ನ್ಯೂಸ್ ಕಡಬ

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ನ.6. ಬೋಟ್ ಚಾಲಕನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಮ್ಯಾಂಗನೀಸ್ ರಸ್ತೆಯ ಸಮೀಪ ನಡೆದಿದೆ. ಮೃತ ಯುವಕನನ್ನು ಕುಂದಾಪುರ ನಿವಾಸಿ ಉಮೇಶ ಮೋಗವೀರ (32) ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ಬೋಟ್ ಚಾಲಕನಾಗಿದ್ದು, ಮ್ಯಾಂಗನೀಸ್ ಬೋಟ್ ಕಟ್ಟುವ ಸ್ಥಳದಲ್ಲಿ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೇಣು ಹಾಕಿ ಯಾರೋ ಕೊಲೆ ಮಾಡಿದ್ದಾರೆಂದು  ಕುಟುಂಬಸ್ಥರು ಆರೋಪಿಸಿದ್ದು ಇದರ ಬಗ್ಗೆ ಸೂಕ್ತ ತನಿಖೆಗಾಗಿ ಆಗ್ರಹಿಸಿದ್ದಾರೆ. ಗಂಗೊಳ್ಳಿ […]

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ Read More »

ಕರಾವಳಿ

ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯುತ್ತಿರುವಾಗಲೇ ► ಬಂಟ್ವಾಳದ ಸ್ಪರ್ಧಿ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ.6. ವ್ಯಕ್ತಿಯೋರ್ವ ದೇಹದಾರ್ಢ್ಯ ಸ್ಪರ್ಧೆಯಲ್ಲಿ‌ ಭಾಗವಹಿಸುತ್ತಿರುವಾಗಲೇ ಕುಸಿದು ಬಿದ್ದಿದ್ದು, ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಬಂಟ್ವಾಳ ತಾಲೂಕು ಫರಂಗಿಪೇಟೆಯ ವಿನಯರಾಜ್ (34) ಮೃತಪಟ್ಟವರು. ಭಾನುವಾರ ರಾತ್ರಿ ಅಮೆಚೂರು ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ಡಾನ್ ಬಾಸ್ಕೊ ಸಭಾಂಗಣದಲ್ಲಿ ಏರ್ಪಡಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ‌ ವಿನಯರಾಜ್ ಕೂಡಾ ಸ್ಪರ್ಧಿಸಿದ್ದರು. ಪವರ್ ಲಿಫ್ಟರ್ ಆಗಿದ್ದ ವಿನಯರಾಜ್ ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ‌ ಭಾಗವಹಿಸಿದ್ದರು. ಪ್ರದರ್ಶನ ನೀಡುತ್ತಿದ್ದಂತೆ

ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯುತ್ತಿರುವಾಗಲೇ ► ಬಂಟ್ವಾಳದ ಸ್ಪರ್ಧಿ ಕುಸಿದು ಬಿದ್ದು ಮೃತ್ಯು Read More »

ಕರಾವಳಿ

ದ.ಕ.ಜಿಲ್ಲಾ ಯುವಜನ ಒಕ್ಕೂಟ ವತಿಯಿಂದ ► ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಸವಣೂರು, ನ.6. ದ.ಕ.ಜಿಲ್ಲಾ ಯುವಜನ ಒಕ್ಕೂಟದ ಮನವಿಯನ್ನು ಪುರಸ್ಕರಿಸಿ ಯುವಜನ ಮೇಳ, ಯುವಜನೋತ್ಸವ, ಯುವಸಮ್ಮೇಳನ ಕಾರ್ಯಾಗಾರವನ್ನು ಪ್ರತ್ಯೇಕವಾಗಿ ಆಯೋಜಿಸಲು ಕ್ರಮಕೈಗೊಂಡು ಯುವಜನರ ಬೇಡಿಕೆಯನ್ನು ಈಡೇರಿಸಿದಕ್ಕಾಗಿ ದ.ಕ.ಜಿಲ್ಲಾ ಯುವಜನ ಒಕ್ಕೂಟದ ವತಿಯಿಂದ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಮೀನುಗಾರಿಕಾ ಸಚಿವರಾದ ಪ್ರಮೋದ್ ಮಧ್ವರಾಜ್ ಅವರನ್ನು ಉಡುಪಿಯಲ್ಲಿ ಬೇಟಿಯಾಗಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭ ಪುತ್ತೂರು ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗಾಗಿ ಮಂಜೂರುಗೊಳಿಸಿದ ಅನುದಾನವನ್ನು ಬಿಡುಗಡೆ ಮಾಡುವಂತೆಯೂ ಕೇಳಿಕೊಳ್ಳಲಾಯಿತು. ಈ ಸಂಧರ್ಭ ದ.ಕ.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ

ದ.ಕ.ಜಿಲ್ಲಾ ಯುವಜನ ಒಕ್ಕೂಟ ವತಿಯಿಂದ ► ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಅಭಿನಂದನೆ Read More »

ಕರಾವಳಿ

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ನ.4. ಮದ್ಯಾಹ್ನದ ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ಹಾಕಿದ ಕಲ್ಲಡ್ಕ ಶಾಲೆಯ ಮಕ್ಕಳು ಇದೀಗ ತಾವೇ ಭತ್ತ ಬೆಳೆದು ತಮ್ಮ ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಶಾಲೆಯ ಮಕ್ಕಳಿಗೆ ಬರುತ್ತಿದ್ದ ಅನ್ನದಾನದ ಅನುದಾನವನ್ನು ಆಗಸ್ಟ್ ತಿಂಗಳಲ್ಲಿ ಸರ್ಕಾರ ಕಿತ್ತುಕೊಂಡಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ಕಲ್ಲಡ್ಕ ಶಾಲೆಯ ಮಕ್ಕಳು ಶಾಲೆಗೆ ಸೇರಿದ ಸುಮಾರು ಏಳು ಎಕರೆ ಗದ್ದೆಯಲ್ಲಿ ತಾವೇ ಭತ್ತದ ಪೈರು ನಾಟಿ

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು Read More »

ಕರಾವಳಿ

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು , ನ.4. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಗಟ್ಟಿಯಿರುವ ಬ್ಯಾಗೊಂದು ಪತ್ತೆಯಾದ ಘಟನೆ ವರದಿಯಾಗಿದೆ. ದುಬೈಯಿಂದ ಮಂಗಳೂರಿಗೆ ತಲುಪಿದ್ದ ಸ್ಪೈಸ್ ಜೆಟ್ ಎಸ್.ಜಿ.60ರಲ್ಲಿ ಬಂದಿದ್ದ ಪ್ರಯಾಣಿಕನೊಬ್ಬ ಈ ಬ್ಯಾಗನ್ನು ಬಿಟ್ಟು ಹೋಗಿದ್ದು, ಸ್ವಚ್ಛತಾ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸುವ ಸಂದರ್ಭ ಈ ಬ್ಯಾಗನ್ನು ಕಂಡಿದ್ದು, ಸಂಬಂಧಪಟ್ಟವರಿಗೆ ತಿಳಿಸಿದ್ದಾರೆ. ಕಂದಾಯ ಗುಪ್ತಚರ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕ ಆಗಮಿಸಿ, ಪರಿಶೀಲನೆ ನಡೆಸಿದಾಗ 1.166 ಗ್ರಾಂ.ವಿದೇಶಿ ಮೂಲದ ಚಿನ್ನದ ಬಿಸ್ಕತ್ತುಗಳಿರುವುದು ಬೆಳಕಿಗೆ ಬಂದಿದೆ. ಇಪ್ಪತ್ತನಾಲ್ಕು ಕ್ಯಾರೆಟ್

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!! Read More »

ಕರಾವಳಿ

ಸ್ನೇಹಿತರೊಂದಿಗೆ ಮ್ಯೂಸಿಕ್ ಪಾರ್ಟಿ ಮಾಡಬೇಕೆ…??? ►ಹಾಗಾದರೆ ಈ ಆ್ಯಪ್ ಡೌನ್‌ಲೋಡ್ ಮಾಡಿ…!!!

