ನ್ಯೂಸ್ ಕಡಬ

ಆತೂರು, ಕುದುಲೂರುನಲ್ಲಿ ಡಾ| ರಘು ಮನೆ ಮನೆ ಭೇಟಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.20. ಮೇ 12ರಂದು ನಡೆಯುವ ವಿಧಾನ ಸಭಾ ಚುನಾವಣೆಯ ಸುಳ್ಯ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ| ರಘುರವರು ಎ. 20ರಂದು ಬೆಳಿಗ್ಗೆ ಕೊೖಲ ಗ್ರಾಮದ ಕುದುಲೂರು ಹಾಗೂ ರಾಮಕುಂಜ ಗ್ರಾಮದ ಗೋಳಿತ್ತಡಿ, ಗಾಂಧಿಪೇಟೆ ಪರಿಸರದಲ್ಲಿ ಮನೆ ಮನೆ ಭೇಟಿ ನೀಡಿ ಮತ ಯಾಚಿಸಿದರು. ಡಾ| ರಘುರವರು ಬೆಳಿಗ್ಗೆ ಗೋಳಿತ್ತಡಿಯಲ್ಲಿ ದಿವಂಗತ ಗೋವಿಂದ ಮಾಸ್ಟರ್ ಅವರ ಮನೆಗೆ ಭೇಟಿ ಅವರ ಪುತ್ರ ಶಿವಪ್ರಸಾದ್ ಮತ್ತು ಮನೆಯವರೊಂದಿಗೆ ಮತ ಯಾಚಿಸಿದರು. ಬಳಿಕ ಅಲ್ಲಿಂದ ಕುದುಲೂರು ಪರಿಸರದಲ್ಲಿ […]

ಆತೂರು, ಕುದುಲೂರುನಲ್ಲಿ ಡಾ| ರಘು ಮನೆ ಮನೆ ಭೇಟಿ Read More »

ಕರಾವಳಿ

 ಅಗ್ನಿಶಾಮಕ ಸೇವಾ ಸಪ್ತಾಹ ದಿನಾಚರಣೆ

(ನ್ಯೂಸ್ ಕಡಬ) newskadaba.com  ಕರ್ನಾಟಕ, ಎ.20. ಕರ್ನಾಟಕ ರಾಜ್ಯ ಅಗ್ನಿಶಾಮಕ ಸೇವಾ ಇಲಾಖೆಯು ಏಪ್ರಿಲ್ 20 ರವರೆಗೆ ಅಗ್ನಿಶಾಮಕ ಸೇವಾ ಸಪ್ತಾಹವನ್ನು ಆಚರಿಸುತ್ತಿದೆ. ಈ ಅವಧಿಯಲ್ಲಿ ಅಗ್ನಿನಿವಾರಣೆ ಮತ್ತು ಅಗ್ನಿಶಮನದ ಬಗ್ಗೆ ತಿಳುವಳಿಕೆ ಹಾಗೂ ಅಣುಕು ಪ್ರದರ್ಶನಗಳನ್ನು ವಿವಿಧ ಸಂಘ ಸಂಸ್ಥೆಗಳು, ಕೈಗಾರಿಕಾ ಕೇಂದ್ರಗಳು, ವಿದ್ಯಾಸಂಸ್ಥೆಗಳು, ವಾಣಿಜ್ಯ ಮಳಿಗೆಗಳು, ಆಸ್ಪತ್ರೆ ಇತ್ಯಾದಿ ಕಡೆಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

 ಅಗ್ನಿಶಾಮಕ ಸೇವಾ ಸಪ್ತಾಹ ದಿನಾಚರಣೆ Read More »

