ನ್ಯೂಸ್ ಕಡಬ

ಕುಂದಾಪುರ: ತಡರಾತ್ರಿ ನಿದ್ದೆಗಣ್ಣಿನಲ್ಲಿ ಮನೆಯಿಂದ 3 ಕಿ.ಮೀ ನಡೆದ ಬಾಲಕಿ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.21. ಮನೆಯಲ್ಲಿ ಮಲಗಿದ್ದ ಆರು ವರ್ಷದ ಬಾಲಕಿಯೊಬ್ಬಳು ನಿದ್ದೆಗಣ್ಣಿನಲ್ಲಿ ಎದ್ದು ಸುಮಾರು ಮೂರು ಕಿಲೋಮೀಟರ್ ದೂರ ನಡೆದು ಬೀದಿಯಲ್ಲಿ ವಾಹನ ಸಂಚರಿಸುತ್ತಿದ್ದವರ ಕಣ್ಣಿಗೆ ಬಿದ್ದ ಘಟನೆ ನಡೆದಿದೆ. ಕುಂದಾಪುರ ಸಮೀಪ ದಬ್ಬೆಕಟ್ಟೆ–ತೆಕ್ಕಟ್ಟೆ ರಸ್ತೆಯಲ್ಲಿ ರಾತ್ರಿ ಬಾರ್ ಬಂದ್ ಮಾಡಿ ತೆರಳುತ್ತಿದ್ದ ವೇಳೆ ಬಾಲಕಿ ರಸ್ತೆಯಲ್ಲಿ ತೆರಳುತ್ತಿರುವುದು ಕಣ್ಣಿಗೆ ಬಿದ್ದಿದ್ದು, ಈ ವೇಳೆ ಬಾಲಕಿಯನ್ನು ವಿಚಾರಿಸಿ ಅರ್ಚನಾ ಬಾರ್ ನ ವಿಶ್ವನಾಥ್ ಪೋಷಕರಿಗೆ ಕರೆಸಿದ್ದಾರೆ. ಮಗು ನಾಪತ್ತೆಯಾದ ವಿಷಯವೇ ತಿಳಿಯದೆ ಮನೆಯವರು ಮಗುವನ್ನು ಕಂಡು […]

ಕುಂದಾಪುರ: ತಡರಾತ್ರಿ ನಿದ್ದೆಗಣ್ಣಿನಲ್ಲಿ ಮನೆಯಿಂದ 3 ಕಿ.ಮೀ ನಡೆದ ಬಾಲಕಿ Read More »

ಕರ್ನಾಟಕ

’ಪಾನ’ ಪ್ರಿಯರಿಗೆ ಬಿಗ್ ಶಾಕ್..! ಇಂದಿನಿಂದಲೇ ದುಬಾರಿಯಾಗಲಿರುವ ಮದ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, (ಜುಲೈ 21) ಇಂದಿನಿಂದಲೇ ಮದ್ಯದ ದರ ದುಬಾರಿಯಾಗಲಿದೆ.2023 -24ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಮದ್ಯದ ಮೇಲಿನ ಏರಿಕೆ ಇಂದಿನಿಂದ ಜಾರಿಯಾಗಲಿದೆ ಎನ್ನಲಾಗಿದೆ. ಶೇ.20ರಷ್ಟು ಹೆಚ್ಚಿನ ಹಿನ್ನೆಲೆಯಲ್ಲಿ ಗರಿಷ್ಟ ದರದೊ೦ದಿಗೆ ಹೊಸ ಬೆಲೆಯಲ್ಲಿ ಮದ್ಯ ಮಾರಾಟವಾಗಲಿದ್ದು, ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಂತೆ ಮದ್ಯದ ಅಧಿಕಾರಿ ಸುಂಕವನ್ನು ಹೆಚ್ಚಿಸಲಾಗಿದೆ. ವಿಸ್ಕಿ, ರಂ, ಬ್ರಾಂಡಿ, ಜಿನ್ ಸೇರಿದಂತೆ ಎಲ್ಲಾ ಬಗೆಯ ಭಾರತೀಯ ಮದ್ಯದ ಮೇಲೆ

