ನ್ಯೂಸ್ ಕಡಬ

ನೂಜಿಬಾಳ್ತಿಲ: ಶಾಲಾ ವಾರ್ಷಿಕ ಕ್ರೀಡೋತ್ಸವ ಸಮಾರಂಭ.

(ನ್ಯೂಸ್ ಕಡಬ) newskadaba.com.ಕಡಬ, ಡಿ.29  ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕ ಕ್ರಿಡೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಡಿ.28ರಂದು ನಡೆಯಿತು. ಶಾಲೆಗೆ ನೂತನವಾಗಿ ನಿರ್ಮಿಸಲಾದ ಆವರಣಗೋಡೆಯನ್ನು ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಉದ್ಘಾಟಿಸಿ ಮಾತನಾಡಿ, ನೂಜಿಬಾಳ್ತಿಲ ಗ್ರಾ.ಪಂ. ಉ.ಹಿ.ಪ್ರಾ. ಶಾಲೆ ಹಾಗೂ ಇಲ್ಲಿಯ ಅಂಗನವಾಡಿ ಕೇಂದ್ರ ಒಳಗೊಂಡಂತೆ ಅತ್ಯುತ್ತಮವಾದ ಆವರಣ ಗೋಡೆ(ಕಂಪೌಂಡ್) ನಿರ್ಮಿಸಿದ್ದು ಶಾಲಾ ಪ್ರಮುಖ ದ್ವಾರವನ್ನು ಕೂಡ ರಚಿಸಲಾಗಿದೆ. ಇವತ್ತು ಈ ಕಂಪೌಂಡ್ ಉದ್ಘಾಟನೆ ನೆರವೇರಿಸುವ ಮೂಲಕ ಶಾಲಾ ವಠಾರದಲ್ಲಿ ಸಾರ್ವಜನಿಕವಾಗಿ […]

ನೂಜಿಬಾಳ್ತಿಲ: ಶಾಲಾ ವಾರ್ಷಿಕ ಕ್ರೀಡೋತ್ಸವ ಸಮಾರಂಭ. Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವತಿಯಿಂದ ವಾಳ್ಯ ಶಾಲೆಯಲ್ಲಿ ಎನ್‍ಎಸ್‍ಎಸ್ ಶಿಬಿರ

(ನ್ಯೂಸ್ ಕಡಬ) newskadaba.com. ಕಡಬ,ಡಿ.28. ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜು ವಿದ್ಯಾರ್ಥಿಗಳಿಂದ ಕುಟ್ರುಪಾಡಿ ಗ್ರಾಮದ ವಾಳ್ಯ ಕಿ.ಪ್ರಾ.ಶಾಲೆಯಲ್ಲಿ ಒಂದು ವಾರಗಳ ಕಾಲ ನಡೆಯುವ ಎನ್ನೆಸೆಸ್ಸ್ ಶಿಬಿರದ ಉದ್ಘಾಟನೆ ನಡೆಯಿತು.ಕುಟ್ರುಪಾಡಿ ಸಿ.ಎ.ಬ್ಯಾಂಕಿನ ಅಧ್ಯಕ್ಷ ಕರುಣಾಕರ ಗೋಗಟೆ ಉದ್ಘಾಟಿಸಿ ಮಾತನಾಡಿ,    ಶಿಬಿರ ವಿದ್ಯಾರ್ಥಿಗಳಿಗೆ ಸಮರ್ಪಣಾ ಭಾವವನ್ನು ತಿಳಿಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಶಿಬಿರದಲ್ಲಿನ ಶಿಸ್ತು ಸಂಯವನ್ನು ತನ್ನ ಜೀವನದ ಉದ್ದಕ್ಕೂ ಅಳವಡಿಸಿಕೊಂಡು ಉತ್ತಮ ನಾಗರೀಕನಾಗಿ ಬಾಳಬೇಕು ಎಂದರು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ, ಇಚ್ಛಾಶಕ್ತಿಯೊಂದಿಗೆ ಎಲ್ಲರೂ

