ನ್ಯೂಸ್ ಕಡಬ

ಉಡಾವಣೆಗೆ ಸಿದ್ಧವಾದ ವಿಶ್ವದ ಅತಿ ದೊಡ್ಡ ಖಾಸಗಿ ಉಪಗ್ರಹ ಜುಪಿಟರ್-3

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ವಿಶ್ವದ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ದೊಡ್ಡ ಬೆಳವಣಿಗೆಯಾಗಿದೆ. ಪ್ರಪಂಚದ ಅತಿ ದೊಡ್ಡ ಖಾಸಗಿ ಸಂವಹನ ಉಪಗ್ರಹ ಜುಪಿಟರ್ 3 ಇಂದು ಹಾರಾಟ ನಡೆಸಲಿದೆ. ಬಿಲಿಯನೇರ್ ಎಲಾನ್ ಮಸ್ಕ್ ಅವರ ಬಾಹ್ಯಾಕಾಶ ವಿಭಾಗದ ಕಂಪನಿ SpaceX ಮಾಡಲಿದೆ. Space.com ಪ್ರಕಾರ , ಫಾಲ್ಕನ್ ಹೆವಿ ರಾಕೆಟ್ ಮ್ಯಾಕ್ಸರ್ ಟೆಕ್ನಾಲಜೀಸ್‌ನ ಅತಿದೊಡ್ಡ ಉಪಗ್ರಹವಾದ ಜುಪಿಟರ್ 3 ಅನ್ನು ಉಡಾವಣೆ ಮಾಡಲಾಗುತ್ತದೆ. ಜುಪಿಟರ್ 3 ಉಪಗ್ರಹವನ್ನು ಉತ್ತರ ಮತ್ತು ದಕ್ಷಿಣ ಅಮೆರಿಕಾದಲ್ಲಿನ ಗ್ರಾಹಕರಿಗೆ ಇಂಟರ್ನೆಟ್ ಸೇವೆಗಳನ್ನು […]

ಉಡಾವಣೆಗೆ ಸಿದ್ಧವಾದ ವಿಶ್ವದ ಅತಿ ದೊಡ್ಡ ಖಾಸಗಿ ಉಪಗ್ರಹ ಜುಪಿಟರ್-3 Read More »

ಕರ್ನಾಟಕ

ಹೊಸ ಕಾನೂನು ಜಾರಿ; ಲಿಂಗ ಬದಲಾಯಿಸುವಂತಿಲ್ಲ – ರಷ್ಯಾ ಆರೋಗ್ಯ ಸಚಿವಾಲಯ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ರಷ್ಯಾ, ಜು.27. ಲಿಂಗ ಪರಿವರ್ತನೆಗೆ ಶಸ್ತಚಿಕಿತ್ಸೆ ಮಾಡಿಸುವುದನ್ನು ನಿಷೇಧಿಸುವ ಕಾನೂನಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಹಿ ಹಾಕಿದ್ದಾರೆ ಎನ್ನಲಾಗಿದೆ. ಲಿಂಗ ಪರಿವರ್ತನೆಗೆ ಸಂಬಂಧಿಸಿದಂತೆ ವೈದ್ಯಕೀಯ ಚಿಕಿತ್ಸೆಗಳನ್ನು ಕಾನೂನುಬಾಹಿರಗೊಳಿಸುವ ಕಾನೂನಿಗೆ ಇದು ಪೂರಕವಾಗಿದೆ. ಮಕ್ಕಳ ಅಸಮರ್ಪಕ ಬೆಳವಣಿಗೆ ಮತ್ತು ಜನ್ಮ ದೋಷಗಳನ್ನು ಬಗೆಹರಿಸಲು ಬಳಸುವ ವೈದ್ಯಕೀಯ ವಿಧಾನಗಳಿಗೆ ನಿರ್ಬಂಧವು ಅನ್ವಯಿಸುವುದಿಲ್ಲ. ಹಾಗೇಯೇ ಲೈಂಗಿಕ ವ್ಯತ್ಯಾಸದ ಬಾಲ್ಯದ ಅಸ್ವಸ್ಥತೆಗಳಿಗೆ ಅನುವಂಶಿಕ ಮತ್ತು ಅಂತಃಸ್ರಾವಕ ಸಮಸ್ಯೆಗಳಿಗೆ ಅನ್ವಯಿಸುವುದಿಲ್ಲ ಎಂದು ರಷ್ಯಾದ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.