’ಪಾನ’ ಪ್ರಿಯರಿಗೆ ಬಿಗ್ ಶಾಕ್..! ಇಂದಿನಿಂದಲೇ ದುಬಾರಿಯಾಗಲಿರುವ ಮದ್ಯ Read More »

ಕರ್ನಾಟಕ

ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 19. ಬೀಚ್ ನಲ್ಲಿ ಈಜಲು ಹೋಗಿ ಸಮುದ್ರ ಪಾಲಾಗಿದ್ದ ಗದಗ ಮೂಲದ ಯುವಕ ಪೀರ್ ಸಾಬ್ ನ ಮೃತದೇಹ ಕಂಚುಗೋಡಯ ಎಂಬಲ್ಲಿ ಪತ್ತೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಿವಾಸಿಯಾಗಿರುವ ಪೀರ್ ಸಾಬ್(21), 2 ತಿಂಗಳ ಹಿಂದೆ ಗಾರೆ ಕೆಲಸಕ್ಕೆ ಬಂದಿದ್ದು ಕಾಪು ತಾಲ್ಲೂಕಿನ ಮುದರಂಗಡಿಯಲ್ಲಿ ವಾಸವಾಗಿದ್ದನು. ಮಂಗಳವಾರ ಸಿರಾಜ್ ಎಂಬವರ ಜೊತೆ ಲಾರಿಯಲ್ಲಿ ಪೀರ್ ಸಾಬ್ ಹಾಗೂ ಸ್ನೇಹಿತ ಸಿದ್ಧಪ್ಪ ಊರಿಗೆ ಹೊರಟಿದ್ದರು. ಮಧ್ಯಾಹ್ನ ಸುಮಾರು 2.30ರ ಹೊತ್ತಿಗೆ

ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ

ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಕಮಿಷನರ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ವಿಧ್ವಂಸಕ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿದ್ದು, ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಈ ಕುರಿತು ಬೆಂಗಳೂರು ಕಮಿಷನರ್ ದಯಾನಂದ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸಿಸಿಬಿ ಪೊಲೀಸರು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಹಾಗೂ ಜಾಹಿದ್ ಎಂಬ ಶಂಕಿತ ಉಗ್ರರನ್ನು ಇಂದು ಬಂಧಿಸಿದ್ದು, ಇವರ ಹಿಂದೆ ಉಗ್ರ ಸಂಘಟನೆಯ ಕೈವಾಡವಿರುವ ಶಂಕೆಯಿದೆ ಎಂದು ಹೇಳಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಐವರು

ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಕಮಿಷನರ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು- ಐವರು ಉಗ್ರರ ಬಂಧಿಸಿದ ಸಿಸಿಬಿ ಪೊಲೀಸರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿರುವ ಘಟನೆ ನಡೆದಿದೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಸೈಯ್ಯದ್, ಸುಹೇಲ್ ಉಮೇರ್, ಜುನೇದ್, ಮುದಾಸಿನ್, ಜಾಹೀದ್ ಎಂದು ಗುರುತಿಸಲಾಗಿದೆ. ಸಿಸಿಬಿ ಪೊಲೀಸರು ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಆರೋಪದ ಮೇಲೆ ಐವರು ಉಗ್ರರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು- ಐವರು ಉಗ್ರರ ಬಂಧಿಸಿದ ಸಿಸಿಬಿ ಪೊಲೀಸರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು. 19. ವಿದ್ಯಾರ್ಥಿನಿಗೆ ಶಾಲೆಗೆ ಹೋಗುವ ಸಂಧರ್ಭದಲ್ಲಿ ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಗೆ ಸಂಬಂಧಿಸಿದಂತೆ ಓರ್ವನ ವಿರುದ್ಧ ದೂರು ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರೋಪಿ ಬೆಳಂದೂರಿನ ಪ್ರವೀಣ್ ಯಾನೆ ಸೀತಾರಾಮ ಎಂಬವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.    

ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾನಹಾನಿ ಪ್ರಕರಣದಲ್ಲಿ ಶಿಕ್ಷೆ ➤ ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಜು.18. ‘ಎಲ್ಲ ಕಳ್ಳರಿಗೂ ಮೋದಿ ಸರ್‌ನೇಮ್ ಇದೆ’ ಎಂಬ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಜುಲೈ 21ರ ವಿಚಾರಣೆಗೆ ಒಳಪಡಿಸಲಿದೆ. ಸೂರತ್ ನ್ಯಾಯಾಲಯವು ತಮಗೆ ವಿಧಿಸಿರುವ ಶಿಕ್ಷೆಗೆ ತಡೆ ನೀಡುವಂತೆ ಕೋರಿ ರಾಹುಲ್ ಗಾಂಧಿ ಅವರು ಅರ್ಜಿ ಸಲ್ಲಿಸಿದ್ದರು. ಇದನ್ನು ತುರ್ತು ವಿಚಾರಣೆಗೆ ಎತ್ತಿಕೊಳ್ಳುವಂತೆ ಮನವಿ ಮಾಡಲಾಗಿತ್ತು. ಸಿಜೆಐ ಡಿವೈ ಚಂದ್ರಚೂಡ್

ಮಾನಹಾನಿ ಪ್ರಕರಣದಲ್ಲಿ ಶಿಕ್ಷೆ ➤ ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಗುಜರಾತ್‌, ಜು.18. 20 ವರ್ಷದ ಯುವಕನೊರ್ವ ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ. ಯುವಕನೋರ್ವ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಮಾಹಿತಿಯ ಪ್ರಕಾರ, ಪರ್ವ ಸೋನಿ ಅವರು ಅರವಳ್ಳಿಯ ಮೊಡಸದಲ್ಲಿರುವ ಗೋವರ್ಧನ್ ಸೊಸೈಟಿಯಲ್ಲಿರುವ ಶ್ರೈನ್ ಅಪಾರ್ಟ್‌ಮೆಂಟ್‌ ನಲ್ಲಿ ವಾಸಿಸುತ್ತಿದ್ದರು. ಕ್ರಿಕೆಟ್ ಮೈದಾನದಲ್ಲಿ ಆಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ.  

ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆ.16 ರಂದು ಮಹಿಳೆಯರ ಖಾತೆಗೆ 2,000 ರೂ. ಪಾವತಿ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಗೃಹಲಕ್ಷ್ಮಿ ಯೋಜನೆಗೆ ನಾಲ್ಕೈದು ದಿನಗಳಲ್ಲಿ ಆ್ಯಪ್ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಕೆ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿದುಬಂದಿದೆ. ಅರ್ಜಿ ಸಲ್ಲಿಸಿದ ಪ್ರತಿ ಮನೆ ಯಜಮಾನಿಯ ಅಕೌಂಟಿಗೆ ಆ.16 ರಂದು ವರ್ಗಾವಣೆ ಮೂಲಕ 2,000 ರೂ. ಗ್ಯಾರಂಟಿ ಹಣ ಪಾವತಿಸಲಾಗುವುದು ಎಂದು ಮಹಿಳಾ ಮತ್ತು ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಆ.16 ರಂದು ಮಹಿಳೆಯರ ಖಾತೆಗೆ 2,000 ರೂ. ಪಾವತಿ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ
Death, deadbody, Waterfall

ಸುರತ್ಕಲ್: ಮೀನು ಹಿಡಿಯಲು ನೀರಿಗಿಳಿದ ವ್ಯಕ್ತಿ ಕೆರೆಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಜು.15. ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ ನೀರಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಪೋರ್ಕೊಡಿ ನಿವಾಸಿ ಪೂವಪ್ಪ(40) ಎಂದು ಗುರುತಿಸಲಾಗಿದೆ. ತೋಕೂರು ಬಳಿಯ ಜಾರಂದಾಯ ದೈವಸ್ಥಾನದ ಗುತ್ತಿನ ಮನೆಯ ಸಮೀಪದ ಕೆರೆಗೆ ಅಣ್ಣ ತಮ್ಮಂದಿರು ಮೀನು ಹಿಡಿಯಲೆಂದು ಇಳಿದಿದ್ದು, ಕೆಸರಿನಲ್ಲಿ ಹೂತು ಹೋದ ಕಾರಣ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಸುರತ್ಕಲ್: ಮೀನು ಹಿಡಿಯಲು ನೀರಿಗಿಳಿದ ವ್ಯಕ್ತಿ ಕೆರೆಗೆ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top