ನ್ಯೂಸ್ ಕಡಬ

ಬಿಳಿನೆಲೆ: ವಾಣಿಜ್ಯ ಕಟ್ಟಡ ನಿರ್ಮಿಸಲು ಪರವಾಣಿಗೆ ಮಂಜೂರು ► ಪ್ರತಿಭಟನೆ ಹಿಂಪಡೆದ ಕೆ.ಟಿ.ತೋಮ್ಸ್‌ನ್

(ನ್ಯೂಸ್ ಕಡಬ) newskadaba.com ಕಡಬ,ಸೆ.27. ಬಿಳಿನೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಟಣ ಸಮೀಪದ ಮೇರೊಂಜಿ ಎಂಬಲ್ಲಿ ಕಟ್ಟಡ ನಿರ್ಮಾಣಕ್ಕೆ ಸಕಾಲದಲ್ಲಿ ಪರವಾಣಿಗೆ ನೀಡದೆ ಸತಾಯಿಸಲಾಗಿದೆ ಎನ್ನುವ ಆರೋಪದಲ್ಲಿ ಉದ್ಯಮಿ ಕೆ.ಟಿ.ತೋಮ್ಸ್‌ನ್ ಅವರು ಪಂ. ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದನ್ನು ಸೋಮವಾರ ಪಂಚಾಯಿತಿ ಅನುಮತಿ ನೀಡಿರುವ ಬೆನ್ನಲ್ಲೇ ವಾಪಾಸ್ಸು ಪಡೆದಿದ್ದಾರೆ. ಕೆ.ಟಿ.ತೋಮ್ಸ್‌ನ ಅವರು ನೆಟ್ಟಣ ಸಮೀಪದ ಮೇರೊಂಜಿಯಲ್ಲಿ ತನ್ನ ಜಮೀನಿನಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಲು ಅನುಮತಿ ನೀಡುವಂತೆ ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದರು. ಆದರೆ ಇದೇ ವೇಳೆ ಸುಪ್ರೀಂ ಕೋರ್ಟ್ […]

ಬಿಳಿನೆಲೆ: ವಾಣಿಜ್ಯ ಕಟ್ಟಡ ನಿರ್ಮಿಸಲು ಪರವಾಣಿಗೆ ಮಂಜೂರು ► ಪ್ರತಿಭಟನೆ ಹಿಂಪಡೆದ ಕೆ.ಟಿ.ತೋಮ್ಸ್‌ನ್ Read More »

ಕರಾವಳಿ

ಸವಣೂರು: ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ► ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸವಣೂರು,ಸೆ.27. ಪಾಲ್ತಾಡಿ ಗ್ರಾಮದ ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾ ದೇವತೆ, ಶಾರದೆ ಮಾತೆಯನ್ನು ಪೂಜಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಚೈತನ್ಯ ರೈತ ಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ,ವಿವೇಕಾನಂದ ಯುವಕ ಮಂಡಲದ ಗೌರವಧ್ಯಕ್ಷ ಸುಧೀರ್ ಕುಮಾರ್ ರೈ ಕುಂಜಾಡಿ,ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ವಿಮಲಾ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ನರಿಮೊಗರು ಪ್ರಖ್ಯಾತಿ ಯುವತಿ ಮಂಡಲದ ಅಧ್ಯಕ್ಷೆ ಗುರುಪ್ರಿಯಾ ನಾಯಕ್, ಹರೀಶ್

ಸವಣೂರು: ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ► ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ Read More »

ಕರಾವಳಿ

ಉಪ್ಪಿನಂಗಡಿ: ಸರಣಿ ಕಳ್ಳತನ ►14 ಸಾವಿರ ನಗದು, ಕಾಲೇಜಿನ ಸಿಸಿ ಕ್ಯಾಮರದ ಡಿವಿಆರ್ ಕಳ್ಳತನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಸೆ.27. ಇಲ್ಲಿನ ಹಲವು ಅಂಗಡಿ ಸೇರಿದಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನುಗ್ಗಿದ ಕಳ್ಳರು ಸುಮಾರು 14 ಸಾವಿರ ನಗದು ದೋಚಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಬ್ಯಾಂಕ್ ರಸ್ತೆಯ ಜೆರಾಕ್ಸ್ ಅಂಗಡಿ, ದೊಡ್ಡಣ್ಣ ಕಿಣಿ ಅಂಗಡಿ, ಸಫಾ ಫರ್ನಿಚರ್, ಯಮ್ ಯಮ್ ಎಸ್ ಟ್ರೇಡರ್ಸ್ ಗೆ ನುಗ್ಗಿದ ಕಳ್ಳರು ಎಲ್ಲಾ ಕಡೆಯಿಂದ ಒಟ್ಟು ಸುಮಾರು 14 ಸಾವಿರ ನಗದು ಹಾಗು ಕಾಲೇಜಿನಿಂದ ಸಿಸಿ