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವತಿಯಿಂದ ವಾಳ್ಯ ಶಾಲೆಯಲ್ಲಿ ಎನ್‍ಎಸ್‍ಎಸ್ ಶಿಬಿರ Read More »

ಕರಾವಳಿ

ಕುಟ್ರುಪಾಡಿ: ಉ.ಹಿ.ಪ್ರಾ.ಶಾಲಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com. ಕಡಬ,ಡಿ.28.ಕುಟ್ರುಪಾಡಿಉ.ಹಿ.ಪ್ರಾ ಶಾಲಾ ವಾರ್ಷಿಕೋತ್ಸವ ಕ್ರೀಡೋತ್ಸವ ಶಾಲಾ ಕ್ರೀಡಾಂಗಣದಲ್ಲಿನಡೆಯಿತು.ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಕುಟ್ರುಪಾಡಿ ಗ್ರಾ.ಪಂ.ಅದ್ಯಕ್ಷೆ ವಿದ್ಯಾ ಗೋಗಟೆ, ಅಜ್ಞಾನವೆಂಬ ಕತ್ತಲನ್ನು ಹೋಗಲಾಡಿಸಿ ಜ್ಞಾನವೆಂಬ ಬೆಳಕನ್ನು ಚೆಲ್ಲುವ ಮೂಲಕ ಪ್ರತಿಯೊಬ್ಬರ ಪ್ರತಿಭೆಯನ್ನು ಹೊರ ಹೊಮ್ಮಲು ಶಿಕ್ಷಣ ಮಹತ್ವವಾಗಿದ್ದು, ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ದೈಹಿಕ ಸಾಮಥ್ರ್ಯತೆಯನ್ನು ವೃದ್ಧಿಸಿಕೊಳ್ಳುವುದರೊಂದಿಗೆ ತನ್ನ ಕ್ರೀಡಾ ಪ್ರತಿಭೆಯನ್ನು ಕೂಡಾ ಹೊರಗೆಡಹಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದರು. ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕ್ರೀಡಾ ಮಾರ್ಗದರ್ಶಕ ಕುಟ್ರುಪಾಡಿ ಸಿ.ಎ.ಬ್ಯಾಂಕಿನ ನಿರ್ದೇಶಕ ಶಶಾಂಕ್ ಗೋಖಲೆ

ಕುಟ್ರುಪಾಡಿ: ಉ.ಹಿ.ಪ್ರಾ.ಶಾಲಾ ಕ್ರೀಡಾಕೂಟ Read More »

ಕರಾವಳಿ

ಕಡಬದಲ್ಲಿ ದೀಪ ಜ್ಯೋತಿ ಕಾರ್ಯಕ್ರಮ-ಮೆರವಣಿಗೆ

(ನ್ಯೂಸ್ ಕಡಬ) newskadaba.com.ಕಡಬ , ಡಿ. 28.  ಶಬರಿಮಲೆ ಶ್ರೀ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರ ಕುರಿತು ಕೇರಳದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಅಂಗವಾಗಿ ಕಡಬದಲ್ಲಿ ಮಹಿಳೆಯರಿಂದ ದೀಪ ಜ್ಯೋತಿ ಕಾರ್ಯಕ್ರಮ ಡಿ.26ರ ಸಂಜೆ ನಡೆಯಿತು. ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಹಣತೆಗಳನ್ನು ಉರಿಸಿ ಕಡಬ ಪೇಟೆಯಲ್ಲಿ ಅಯ್ಯಪ್ಪ ಭಕ್ತರು ಹಾಗೂ ಮಹಿಳೆಯರು ಮೆರವಣಿಗೆ ನಡೆಸಿದರು. ಬಳಿಕ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಕಡಬ ವಿಶ್ವ ಹಿಂದೂ ಪರಿಷದ್‍ನ ಗೌರವಾಧ್ಯಕ್ಷ ಎ. ಜನಾರ್ದನ ರಾವ್ ಮಾತನಾಡಿದರು.

