ನ್ಯೂಸ್ ಕಡಬ

crime, arrest, suspected

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.11. ಆನ್‍ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದ ಯುವಕನೋರ್ವ ಸ್ವಂತ ಅಣ್ಣನ ಮನೆಯಿಂದಲೇ ಸುಮಾರು 11 ಪವನ್ ಚಿನ್ನಾಭರಣ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಿಂದ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಂಗಳೂರು ದಕ್ಷಿಣ ವಿಭಾಗದ ಸಿದ್ಧಾಪುರ ಠಾಣಾ ವ್ಯಾಪ್ತಿಯ ಸೋಮೇಶ್ವರ ನಗರ ನಿವಾಸಿ ಮೊಹಮ್ಮದ್ ಪರ್ವೀನ್ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿದ್ದ ಆರೋಪಿ ಪರ್ವೀನ್, ಮೆಡಿಕಲ್ ಸ್ಟೋರ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಆನ್‌ಲೈನ್ ಬೆಟ್ಟಿಂಗ್ ದಂಧೆಯ ದಾಸನಾಗಿದ್ದ. ಬೆಟ್ಟಿಂಗ್‍ನಲ್ಲಿ ಹಣ […]

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎರಡು ಧಮಾಕ ಪ್ಲಾನ್ ಪರಿಚಯಿಸಿದೆ ಜಿಯೋ-ರಿಲಯನ್ಸ್

(ನ್ಯೂಸ್ ಕಡಬ)news kadaba.com ಜು.10: ಟೆಲಿಕಾಂ ಕಂಪನಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಇದೀಗ ತನ್ನ ಪ್ರಿಪೇಯ್ಡ್  ಬಳಕೆದಾರರಿಗೆ ಎರಡು ಹೊಸ ಡೇಟಾ ಬೂಸ್ಟರ್ ಯೋಜನೆಗಳನ್ನು ಪರಿಚಯಿಸಿದೆ. ಜಿಯೋ ಹೊಸದಾಗಿ 19 ರೂ. ಮತ್ತು 29 ರೂಪಾಯಿಯ ಡೇಟಾ ಬೂಸ್ಟರ್ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ರಿಲಯನ್ಸ್ ಜಿಯೋ ಬಳಕೆದಾರರು ಈಗ 7 ಡೇಟಾ ಬೂಸ್ಟರ್ ಯೋಜನೆಗಳನ್ನು ಹೊಂದಿದ್ದಾರೆ. 19 ರೂ. ಡೇಟಾ ಬೂಸ್ಟರ್ ಯೋಜನೆ ಅಡಿಯಲ್ಲಿ, ರಿಲಯನ್ಸ್ ಜಿಯೋ ಬಳಕೆದಾರರು ಹೈ-ಸ್ಪೀಡ್ 1.5GB

ಎರಡು ಧಮಾಕ ಪ್ಲಾನ್ ಪರಿಚಯಿಸಿದೆ ಜಿಯೋ-ರಿಲಯನ್ಸ್ Read More »

ತಂತ್ರಜ್ಞಾನ

ಬಜೆಟ್ ಬೆಲೆಯ ಹ್ಯುಂಡೈ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.10: ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಎಕ್ಸ್‌ಟರ್ ಕಾರು ಮಾದರಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಕಂಪನಿಯು ಬಹುನೀರಿಕ್ಷಿತ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 5,99,990 ಆರಂಭಿಕ ಬೆಲೆ ಹೊಂದಿದೆ. ಹೊಸ ಎಕ್ಸ್‌ಟರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಇಎಕ್ಸ್, ಎಸ್, ಎಸ್ಎಕ್ಸ್, ಎಸ್ಎಕ್ಸ್(ಆಪ್ಷನ್) ಮತ್ತು ಎಸ್ಎಕ್ಸ್

ಬಜೆಟ್ ಬೆಲೆಯ ಹ್ಯುಂಡೈ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ Read More »

