ನ್ಯೂಸ್ ಕಡಬ

ರೈಲಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ – ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.02. ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಣ್ಣೂರು ನಿವಾಸಿಯೋರ್ವನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಕಣ್ಣೂರು ಪರಪ್ಪನಂಗಡಿಯ ಜೋರ್ಜ್ ಜೋಸೆಫ್ (51) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಕೊಯಮುತ್ತೂರು-ಮಂಗಳೂರು ಇಂಟರ್ ಸಿಟಿ ರೈಲಿನಲ್ಲಿ ಈ ಘಟನೆ ನಡೆದಿದೆ. ಶೋರ್ನೂರಿನಿಂದ ಮಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದ್ದು, ಕಣ್ಣೂರು- ಪಯ್ಯ ನ್ನೂರು ನಡುವೆ ಈತ ಅಸಭ್ಯವಾಗಿ ವರ್ತಿಸಿರುವುದಾಗಿ ರೈಲ್ವೆ ಪೊಲೀಸರಿಗೆ ದೂರು ಲಭಿಸಿದ್ದು, ಈತನ ವರ್ತನೆ ಬಗ್ಗೆ ಮೊಬೈಲ್ ನಲ್ಲಿ ತೆಗೆದ […]

ರೈಲಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ – ಆರೋಪಿ ಅರೆಸ್ಟ್..! Read More »

ರಾಷ್ಟ್ರೀಯ ನ್ಯೂಸ್

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಹೆಣ್ಣು ಚೀತಾ ಧಾತ್ರಿ ಸಾವು

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಆ.02. ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ನಿರಂತರವಾಗಿ ಚೀತಾಗಳು ಸಾವನ್ನಪ್ಪುತ್ತಿದ್ದು, ಇದೀಗ ಉದ್ಯಾನವನದಲ್ಲಿ ಹೆಣ್ಣು ಚಿರತೆ ‘ಧಾತ್ರಿ’ ಶವವಾಗಿ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿಯಲು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ. ಪ್ರಾಜೆಕ್ಟ್ ಚೀತಾ ಎಂದು ಕರೆಯಲ್ಪಡುವ ಮಹತ್ವಾಕಾಂಕ್ಷೆಯ ಉಪಕ್ರಮದ ಭಾಗವಾಗಿ ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ 20 ಚಿರತೆಗಳನ್ನು ಆಮದು ಮಾಡಿಕೊಳ್ಳಲಾದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯ ಸಾವಿನ ಸರಣಿಯಲ್ಲಿ ಇದು ಕೂಡ ಒಂದು. ಸುಮಾರು ಏಳು ದಶಕಗಳ ಹಿಂದೆ ದೇಶದಲ್ಲಿ

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಹೆಣ್ಣು ಚೀತಾ ಧಾತ್ರಿ ಸಾವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ 100ರೂ.ಇಳಿಕೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.02. ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಬೆಲೆಯನ್ನು ನವೀಕರಿಸಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಗಳ ದರ ಇಳಿಕೆ‌ ಮಾಡಲಾಗಿದ್ದು, ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು 100 ರೂ.ಗೆ ಇಳಿಸಲಾಗಿದೆ ಎನ್ನಲಾಗಿದೆ. ದೇಶದ ರಾಜಧಾನಿ ನವದೆಹಲಿಯಲ್ಲಿ LPG ಸಿಲಿಂಡರ್ ಬೆಲೆ 1680 ರೂ.ಗೆ ಇಳಿದಿದ್ದು, ಜುಲೈನಲ್ಲಿ ಸಿಲಿಂಡರ್ ಬೆಲೆ ಏರಿಕೆಯಾದ ನಂತರ ಮೊದಲ ಬಾರಿಗೆ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು 100 ರೂ. ಇಳಿಸಿದೆ. ಇದಕ್ಕೂ ಮೊದಲು

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ 100ರೂ.ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರಿನ ವೈದ್ಯರ ಕಾರು ತಡೆದು ಅನೈತಿಕ ಪೊಲೀಸ್ ಗಿರಿ – ಐವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.02. ಕಾರವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿದ ಐವರನ್ನು ಪೊಲೀಸರು ಬಂಧಿಸಿದ ಘಟನೆ ಸಂಭವಿಸಿದೆ. ಮಂಗಳೂರಿನ‌ ಹೆಸರಾಂತ ಕಾಲೇಜುವೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4.30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದರು. ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಒಂದೇ ಕಾರಿನಲ್ಲಿ ವಿಭಿನ್ನ ಕೋಮಿಗೆ ಸೇರಿದವರು ಎಲ್ಲಿಗೆ

