ನ್ಯೂಸ್ ಕಡಬ

ವಿದ್ಯಾರ್ಥಿನಿ ಸೊಂಟಕ್ಕೆ ಗುಂಡು ಹಾರಿಸಿದ ವಿದ್ಯಾರ್ಥಿ..?

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 11. ಪಿಸ್ತೂಲ್‌ನೊಂದಿಗೆ ಕೋಚಿಂಗ್ ಸೆಂಟರ್‌ಗೆ ಆಗಮಿಸಿದ ವಿದ್ಯಾರ್ಥಿಯೋರ್ವ, ಎದುರಿಗೆ ಕುಳಿತಿದ್ದ ವಿದ್ಯಾರ್ಥಿನಿಯ ಸೊಂಟಕ್ಕೆ ಗುಂಡು ಹಾರಿಸಿದ ಘಟನೆ ಬಿಹಾರದ ಮುಜಾಫರ್‌ಪುರ ನಗರದಲ್ಲಿ ನಡೆದಿದೆ. ವರದಿಯ ಪ್ರಕಾರ ಕೋಚಿಂಗ್ ಸೆಂಟರ್ ನಲ್ಲಿ 11ನೇ ತರಗತಿಯ ಇಂಗ್ಲಿಷ್ ಕಲಿಸುತ್ತಿದ್ದ ಸಂದರ್ಭ ಗುಂಡೇಟಿನ ಸದ್ದು ಕೇಳಿಬಂದಿದ್ದು, ವಿದ್ಯಾರ್ಥಿನಿಯ ದೇಹದಿಂದ ರಕ್ತ ಸೋರುತ್ತಿತ್ತು. ಕೂಡಲೇ ಮನೆಯವರಿಗೆ ವಿಷಯ ತಿಳಿಸಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆಪ್ರತಿಕ್ರಿಯಿಸಿದ ಪೊಲೀಸ್ ಠಾಣೆ ಪ್ರಭಾರಿ ರಾಜು ಪಾಲ್ ಅವರು, 11ನೇ […]

ವಿದ್ಯಾರ್ಥಿನಿ ಸೊಂಟಕ್ಕೆ ಗುಂಡು ಹಾರಿಸಿದ ವಿದ್ಯಾರ್ಥಿ..? Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಡ್ಡೂರು ಸೇತುವೆ ನಿರ್ಬಂಧ- ಪರಿಶೀಲಿಸಲು ಉಸ್ತುವಾರಿ ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನ ರಾಜ್ಯ ಹೆದ್ದಾರಿ ಸಂಪರ್ಕಕ್ಕೆ ಕೊಂಡಿಯಾಗಿರುವ ಫಲ್ಗುಣಿ ನದಿಯ ಪೊಳಲಿ ಸೇತುವೆಯಲ್ಲಿ ಲಾರಿ ಮತ್ತು ಬಸ್ ಗಳಿಗೆ ಹಾಕಿರುವ ನಿರ್ಬಂಧವನ್ನು ತೆರವುಗೊಳಿಸುವ ಬಗ್ಗೆ ಪರಿಶೀಲಿಸಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದ.ಕ. ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಸೇತುವೆಯಲ್ಲಿ ನಿರ್ಬಂಧದಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿರುವ ಬಗ್ಗೆ ಅಹವಾಲುಗಳು ಬಂದಿವೆ. ಈ ಸಂಬಂಧ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ. ಚಂದ್ರಶೇಖರ ಭಂಡಾರಿ

ಅಡ್ಡೂರು ಸೇತುವೆ ನಿರ್ಬಂಧ- ಪರಿಶೀಲಿಸಲು ಉಸ್ತುವಾರಿ ಸಚಿವರ ಸೂಚನೆ Read More »

ಕರಾವಳಿ

ಹಿರಿಯ ನಾಗರೀಕರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ  ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಂಗಳಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಕೆಟ್‍ನಲ್ಲಿ ಬಾಲ್ ಎಸೆಯುವುದರ ಮೂಲಕ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಹಿರಿಯ ನಾಗರಿಕರ ಸ್ಥಾಪಕ ಕಾರ್ಯದರ್ಶಿ ರಮೇಶ್ ರಾವ್ ರವರು ಉಪಸ್ಥಿತರಿದ್ದರು. ದ.ಕ ಜಿಲ್ಲಾ ವಿಕಲಚೇತನರ

ಹಿರಿಯ ನಾಗರೀಕರ ಕ್ರೀಡಾಕೂಟ Read More »

ಕರಾವಳಿ

ಸೆಪ್ಟೆಂಬರ್ 15 ರಂದು ಬೃಹತ್ ಮಾನವ ಸರಪಳಿ- ಯಶಸ್ವಿಗೊಳಿಸಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಸೆಪ್ಟೆಂಬರ್ 15ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಸೂಚನೆ ನೀಡಿದರು. ಅವರು ಮಂಗಳವಾರದಂದು ಮಂಗಳೂರು ತಾಲೂಕು ಪಂಚಾಯತ್ ಕಛೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಈಗಾಗಲೇ ಸೂಚಿಸಿರುವಂತೆ ಮಾನವ ಸರಪಳಿ ಕಾರ್ಯಕ್ರಮವನ್ನು ರಚಿಸಲು ಅಂತಿಮ ಸಿದ್ದತೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಮಾನವ ಸರಪಳಿ ರಚನೆ ಕುರಿತಂತೆ

