ನ್ಯೂಸ್ ಕಡಬ

ನೂಜಿಬಾಳ್ತಿಲ: ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ,ಅ.6. ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ಸೆ.25ರಿಂದ ಅ.5ರ ತನಕ ನಡೆದ ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಗುರುವಾರ ನಡೆಯಿತು. ಸಮಾರೋಪ ಸಮಾರಂಭವನ್ನು ಬೆಥನಿ ಸಂ.ಪ.ಪೂ.ಕಾಲೇಜಿನ ನಿರ್ದೇಶಕ ರೆ|ಫಾ|ಫರ್ಡಿನಾಂಡ್ರವರು ಉದ್ಘಾಟಿಸಿ, ವಿದ್ಯಾರ್ಥಿ ಜೀವನದಲ್ಲಿ ಗುರುಹಿರಿಯರಿಗೆ ಗೌರವ, ಸೇವಾ ಮನೋಭಾವದಿಂದ ಸಮಾಜಮುಖಿಯಾಗಿ ಕೆಲಸ ಮಾಡಿದಲ್ಲಿ ಮುಂದಿನ ಜೀವನ ಯಶಸ್ಸು ಲಭಿಸಲಿದೆ. ಇಂತಹ ಸೇವಾ ಶಿಬಿರಗಳ ಮೂಲಕ ಹತ್ತಾರು ಮನೆಗಳ ವಿದ್ಯಾರ್ಥಿಗಳು ಒಂದಾಗಿ, ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಿ, ಸಹನೆ, ಶಾಂತಿ, […]

ನೂಜಿಬಾಳ್ತಿಲ: ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ Read More »

ಕರಾವಳಿ

ಪಡಿತರ ವಿತರಣಾ ಕೇಂದ್ರ ಬದಲಾವಣೆಗೆ ಕುರಿತು ► ಆಹಾರ ಇಲಾಖೆ ಉಪನಿರ್ದೇಶಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ,ಅ.6, ಇಲ್ಲಿನ ಜಿ.ಪಂ.ಕ್ಷೇತ್ರಕ್ಕೆ ಬರುವ ಶಿರಾಡಿ, ಕೊಣಾಜೆ ಹಾಗೂ ಸಿರಿಬಾಗಿಲು ಗ್ರಾಮದ ಪಡಿತರ ಚೀಟಿದಾರರು ಪಡಿತರ ಸಾಮಾಗ್ರಿ ಪಡೆದುಕೊಳ್ಳಲು ತೊಂದರೆ ಅನುಭವಿಸುತ್ತಿದ್ದು ಇವರಿಗೆ ಅನುಕೂಲವಾಗುವಂತೆ ಪಡಿತರ ವಿತರಣಾ ಕೇಂದ್ರವನ್ನು ಬದಲಾವಣೆ ಮಾಡುವಂತೆ ಕಡಬ ಕ್ಷೇತ್ರದ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ರವರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರಿಗೆ ಮನವಿ ಮಾಡಿದ್ದಾರೆ. ಶಿರಾಡಿ ಗ್ರಾಮದ ಕಳಪ್ಪಾರು ವಾರ್ಡ್ನ ಸುಮಾರು 350 ಪಡಿತರ ಚೀಟಿದಾರರು ಪಡಿತರ ಸಾಮಾಗ್ರಿ ಪಡೆದುಕೊಳ್ಳಲು 6ರಿಂದ 8 ಕಿ.ಮೀ.ದೂರದ ಶಿರಾಡಿ ಕೇಂದ್ರಕ್ಕೆ ಬರಬೇಕಾಗಿದ್ದು ಇವರಿಗೆ

ಪಡಿತರ ವಿತರಣಾ ಕೇಂದ್ರ ಬದಲಾವಣೆಗೆ ಕುರಿತು ► ಆಹಾರ ಇಲಾಖೆ ಉಪನಿರ್ದೇಶಕರಿಗೆ ಮನವಿ Read More »