ಉಪ್ಪಿನಂಗಡಿ: ಸರಣಿ ಕಳ್ಳತನ ►14 ಸಾವಿರ ನಗದು, ಕಾಲೇಜಿನ ಸಿಸಿ ಕ್ಯಾಮರದ ಡಿವಿಆರ್ ಕಳ್ಳತನ Read More »

ಕರಾವಳಿ

ಪುತ್ತೂರು: ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಪತ್ತೆ..!!! ► ಆಕ್ರೋಶಿತರಾದ ನೇಲ್ಯಡ್ಕ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಪುತ್ತೂರು,ಸೆ.27. ಇಲ್ಲಿನ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಚಾರಿ ನ್ಯಾಯಬೆಲೆ ಅಂಗಡಿಯಲ್ಲಿ ವಿತರಣೆಯಾಗುವ ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಹೆಚ್ಚಾಗಿದ್ದು, ಅನ್ನಭಾಗ್ಯ ಜೊತೆಗೆ ಹುಳುಭಾಗ್ಯ ವಿತರಣೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನೇಲ್ಯಡ್ಕ ಗ್ರಾಮಸ್ಥರು ಆಕ್ರೋಶಿತರಾಗಿದ್ದಾರೆ. ಮಂಗಳವಾರ ಸಂಚಾರಿ ನ್ಯಾಯಬೆಲೆ ಅಂಗಡಿಗೆ ಅಕ್ಕಿ ತುಂಬಿಸಿಕೊಂಡು ಬಂದಿದ್ದ ಲಾರಿಯನ್ನು ತಡೆದ ನೇಲ್ಯಡ್ಕ ಗ್ರಾಮಸ್ಥರು, ಬಳಿಕ ಅಕ್ಕಿಚೀಲವನ್ನು ಪರಿಶೀಲಿಸಿದಾಗ ಅಕ್ಕಿಯಲ್ಲಿ ಹುಳಗಳಿರುವುದು ಗಮನಕ್ಕೆ ಬಂದಿದೆ. ಐತ್ತೂರು ಗ್ರಾಮ ಪಂಚಾಯಿತಿ ಸತೀಶ್ ಕೆ ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ

ಪುತ್ತೂರು: ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಪತ್ತೆ..!!! ► ಆಕ್ರೋಶಿತರಾದ ನೇಲ್ಯಡ್ಕ ಗ್ರಾಮಸ್ಥರು Read More »

ಕರಾವಳಿ

ವರುಣನ ಅಬ್ಬರಕ್ಕೆ ತತ್ತರಿಸಿದ ಬೆಂಗಳೂರು ► ಜನಜೀವನ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.27. ಸಿಲಿಕಾನ್‌ ಸಿಟಿ ಬೆಂಗಳೂರು ನಗರದಲ್ಲಿ ಮತ್ತೆ ಮಳೆ ಆರ್ಭಟಿಸಿದ್ದು, ಇಡೀ ರಾತ್ರಿ ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ನಾಯಂಡನಹಳ್ಳಿ, ಚಂದ್ರಾಲೇಔಟ್‌‌, ಶಿವಾಜಿ ನಗರ, ಜಯನಗರ, ಜೆ ಪಿ ನಗರ, ಸೇರಿದಂತೆ ವಿವಿಧೆಡೆ  ಮಳೆ ನೀರು ಮನೆಗಳಿಗೆ ನುಗ್ಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವೆಡೆ ಅಪಾರ್ಟ್‌ಮೆಂಟ್‌ಗಳು  ಜಲಾವೃತಗೊಂಡಿವೆ. ರಸ್ತೆ ಮೇಲೆ ನೀರು ಹರಿಯುವುದರಿಂದಾಗಿ ವಾಹನ ಸಂಚಾರ ಬಂದ್ ಆಗಿದೆ. ಬಯ್ಯಪ್ಪನಹಳ್ಳಿಯ ಮೆಟ್ರೋ ನಿಲ್ದಾಣಕ್ಕೂ ನೀರು ನುಗ್ಗಿದ್ದು, ಪ್ಯಾಸೇಜ್‍ನಲ್ಲೆಲ್ಲಾ ನೀರು ನಿಂತಿದೆ. ಜನರು ಮೆಟ್ರೋ

ವರುಣನ ಅಬ್ಬರಕ್ಕೆ ತತ್ತರಿಸಿದ ಬೆಂಗಳೂರು ► ಜನಜೀವನ ಅಸ್ತವ್ಯಸ್ತ Read More »

ಕರ್ನಾಟಕ

ಮಹತ್ವದ ಬದಲಾವಣೆಯತ್ತ ಮಹೀಂದ್ರಾ ಸಂಸ್ಥೆ ►ವರ್ಷಾಂತ್ಯದಲ್ಲಿ ವಿನೂತನ ಮಾದರಿಯ “ಎಲೆಕ್ಟ್ರಿಕ್ ಎಂಜಿನ್ ಸ್ಕೂಟರ್‌ಗಳು..”!!