ಕಡಬದಲ್ಲಿ ದೀಪ ಜ್ಯೋತಿ ಕಾರ್ಯಕ್ರಮ-ಮೆರವಣಿಗೆ Read More »

ಕರಾವಳಿ

ಪೊಲೀಸರ ಸೋಗಿನಲ್ಲಿ ಚಿನ್ನಾಭರಣ ಕಳ್ಳತನ ► ಒಬ್ಬಂಟಿಯಾಗಿ ತೆರಳುವಾಗ ಎಚ್ಚರಿಕೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಡಿ. 26.  ಸಿಐಡಿ ಪೊಲೀಸರೆಂದು ನಂಬಿಸಿ ಗಮನ ಬೇರೆಡೆ ಸೆಳೆದು ಸರಗಳ್ಳತನ ಮಾಡುವ ತಂಡವೊಂದು ಕರಾವಳಿಗೆ ಎಂಟ್ರಿ ಕೊಟ್ಟಿದ್ದು ಇದರ ಬಗ್ಗೆ ಜನ ಜಾಗೃತರಾಗಬೇಕು ಎಂದು ಡಿಸಿಪಿ ಉಮಾಪ್ರಶಾಂತ್ ಜಿಲ್ಲಾ ನಾಗರೀಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಡಿಸಿಪಿ ಉಮಾ ಪ್ರಶಾಂತ್, ಉಡುಪಿ ಜಿಲ್ಲಾ ಪೊಲೀಸರು ಈ ಬಗ್ಗೆ ಅಲರ್ಟ್ ಮಾಹಿತಿ ನೀಡಿದ್ದಾರೆ. ಬಂದರು ಠಾಣಾ ವ್ಯಾಪ್ತಿಯಲ್ಲಿ ದಾರಿಹೋಕ ವೃದ್ದರೊಬ್ಬರ ಬಳಿ ಬಂದ ಕಳ್ಳರು ತಾವು ಪೊಲೀಸರೆಂದು ವಂಚಿಸಿ ಚಿನ್ನಾಭರಣ

ಪೊಲೀಸರ ಸೋಗಿನಲ್ಲಿ ಚಿನ್ನಾಭರಣ ಕಳ್ಳತನ ► ಒಬ್ಬಂಟಿಯಾಗಿ ತೆರಳುವಾಗ ಎಚ್ಚರಿಕೆ Read More »

ಕರಾವಳಿ

ಕುಕ್ಕೆಗೆ ಹರಿದು ಬರುತ್ತಿದೆ ಭಕ್ತ ಜನ ಸಾಗರ ► ಅನ್ನದಾನ, ಸರ್ಪಸಂಸ್ಕಾರ ದಾಖಲೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಡಿ. 26. ಕ್ರಿಸ್‌ಮಸ್ ರಜೆಯ ಕಾರಣ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರವೂ ಭಕ್ತಸಾಗರ ಮುಂದುವರಿದಿದ್ದು, ಕ್ಷೇತ್ರದಲ್ಲಿ ನಾಲ್ಕು ದಿನಗಳ ಅನ್ನದಾನ ದಾಖಲೆ ಸೃಷ್ಟಿಸಿದೆ. ಸರ್ಪಸಂಸ್ಕಾರ ಸಹಿತ ಪ್ರಮುಖ ಸೇವೆಗಳೂ ಅಧಿಕ ದಾಖಲಾಗಿವೆ.ಶನಿವಾರ 35 ಸಾವಿರ, ಭಾನುವಾರು 40, ಸೋಮವಾರ 45, ಮಂಗಳವಾರ 60 ಸಾವಿರ ಸಹಿತ ನಾಲ್ಕು ದಿನಗಳಲ್ಲಿ 1.80 ಲಕ್ಷಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಈ ನಾಲ್ಕು ದಿನಗಳಲ್ಲಿ ಕ್ರಮವಾಗಿ ಶನಿವಾರ 31, ಭಾನುವಾರ 30, ಸೋಮವಾರ

ಕುಕ್ಕೆಗೆ ಹರಿದು ಬರುತ್ತಿದೆ ಭಕ್ತ ಜನ ಸಾಗರ ► ಅನ್ನದಾನ, ಸರ್ಪಸಂಸ್ಕಾರ ದಾಖಲೆ Read More »

ಕರಾವಳಿ

ಬೆಥನಿ ಸಮೂಹ ಶಿಕ್ಷಣ ಸಂಸ್ಥೆ: ಕ್ರಿಸ್ಮಸ್‌ ಆಚರಣೆ, ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನುಹಂಚುವಂತಾಗಲಿ.