ಕರಾವಳಿ

ನೆಲ್ಯಾಡಿ: ಶೈನ್ ವಾಯುಮಾಲಿನ್ಯ ತಪಾಸಣಾ ಕೇಂದ್ರ ಶುಭಾರಂಭ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಅ.6. ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯ ಫೆಡರಲ್ ಬ್ಯಾಂಕ್ ಬಳಿಯಿರುವ ಭಾರತ್ ಪೆಟ್ರೋಲ್ ಪಂಪ್ನ ಬಳಿ ಶೈನ್ ವಾಯುಮಾಲಿನ್ಯ ತಪಾಸಣಾ ಕೇಂದ್ರ ಇತ್ತೀಚೆಗೆ ಶುಭಾರಂಭಗೊಂಡಿತು. ಕೊಕ್ಕಡ ಸಂತಜಾನ್ ಬ್ಯಾಪ್ಟಿಸ್ಟ್‌ ಚರ್ಚ್ನ ಧರ್ಮಗುರು ರೆ.ಫಾ.ಪೆಡ್ರಿಕ್ ಮೊಂತೆರೋರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಭಾರತ್ ಪೆಟ್ರೋಲ್ ಬಂಕ್ ಮಾಲಕ ಕುಶಾಲಪ್ಪ ಗೌಡ ಪೂವಾಜೆ ರಿಬ್ಬನ್ ಕಟ್ ಮಾಡಿದರು. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಸದಸ್ಯೆ ಪ್ಲೋರಿನಾ ಡಿ.ಸೋಜ, ವಾಳ್ಯದ ಗುರಿಕಾರ ಚಾಲ್ರ್ಸ್‌ ಡಿ.ಸೋಜ, ಸಿಸ್ಟರ್ ಎಲಿಜಬೆತ್ ಮತ್ತಿತರರು ಭೇಟಿ

ನೆಲ್ಯಾಡಿ: ಶೈನ್ ವಾಯುಮಾಲಿನ್ಯ ತಪಾಸಣಾ ಕೇಂದ್ರ ಶುಭಾರಂಭ Read More »

ಕರಾವಳಿ

ಮರ್ದಾಳ ಮೀನು ಮಾರುಕಟ್ಟೆಯಲ್ಲಿ ಮಾತಿನ ಚಕಮಕಿ ► ಮೀನು ರಸ್ತೆಗೆ ಎಸೆದು ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ,ಅ.6. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಮೀನು ಮಾರಾಟಗಾರರ ನಡುವೆ ಮಾತಿನ ಚಕಮಕಿ ನಡೆದು, ಮೀನನ್ನು ರಸ್ತೆಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮರ್ದಾಳ ಮೀನುಮಾರುಕಟ್ಟೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮರ್ದಾಳ ಗ್ರಾ.ಪಂ.ಗೆ ಒಳಪಟ್ಟ ಮರ್ದಾಳ ಪೇಟೆಯಲ್ಲಿರುವ ಮೀನು ಮಾರುಕಟ್ಟೆಯ ಎರಡು ಸ್ಟಾಲ್ ಗಳ ಪೈಕಿ ಒಂದನ್ನು 1ವರ್ಷದ ಅವಧಿಗೆ ಕರ್ಮಾಯಿ ತುಂಬ್ಯ ನಿವಾಸಿ ಅಬ್ದುಲ್ ಖಾದರ್ರವರು ರೂ.30,500ಕ್ಕೆ ಹಾಗೂ ಇನ್ನೊಂದು ಸ್ಟಾಲ್ ನ್ನು ಕಡಬ ಹಳೆಸ್ಟೇಷನ್ ನಿವಾಸಿ ರಮ್ಲಾರವರು 31,500ಕ್ಕೆ ಏಲಂನಲ್ಲಿ ಪಡೆದುಕೊಂಡಿದ್ದರು. ಬಳಿಕ

ಮರ್ದಾಳ ಮೀನು ಮಾರುಕಟ್ಟೆಯಲ್ಲಿ ಮಾತಿನ ಚಕಮಕಿ ► ಮೀನು ರಸ್ತೆಗೆ ಎಸೆದು ಆಕ್ರೋಶ Read More »

ಕರಾವಳಿ

ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ► ಶಿವಮೊಗ್ಗ ಜಿ.ಪಂ.ಸದಸ್ಯ ಮಂಜುನಾಥ ನಾಯ್ಕ್‌ ಭೇಟಿ