ಕರ್ನಾಟಕ

ಹೊಸ ಸಾಲ ಮಂಜೂರಾತಿ ಇಲ್ಲ: ಸಹಕಾರ ಸಂಘಗಳಿಗೆ ಸೂಚನೆ  

(ನ್ಯೂಸ್ ಕಡಬ) newskadaba.com ಕರ್ನಾಟಕ, ಎ.20. ಸಾರ್ವತ್ರಿಕ ವಿಧಾನ ಸಭಾ  ಚುನಾವಣೆ 2018ರ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕುಗಳು ನೀತಿ ಸಂಹಿತೆ ಜಾರಿಯಲ್ಲಿ ಇರುವ ದಿನಾಂಕದವರೆಗೆ ಯಾವುದೇ ಹೊಸ ರೈತರಿಗೆ ಕೃಷಿ ಉದ್ದೇಶಕ್ಕಾಗಿ ರಿಯಾಯಿತಿ ಬಡ್ಡಿ ದರದಲ್ಲಿ ಹೊಸ ಸಾಲವನ್ನು ಮಂಜೂರು ಅಥವಾ ವಿತರಣೆ ಮಾಡುವಂತಿಲ್ಲ. ಆದರೆ ಈಗಾಗಲೇ ಹಿಂದಿನ ವರ್ಷದಲ್ಲಿ ನೀಡಿದ ಸಾಲವನ್ನು ರೈತರು ಮರುಪಾವತಿಸಿದಲ್ಲಿ ನವೀಕರಣ ಮಾಡಬಹುದಾಗಿದೆ. ಸ್ವಸಹಾಯ ಗುಂಪುಗಳಿಗೆ ನೀಡುವ ಸಾಲವನ್ನು ನೀತಿ ಸಂಹಿತೆ ಜಾರಿಯಲ್ಲಿರುವ

ಹೊಸ ಸಾಲ ಮಂಜೂರಾತಿ ಇಲ್ಲ: ಸಹಕಾರ ಸಂಘಗಳಿಗೆ ಸೂಚನೆ   Read More »

ಕರ್ನಾಟಕ

ವೀರಮಂಗಲ: ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ

(ನ್ಯೂಸ್ ಕಡಬ) newskadaba.com ನರಿಮೊಗರು, ಎ.19.  ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವದ ಮಾರನೆ ದಿನ ಎ.18ರಂದು ಸಂಜೆ ಶ್ರೀದೇವರು ಅವಭೃತ ಸ್ನಾನಕ್ಕೆ ಹೊರಟು ಎ.19ರಂದು ಮುಂಜಾನೆ ಹೊತ್ತಿಗೆ ವೀರಮಂಗಲಕ್ಕೆ ತಲುಪಿ ಅಲ್ಲಿ ಕುಮಾರಧಾರ ಹೊಳೆಯಲ್ಲಿ ಧಾರ್ಮಿಕ ಸಂಪ್ರದಾಯದಂತೆ ಶ್ರೀ ದೇವರ ಅವಭೃತ ಸ್ನಾನ ನಡೆಯಿತು. ಕುಂಟಾರು ಶ್ರೀಧರ್ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರ ಬ್ರಹ್ಮವಾಹಕರಾದ ಪ್ರೀತಂ ಪುತ್ತೂರಾಯ, ಗೋಪಾಲಕೃಷ್ಣ ಅಡಿಗ, ಕೇಶವ ಅಡಿಗ ಮತ್ತು ದೇವಳದ ಪ್ರಧಾನ ಅರ್ಚಕರಾದ ವಸಂತ ಕುಮಾರ್ ಕೆದಿಲಾಯ, ಇತರ ಅರ್ಚಕರಾದ

ವೀರಮಂಗಲ: ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ Read More »

ಕರಾವಳಿ

ಚುನಾವಣೆ: ದ.ಕ.- ಕಾಸರಗೋಡು ಜಿಲ್ಲಾಡಳಿತ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು ಎ.19. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲಾಡಳಿತ ಸಭೆ ಬುಧವಾರ ಮಂಗಳೂರಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಅತಿಥಿ ಗೃಹದಲ್ಲಿ ನಡೆದ ಈ ಸಭೆಯಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಜೀವನ್ ಬಾಬು ಸೇರಿದಂತೆ ಅಲ್ಲಿನ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಮಾತನಾಡಿ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಹಣ ಮತ್ತು ಸರಕು ಸಾಗಾಣಿಕೆಯ ವೇಳೆ ಗಡಿ ಪ್ರದೇಶಗಳಲ್ಲಿ ನಿಗಾ ಇಡುವುದು ಅಗತ್ಯವಾಗಿದೆ.

