ನ್ಯೂಸ್ ಕಡಬ

ಮಂಗಳೂರು: ಹೋಟೆಲ್ ಶೌಚಾಲಯ ಬಳಕೆಕೆ ಆಕ್ಷೇಪಣೆ ► ತಂಡದಿಂದ ಮಾರಣಾಂತಿಕ ಹಲ್ಲೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.13. ಹೋಟೆಲ್ ನ ಶೌಚಾಲಯವನ್ನು ಉಪಯೋಗಿಸಲು ಆಕ್ಷೇಪಿಸಿದ ಹೋಟೆಲ್ ಮ್ಯಾನೇಜರ್ ಗೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸರ್ಕಾರಿ ಬಸ್ ನಿಲ್ದಾಣದ ಮುಂದಿರುವ ಪಂಚಮಿ ಹೋಟೆಲ್ ಶೌಚಾಲಯವನ್ನು ಸಮೀಪದ ಮೊಬೈಲ್ ಸರ್ವಿಸ್ ಅಂಗಡಿಯ ಸಿಬ್ಬಂದಿಗಳು ಬಳಸುತ್ತಿದ್ದುದನ್ನು ಆಕ್ಷೇಪಿಸಿದ ಹೋಟೆಲ್ ಮ್ಯಾನೇಜರ್ ಪ್ರಸನ್ನ ಎಂಬುವರ ಮೇಲೆ ಆರು ಮಂದಿ ಯುವಕರ ತಂಡವೊಂದು ದಾಳಿ ನಡೆಸಿದೆ. ತಡೆಯಲು ತೆರಳಿದ ಸೆಕ್ಯೂರಿಟಿ ಸಿಬ್ಬಂದಿಗೆ ಮೇಲೂ ತಂಡ ಹಲ್ಲೆ ನಡೆಸಿದೆ. ಈ ಸಂದರ್ಭದಲ್ಲಿ ಹೋಟೆಲ್ […]

ಮಂಗಳೂರು: ಹೋಟೆಲ್ ಶೌಚಾಲಯ ಬಳಕೆಕೆ ಆಕ್ಷೇಪಣೆ ► ತಂಡದಿಂದ ಮಾರಣಾಂತಿಕ ಹಲ್ಲೆ Read More »

ಕರಾವಳಿ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ ► ಡಾ|| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.13. ಕಾಲಚಕ್ರ ವೇಗವಾಗಿ ಚಲಿಸುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಮುಗಿದ ದೀಪಾವಳಿ ಪುನಃ ಬಂದೇ ಬಿಟ್ಟಿತು. ದೀಪಾವಳಿ ಎಂದಾಕ್ಷಣ ನಮಗೆ ನೆನಪಾಗುವುದು ಸಾಲು ಸಾಲು ದೀಪಗಳು, ಸಿಡಿಮದ್ದುಗಳು, ರಾಕೆಟ್ಗಳು ಬಾಣ ಬಿರುಸುಗಳು. ಎಲ್ಲೆಲ್ಲೂ ಸಂಭ್ರಮದ ಸಡಗರದ ವಾತಾವರಣ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವ ಪರ್ವಕಾಲ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು ಎಂಬತ್ತರ ಆಸುಪಾಸಿನ ಮುದುಕರಿಗೂ ಎಲ್ಲಿಲ್ಲದ ಸಂಭ್ರಮ. ಮಕ್ಕಳಿಗೆ ಸುರು ಸುರುಕಡ್ಡಿ ಮತ್ತು ಹೂಕುಂಡದ ಬೆಳಕಿನ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ ► ಡಾ|| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ Read More »

ವಿಶೇಷ ಲೇಖನಗಳು

ಇನ್ನು ಮುಂದೆ ವಧು-ವರರು ವಿವಾಹ ಮಂಟಪದಲ್ಲೇ ವಚನ ನೀಡುವ ಹೊಸ ಯೋಜನೆ ಜಾರಿ ► ವಚನದಲ್ಲಿ ಏನಿದೆ ತಿಳಿಯಬೇಕೆ..???