ಮಂಗಳೂರಿನ ವೈದ್ಯರ ಕಾರು ತಡೆದು ಅನೈತಿಕ ಪೊಲೀಸ್ ಗಿರಿ – ಐವರು ಅರೆಸ್ಟ್..! Read More »

ಕರಾವಳಿ

‘ವಿಟ್ಲದಲ್ಲಿ ನಡೆದ ಅತ್ಯಾಚಾರವನ್ನು ಮಂಗಳೂರು ಫೈಲ್ಸ್ ಎಂದು ಕರೆಯಬಹುದೇ’ ? – ಸಚಿವ ದಿನೇಶ್ ಗುಂಡೂರಾವ್ ತಿರುಗೇಟು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಉಡುಪಿ ಕಾಲೇಜಿನ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೇರಳ ಫೈಲ್ಸ್‌ ಸಿನಿಮಾ ಮಾದರಿಯ ಕೃತ್ಯ ಎಂದು ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯ ಔಟ್ ಗೋಯಿಂಗ್ ಅಧ್ಯಕ್ಷ/ವಿದೂಷಕ ಕಟೀಲ್ ಉಡುಪಿ ಪ್ರಕರಣವನ್ನು ಕೇರಳ ಫೈಲ್ಸ್ ಗೆ ಹೋಲಿಸಿದ್ದು, ಹಾಗಾದರೆ ಇವರದ್ದೇ ಕ್ಷೇತ್ರದ ವಿಟ್ಲದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಂಘ ಪರಿವಾರಕ್ಕೆ ಸೇರಿದ 3 ಯುವಕರಿಂದ

‘ವಿಟ್ಲದಲ್ಲಿ ನಡೆದ ಅತ್ಯಾಚಾರವನ್ನು ಮಂಗಳೂರು ಫೈಲ್ಸ್ ಎಂದು ಕರೆಯಬಹುದೇ’ ? – ಸಚಿವ ದಿನೇಶ್ ಗುಂಡೂರಾವ್ ತಿರುಗೇಟು Read More »

ಕರ್ನಾಟಕ

ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಆ.02. ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನಡೆದಿದೆ. ಮೃತ ಬಾಲಕಿಯನ್ನು ಕೃತಿಕಾ(3)ಎಂದು ಗುರುತಿಸಲಾಗಿದೆ. ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಯೂಟ್ಯೂಬ್ ಬಳಕೆದಾರರಿಗೆ ಗುಡ್ ನ್ಯೂಸ್ – ಹೊಸ ಯೂಟ್ಯೂಬ್ ಕ್ರಿಯೇಟ್ ಎಡಿಟಿಂಗ್ ಪರಿಚಯಿಸಲು ಸಜ್ಜು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಪ್ರಸ್ತುತ ಕಿರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು, ಅನೇಕ ಬಳಕೆದಾರರು ಕಿರು ವಿಡಿಯೋ ಕ್ರಿಯೇಟ್ ಮಾಡಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಜನಪ್ರಿಯ ಇನ್ ಸ್ಟಾಗ್ರಾಂ ತಾಣವು ಇತ್ತೀಚೆಗೆ ತನ್ನ ಬಿಲ್ಟ್ ಇನ್ ರೀಲ್ ಎಡಿಟಿಂಗ್ ಸೌಲಭ್ಯ ನೀಡಿದೆ ಎನ್ನಲಾಗಿದೆ. ಅದೇ ಹಾದಿಯಲ್ಲಿ ಇದೀಗ ಯೂಟ್ಯೂಬ್ ಸಹ ಹೆಜ್ಜೆ ಹಾಕಿದ್ದು, ತನ್ನ ಬಳಕೆದಾರರಿಗೆ ಖುಷಿ ಸುದ್ದಿ ನೀಡಿದೆ ಎನ್ನಲಾಗಿದೆ. ಅತೀ ದೊಡ್ಡ ವಿಡಿಯೋ ಪ್ಲಾಟ್ ಫಾರ್ಮ್ ಎನಿಸಿರುವ ಯೂಟ್ಯೂಬ್ ಇದೀಗ

ಯೂಟ್ಯೂಬ್ ಬಳಕೆದಾರರಿಗೆ ಗುಡ್ ನ್ಯೂಸ್ – ಹೊಸ ಯೂಟ್ಯೂಬ್ ಕ್ರಿಯೇಟ್ ಎಡಿಟಿಂಗ್ ಪರಿಚಯಿಸಲು ಸಜ್ಜು Read More »