(ನ್ಯೂಸ್ ಕಡಬ) newskadaba.com ತಂತ್ರಜ್ಞಾನ,ಸೆ.26. ಆಟೋ ಉದ್ಯಮದಲ್ಲಿ ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ವಾಹನಗಳಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ಮಹೀಂದ್ರಾ ಸಂಸ್ಥೆಯು ಸ್ಕೂಟರ್ ಆವೃತ್ತಿಗಳನ್ನು ಎಲೆಕ್ಟ್ರಿಕ್ ಎಂಜಿನ್ ಜೊತೆ ಅಭಿವೃದ್ಧಿಗೊಳಿಸುವ ಕುರಿತು ಮಹತ್ವದ ಯೋಜನೆಯನ್ನು ರೂಪಿಸುತ್ತಿದೆ. ದೇಶಿಯ ಮಾರುಕಟ್ಟೆಯಲ್ಲಿ ಇ2ಒ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಈಗಾಗಲೆ ಹಿಡಿತ ಸಾಧಿಸಿರುವ ಮಹೀಂದ್ರಾ ಸಂಸ್ಥೆಯು ಇದೀಗ ಮತ್ತೊಂದು ಮಹತ್ವದ ಬದಲಾವಣೆಗೆ ಸಜ್ಜಾಗಿದೆ. ಈಗಾಗಲೇ ವಿನೂತನ ಪ್ರಯೋಗಗಳನ್ನು ಕೈಗೊಂಡಿರುವ ಮಹೀಂದ್ರಾ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗವು ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕ ವಿನ್ಯಾಸಗಳನ್ನು ಸಿದ್ಧಗೊಳಿಸಲಾಗುತ್ತಿದ್ದು, ಈ

ಮಹತ್ವದ ಬದಲಾವಣೆಯತ್ತ ಮಹೀಂದ್ರಾ ಸಂಸ್ಥೆ ►ವರ್ಷಾಂತ್ಯದಲ್ಲಿ ವಿನೂತನ ಮಾದರಿಯ “ಎಲೆಕ್ಟ್ರಿಕ್ ಎಂಜಿನ್ ಸ್ಕೂಟರ್‌ಗಳು..”!! Read More »

ತಂತ್ರಜ್ಞಾನ

ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತನ ಜೇಬಿಗೆ ಕನ್ನ ಹಾಕಿದ ಕಳ್ಳರು ► ಬಟ್ಟೆ ಮೇಲೆ ಶಾಯಿ ಎರಚಿ ಕೃತ್ಯ

(ನ್ಯೂಸ್ ಕಡಬ) newskadaba.com ಮಂಡ್ಯ,ಸೆ.26. ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತರೋರ್ವರನ್ನು ಹಿಂಬಾಲಿಸಿದ ಕಳ್ಳರು  15 ಸಾವಿರ ರೂ. ಹಣವನ್ನು ದೋಚಿದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ಮಂಗಳವಾರ 11.30ರ ಸುಮಾರಿಗೆ ನಡೆದಿದೆ. ರೈತ ನಿಂಗೇಗೌಡ ಎಂಬುವವರು ವಿಜಯ ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದರು. ಈ ವೇಳೆ ನಿಂಗೇಗೌಡರನ್ನು ಹಿಂಬಾಲಿಸಿದ ಕಳ್ಳರು ಶರ್ಟ್ ಮೇಲೆ ಉಪಾಯವಾಗಿ ಶಾಯಿ ಚೆಲ್ಲಿದ್ದಾರೆ. ನಂತರ ಬಟ್ಟೆಯನ್ನು ಕ್ಲೀನ್ ಮಾಡುವ ನೆಪದಲ್ಲಿ ಬಂದು ನಿಂಗೇಗೌಡರ ಶರ್ಟ್ ನಲ್ಲಿದ್ದ ಹಣವನ್ನು ದೋಚಿ

ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತನ ಜೇಬಿಗೆ ಕನ್ನ ಹಾಕಿದ ಕಳ್ಳರು ► ಬಟ್ಟೆ ಮೇಲೆ ಶಾಯಿ ಎರಚಿ ಕೃತ್ಯ Read More »