(ನ್ಯೂಸ್ ಕಡಬ) newskadaba.com ಸಿಕಾರ್, ಅ.12. ಹಿಂದು ವಿವಾಹದ ವೇಳೆ ನೂತನ ವಧು-ವರರು ಅಗ್ನಿ ಕುಂಡದ ಸುತ್ತಲೂ 7 ಸುತ್ತು ಸುತ್ತಿ ಸಪ್ತಪದಿ ತುಳಿಯುವುದು ತಲೆತಲಾಂತರಗಳಿಂದಲೂ ನಡೆದು ಬಂದ ಸಂಪ್ರದಾಯ. ಆದರೆ ರಾಜಸ್ಥಾನದಲ್ಲಿ ಇನ್ನು ಮುಂದೆ ನಡೆಯುವ ವಿವಾಹದಲ್ಲಿ ನೂತನ ವಧು-ವರರು ಅಗ್ನಿಕುಂಡದ ಸುತ್ತಲೂ 7ರ ಬದಲು 8 ಸುತ್ತು ಹಾಕಿ ಸಪ್ತಪದಿ ಬದಲು ಅಷ್ಟಪದಿ ತುಳಿಯುವಂತೆ ರಾಜಸ್ಥಾನದ ಸಿಕಾರ್ ಜಿಲ್ಲಾಡಳಿದ ಅರ್ಚಕರಿಗೆ ಮನವಿ ಮಾಡಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಪ್ರತಿ 100 ಗಂಡು ಮಕ್ಕಳಿಗೆ 90 ಹೆಣ್ಣು ಮಕ್ಕಳು ಮಾತ್ರ

ಇನ್ನು ಮುಂದೆ ವಧು-ವರರು ವಿವಾಹ ಮಂಟಪದಲ್ಲೇ ವಚನ ನೀಡುವ ಹೊಸ ಯೋಜನೆ ಜಾರಿ ► ವಚನದಲ್ಲಿ ಏನಿದೆ ತಿಳಿಯಬೇಕೆ..??? Read More »

ರಾಷ್ಟ್ರೀಯ ನ್ಯೂಸ್

ಉಳ್ಳಾಲ: ವಾಚು, ಚಪ್ಪಲಿ, ಕನ್ನಡಕ, ಸೇತುವೆ ಮೇಲಿಟ್ಟು ► ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಕಡಬ,ಅ12. ಅಪರಿಚಿತ ವ್ಯಕ್ತಿಯೊರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಉಳ್ಳಾಲ ಸಮೀಪ  ಬೆಳಕಿಗೆ ಬಂದಿದೆ. ಅಪರಿಚಿತ ವ್ಯಕ್ತಿ ತನ್ನ ವಾಚು, ಚಪ್ಪಲಿ, ಕನ್ನಡಕ, ನೇತ್ರಾವತಿ ಸೇತುವೆಯ ಮೇಲಿಟ್ಟು ನದಿಗೆ ಹಾರಿದ್ದಾನೆ. ದಾರಿಯಲ್ಲಿ ಸಾಗುವ ವಾಹನ ಚಾಲಕರು ವ್ಯಕ್ತಿಯನ್ನು ತಡೆಯಲು ಮುಂದಾಗುತ್ತಿದ್ದಂತೆ ನದಿಗೆ ಹಾರಿದ್ದಾನೆ ಎನ್ನಲಾಗಿದೆ. ಈ ಕುರಿತು ಉಳ್ಳಾಲ ಠಾಣೆಗೆ ಮಾಹಿತಿ ನೀಡಲಾಗಿದ್ದು, ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಳ್ಳಾಲ: ವಾಚು, ಚಪ್ಪಲಿ, ಕನ್ನಡಕ, ಸೇತುವೆ ಮೇಲಿಟ್ಟು ► ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಬ್ಯಾಟರಿ ಕಳಚಿದ ಕೂಡಲೇ ರೆಡ್‌ಮೀ ಮೊಬೈಲ್ ಬ್ಲಾಸ್ಟ್ ..!!! ► ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

(ನ್ಯೂಸ್ ಕಡಬ) newskadaba.com ತುಮಕೂರು, ಅ.12. ಹೊಸ ರೆಡ್‌ಮೀ ಮೊಬೈಲೊಂದು ಇದ್ದಕಿದ್ದಂತೆ ಬ್ಲಾಸ್ಟ್ ಆದ ಘಟನೆ ನಗರದ ಟೌನ್‌ಹಾಲ್ ಸರ್ಕಲ್‌ ನಲ್ಲಿ ನಡೆದಿದೆ.‌ ಗ್ರಾಹಕರೊಬ್ಬರು ಹೊಸ ಮೊಬೈಲ್ ತೆಗೆದುಕೊಂಡು ಅದಕ್ಕೆ ಸ್ಕ್ರೀನ್ ಗಾರ್ಡ್ ಹಾಕಿಸುವ ಸಲುವಾಗಿ ಟೌನ್‌ಹಾಲ್ ಸರ್ಕಲ್‌ನಲ್ಲಿರುವ ಪ್ರದೀಪ್ ಎಂಬುವವರ ಮೊಬೈಲ್ ಶಾಪಿಗೆ ಬಂದಾಗ ಈ ಘಟನೆ ನಡೆದಿದೆ. ಮೊಬೈಲ್‌ನಲ್ಲಿದ್ದ ಬ್ಯಾಟರಿ ಕಳಚಿದ ಕೂಡಲೇ ಮೊಬೈಲ್ ಸ್ಫೋಟಗೊಂಡಿದ್ದು ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೆಡ್‌ಮೀ ಚೀನಾ ತಯಾರಿಕೆಯ ಮೊಬೈಲ್ ಆಗಿದ್ದು, ಈ ಹಿಂದೆಯೂ ಅನೇಕ ಬಾರಿ ಮೊಬೈಲ್ ಸ್ಪೋಟಗೊಂಡಿರುವ ಬಗ್ಗೆ