ಹೊಸ ಕಾನೂನು ಜಾರಿ; ಲಿಂಗ ಬದಲಾಯಿಸುವಂತಿಲ್ಲ – ರಷ್ಯಾ ಆರೋಗ್ಯ ಸಚಿವಾಲಯ ಸ್ಪಷ್ಟನೆ Read More »

ರಾಷ್ಟ್ರೀಯ ನ್ಯೂಸ್

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ವಿವಾಹಿತ ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಐಶ್ವರ್ಯ ಎಂದು ಗುರುತಿಸಲಾಗಿದೆ. ಕಬ್ಬನ್ ಪೇಟೆಯ 2ನೇ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬದ ಶ್ರೇಯಾ ಸಿ.ಪಿ ಗೆ ರಾಜ್ಯಮಟ್ಟದ ಜನಸ್ಪಂದನಾ ಕಲಾಸಿರಿ ರತ್ನ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಕಡಬ, ಜು.27. ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ರಾಜ್ಯಮಟ್ಟದ ಪ್ರತಿಷ್ಠಿತ ಕರ್ನಾಟಕ ಜನಸ್ಪಂದನ ಕಲಾಸಿರಿ ರತ್ನ ಪ್ರಶಸ್ತಿಗೆ ಕಡಬದ ಶ್ರೇಯಾ ಸಿ. ಪಿ ಯವರು ಭಾಜರಾಗಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ಜನಸ್ಪಂದನಾ ಟ್ರಸ್ಟ್ ಇದರ 6ನೇ ವರ್ಷದ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಟ್ರಸ್ಟಿನ ವತಿಯಿಂದ ಬೆಂಗಳೂರಿನ ಬಾಗಲಗುಂಟೆಯಲ್ಲಿ ಜು.23 ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು. ಕಡಬದ ವಿದ್ಯಾನಗರದ ದಿ. ಚಿದಾನಂದ ಪೂಜಾರಿ ಹಾಗೂ ಪ್ರೇಮಾ ದಂಪತಿಗಳ ಪುತ್ರಿಯಾದ ಶ್ರೇಯಾ ಸಿ. ಪಿ ಯವರು

ಕಡಬದ ಶ್ರೇಯಾ ಸಿ.ಪಿ ಗೆ ರಾಜ್ಯಮಟ್ಟದ ಜನಸ್ಪಂದನಾ ಕಲಾಸಿರಿ ರತ್ನ ಪ್ರಶಸ್ತಿ Read More »

ಕರಾವಳಿ

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ – ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ

(ನ್ಯೂಸ್ ಕಡಬ)newskadaba.com ಉಡುಪಿ, ಜು.27. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ, ಮುಳುಗಡೆ ಘಟನೆಗಳು ನಡೆಯುತ್ತಿರುವಂತೆಯೇ ಆಗುಂಬೆ ಘಾಟಿಯಲ್ಲೂ ಬಿರುಕು ಬಿಟ್ಟ ಕುರಿತು ವರದಿಯಾಗಿದ್ದು, ಈ ಹಿನ್ನಲೆಯಲ್ಲಿ ಜು.27 ರಿಂದ ಸೆ.15 ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಆಗುಂಬೆ ಘಾಟಿಯ 6,7 ಹಾಗೂ 11ನೇ ತಿರುವಿನಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡುಬಂದಿದೆ. ಆದ್ದರಿಂದ

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ – ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ Read More »

ಕರಾವಳಿ

ವಸತಿ ನಿಲಯದ 19 ವಿದ್ಯಾರ್ಥಿಗಳು ಅಸ್ವಸ್ತ – ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಕಾಸರಗೋಡು, ಜು.27. ವಸತಿ ನಿಲಯದ 19 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ನೀಲೇಶ್ವರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸತತ ಕೆಮ್ಮು ಕಂಡು ಬಂದುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಭೇಟಿಯಾದ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಅವರು ಯೋಗ ಕ್ಷೇಮ ವಿಚಾರಿಸಿದರು ಎನ್ನಲಾಗಿದೆ.

ವಸತಿ ನಿಲಯದ 19 ವಿದ್ಯಾರ್ಥಿಗಳು ಅಸ್ವಸ್ತ – ಆಸ್ಪತ್ರೆಗೆ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪಹರಣಗೈದು ಅತ್ಯಾಚಾರ – ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ)newskadaba.com ಕೊಲ್ಕತ್ತಾ, ಜು.27. ಶಾಲೆಯಿಂದ ಮನೆಗೆ ವಾಪಸ್ಸಾಗುತ್ತಿದ್ದಾಗ ಅಪಹರಣ- ಅತ್ಯಾಚಾರಕ್ಕೆ ಒಳಗಾಗಿದ್ದ ಒಂಭತ್ತನೇ ತರಗತಿ ವಿದ್ಯಾರ್ಥಿನಿ ಉತ್ತರ ಬಂಗಾಳ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಈ ಪ್ರಕರಣ ಸಂಬಂಧ ಪೊಲೀಸರು ಐದು ಮಂದಿ ಶಂಕಿತರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಖಾಸಗಿ ಆಸ್ಪತ್ರೆಯಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲೈಂಗಿಕ ಕಿರುಕುಳದ ವೇಳೆ ಬಾಲಕಿಯ ಮೆದುಳಿಗೆ ಸಾಕಷ್ಟು ಆಮ್ಲಜನಕ ಪೂರೈಕೆಯಾಗದೇ ಆಕೆ ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾಗಿ ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿತ್ತು.