ತಂತ್ರಜ್ಞಾನ

ಉಪ್ಪಿನಂಗಡಿ: ಆ್ಯಕ್ಟಿವಾ ಹಾಗೂ ಪಿಕಪ್ ನಡುವೆ ಢಿಕ್ಕಿ – ಸವಾರ ಮೃತ್ಯು, ಸಹ ಸವಾರೆ ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.09. ಪಿಕಪ್ ವಾಹನ ಹಾಗೂ ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಉರುವಾಲು ಪದವು ಶುಂಠಿಪಲ್ಕೆ ನಿವಾಸಿ ಅಬೂಬಕ್ಕರ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಉಪ್ಪಿನಂಗಡಿ: ಆ್ಯಕ್ಟಿವಾ ಹಾಗೂ ಪಿಕಪ್ ನಡುವೆ ಢಿಕ್ಕಿ – ಸವಾರ ಮೃತ್ಯು, ಸಹ ಸವಾರೆ ಗಂಭೀರ Read More »

ಕರ್ನಾಟಕ
crime, arrest, suspected

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಮಾಲಕನೇ ಬೆಂಕಿ ಕೊಟ್ಟು ಕ್ರೂರವಾಗಿ ಕೊಂದಿರುವ ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯಲ್ಲಿ ಕೆಲಸಕ್ಕಿದ್ದ ಜಗ್ಗು (35) ಎಂಬವರೇ ಮೃತ ದುರ್ದೈವಿ. ಶನಿವಾರದಂದು ಕ್ಷುಲ್ಲಕ ಕಾರಣಕ್ಕೆ ಅಂಗಡಿ ಮಾಲಕ ತೌಸೀಫ್ ಹುಸೈನ್ ಎಂಬಾತ ಜಗ್ಗುವನ್ನು ಕೊಲೆ‌ ಮಾಡುವ ಉದ್ದೇಶದಿಂದ ಬೆಂಕಿ‌ಕೊಟ್ಟಿದ್ದು, ಸುಟ್ಟ ದೇಹದೊಂದಿಗೆ ಚೀರಾಡುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರು ಜಮಾಯಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ವಿದ್ಯುತ್ ಶಾಕ್

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ Read More »

ಕರಾವಳಿ

ಗ್ಯಾರಂಟಿ ಯೋಜನೆಗಳ ಜೊತೆಗೆ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ – ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.09. ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೂರು ಯೋಜನೆಗಳು ನೇರವಾಗಿ ಮಹಿಳೆಯರಿಗೆ ಘೋಷಿಸಿರುವ ರಾಜ್ಯ ಸರಕಾರವು ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದೆ. ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರದ ವತಿಯಿಂದ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯರು, ದೇಶದ ಮೂರು ರಾಜ್ಯಗಳಲ್ಲಿ ಉದ್ಯೋಗಸ್ಥ ಹೆಣ್ಮಕ್ಕಳಿಗೆ ಮುಟ್ಟಿನ ರಜೆ

ಗ್ಯಾರಂಟಿ ಯೋಜನೆಗಳ ಜೊತೆಗೆ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ – ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

ಕರ್ನಾಟಕ

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

(ನ್ಯೂಸ್ ಕಡಬ) newskadaba.com ಚೆನ್ನೈ, ಜು.09. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಂದೇ ಭಾರತ್ ರೈಲು ಇದೀಗ ಹೊಸ ವಿನ್ಯಾಸದೊಂದಿಗೆ ಹೊರಬರಲಿದ್ದು, ಇದರ ಹೊಸ ನೋಟವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವೀಕ್ಷಿಸಿದರು. ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅಶ್ವಿನಿ ವೈಷ್ಣವ್, ಬಳಿಕ ಚೆನ್ನೈನ ಪೆರಂಬೂರ್ ಲಕ್ಷ್ಮೀಪುರಂ ನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಗೆ ಭೇಟಿ ನೀಡಿ ಹೊಸ ರೈಲನ್ನು ಪರಿಶೀಲಿಸಿದರು. ಹೊಸ ರೈಲಿನಲ್ಲಿ ತಾಂತ್ರಿಕವಾಗಿ ಮತ್ತು ವಿನ್ಯಾಸದಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದ್ದು,