ಚುನಾವಣೆ: ದ.ಕ.- ಕಾಸರಗೋಡು ಜಿಲ್ಲಾಡಳಿತ ಸಭೆ Read More »

ಕರಾವಳಿ

ವಿಧಾನಸಭಾ ಚುನಾವಣೆ: ವೆಚ್ಚ ವೀಕ್ಷಕರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು ಎ.19. ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಖರ್ಚು ವೆಚ್ಚ ವೀಕ್ಷಕರಾಗಿ ವಿನೋದ್ ಶರ್ಮಾ ಅವರು ಆಗಮಿಸಿದ್ದಾರೆ ಇವರು ಸಕ್ರ್ಯುಟ್ ಹೌಸ್‍ನಲ್ಲಿ ತನ್ನ ವಾಸ್ತವ್ಯ ಹೂಡಿದ್ದಾರೆ. ಸಾರ್ವಜನಿಕರು ಚುನಾವಣಾ ಖರ್ಚುವೆಚ್ಚಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಅಹವಾಲುಗಳನ್ನು ನೀಡಬಹುದಾಗಿದ್ದು, ವೀಕ್ಷಕರ ಮೊಬೈಲ್ ಸಂಖ್ಯೆ 8277807209 ಸಂಪರ್ಕಿಸಬಹುದಾಗಿದೆ ಎಂದು ಮಂಗಳೂರು ದಕ್ಷಿಣ ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವಿಧಾನಸಭಾ ಚುನಾವಣೆ: ವೆಚ್ಚ ವೀಕ್ಷಕರ ನೇಮಕಾತಿ Read More »

ಕರಾವಳಿ

ಏ.20 ರಂದು ‘ರಾಜನೋಟ’ ಕೃತಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು ಎ.18. ಪತ್ರಕರ್ತ ಪಿ.ಬಿ.ಹರೀಶ್ ರೈ ಅವರ ಕೃತಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 1952ರಿಂದ 2014 ರವರೆಗಿನ ರಾಜಕೀಯ ಚುನಾವಣಾ ಮಾಹಿತಿ ಕೋಶ ‘ರಾಜನೋಟ ‘ ಇದರ ಬಿಡುಗಡೆ ಸಮಾರಂಭ ಎ.20ರಂದು ಬೆಳಗ್ಗೆ 11ಕ್ಕೆ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆಯಲಿದೆ. ಆಕೃತಿ ಆಶಯ ಪಬ್ಲಿಕೇಷನ್ಸ್ ಪ್ರಕಟಿಸಿರುವ ಈ ಕೃತಿಯನ್ನು ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್‌ನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬಿಡುಗಡೆ ಮಾಡಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ  ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಕಾರ್ಯಕ್ರಮ

ಏ.20 ರಂದು ‘ರಾಜನೋಟ’ ಕೃತಿ ಬಿಡುಗಡೆ Read More »

