ನ್ಯೂಸ್ ಕಡಬ

ಮಕ್ಕಳ ಬೇರುಗಳಲ್ಲಿಯೇ ಸಂಸ್ಕೃತಿಯನ್ನು ಬೆಳೆಸಿ: ಆಶಾ ಬೆಳ್ಳಾರೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.3. ದಿನಾಂಕ 31.03.2018 ರಂದು ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿ ಇಲ್ಲಿನ ಶಿಶುಮಂದಿರದಲ್ಲಿ ಸಾಮೂಹಿಕ ಹುಟ್ಟುಹಬ್ಬ, ನೂತನ ಜೋಕಾಲಿ ಸಮರ್ಪಣೆ, ಮಾತೃಭೋಜನ ಕಾರ್ಯಕ್ರಮಗಳು ನಡೆಯಿತು. ಪಾಶ್ಚಿಮಾತ್ಯ ಆಚರಣೆಗಳ ಮಧ್ಯೆ ಭಾರತೀಯ ಸಂಸ್ಕೃತಿಯನ್ನು ಬೆಳೆಸುವುದು ನಮ್ಮ ಆಧ್ಯ ಕರ್ತವ್ಯವಾಗಿದೆ, ಇದನ್ನು ಉಳಿಸುವತ್ತ ನಮ್ಮ ಪ್ರಯತ್ನ ಇರಬೇಕು ಮತ್ತು ಯುವಜನತೆಯು ಈ ನಿಟ್ಟಿನಲ್ಲಿ ಆಸಕ್ತಿ ವಹಿಸುವುದು ಅಗತ್ಯ. ಮಕ್ಕಳೇ ದೇಶದ ಸಂಸ್ಕೃತಿಯನ್ನು ಪರಿಚಯಿಸುವ ರಾಯಭಾರಿಗಳೆಂದು ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿನೇಕಾನಂದ ಕನ್ನಡ ಮಾಧ್ಯಮದ ಮುಖ್ಯೋಪಾಧ್ಯಾಯರಾದ […]

ಮಕ್ಕಳ ಬೇರುಗಳಲ್ಲಿಯೇ ಸಂಸ್ಕೃತಿಯನ್ನು ಬೆಳೆಸಿ: ಆಶಾ ಬೆಳ್ಳಾರೆ Read More »

ಕರಾವಳಿ

ಶಿರಾಡಿ ಪೇರಮಜಲು ಎಎನ್ಎಫ್ ಹಾಗೂ ದಲಿತ ಸಂವಾದ ಸಭೆ ► ಬೇಡಿಕೆಗೆ ಸ್ಪಂದಿಸಲು ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಎ.3. ಚುನಾವಣಾ ಹಿನ್ನಲೆಯಲ್ಲಿ ಶಿರಾಡಿ ಗ್ರಾಮದ ಪೆರಮಜಲು ಎಂಬಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿರಾಡಿ ಗ್ರಾಮ ಶಾಖಾ ವತಿಯಿಂದ ಜನಸ್ನೇಹಿ ಪೊಲೀಸ್ ಮತ್ತು ದಲಿತರ ಕುಂದುಕೊರತೆ ಸಭೆಯನ್ನು ಪೇರಮಜಲು ಎಂಬಲ್ಲಿ ಮಾ.29ರಂದು ಗ್ರಾಮ ಸಮಿತಿಯ ಸಂಘಟನಾ ಸಂಚಾಲಕರಾದ ಅಣ್ಣು ಎಂ. ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ದಲಿತರ ಕುಂದುಕೊರತೆಗಳ ಸಮಸ್ಯೆಗಳನ್ನು ಆಲಿಸಿ, ಮಾಹಿತಿ ನೀಡಿದ ಎಎನ್ಎಫ್ನ ಸಬ್ಇನ್ಸ್‌ಪೆಕ್ಟರ್ ಅನಿಲ್ ರಾಥೋಡ್ ಪೊಲೀಸ್ ಹಾಗೂ ಜನರಿಗೆ ನೇರ ಸಂಪರ್ಕ ಇರಬೇಕಾದ ಜನಸಂಪರ್ಕ ಸಭೆ ಇದಾಗಿದ್ದು