(ನ್ಯೂಸ್ ಕಡಬ) newskadaba.com ಕಡಬ, ನ.4.  ಸ್ನೇಹಿತರೊಂದಿಗೆ ಸಂಗೀತವನ್ನು ಪ್ಲೇ ಮಾಡಿ ಪಾರ್ಟಿ ಖುಷಿ ಹೆಚ್ಚಿಸ ಬೇಕೆ..??  ಏಕಕಾಲದಲ್ಲಿ  ಉಚ್ಛ ಸ್ವರದಲ್ಲಿ ನಿಮ್ಮ ಹ್ಯಾಂಡ್ ಸೆಟ್‌ನಲ್ಲಿ ಯೂಟ್ಯೂಬ್, ಸ್ಪಾಟಿಫೈ, ಸೌಂಡ್‌ಕ್ಲೌಡ್ ಅಥವಾ ಮ್ಯೂಸಿಕ್ ಲೈಬ್ರೆರಿಯಲ್ಲಿ ಸಂಗೀತವನ್ನು ಪ್ಲೇ ಮಾಡಿ ಪಾರ್ಟಿಯಲ್ಲಿ ಕುಣಿಯಲು ನೆರವಾಗುವ  ‘ಪಾರ್ಟಿ ಮ್ಯೂಸಿಕ್ ಆ್ಯಪ್’ ಬಂದಿದೆ. ಹೌದು ಈ ಆ್ಯಪ್ ಹೆಸರು “ಆ್ಯಂಪ್‌ಮಿ” ಅಂತ. ಈ ‘ಆ್ಯಂಪ್‌ಮಿ’ ಆ್ಯಪ್ ನಲ್ಲಿ ಜೈಂಟ್ ಮಲ್ಟಿ ಸ್ಪೀಕರ್ ಸೆಟಪ್ ಸಹಾಯದಿಂದ ಮೊಬೈಲ್ ಫೋನ್ ಹಾಗೂ ಬ್ಲೂಟೂಥ್ ಸ್ಪೀಕರ್ ಬಳಸಿ

ಸ್ನೇಹಿತರೊಂದಿಗೆ ಮ್ಯೂಸಿಕ್ ಪಾರ್ಟಿ ಮಾಡಬೇಕೆ…??? ►ಹಾಗಾದರೆ ಈ ಆ್ಯಪ್ ಡೌನ್‌ಲೋಡ್ ಮಾಡಿ…!!! Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ನ.3. ಸುಳ್ಯದಲ್ಲಿ ನಡೆಯುವ ನವಕರ್ನಾಟದ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯನ್ನು ಯಶಸ್ಸುಗೊಳಿಸಲು ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಸನ್ನದ್ದರಾಗಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಕಡಬದ ಅನುಗ್ರಹ ಸಭಾಭವನದಲ್ಲಿ ನಡೆದ ಸುಳ್ಯ ಮಂಡಲದ ನೆಲ್ಯಾಡಿ ಮತ್ತು ಕಡಬ ಶಕ್ತಿ ಕೇಂದ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಶುದ್ದಾಚಾರದ ಆಡಳಿತ ನೀಡಲು ಬಿಜೆಪಿಯನ್ನು ಗೆಲ್ಲಿಸಬೇಕು, ರಾಜ್ಯದ ಜನತೆ ಅಪೇಕ್ಷೀಸಿದಂತೆ ಕಾರ್ಯಕರ್ತರು ಕಾಂಗ್ರೆಸ್ಸ್‌ ಸರಕಾರದ ದುರಾಡಳಿತವನ್ನು ಹಾಗೂ ಕೇಂದ್ರ ಸರಕಾರದ

ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ Read More »