ಬ್ಯಾಟರಿ ಕಳಚಿದ ಕೂಡಲೇ ರೆಡ್‌ಮೀ ಮೊಬೈಲ್ ಬ್ಲಾಸ್ಟ್ ..!!! ► ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ Read More »

ಕರಾವಳಿ

ಲೋಕಸಭಾ ಚುನಾವಣಾ ವೇಳೆ ನೀತಿ ಸಂಹಿತೆ ಉಲ್ಲಂಘನೆ ► ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧದ ಎಫ್ಐಆರ್ ರದ್ದು.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. 2014ರ ಲೋಕಸಭಾ ಚುನಾವಣಾ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧ ಹಾಕಲಾಗಿದ್ದ ಎಫ್ಐಆರ್ ಅನ್ನು  ಹೈಕೋರ್ಟ್ ನ್ಯಾ. ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠದಿಂದ ರದ್ದುಗೊಳಿಸಿದೆ. ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ  ಜೆಎಂಎಫ್ ಸಿ ನ್ಯಾಯಾಲಯದಲ್ಲಿ  ಸದಾನಂದ ಗೌಡ ಅವರು ಅರ್ಜಿ ಸಲ್ಲಿಸಿದ್ದರು. ಚುನಾವಣೆ ಪ್ರಚಾರ ಅವಧಿ ಮುಗಿದ ಮೇಲೂ ಪ್ರಚಾರ ಮಾಡಿದರು ಎಂದು ಆರೋಪಿಸಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಫ್ಐಆರ್

ಲೋಕಸಭಾ ಚುನಾವಣಾ ವೇಳೆ ನೀತಿ ಸಂಹಿತೆ ಉಲ್ಲಂಘನೆ ► ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧದ ಎಫ್ಐಆರ್ ರದ್ದು.!! Read More »

ಕರಾವಳಿ

ಖರೀದಿಸಿದ ಎರಡೇ ತಿಂಗಳಲ್ಲಿ ಕೆಟ್ಟು ಹೋದ ಮಗನ ಹೊಸ ಬೈಕ್ ► ಶೋ ರೂಮ್ ಮುಂದೆ ವಿಷ ಕುಡಿದ ತಾಯಿ..!!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ಎರಡು ತಿಂಗಳ ಹಿಂದೆಯಷ್ಟೇ ಖರೀದಿಸಿದ ಮಗನ ಹೊಸ ಬೈಕನ್ನು ಎಕ್ಸ್ ಚೇಂಜ್ ಮಾಡಿಕೊಡಲು ಶೋ ರೂಮ್ ಸಿಬ್ಬಂದಿ ನಿರಾಕರಿಸಿದ್ದಕ್ಕಾಗಿ ಮನನೊಂದ ತಾಯಿಯು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಕಸ್ತೂರ್ ಬಾ ರಸ್ತೆಯ ಖಿವ್ ರಾಜ್ ಮೋಟರ್ಸ್ ಶೋ ರೂಮಿನಲ್ಲಿ ನಡೆದಿದೆ. ಸರೋಜಮ್ಮ ಆತ್ಮಹತ್ಯೆಗೆ ಯತ್ನಿಸಿದ ತಾಯಿ. ಸರೋಜಮ್ಮರ ಮಗ ಶ್ರೀಪಾದ ರಾಘವ್ ಎರಡು ತಿಂಗಳ ಹಿಂದೆ ಕಸ್ತೂರ್ ಬಾ ರಸ್ತೆಯ ಖಿವ್ ರಾಜ್ ಮೋಟರ್ಸ್ ಶೋ ರೂಮಿನಿಂದ ಡೋಮಿನರ್ 400 ಸಿಸಿ

ಖರೀದಿಸಿದ ಎರಡೇ ತಿಂಗಳಲ್ಲಿ ಕೆಟ್ಟು ಹೋದ ಮಗನ ಹೊಸ ಬೈಕ್ ► ಶೋ ರೂಮ್ ಮುಂದೆ ವಿಷ ಕುಡಿದ ತಾಯಿ..!!! Read More »