ಶಿರಾಡಿ ಪೇರಮಜಲು ಎಎನ್ಎಫ್ ಹಾಗೂ ದಲಿತ ಸಂವಾದ ಸಭೆ ► ಬೇಡಿಕೆಗೆ ಸ್ಪಂದಿಸಲು ಆಗ್ರಹ Read More »

ಕರಾವಳಿ

ಬಹು ನಿರೀಕ್ಷಿತ ಮರ್ಧಾಳ ಝರಿ ನೀರು ಕುಡಿಯುವ ನೀರಿನ ಯೋಜನೆ ನೇಪಥ್ಯಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಎ.3. ಸುಬ್ರಹ್ಮಣ್ಯ ಸಮೀಪದ ಬಿಸಿಲೆಘಾಟ್ನ ಅಡ್ಡಹೊಳೆಯಿಂದ ಕೊಳವೆ ಮುಖಾಂತರ ಕಡಬ ಭಾಗಕ್ಕೆ ಕುಡಿಯುವ ನೀರು ತರುವ ಸುಮಾರು 25 ಲಕ್ಷ ರೂ ವೆಚ್ಚದ ಬಹುನಿರೀಕ್ಷಿತ ಮರ್ಧಾಳ ಝರಿ ನೀರು ಕುಡಿಯುವ ನೀರಿನ ಯೋಜನೆ ನೇಪಥ್ಯಕ್ಕೆ ಸರಿದಿದೆ. ರಾಜ್ಯ ಹೆದ್ದಾರಿ 85 ರ ಬಳಿಯ ಬಿಸಿಲೆಘಾಟ್ನಿಂದ ನೀರು ತಂದು ಕಡಬ ಭಾಗದ ಶೇ 60 ಗ್ರಾಮಗಳಿಗೆ ಭರಪುರ ನೀರುಣಿಸಬಹುದಾದ ಬೃಹತ್ ಯೋಜನೆ ಅನುಷ್ಟಾನಕ್ಕೆ ಕಳೆದ ಎಂಟು ವರ್ಷಗಳಿಂದ ಪಟ್ಟ ಪ್ರಯತ್ನಗಳೆಲ್ಲವೂ ನೀರಿನಲ್ಲಿ ಇಟ್ಟ ಹೋಮದಂತಾಗಿದೆ. ಉದ್ದೇಶಿತ

ಬಹು ನಿರೀಕ್ಷಿತ ಮರ್ಧಾಳ ಝರಿ ನೀರು ಕುಡಿಯುವ ನೀರಿನ ಯೋಜನೆ ನೇಪಥ್ಯಕ್ಕೆ Read More »

ಕರಾವಳಿ

ಕುಂಬಳೆ ಇಸ್ಲಾಮಿಕ್ ಅಕಾಡಮಿ ಸನದುದಾನ: ಆತೂರುನಲ್ಲಿ ಪ್ರಚಾರ, ಜಾಥಾ ಸಮಾರೋಪ ►ಯೋಧ ಜುಬೇರ್ ಹಳೆನೇರೆಂಕಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.2. ಇಮಾಂ ಶಾಫಿ ಇಸ್ಲಾಮಿಕ್ ಅಕಾಡಮಿ ಕುಂಬಳೆ ಇದರ 10ನೇ ವಾರ್ಷಿಕ ಹಾಗೂ ಪ್ರಥಮ ವರ್ಷದ ಸನದುದಾನ ಸಮಾರಂಭ ಎಪ್ರಿಲ್ 10ರಿಂದ 15ರ ತನಕ ಕಂಬಳೆಯಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥ ಜಾಥಾ ಕಾರ್ಯಕ್ರಮ ಎ. 1ರಂದು ಆತೂರುನಲ್ಲಿ ಸಮಾಪನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಹಾದಿ ಅನಸ್ ತಂಙಳ್ ಮಾತನಾಡಿ 2008ರಲ್ಲಿ ಮುಸ್ಲಿಂ ಸಮುದಾಯದ ಬಡ ವಿದ್ಯಾರ್ಥಿಗಳಿಗಾಗಿ ಧಾರ್ಮಿಕ ಮತ್ತು ಲೌಖಿಕ ವಿದ್ಯಾಭ್ಯಾಸ ನೀಡುವ ಪರಿಕಲ್ಪನೆಯೊಂದಿಗೆ ಸಮಸ್ತ