(ನ್ಯೂಸ್ ಕಡಬ) newskadaba.com .ಕೊಕ್ಕಡ, ಡಿ. 26 . ಸುಮಾರು 2,000 ವರ್ಷಗಳ ಹಿಂದೆ ಸರಳ ಜೀವನಕ್ಕೆ ಬಹುದೊಡ್ಡ ಮಾದರಿಯಾಗಿ ಹಟ್ಟಿಯಲ್ಲಿ ಹುಟ್ಟಿ ಮನುಕುಲದ ಉದ್ಧಾರಕ್ಕೆ ಆಗಮಿಸಿದ ಪ್ರಭು ಯೇಸುಕ್ರಿಸ್ತರ ಜನನದ ಆಚರಣೆಯೇ ಕ್ರಿಸ್ಮಸ್‌. ಸಿಹಿ ಹಂಚುತ್ತಾ ಮನೆ ಮನೆಗೆ ತಿರುಗುವ ಸಾಂತಾಕ್ಲಾಸ್‌ ಪ್ರೀತಿಯ ಸಂಕೇತ. ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನು ಹಂಚುವಂತಾಗಲಿ. ಕ್ರಿಸ್ಮಸ್‌ ಶಾಂತಿ ಸಹಬಾಳ್ವೆಯ – ಪ್ರೀತಿ, ಸಂತೋಷದ ಬದುಕಿಗೆ ಪ್ರಚೋದನೆಯಾಗಲಿ ಎಂದು ಮಲಂಕರ ಕ್ಯಾಥೋಲಿಕ್‌ ಪುತ್ತೂರು ಧರ್ಮ ಪ್ರಾಂತ್ಯದ ವಿಕಾರ್‌ ಜನರಲ್‌

ಬೆಥನಿ ಸಮೂಹ ಶಿಕ್ಷಣ ಸಂಸ್ಥೆ: ಕ್ರಿಸ್ಮಸ್‌ ಆಚರಣೆ, ಹಬ್ಬಗಳೆಂದರೆ ಬರೇ ಆಡಂಬರಗಳೇ ಆಗದೆ ಪ್ರೀತಿ ಸಂತೋಷಗಳನ್ನುಹಂಚುವಂತಾಗಲಿ. Read More »

ಕರಾವಳಿ

ದೂರವಾಣಿ ಕೇಂದ್ರ ನೌಕರರಿಗೆ ಮೂರು ತಿಂಗಳಿಂದ ಪಾವತಿಯಾಗದ ವೇತನ ► ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರಿಗೆ ಮನವಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ,  ಡಿ. 26.  ಸರಕಾರಿ ಸ್ವಾಮ್ಯದ ಸಂಸ್ಥೆಯ ಕಚೇರಿ ಮತ್ತು ದೂರವಾಣಿ ಕೇಂದ್ರದಲ್ಲಿ ಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಕಳೆದ ಮೂರು ತಿಂಗಳಿಂದ ಸಂಸ್ಥೆ ವೇತನ ಪಾವತಿಸಿಲ್ಲ. ಈ ಕುರಿತು ಈ ಸಂಸ್ಥೆಯಲ್ಲಿ ದುಡಿಯುತ್ತಿರುವ ಗುತ್ತಿಗೆ ನೌಕರರು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರನ್ನು ರವಿವಾರ ಭೇಟಿಯಾಗಿ ಸಮಸ್ಯೆಗೆ ಸ್ಪಂದಿಸುವಂತೆ ಮನವಿ ಸಲ್ಲಿಸಿದರು. ಸುದೀರ್ಘ‌ ಅವಧಿಯಿಂದ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ. ಇದುವರೆಗೆ ಮೂಲ ಸೌಕರ್ಯ ವಂಚಿತರಾಗಿ ಸೇವೆ ನೀಡಿರುವ ನಮಗೆ