ಕರ್ನಾಟಕ

ರಾಜ್ಯಸರಕಾರದ ಹಿಂದೂ ವಿರೋಧಿ ದೋರಣೆಯನ್ನು ಖಂಡಿಸಿ ► ತಾಲೂಕಿನಾದ್ಯಂತ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.11. ರಾಜ್ಯ ಸರಕಾರದ ಹಿಂದು ವಿರೋಧಿ ದೋರಣೆಯನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ, ವಿಶ್ವಹಿಂದು ಪರಿಷತ್ ಬಜರಂಗಳದ ವತಿಯಿಂದ ಬುಧವಾರ ಪುತ್ತೂರು ತಾಲೂಕಿನಾದ್ಯಂತ ಏಕಕಾಲದಲ್ಲಿ ಪ್ರತಿಭಟನೆ ನಡೆಯಿತು. ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಕಾವು, ಕುಂಬ್ರ, ಬೆಟ್ಟಂಪಾಡಿ, ಕಬಕ, ಸವಣೂರು, ಕಾಣಿಯೂರು, ಪುರುಷರಕಟ್ಟೆ, ಕೋಡಿಂಬಾಡಿ, ಉಪ್ಪಿನಂಗಡಿ, ಆಲಂಕಾರು, ಕಡಬ ಹಾಗೂ ನೆಲ್ಯಾಡಿಯಲ್ಲಿ ಹಿಂದೂ ಜಾಗರಣಾ ವೇದಿಕೆ, ವಿಶ್ವಹಿಂದು ಪರಿಷತ್ ಬಜರಂಗಳದ ಪ್ರತಿಭಟನೆ ನಡೆಸಿದರು. ಪುತ್ತೂರು ಬಸ್ ನಿಲ್ದಾಣದ ಬಳಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಬಜರಂಗದಳ ಜಿಲ್ಲಾ ಗೋರಕ್ಷ

ರಾಜ್ಯಸರಕಾರದ ಹಿಂದೂ ವಿರೋಧಿ ದೋರಣೆಯನ್ನು ಖಂಡಿಸಿ ► ತಾಲೂಕಿನಾದ್ಯಂತ ಪ್ರತಿಭಟನೆ Read More »

ಕರಾವಳಿ

ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ 34 ಕೆಜಿ ಚಿನ್ನವನ್ನು ಬಸ್ ನಲ್ಲಿ ಸಾಗಿಸುತ್ತಿದ್ದ ತಂಡವನ್ನು ಕೇರಳದ ಅಬಕಾರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತು ಸಾಗಾಟವಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಕೇರಳ ವಯನಾಡಿನ ಅಬಕಾರಿ ಗುಪ್ತ ದಳದ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ಸನ್ನು ತಪಾಸಣೆ ನಡೆಸಿದ ವೇಳೆ 4 ಬ್ಯಾಗ್ ಗಳಲ್ಲಿ 34 ಕೆಜಿ

ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ Read More »

ಕರಾವಳಿ

ಲಾರಿ ಹರಿದು ಯುವಕ ದಾರುಣ ಮೃತ್ಯು ► ಮೃತನ ವಾಹನದಲ್ಲಿ ಗಾಂಜ ಪತ್ತೆ..!!!

(ನ್ಯೂಸ್ ಕಡಬ) newskadaba.com ಉಳ್ಳಾಲ ,ಅ.12. ವೇಗವಾಗಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ  ದ್ವಿಚಕ್ರ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕಟಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಯುವಕನ್ನು ಬೆಳ್ತಂಗಡಿ ಮೂಲದ ಸಲೀಂ(30) ಕೇ.ಸಿ.ರೋಡ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದ ಸ್ಟಾಂಡ್ ಹಾಕಿ ವಾಹನ ಚಲಿಸಿದ್ದೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗ್ತಿದೆ. ಮೃತನ ದ್ವಿಚಕ್ರ ವಾಹನದಲ್ಲಿ ಎರಡು ಪ್ಯಾಕೆಟ್ ಗಾಂಜ ಪತ್ತೆಯಾಗಿದ್ದು ಈತ ಗಾಂಜ ಸೇವಿಸಿ ವಾಹನ ಚಲಾಯಿಸಿದ್ದಾನೆಯೇ ಎಂಬುದು ಇನ್ನು ನಿಖರವಾಗಿ ತಿಳಿದು ಬಂದಿಲ್ಲ.

ಲಾರಿ ಹರಿದು ಯುವಕ ದಾರುಣ ಮೃತ್ಯು ► ಮೃತನ ವಾಹನದಲ್ಲಿ ಗಾಂಜ ಪತ್ತೆ..!!! Read More »

ಕರಾವಳಿ
Scroll to Top