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ Read More »

ರಾಷ್ಟ್ರೀಯ ನ್ಯೂಸ್

ವಿಶ್ವದಲ್ಲೇ ಅತೀ ಶ್ರೀಮಂತ ಭಿಕ್ಷುಕ ಎಂಬ ಖ್ಯಾತಿಗೆ ಪಾತ್ರರಾದ ಮುಂಬಯಿಯ ಭಿಕ್ಷುಕ

(ನ್ಯೂಸ್ ಕಡಬ) newskadaba.com ಮುಂಬಯಿ, ಜು.09. ವೃತ್ತಿಯಲ್ಲಿ ಭಿಕ್ಷುಕನಾಗಿರುವ ಮುಂಬಯಿಯ ವ್ಯಕ್ತಿಯೋರ್ವ ಸುಮಾರು 7.5 ಕೋಟಿ ಸಂಪಾದಿಸುವ ಮೂಲಕ ವಿಶ್ವದಲ್ಲೇ ಅತೀ ಶ್ರೀಮಂತ ಭಿಕ್ಷುಕ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮುಂಬಯಿ ನಿವಾಸಿಯಾಗಿರುವ ಭರತ್ ಜೈನ್ ಎಂಬಾತ ಬಡತನದಿಂದಾಗಿ ಪ್ರಾಥಮಿಕ ಶಿಕ್ಷಣವನ್ನೂ ಪಡೆಯಲು ಸಾಧ್ಯವಾಗದೆ ಭಿಕ್ಷಾಟನೆ ವೃತ್ತಿಗಿಳಿದಿದ್ದು, ಆ ಬಳಿಕ ಅದೇ ವೃತ್ತಿಯನ್ನು ಮುಂದುವರಿಸಿದ್ದಾರೆ ಎಂದು ಪ್ರಸಿದ್ಧ ಆಂಗ್ಲ ಪತ್ರಿಕೆಯೊಂದು ವರದಿ‌ ಮಾಡಿದೆ. ಇಂದು ಕೋಟಿ ಆಸ್ತಿಯ ಒಡೆಯನಾಗಿರುವ ಭರತ್ ಜೈನ್, 1.2 ಕೋಟಿಯ ಫ್ಲ್ಯಾಟನ್ನು ಹೊಂದಿದ್ದು, ಎರಡು

ವಿಶ್ವದಲ್ಲೇ ಅತೀ ಶ್ರೀಮಂತ ಭಿಕ್ಷುಕ ಎಂಬ ಖ್ಯಾತಿಗೆ ಪಾತ್ರರಾದ ಮುಂಬಯಿಯ ಭಿಕ್ಷುಕ Read More »

ರಾಷ್ಟ್ರೀಯ ನ್ಯೂಸ್

ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಟ್ವೀಟ್ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.8. ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ನಿವಾಸಿ ಶಿವರಾಜ್ ಹೆಚ್.ಕೆ.(37) ಎಂದು ಗುರುತಿಸಲಾಗಿದೆ. ಆರೋಪಿಯು ನಕಲಿ ಟ್ವಿಟರ್ ಖಾತೆಯೊಂದರಲ್ಲಿ ತುಳುನಾಡಿನ ದೈವರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಮಾಡಿದ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯ ಪದಾಧಿಕಾರಿಗಳು ಮಂಗಳೂರು ಸೆನ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿದ್ದ

ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಟ್ವೀಟ್ – ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ

ಕಡಬದ ಯುವಕ ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ಕಡಬದ ಯುವಕನೋರ್ವ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಾಲೂಕಿನ ಕಾಣಿಯೂರು ಕಾಯ್ಮಣ ನಿವಾಸಿ ದಿವಾಕರ್ (36) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ದಿವಾಕರ್ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಶುಕ್ರವಾರದಂದು ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಡಬದ ಯುವಕ ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ
Scroll to Top