ಕುಂಬಳೆ ಇಸ್ಲಾಮಿಕ್ ಅಕಾಡಮಿ ಸನದುದಾನ: ಆತೂರುನಲ್ಲಿ ಪ್ರಚಾರ, ಜಾಥಾ ಸಮಾರೋಪ ►ಯೋಧ ಜುಬೇರ್ ಹಳೆನೇರೆಂಕಿಗೆ ಸನ್ಮಾನ Read More »

ಕರಾವಳಿ

ಯುವವಾಹಿನಿ ಕೇಂದ್ರ ಸಮಿತಿ: ಕಡಬ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷ: ಯೋಗೀಶ್ ಕುಮಾರ್, ಕಾರ್ಯದರ್ಶಿ: ಮಿಥುನ್

(ನ್ಯೂಸ್ ಕಡಬ) newskadaba.com ಕಡಬ, ಎ.2. ಯುವಜನರಲ್ಲಿ ನಾಯಕತ್ವ ಗುಣ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಪಾಲನೆ, ಯುವಜನಾಂಗವನ್ನು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಸಂಘಟಿಸುವುದು ಸಮಾಜದಲ್ಲಿ ವಿಶಿಷ್ಟ ಕ್ಷೇತ್ರದಲ್ಲಿ ಸಾಧನೆಗೈದ ಸಮಾಜ ಭಾಂದವರನ್ನು ಗುರುತಿಸುವುದು, ಯುವ ಜನರ ಪ್ರತಿಭಾವಿಕಾಸನಕ್ಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನ ಹಾಗೂ ಉನ್ನತ ವ್ಯಾಸಂಗದ ಬಗ್ಗೆ ಮಾಹಿತಿ ನೀಡುವುದು, ಸಮಾಜದ ಪ್ರತಿಯೊಬ್ಬರಲ್ಲಿಯೂ ಏಕತೆ, ಸಮಗ್ರತೆ ಹಾಗೂ ಸಹೋದರತಾ ಭಾವನೆಯನ್ನು ಬೆಳೆಸುವುದು ಸಮಾಜದ ಯುವಜನತೆಗೆ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ, ಸ್ಪರ್ಧಾತ್ಮಕ ಹಾಗೂ

ಯುವವಾಹಿನಿ ಕೇಂದ್ರ ಸಮಿತಿ: ಕಡಬ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷ: ಯೋಗೀಶ್ ಕುಮಾರ್, ಕಾರ್ಯದರ್ಶಿ: ಮಿಥುನ್ Read More »

ಕರಾವಳಿ

ಆತೂರು: ಶ್ರೀ ಸದಾಶಿವ ಶ್ರೀ ಮಹಾಗಣಪತಿ ದೇವಳದ ಜಾತ್ರೋತ್ಸವ ದರ್ಶನ ಬಲಿ

  (ನ್ಯೂಸ್ ಕಡಬ) newskadaba.com ಕಡಬ, ಎ.2.  ಕಡಬ ತಾಲೂಕಿನ ಕೊೖಲ ಗ್ರಾಮದ ಆತೂರು ಶ್ರೀ ಸದಾಶಿವ ಮತ್ತು ಶ್ರೀ ಮಹಾಗಣಪತಿ ದೇವಳದ ವಾರ್ಷಿಕ ಜಾತ್ರೋತ್ಸವ ಅಂಗವಾಗಿ ಶನಿವಾರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಸಾಯಂಕಾಲ ಬಲಿಹೊರಟು ಉತ್ಸವ,  ಕೊೖಲ ಫಾರ್ಮ್ನಿಂದಾಗಿ ಆನೆಗುಂಡಿಯವರೆಗೆ ಸವಾರಿ, ಕೆರೆ ಉತ್ಸವ, ಕಟ್ಟೆ ಪುಜೆಗಳು, ದುಗಲಾಯಿ ದೈವದ ಭಂಡಾರ ತರುವುದು, ರಂಗಪುಜೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಾಗೇಶ್ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೇರವೇರಿತು. ಕಾರ್ಯಕ್ರಮದಲ್ಲಿ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ಉತ್ಸವ

