಬಳ್ಳೇರಿ Read More »

ಕರಾವಳಿ
Scroll to Top