ದೂರವಾಣಿ ಕೇಂದ್ರ ನೌಕರರಿಗೆ ಮೂರು ತಿಂಗಳಿಂದ ಪಾವತಿಯಾಗದ ವೇತನ ► ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರಿಗೆ ಮನವಿ Read More »

ಕರಾವಳಿ

ಕಡಬದಲ್ಲಿ ಮದ್ಯವರ್ಜನ ಶಿಬಿರ – ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ,  ಡಿ.25. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪುತ್ತೂರು ತಾಲೂಕಿನಲ್ಲಿ ನಡೆಯುವ 51ನೇ ಮದ್ಯವರ್ಜನ ಶಿಬಿರ ಕಡಬ ಒಕ್ಕಲಿಗ ಗೌಡ ಸಂಘದ ಸಭಾಭವನದಲ್ಲಿ ಜ.29ರಿಂದ ಫೆ.5ರ ತನಕ ನಡೆಯಿದ್ದು ಇದರ ಪೂರ್ವಭಾವಿ ಸಭೆ ಸೋಮವಾರ ಒಕ್ಕಲಿಗ ಸಭಾಭವನದಲ್ಲಿ ನಡೆಯಿತು.ನೂತನವಾಗಿ ಆಯ್ಕೆಯಾದ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ ಮಾತನಾಡಿ ಕುಡಿತದ ಚಟಕ್ಕೆ ಬಲಿಯಾಗಿ ಜೀವನವನ್ನು ಕಳೆದುಕೊಂಡಿರುವ ಅನೇಕ ಬಡ ಕುಟುಂಬಗಳಿಗೆ ಬದುಕಿನ ಬೆಳಕನ್ನು ನೀಡುವ ಶ್ರೀ ಕ್ಷೇತ್ರ

ಕಡಬದಲ್ಲಿ ಮದ್ಯವರ್ಜನ ಶಿಬಿರ – ಪೂರ್ವಭಾವಿ ಸಭೆ Read More »

ಕರಾವಳಿ

ಕಡಬ: ಕರ್ನಾಟಕ ದ.ಸಂ.ಸ. ವತಿಯಿಂದ ಅಂಬೇಡ್ಕರ್ ಪರಿನಿಬ್ಬಾನ ದಿನಾಚರಣೆ

(ನ್ಯೂಸ್ ಕಡಬ) newskadaba.com  ಡಿ.  25. ಕಡಬ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋ. ಕೃಷ್ಣಪ್ಪ ಸ್ಥಾಪಿತ 47.74/75) ಕಡಬ ತಾಲ್ಲೂಕು ಶಾಖೆ ವತಿಯಿಂದ 62 ನೇ ವರ್ಷದ ಅಂಬೇಡ್ಕರ್ ಪರಿನಿಬ್ಬಾನದಿನಾಚರಣೆಯನ್ನು ಕಡಬದ ಅಂಬೇಡ್ಕರ್ ಭವನದಲ್ಲಿ ದ.16ರಂದು ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಸಂಸ ಹಿರಿಯ ಮುಖಂಡ ಆನಂದ ಮಿತ್ತಬೈಲ್ ಬಾಬಾ ಸಾಹೇಬರು ತನ್ನ ಇಡೀ ಜೀವನವನ್ನೇ ನಮ್ಮ ಏಳಿಗೆಗಾಗಿ ಮುಡಿಪಿಟ್ಟ ಧೀಮಂತ ವಿಶ್ವ ನಾಯಕರಾಗಿದ್ದು, ತನ್ನ ಮಗನ ಶವಕ್ಕೆ ಹಾಕಲು ಬಟ್ಟೆ ಇಲ್ಲದಿದ್ದರೂ

ಕಡಬ: ಕರ್ನಾಟಕ ದ.ಸಂ.ಸ. ವತಿಯಿಂದ ಅಂಬೇಡ್ಕರ್ ಪರಿನಿಬ್ಬಾನ ದಿನಾಚರಣೆ Read More »

ಕರಾವಳಿ
Scroll to Top