ಕರಾವಳಿ

ಬೇಸಿಗೆಯಲ್ಲಿ ಬೆವರಿಳಿಸಿ ಬೆಂಡಾಗಿಸುವ ನಿರ್ಜಲೀಕರಣ

(ನ್ಯೂಸ್ ಕಡಬ) newskadaba.com ಎ.18. ನಮ್ಮ ದೇಹದ ತೂಕದ ಸುಮಾರು 60 ಶೇಕಡಾದಷ್ಟು ನೀರಿನಾಂಶ ಇದ್ದು, ದೇಹದ ಹೆಚ್ಚಿ ಎಲ್ಲಾ ಜೈವಿಕ ಕ್ರಿಯೆಗಳಿಗೆ ನೀರು ಅತೀ ಅಗತ್ಯ. ಸುಮಾರು 70 ಕೆ.ಜಿ ತೂಕದ ವ್ಯಕ್ತಿಯಲ್ಲಿ ಸರಿಸುಮಾರು 40 ಲೀಟರ್ಗಳಷ್ಟು ಅಂದರೆ ದೇಹದ ತೂಕದ 60 ಶೇಕಡಾದಷ್ಟು ನೀರು ಇರುತ್ತದೆ. ನಮ್ಮ ದೇಹದಲ್ಲಿನ ನೀರು ಬೇರೆ ಬೇರೆ ಕಾರಣಗಳಿಂದ ಬೇರೆ ಬೇರೆ ರೂಪದಲ್ಲಿ (ಬೆವರು, ಮೂತ್ರ ಇತ್ಯಾದಿಯಾಗಿ) ದೇಹದಿಂದ ಹೊರ ಹಾಕಲ್ಪಟ್ಟ ನೀರಿನ ಪ್ರಮಾಣಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಸೇವಿಸುವುದು

ಬೇಸಿಗೆಯಲ್ಲಿ ಬೆವರಿಳಿಸಿ ಬೆಂಡಾಗಿಸುವ ನಿರ್ಜಲೀಕರಣ Read More »

ಆರೋಗ್ಯ ಮಾಹಿತಿ

ಪುತ್ತೂರು ಜಾತ್ರೆ: ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.18. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ  ಜಾತ್ರಾ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಪುತ್ತೂರು ನಗರ ಪ್ರದೇಶವು ಮತೀಯವಾಗಿ ಸೂಕ್ಷ್ಮ ಪ್ರದೇಶವಾಗಿದ್ದು, ಶಾಂತಿ ಕಾಪಾಡುವ ಹಿತದೃಷ್ಠಿಯಿಂದ ಎಪ್ರಿಲ್ 18 ರ ಮಧ್ಯರಾತ್ರಿಯವರೆಗೆ ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವೈನ್ ಶಾಪ್ ಮತ್ತು ಬಾರ್‍ಗಳನ್ನು ಮುಚ್ಚಲು ಅಬಕಾರಿ ಕಾಯ್ದೆ 1965 ಸೆಕ್ಷನ್ 21(1)ರ ಅಡಿಯಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ, ದ.ಕ ಜಿಲ್ಲಾಧಿಕಾರಿ, ಹಾಗೂ ಜಿಲ್ಲಾ ದಂಢಾಧಿಕಾರಿ ಆದೇಶಿಸಿದ್ದಾರೆ.

ಪುತ್ತೂರು ಜಾತ್ರೆ: ನಿಷೇಧಾಜ್ಞೆ Read More »

ಕರಾವಳಿ

ಚುನಾವಣೆ: ಬ್ಯಾಂಕ್ ವಹಿವಾಟು, ಹವಾಲ ಚಲಾವಣೆ ಮೇಲೆ ನಿಗಾ – ಡಿ.ಸಿ. ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.18. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಬ್ಯಾಂಕುಗಳಲ್ಲಿ ನಡೆಯುತ್ತಿರುವ ವ್ಯವಹಾರಗಳ ಮೇಲೆ ತೀವ್ರ ನಿಗಾ ವಹಿಸಲು ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಗೆ ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ವೆಚ್ಚ ವೀಕ್ಷಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.  ಜಿಲ್ಲೆಯಲ್ಲಿರುವ ಎಲ್ಲಾ ಬ್ಯಾಂಕುಗಳು ತಮ್ಮ  ಶಾಖೆಗಳಲ್ಲಿ ನಡೆಯುವ ದೊಡ್ಡ ಮೊತ್ತದ ವ್ಯವಹಾರದ ಸಮಗ್ರ ವಿವರ ಪ್ರತೀನಿತ್ಯ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನೀಡಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವನ್ನು ಸಹಿಸಲಾಗದು.

ಚುನಾವಣೆ: ಬ್ಯಾಂಕ್ ವಹಿವಾಟು, ಹವಾಲ ಚಲಾವಣೆ ಮೇಲೆ ನಿಗಾ – ಡಿ.ಸಿ. ಸೂಚನೆ Read More »

ಕರಾವಳಿ
Scroll to Top