(ನ್ಯೂಸ್ ಕಡಬ) newskadaba.com ಕಡಬ,ಅ.6. ಶಿವಮೊಗ್ಗ ಜಿ.ಪಂ. ಶಿಕಾರಿಪುರ ಕ್ಷೇತ್ರದ ಸದಸ್ಯರಾದ ಮಂಜುನಾಥ ನಾಯ್ಕ್‌ರವರು ಕಡಬದ ಭಾಗೀರಥಿ ಟವರ್ಸ್‌ನಲ್ಲಿರುವ  ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಗುರುವಾರ ಭೇಟಿ ನೀಡಿದರು. ಕಡಬ ಬ್ಲಾಕ್ ಕಾಂಗ್ರೆಸ್ ನ ಕಾರ್ಯ ಚಟುವಟಿಕೆಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ರವರು ಮಾಹಿತಿ ನೀಡಿದರು. ಶಿಕಾರಿಪುರ ಬ್ಲಾಕ್ನ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ನಾಯ್ಕ್‌ರವರು ಈ ಸಂದರ್ಭದಲ್ಲಿ ಜೊತೆಗಿದ್ದರು. ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ, ಪುತ್ತೂರು

ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ► ಶಿವಮೊಗ್ಗ ಜಿ.ಪಂ.ಸದಸ್ಯ ಮಂಜುನಾಥ ನಾಯ್ಕ್‌ ಭೇಟಿ Read More »

ಕರಾವಳಿ

ಭಾರತೀಯ ವಾಯು ಸೇನೆಯ ವಿಮಾನ ಪತನ ► 5 ಸೈನಿಕರ ಮೃತ್ಯು

(ನ್ಯೂಸ್ ಕಡಬ) newskadaba.com ಗುವಾಹಾಟಿ, ಅ.6. ಭಾರತೀಯ ವಾಯು ಸೇನೆಯ ವಿಮಾನವೊಂದು ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಪತನಗೊಂಡಿದ್ದು 5 ಸೈನಿಕರು ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ. ಚೀನಾ ಹಾಗೂ ಭಾರತದ ಗಡಿಯ 12 ಕಿ.ಮೀ ವ್ಯಾಪ್ತಿ ಭೂ ಪ್ರದೇಶದಲ್ಲಿ ಇಂದು ಮುಂಜಾನೆ 6 ಗಂಟೆ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಎಂಐ 17ವಿ5 ವಿಮಾನ ಪತನಗೊಂಡಿದ್ದು ಅವಘಡದಲ್ಲಿ 5 ಸೈನಿಕರು ಸಾವನ್ನಪ್ಪಿದ್ದಾರೆ. ಒಬ್ಬರಿಗೆ ತೀವ್ರ ಗಾಯಗಳಾಗಿವೆ. ವಿಮಾನದಲ್ಲಿ ಒಟ್ಟು 7 ಮಂದಿ ಇದ್ದರು ಎಂದು ವರದಿಯಾಗಿದೆ.

ಭಾರತೀಯ ವಾಯು ಸೇನೆಯ ವಿಮಾನ ಪತನ ► 5 ಸೈನಿಕರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ನೇತ್ರಾವತಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕನ ಮೃತ ದೇಹ ಪತ್ತೆ..

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.6. ಆಟೋ ಚಾಲಕರೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಸಮೀಪದಲ್ಲಿ ಗುರುವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ ಕೋಡಿಕಲ್ ಅಶೋಕ ನಗರದ ಮಹಮ್ಮದ್ ಬಶೀರ್ (35) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ತೊಕ್ಕೊಟು ಕಡೆಗೆ ಹೋಗುತ್ತಿದ್ದ ವೇಳೆ ಆಟೋ ನಿಲ್ಲಿಸಿ ನದಿಗೆ ಹಾರಿದ್ದಾರೆ. ಹಾರಿದ ಕೆಲವೇ ಕ್ಷಣದಲ್ಲಿ ಸಾರ್ವಜನಿಕರು ಜಮಾಯಿದ್ದು ಕೂಡಲೆ ಪೊಲೀಸರಿಗೆ ಸುದ್ಧಿ ಮುಟ್ಟಿದ್ದಾರೆ. ನದಿಗೆ ಬಿದ್ದು ನೀರಿನಲ್ಲಿ ವಿಲವಿಲ ಒದ್ದಾಡಿದ ದೃಶ್ಯ ಮೊಬೈಲ್ ನಲ್ಲಿ

ನೇತ್ರಾವತಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕನ ಮೃತ ದೇಹ ಪತ್ತೆ.. Read More »