ಕರ್ನಾಟಕ

ಮಂಗಳೂರು: ಗಾಂಜಾ ಮಾರಾಟ ಆರೋಪಿಯ ಸೆರೆ ► 7,000 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು..!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.26. ತಲಪಾಡಿ ಗ್ರಾಮದ ತಚ್ಚಾಣಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಶೇಖರ್‌ ಯಾನೆ ಕ್ಯಾಮು (32) ನನ್ನು  ಸೋಮವಾರ ಇಕೊನಮಿಕ್ ಅಂಡ್‌‌ ನಾರ್ಕೊಟಿಕ್ ಕ್ರೈಂ ಪೊಲೀಸ್ ಠಾಣಾ ಪೊಲೀಸರು ಬಂಧಿಸಿ 7,000 ರೂ. ಮೌಲ್ಯದ 433 ಗ್ರಾಂ ಗಾಂಜಾ, ವಶಪಡಿಸಿಕೊಂಡಿದ್ದಾರೆ. ಈತನನ್ನು ಕೇರಳ ಮೂಲದ ಮಂಜೇಶ್ವರ ತೂಮಿನಾಡು ಸಮೀಪದ ಕಣ್ವತೀರ್ಥದ ಶೇಖರ್‌ ಯಾನೆ ಕ್ಯಾಮು (32) ಎಂದು ಗುರುತಿಸಲಾಗಿದೆ. ಈತ ತಲಪಾಡಿ ಗ್ರಾಮದ ತಚ್ಚಾಣಿ ಎಂಬಲ್ಲಿ ಗಾಂಜಾದೊಂದಿಗೆ ಇರುವ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ

ಮಂಗಳೂರು: ಗಾಂಜಾ ಮಾರಾಟ ಆರೋಪಿಯ ಸೆರೆ ► 7,000 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು..!!! Read More »

ಕರಾವಳಿ

ಬೆಳ್ತಂಗಡಿ: ಮಕ್ಕಳಾಗುವ ಔಷಧಿ ನೀಡಿ ದಂಪತಿಗಳ ಪ್ರಜ್ಞೆ ತಪ್ಪಿಸಿ ►ಮನೆ ದರೋಡೆ..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಸೆ.26. ದೇವಸ್ಥಾನಕ್ಕೆಂದು ಹೊರಟ ದಂಪತಿಗಳು ರಸ್ತೆ ಬದಿ ನಿಂತಿರುವುದನ್ನು ಗಮನಿಸಿದ ಅಪರಿಚಿತರು ನಿಮಗೆ ಮಕ್ಕಳಾಗುವ ಕಷಾಯ ನೀಡುತ್ತೇವೆಂದು ಹೇಳಿ ಮನೆಯಲ್ಲಿದ್ದ ಹಣ ದೋಚಿ ಪರಾರಿಯಾಗಿರುವ ಪ್ರಕರಣ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸೆ. 16 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಳಂಜದ ಪುರುಷೋತ್ತಮ ದಂಪತಿಗಳು ದೇವಸ್ಥಾನಕ್ಕೆ ಹೋಗುವ ಸಲುವಾಗಿ ತೆಂಕ ಕಾರಂದುರು ಬಳಿಯ ಕಾಪಿನಡ್ಕದಲ್ಲಿ ನಿಂತಿದ್ದರು. ಈ ವೇಳೆ  ಕಾರಿನಲ್ಲಿ ಆಗಮಿಸಿದ ಅಪರಿಚಿತರು ಇವರ ಮುಂದೆ ಕಾರು

ಬೆಳ್ತಂಗಡಿ: ಮಕ್ಕಳಾಗುವ ಔಷಧಿ ನೀಡಿ ದಂಪತಿಗಳ ಪ್ರಜ್ಞೆ ತಪ್ಪಿಸಿ ►ಮನೆ ದರೋಡೆ..!!! Read More »

ಕರಾವಳಿ

ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.26. ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಎರ್ಮಾಳು ಗ್ರಾಮದ ಸಮೀಪ ಸೋಮವಾರ ನಡೆದಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಮಾಹಿತಿ ಪ್ರಕಾರ ಅದಮಾರು ಗ್ರಾಮದ ರವಿ ದೇವಾಡಿಗ ಎಂಬ ವ್ಯಕ್ತಿಯ ಶವ ಎಂದು ಗುರುತಿಸಲಾಗಿದೆ. ರವಿ ದೇವಾಡಿಗ ಸೋಮವಾರ ಮಧ್ಯಾಹ್ನ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ರಾತ್ರಿಯಾದರು ಮನೆಗೆ ವಾಪಸ್ ಬಂದಿರಲಿಲ್ಲ. ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಉಡುಪಿಯ ಆರ್‍ಪಿಎಫ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆಯನ್ನು ನಡೆಸಿದ್ದಾರೆ. ರವಿ

ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಕರಾವಳಿ
Scroll to Top