ಕರ್ನಾಟಕ

ಲಿಫ್ಟ್ ನಲ್ಲಿ 3 ದಿನ ಸಿಲುಕಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ತಾಷ್ಕೆಂಟ್, ಆ.02. ಬಹುಮಹಡಿ ಕಟ್ಟಡದ ಲಿಪ್ಟ್ ನೊಳಗೆ 3 ದಿನ ಸಿಲುಕಿದ್ದ ಮಹಿಳೆಯೊಬ್ಬರು ಉಸಿರು ಕಟ್ಟಿ ಮೃತಪಟ್ಟ ಘಟನೆ ವರದಿಯಾಗಿದೆ. ಮಹಿಳೆ ಕಟ್ಟಡದ 9ನೇ ಮಹಡಿಗೆ ಲಿಫ್ಟ್ ಮೂಲಕ ತೆರಳಿದ್ದಾಗ ಲಿಫ್ಟ್ ಹಾಳಾಗಿ ಅದರೊಳಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ವಿದ್ಯುತ್ ಕಡಿತಗೊಂಡ ಕಾರಣ ಲಿಪ್ಟ್ ನಲ್ಲಿನ ಫ್ಯಾನ್ ಕೂಡಾ ಸ್ಥಗಿತಗೊಂಡಿದ್ದು, ಮಹಿಳೆ ಸಹಾಯಕ್ಕಾಗಿ ಎಷ್ಟು ಕಿರುಚಿದರೂ ಯಾರ ಗಮನಕ್ಕೂ ಬಂದಿರಲಿಲ್ಲ ಎಂದು ವರದಿ ತಿಳಿಸಿದೆ. ತಕ್ಷಣ ಪೊಲೀಸರು ಶೋಧ ಕಾರ್ಯ ನಡೆಸಿದಾಗ ಕೆಟ್ಟುನಿಂತ ಲಿಫ್ಟ್ ನಲ್ಲಿ

ಲಿಫ್ಟ್ ನಲ್ಲಿ 3 ದಿನ ಸಿಲುಕಿದ್ದ ಮಹಿಳೆ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ – ಮೊದಲ ಕಂತಿನಲ್ಲಿ 125.48 ಕೋಟಿ ರೂ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಶಕ್ತಿ ಯೋಜನೆ ಅಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ಗಳಲ್ಲಿ ವಿತರಿಸಲಾಗಿರುವ ಟಿಕೆಟ್ನ ಒಟ್ಟು ಮೊತ್ತದ ಮೊದಲ ಕಂತನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ನಾಲ್ಕೂ ನಿಗಮಗಳು ಒಟ್ಟಾಗಿ ವಿತರಿಸಿರುವ ಶೂನ್ಯ ಟಿಕೆಟ್‌ ದರ 6,87,49,57,753 ಈ ಮೊತ್ತದ ಒಂದು ಪಾಲನ್ನು ಅಥವಾ ಮೊದಲ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್‌ಆರ್‌ಟಿಸಿ) 47.15 ಕೋಟಿ ರೂ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 21.85

ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ – ಮೊದಲ ಕಂತಿನಲ್ಲಿ 125.48 ಕೋಟಿ ರೂ ಬಿಡುಗಡೆ Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಎದುರೇ ಕಿತ್ತಾಡಿಕೊಂಡ `ಕೈ’ ನಾಯಕಿಯರು

(ನ್ಯೂಸ್ ಕಡಬ)newskadaba.com ಉಡುಪಿ, ಆ.02. ಸಿಎಂ ಸಿದ್ದರಾಮಯ್ಯ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಈ ವೇಳೆ ಸಿಎಂ ಎದುರೇ ಕಾಂಗ್ರೆಸ್ ಮಹಿಳಾ ಮುಖಂಡರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಉಡುಪಿಗೆ ಆಗಮಿಸಿದ್ದ ವೇಳೆ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯಗೆ ಹೂಗುಚ್ಛ ನೀಡಲು ಇಬ್ಬರು ಮಹಿಳಾ ನಾಯಕಿರು ಕಿತ್ತಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಹೂಗುಚ್ಛ ನೀಡಲು ಮುಂದಾದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಮತ್ತೊಬ್ಬ ಮಹಿಳಾ ನಾಯಕಿಯನ್ನು ತಳ್ಳಿ ಮುಂದೆ ಹೋಗಿದ್ದಾರೆ. ಸಿಎಂ ಅವರನ್ನು ಸ್ವಾಗತಿಸಲು

ಸಿಎಂ ಸಿದ್ದರಾಮಯ್ಯ ಎದುರೇ ಕಿತ್ತಾಡಿಕೊಂಡ `ಕೈ’ ನಾಯಕಿಯರು Read More »

ಕರಾವಳಿ, ಕರ್ನಾಟಕ
Scroll to Top