ಕರಾವಳಿ

ಆಲಂಕಾರು: ಬಿಜೆಪಿ ಸಮರ್ಥನಾ ಸಮಾವೇಶ ► ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಮುಂದಿನ ಗುರಿ- ಡಿ.ಎಸ್.ವೀರಯ್ಯ

(ನ್ಯೂಸ್ ಕಡಬ) newskadaba.com ಕಡಬ,ಅ.6. ಭಾರತೀಯ ಜನತಾ ಪಾರ್ಟಿಯ ಬೆಳಂದೂರು, ಹಾಗೂ ನೆಲ್ಯಾಡಿ ಶಕ್ತಿ ಕೇಂದ್ರಗಳ ಎಸ್ .ಸಿ ಮೋರ್ಚಾ ವತಿಯಿಂದ ಸಮರ್ಥನಾ ಸಮಾವೇಶ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತ ಭವನ ಸಭಾಂಗಣದಲ್ಲಿ ಗುರುವಾರ ನಡೆಯಿತು. ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಸಮರ್ಥನಾ ಸಮಾವೇಶವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನದ ತತ್ವ ಆದರ್ಶಗಳನ್ನು ಗೌರವಿಸಿ ಬಿಜೆಪಿ ಆಡಳಿತವಧಿಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ

ಆಲಂಕಾರು: ಬಿಜೆಪಿ ಸಮರ್ಥನಾ ಸಮಾವೇಶ ► ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಮುಂದಿನ ಗುರಿ- ಡಿ.ಎಸ್.ವೀರಯ್ಯ Read More »

ಕರಾವಳಿ

ಮಂಗಳೂರು: ಮೊದಲ ಮಹಿಳಾ ಡಿಸಿಪಿಯಾಗಿ ► ಉಮಾ ಪ್ರಶಾಂತ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.5. ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಅಪರಾಧ ಮತ್ತು ಸಂಚಾರ ವಿಭಾಗದ ಪೊಲೀಸ್ ಉಪ ಆಯುಕ್ತರಾಗಿ ಉಮಾ ಪ್ರಶಾಂತ್ ನೇಮಕಗೊಂಡಿದ್ದು, ಇವರು ಮೊದಲ ಮಹಿಳಾ ಡಿಸಿಪಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಂಗಳೂರು ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಹನುಮಂತರಾಯರಿಂದ ತೆರವಾಗಿದ್ದ ಸ್ಥಾನಕ್ಕೆ ಉಮಾ ಪ್ರಶಾಂತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹನುಮಂತ್ ಈಗ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದಾರೆ. ಮೂಲತ: ಮೈಸೂರಿನವರಾದ ಉಮಾ ಅವರು

ಮಂಗಳೂರು: ಮೊದಲ ಮಹಿಳಾ ಡಿಸಿಪಿಯಾಗಿ ► ಉಮಾ ಪ್ರಶಾಂತ್ ನೇಮಕ Read More »

ಕರಾವಳಿ

ಮಂಗಳೂರು:ನೀರು ಪಾಲಾದ ಯುವಕ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅ.5. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜಿ ಸಮೀಪದ ಶಿಬರೂರು ದೇವಸ್ಥಾನ ಸಮೀಪದ ಕೆರೆಯಲ್ಲಿ ಯುವಕನನ್ನು ಸ್ನೇಹಿತರೇ ನೀರಿನಲ್ಲಿ ಮುಳುಗಿಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಸುರತ್ಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತನನ್ನು ಸುರತ್ಕಲ್ ನ ಕೃಷ್ಣಾಪುರದ ನಿವಾಸಿ ಫಯಾಜ್ ಎಂಬವರ ಪುತ್ರ ಮಕ್ಸೂದ್ ಎಂದು ಗುರುತಿಸಲಾಗಿದೆ. ಮೃತ ಮಕ್ಸೂದ್ ಮಂಗಳೂರಿನ ಎಂಆರ್ ಪಿಎಲ್ ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮಕ್ಸೂದ್ ಅಕ್ಟೋಬರ್ 3 ರಂದು

ಮಂಗಳೂರು:ನೀರು ಪಾಲಾದ ಯುವಕ ► ಕೊಲೆ ಶಂಕೆ Read More »

ಕರಾವಳಿ
Scroll to Top