ಕರಾವಳಿ

ಗೂಗಲ್ ನಕ್ಷೆಯಲ್ಲಿ ಕನ್ನಡ ಬಳಕೆ ► ಸಂತಸ ವ್ಯಕ್ತಪಡಿಸಿದ ಕನ್ನಡಿಗರು

(ನ್ಯೂಸ್ ಕಡಬ) newskadaba.com ಕಡಬ, ನ.3. ಗೂಗಲ್ ನಕ್ಷೆಯಲ್ಲಿ ಈಗ ಸ್ಥಳಗಳ ಹೆಸರು ಇಂಗ್ಲಿಷ್‍‌ನಲ್ಲಿ ಮಾತ್ರ ಅಲ್ಲ ಕನ್ನಡದಲ್ಲಿಯೂ ಲಭ್ಯವಿದೆ. ಇಲ್ಲಿಯವರೆಗೆ ಗೂಗಲ್ ಮ್ಯಾಪ್‍ನಲ್ಲಿ ಸ್ಥಳಗಳ ಹೆಸರು ಇಂಗ್ಲಿಷ್‍ನಲ್ಲಿ ಮಾತ್ರ ಕಾಣುತ್ತಿತ್ತು. ಇದೀಗ ಇಂಗ್ಲಿಷ್ ಜತೆಗೆ ಕನ್ನಡದಲ್ಲಿಯೂ ಸ್ಥಳದ ಹೆಸರನ್ನು ಓದಬಹುದು. ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕನ್ನಡಿಗರಿಗೊಂದು ಸಂತೋಷದ ಸುದ್ದಿ ಇದಾಗಿದೆ. ಆಯಾ ಪ್ರಾಂತೀಯ ಭಾಷೆ ನಕ್ಷೆಯಲ್ಲಿ ಕಾಣಿಸಿಕೊಳ್ಳಲಿದೆ. ಗೂಗಲ್‌ನ ಈ ಕ್ರಮವನ್ನು ಪ್ರಶಂಸಿಸಿ, ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಸಂತೋಷ ವ್ಯಕ್ತಪಡಿಸಿ, ಗೂಗಲ್‌ಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಗೂಗಲ್ ನಕ್ಷೆಯಲ್ಲಿ ಕನ್ನಡ ಬಳಕೆ ► ಸಂತಸ ವ್ಯಕ್ತಪಡಿಸಿದ ಕನ್ನಡಿಗರು Read More »

ಕರಾವಳಿ

ಪುತ್ತೂರು: ಕೆ.ಪಿ.ಎಲ್.ಇ ಕಾಯಿದೆ ತಿದ್ದುಪಡಿ ವಿರೋದಿಸಿ ಖಾಸಗಿ ವೈದ್ಯರ ಮುಷ್ಕರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.03. ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಖಾಸಗಿ ಆಸ್ಪತ್ರೆಯ ವೈದ್ಯರು ರಾಜ್ಯ ಸರಕಾರದ ವಿರುದ್ಧ ಕೈಗೊಂಡ ಮುಷ್ಕರದಿಂದಾಗಿ ಪುತ್ತೂರಿನ ಎಲ್ಲಾ ಖಾಸಗಿ ಆಸ್ಪತ್ರೆಗಳು ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಿತು.  

ಪುತ್ತೂರು: ಕೆ.ಪಿ.ಎಲ್.ಇ ಕಾಯಿದೆ ತಿದ್ದುಪಡಿ ವಿರೋದಿಸಿ ಖಾಸಗಿ ವೈದ್ಯರ ಮುಷ್ಕರ Read More »

ಕರಾವಳಿ

ತುಳು ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ►ಜೈ ತುಳುನಾಡು ಸಂಘಟನೆ ವತಿಯಿಂದ ಟ್ವೀಟ್ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.3. ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಮಂಗಳೂರಿನ ಜೈ ತುಳುನಾಡು ಸಂಘಟನೆಯ ವತಿಯಿಂದ 1 ಲಕ್ಷ ಟ್ವೀಟ್ ಅಭಿಯಾನವನ್ನು ನಡೆಸಲಾಯಿತು.   ಕರಾವಳಿ ಜಿಲ್ಲೆಯನ್ನು ಪ್ರತ್ಯೇಕ ತುಳುರಾಜ್ಯವಾಗಿ ಪರಿಗಣಿಸುವಂತೆ ಗಮನ ಸೆಳೆಯಲು ಕಪ್ಪು ದಿನವನ್ನಾಗಿ ಘೋಷಿಸಿ ಇನ್ನೊಂದು 1 ಲಕ್ಷ ಟ್ವೀಟ್ ಗುರಿಯನ್ನು ಅಭಿಯಾನವನ್ನು ಜೋಡಿಸಲಾಯಿತು. ಒಂದೇ ದಿನ 2 ಲಕ್ಷ ಟ್ವೀಟ್‌’ಗಳು ಟ್ರೆಂಡ್

ತುಳು ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ►ಜೈ ತುಳುನಾಡು ಸಂಘಟನೆ ವತಿಯಿಂದ ಟ್ವೀಟ್ ಅಭಿಯಾನ Read More »

ಕರಾವಳಿ
Scroll to Top