ಆತೂರು: ಶ್ರೀ ಸದಾಶಿವ ಶ್ರೀ ಮಹಾಗಣಪತಿ ದೇವಳದ ಜಾತ್ರೋತ್ಸವ ದರ್ಶನ ಬಲಿ Read More »

ಕರಾವಳಿ

ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠೆ ಹಾಗೂ ಕಲಶಾಭಿಷೇಕ

(ನ್ಯೂಸ್ ಕಡಬ) newskadaba.com ಕಡಬ,ಮಾ.31. ಕುಂತೂರು ಗ್ರಾಮದ ಪೆರಾಬೆ ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ರಾಜನ್ ದೈವಸ್ಥಾನದಲ್ಲಿ ಎ.24ರಿಂದ ಎ.27ರವರೆಗೆ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ ಹಾಗೂ ರಾಜನ್ ದೈವ(ಶಿರಾಡಿ ದೈವ)ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ಕಲಶಾಭಿಷೇಕ ಕಾರ್ಯಕ್ರಮಗಳು ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಬೈಪಡಿತ್ತಾಯ ಮತ್ತು ಶ್ರೀ ಕೃಷ್ಣಪ್ರಸಾದ್ ಉಪಾಧ್ಯಾಯ ಅರ್ಬಿ ರವರ ನೇತೃತ್ವದಲ್ಲಿ ನವೀಕರಣ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದ್ದು ಜೀಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ನಡೆಯುತ್ತಿದೆ. ಶ್ರೀಕ್ಷೇತ್ರದ ಪರಿಚಯ ‘ಬೀರಂತಡ್ಕ’ ಹೆಸರೇ ಸೂಚಿಸುವಂತೆ ವೀರರ ಬಯಲು

ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠೆ ಹಾಗೂ ಕಲಶಾಭಿಷೇಕ Read More »

ಕರಾವಳಿ

ಕಡಬ: ಬೇರಿಕೆ ಕುರಿಯಾಳಕೊಪ್ಪ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ನೂಜಿಬಾಳ್ತಿಲ ಗ್ರಾಮದ ಬೇರಿಕೆಯಿಂದ ಕುರಿಯಾಳಕೊಪ್ಪ ಶ್ರೀಲಕ್ಷ್ಮೀ ಜನಾರ್ಧನ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ 13.5 ಲಕ್ಷ ವೆಚ್ಚದಲ್ಲಿ ಸುಮಾರು 300 ಮೀಟರ್ ಕಾಂಕ್ರಿಟಿಕರಣ ರಸ್ತೆಯ ಸೋಮವಾರ ಉದ್ಘಾಟನೆ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ ಉದ್ಘಾಟಿಸಿ ಮಾತನಾಡಿ, ಜಿ.ಪಂ.ಅನುದಾನದೊಂದಿಗೆ ಗ್ರಾ.ಪಂ. ಹಾಗೂ ಉದ್ಯೋಗ ಖಾತರಿ ಯೋಜನೆ ಅನುದಾನವನ್ನು ಹೊಂದಿಸಿಕೊಂಡು ಸುಮಾರು 13.5 ಲಕ್ಷ ಅನುದಾನದಲ್ಲಿ ಅತ್ಯುತ್ತಮ ಕಾಂಕ್ರೀಟಿ ರಸ್ತೆಯನ್ನು ನಿರ್ಮಿಸಲಾಗಿದೆ. ಹಲವಾರು ವರ್ಷಗಳ ಬೇಡಿಕೆಯಾಗಿರುವ ಈ ರಸ್ತೆಯು ಇನ್ನೂ ದೇವಸ್ಥಾನದವರೆಗೆ ಅಭಿವೃದ್ದಿಯಾಗಬೇಕಾಗಿದ್ದು ಮುಂದಿನ