ಸೆಪ್ಟೆಂಬರ್ 15 ರಂದು ಬೃಹತ್ ಮಾನವ ಸರಪಳಿ- ಯಶಸ್ವಿಗೊಳಿಸಲು ಕರೆ Read More »

ಕರಾವಳಿ

ಬಂಟ್ವಾಳ: ಮಾನವ ಸರಪಳಿಯಲ್ಲಿ ಭಾಗವಹಿಸಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಿಂದ ಬಿ.ಸಿ ರೋಡ್- ಮಾಣಿ -ಕಬಕವರೆಗಿನ 22 ಕಿ.ಮೀ ವ್ಯಾಪ್ತಿಯಲ್ಲಿ ನಡೆಸಲಿರುವ ಮಾನವ ಸರಪಳಿ ಮತ್ತು ಸಂವಿಧಾನ ಪೀಠಿಕೆ ಪಠಣ ಕಾರ್ಯಕ್ರಮದಲ್ಲಿ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಫಲಾನುಭವಿಗಳು ಬೆಳಿಗ್ಗೆ 9 ಗಂಟೆಗೆ ತಮ್ಮ ಅನುಕೂಲಕರ ಸ್ಥಳದಲ್ಲಿ ಮಾನವ ಸರಪಳಿಯಲ್ಲಿ ಭಾಗವಹಿಸುವಂತೆ ಬಂಟ್ವಾಳ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಪ್ರಕಟಣೆ ತಿಳಿಸಿದೆ.

ಬಂಟ್ವಾಳ: ಮಾನವ ಸರಪಳಿಯಲ್ಲಿ ಭಾಗವಹಿಸಲು ಕರೆ Read More »

ಕರಾವಳಿ

ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಕಂಕನಾಡಿ ಮಂಗಳೂರು, ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾನಿಲಯ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್‍ನ ಡೆಸಿನಿಯಲ್ ಮೆಮೋರಿಯಲ್ ಸಭಾಂಗಣದಲ್ಲಿ

ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ Read More »

ಕರಾವಳಿ

ಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಲೀಡ್ ಬ್ಯಾಂಕ್ ಸಭೆಯಲ್ಲಿ ಅಧಿಕಾರಿಗಳಿಗೆ ಸಂಸದ ಚೌಟ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಮಂಗಳೂರು ನಗರದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದ.ಕ ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಯಾ.

ಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಲೀಡ್ ಬ್ಯಾಂಕ್ ಸಭೆಯಲ್ಲಿ ಅಧಿಕಾರಿಗಳಿಗೆ ಸಂಸದ ಚೌಟ ಸೂಚನೆ Read More »

ಕರಾವಳಿ

ನಟ ದರ್ಶನ್ ಸಹಿತ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯವು, ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 3 ದಿನಗಳ ಕಾಲ ವಿಸ್ತರಿಸಿ (ಸೆ. 12) ಆದೇಶಿಸಿದೆ. ವಿಚಾರಣೆ ಸಂದರ್ಭದಲ್ಲಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಹಾರ್ಡ್ ಡಿಸ್ಕ್, ಪೆನ್ ಡ್ರೈವ್ ಸೇರಿದಂತೆ 60ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಲ್ಲಿಸಿದಲ್ಲದೇ 2 ವಾರದಲ್ಲಿ ಡಿಜಿಟಲ್

ನಟ ದರ್ಶನ್ ಸಹಿತ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ Read More »

ಕರಾವಳಿ

ಎಚ್ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೆಡ್ ರಿಬ್ಬನ್ ಕ್ಲಬ್‍ಗಳು, ಡೆಕಾಥ್ಲಾನ್ ಭಾರತ್ ಮಾಲ್, ಸ್ಕೂಲ್ ಬುಕ್ ಕಂಪನಿ, ಲಯನ್ಸ್ ಕ್ಲಬ್ ಮಂಗಳೂರು, ಯಂಗ್ ಇಂಡಿಯಾ ಮಂಗಳೂರು, ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಇದರ

ಎಚ್ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ Read More »

ಕರಾವಳಿ

ಸೆಪ್ಟೆಂಬರ್ 15ರಂದು ಜಿಲ್ಲೆಯಾದ್ಯಂತ ಮಾನವ ಸರಪಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕರ್ನಾಟಕದ ಉತ್ತರ ತುದಿಯಾದ ಬೀದರ್ ಜಿಲ್ಲೆಯಿಂದ ದಕ್ಷಿಣ ತುದಿಯಾದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿಯನ್ನು ರಚಿಸಿ ಸಂವಿಧಾನದ ಬಗ್ಗೆ ದೇಶದ ನಾಗರಿಕರಲ್ಲಿ ಅರಿವು ಮೂಡಿಸಲು ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15ರಂದು ಜಿಲ್ಲೆಯಾದ್ಯಂತ ಮಾನವ ಸರಪಳಿಯನ್ನು ಮುಲ್ಕಿ ಹೆಜಮಾಡಿ ಟೋಲ್ ಗೇಟ್‍ನಿಂದ  ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದವರೆಗೆ ರಚಿಸುವ ಮೂಲಕ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ

ಸೆಪ್ಟೆಂಬರ್ 15ರಂದು ಜಿಲ್ಲೆಯಾದ್ಯಂತ ಮಾನವ ಸರಪಳಿ Read More »

ಕರ್ನಾಟಕ
Scroll to Top