ಅಪಹರಣಗೈದು ಅತ್ಯಾಚಾರ – ವಿದ್ಯಾರ್ಥಿನಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಲಗಿದ್ದ ಮಗುವಿನ ಬಾಯೊಳಗೆ ಹೋದ ಹಲ್ಲಿ – ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಕೋಬ್ರಾ, ಜು.26. ಮನೆಯಲ್ಲಿ ಹಲ್ಲಿಗಳು ಕಾಣುವುದು ಸಾಮಾನ್ಯ. ಆದರೆ ಈ ಹಲ್ಲಿ ಯಾರನ್ನಾದರೂ ಕೊಲ್ಲುತ್ತದೆ ಎಂದರೆ ನಂಬಲೂ ಸಹ ವಿಚಿತ್ರ ಎನಿಸುತ್ತದೆ. ಇಂತಹ ಘಟನೆಯೊಂದು ಛತ್ತೀಸ್‌ಗಢದ ಕೋಬ್ರಾದಲ್ಲಿ ನಡೆದಿದ್ದು, ಮಗುವಿನ ಬಾಯಿಗೆ ಹಲ್ಲಿ ನುಗ್ಗಿ 3 ವರ್ಷದ ಮಗು ಮೃತಪಟ್ಟಿರುವ ಘಟನೆ ನಡೆದಿದೆ. ರಾಜ್‌ ಕುಮಾರ್ ಚಂಡೆ ಎಂಬುವರ ಕುಟುಂಬವು ನಾಗಿನಬಂಡಾ ಪ್ರದೇಶದಲ್ಲಿ ವಾಸಿಸುತ್ತಿದ್ದು, ಇವರ ಮೂರನೇ ಮಗ ಜಗದೀಶ್ನೇ ಮೃತ ದುರ್ದೈವಿಯಾಗಿದ್ದಾನೆ. ಘಟನೆಯ ವೇಳೆ ಎರಡೂವರೆ ವರ್ಷದ ಜಗದೀಶ್ ಮಲಗಿದ್ದ ಎನ್ನಲಾಗಿದ್ದು, ಈ

ಮಲಗಿದ್ದ ಮಗುವಿನ ಬಾಯೊಳಗೆ ಹೋದ ಹಲ್ಲಿ – ಮಗು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಡಾನೆ ದಾಳಿ…! – ಕೃಷಿ ನಾಶ

(ನ್ಯೂಸ್ ಕಡಬ)newskadaba.com ಮಂಡೆಕೋಲು, ಜು.26. ಮಂಡೆಕೋಲು ಗ್ರಾಮದಲ್ಲಿ ದಾಳಿ ಮುಂದುವರಿಸಿರುವ ಕಾಡಾನೆಗಳ ಹಿಂಡು ಬೊಳುಗಲ್ಲು ಭಾಗದಲ್ಲಿ ಕೃಷಿ ನಾಶ ಪಡಿಸಿದೆ ಎಂದು ವರದಿ ತಿಳಿಸಿದೆ. ಬೊಳುಗಲ್ಲು ಭಾಗದಲ್ಲಿ ದಾಳಿ ನಡೆಸಿದ ಆನೆಗಳ ಹಿಂಡು ಶುಭಕರ ಬೊಳುಗಲ್ಲು ಅವರ ತೋಟಕ್ಕೆ ನುಗ್ಗಿ ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶಪಡಿಸಿದ್ದು, ನೂರಕ್ಕೂ ಅಧಿಕ ಬಾಳೆ ಗಿಡಗಳನ್ನು ನಾಶಪಡಿಸಿವೆ ಎಂದು ಶುಭಕರ ಬೊಳುಗಲ್ಲು ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಗಡಿಪ್ರದೇಶವಾದ ಮಂಡೆಕೋಲಿನಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು ಕನ್ಯಾನ, ಚಾಕೋಟೆ, ಬೊಳುಗಲ್ಲು

ಕಾಡಾನೆ ದಾಳಿ…! – ಕೃಷಿ ನಾಶ Read More »

ಕರಾವಳಿ

ಸುಳ್ಯ ಕೆಪಿಸಿಸಿ ಉಸ್ತುವಾರಿಯಾಗಿ ಮಮತಾ ಗಟ್ಟಿ ನೇಮಕ

(ನ್ಯೂಸ್ ಕಡಬ)newskadaba.com ಸುಳ್ಯ, ಜು.26. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಂಘಟನೆಯ ಕೆಪಿಸಿಸಿ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತ ಗಟ್ಟಿ ನೇಮಕಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯ ಹಾಗೂ ಕಡಬ ಬ್ಲಾಕ್ ಒಳಗೊಂಡ ಸುಳ್ಯ ವಿಧಾನಸಭಾ ಕ್ಷೇತ್ತದ ಕೆಪಿಸಿಸಿ ಉಸ್ತುವಾರಿಯಾಗಿ ಮಮತ ಗಟ್ಟಿ ಅವರನ್ನುನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕೆಪಿಸಿಸಿ ವತಿಯಿಂದ ನೀಡುವ ಕಾರ್ಯಕ್ರಮಗಳ ಅನುಷ್ಠಾನದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯನ್ನು ಅವರಿಗೆ

ಸುಳ್ಯ ಕೆಪಿಸಿಸಿ ಉಸ್ತುವಾರಿಯಾಗಿ ಮಮತಾ ಗಟ್ಟಿ ನೇಮಕ Read More »

ಕರಾವಳಿ
Scroll to Top