ಕಡಬ: ಬೇರಿಕೆ ಕುರಿಯಾಳಕೊಪ್ಪ ಕಾಂಕ್ರೀಟಿಕರಣ ರಸ್ತೆ ಉದ್ಘಾಟನೆ Read More »

ಕರಾವಳಿ

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಚುನಾವಣಾ ಪ್ರಮಾಣ ವಚನ ಬೋಧನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28.  ಮುಂಬರುವ ಚುನಾವಣೆಯಲ್ಲಿ ಗ್ರಾಮ ಮಟ್ಟದಲ್ಲಿ  ಶೇ.100 ಮತದಾನ ಮಾಡುವ ಬಗ್ಗೆ ಕಲ್ಲುಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಮತದಾನದ ಜಾಗೃತಿ ಮೂಡಿಸುವ ಬಗ್ಗೆ ಪ್ರಮಾಣ ವಚನ ಬೋಧಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖಾ ಕಡಬ ವಲಯ ಮೇಲ್ವಿಚಾರಕಿ ಹೇಮ ರಾಮ್ದಾಸ್ ಪ್ರಮಾಣವಚನ ಬೋಧಿಸಿದರು. ಗ್ರಾ.ಪಂ.ಅಧ್ಯಕ್ಷ ಸದಾನಂದ ಗೌಡ, ಸದಸ್ಯೆ ರಜಿತಾಪದ್ಮನಾಭ ಕೇಪುಂಜ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಆನಂದ, ಸ್ತ್ರೀಶಕ್ತಿ ಮಹಿಳೆಯರಾದ ಉಮಾವತಿ ರೈ, ಡೀಕಮ್ಮ ಜಾಲು, ರತ್ನಾವತಿ, ಲೀಲಾವತಿ, ರೇವತಿ, ಖತೀಜ ನೀರಾರಿ, ಮಮ್ತಾಜ್,

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಚುನಾವಣಾ ಪ್ರಮಾಣ ವಚನ ಬೋಧನೆ Read More »

ಕರಾವಳಿ

ಕಡಬದಲ್ಲಿ ಏಕಾಹ ಭಜನೋತ್ಸವ ► ಸಾಮೂಹಿಕ ಸಂಕೀರ್ತನೆಯಿಂದ ಹೆಚ್ಚಿನ ಫಲ ಪ್ರಾಪ್ತಿ: ಸುಬ್ರಹ್ಮಣ್ಯ ಶ್ರೀ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಹಿಂದಿನ ಕಾಲದಲ್ಲಿ ದೇವರನ್ನು ಒಲಿಸಿಕೊಳ್ಳಲು ಕಠಿಣ ತಪಸ್ಸು, ಯಾಗ ಯಜ್ಞಾದಿಗಳನ್ನು ಮಾಡಬೇಕಿತ್ತು. ಆದರೆ ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಸಂಕೀರ್ತನೆ ಸುಲಭಮಾರ್ಗ. ಅದರಲ್ಲಿಯೂ ಸಾಮೂಹಿಕ ಸಂಕೀರ್ತನೆಯಿಂದ ಹೆಚ್ಚಿನ ಫಲ ಪ್ರಾಪ್ತಿಯಾಗಲು ಸಾಧ್ಯ ಎಂದು ಸುಬ್ರಹ್ಮಣ್ಯದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ 57ನೇ ವರ್ಷದ ಏಕಾಹ ಭಜನೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಭಜನೆ ಎಂಬುದು ದೇವರನ್ನು ಸಂತೃಪ್ತಿ ಪಡಿಸಲು ಇರುವ ಅತ್ಯಂತ

ಕಡಬದಲ್ಲಿ ಏಕಾಹ ಭಜನೋತ್ಸವ ► ಸಾಮೂಹಿಕ ಸಂಕೀರ್ತನೆಯಿಂದ ಹೆಚ್ಚಿನ ಫಲ ಪ್ರಾಪ್ತಿ: ಸುಬ್ರಹ್ಮಣ್ಯ ಶ್ರೀ Read More »

ಕರಾವಳಿ
Scroll to Top