ನ್ಯೂಸ್ ಕಡಬ

ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆ

(ನ್ಯೂಸ್ ಕಡಬ)news kadaba.com ಪುತ್ತೂರು, ಜು. 3. ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆಯಾಗಿರುವ ಘಟನೆ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ನಾಪತ್ತೆಯಾದ ನಿವಾಸಿ ಉಮ್ಮರ್‌ ಎಂಬವರು, ಜು.1ರಂದು ಮಧ್ಯಾಹ್ನ 3 ಗಂಟೆಯವರೆಗೆ ಪುತ್ತೂರಿನಲ್ಲಿದ್ದರು ಆ ಬಳಿಕ ನಾಪತ್ತೆಯಾಗಿದ್ದು, ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ.ಮಗನ ಮದುವೆ ಇಂದು ನಡೆಯಬೇಕಾಗಿತ್ತು. ನಿನ್ನೆ ಮದರಂಗಿ ಶಾಸ್ತ್ರ ನಿಗದಿಯಾಗಿತ್ತು. ಈಗ ತಂದೆ ನಾಪತ್ತೆಯಾಗಿರುವ ಕಾರಣ ಮದುವೆ ರದ್ದು ಮಾಡಲಾಗಿದೆ. ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಮೊಬೈಲ್‌ ಲೊಕೇಶನ್‌ ಆಧಾರದಲ್ಲಿ […]

ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಕಾರಿಗೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 03. ಆಟೋ ರಿಕ್ಷಾವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ಭಾನುವಾರ ರಾತ್ರಿ ನಡೆದಿದೆ. ಉಪ್ಪಿನಂಗಡಿಯಿಂದ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ಅಟೋ ರಿಕ್ಷಾ, ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ರಿಕ್ಷಾವು ಮಗುಚಿ ಬಿದ್ದಿದೆ. ರಿಕ್ಷಾದಲ್ಲಿ ಚಾಲಕ ಮಾತ್ರವಿದ್ದು, ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕಾರಿನ ಹಾಗೂ ರಿಕ್ಷಾದ ಮುಂಭಾಗ ಜಖಂಗೊಂಡಿವೆ. ರಿಕ್ಷಾ ಚಾಲಕನ ಅಜಾಗರೂಕತೆ,

ಉಪ್ಪಿನಂಗಡಿ: ಕಾರಿಗೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ Read More »

ಕರಾವಳಿ, ಕರ್ನಾಟಕ

ಖ್ಯಾತ ಬಾಡಿಬಿಲ್ಡರ್ ಜೋ ಲಿಂಡ್ನರ್ ನಿಧನ

(ನ್ಯೂಸ್ ಕಡಬ) newskadaba.com ಬ್ಯಾಂಕಾಕ್‌, ಜೂ. 30. ಖ್ಯಾತ ಬಾಡಿಬಿಲ್ಡರ್ ಜೋ ಲಿಂಡ್ನರ್‌ ಅವರು ನಿಧನರಾಗಿದ್ದಾರೆ. ರಕ್ತನಾಳ ಸಮಸ್ಯೆಯಿಂದ ಬಳಲುತ್ತಿದ್ದ ಜೋ ಲಿಂಡ್ನರ್‌ ಅವರು ಶನಿವಾರದಂದು ನಿಧನರಾಗಿದ್ದಾರೆ ಎಂದು ಅವರ ಗೆಳತಿ ನಿಚಾ ಅವರು ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 2 ದಿನಗಳ ಹಿಂದೆ ಆರೋಗ್ಯಕರ ದೇಹದಾರ್ಢ್ಯ ಅಭ್ಯಾಸಗಳನ್ನು ರೂಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದ ಜೋ ಲಿಂಡ್ನರ್‌ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಫಿಟ್ನೆಸ್‌ ಕುರಿತಂತೆ ಹಲವು ವಿಡಿಯೋಗಳನ್ನು ಹಂಚಿಕೊಂಡಿದ್ದರು.

ಖ್ಯಾತ ಬಾಡಿಬಿಲ್ಡರ್ ಜೋ ಲಿಂಡ್ನರ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.29. ಬೈಕ್ ಹಾಗೂ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಎಂಬಲ್ಲಿ ನಡೆದಿದೆ. ನೆಟ್ಟಣದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬೈಕ್ ನಡುವೆ ಕೈಕಂಬ ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಗಸ್ತಿನಲ್ಲಿದ್ದ ಹೈವೇ ಪಾಟ್ರಲ್ ಸಿಬ್ಬಂದಿಗಳಾದ ಕಡಬ ಠಾಣಾ ಎಎಸ್ಐ

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: 40 ಕೆಜಿಯ ಆಡನ್ನು ನುಂಗಿದ ಹೆಬ್ಬಾವು ➤ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಭಾರೀ ಗಾತ್ರದ ಹೆಬ್ಬಾವು ಆಡೊಂದನ್ನು ನುಂಗಲು ವಿಫಲ ಯತ್ನ ನಡೆಸಿದ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಕೊಡೆಂಕಿರಿ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಐತ್ತೂರು ಗ್ರಾಮದ ಕೊಡೆಂಕೀರಿ ನಿವಾಸಿ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 40 ಕೆಜಿ ತೂಕದ ಆಡನ್ನು ಹೆಬ್ಬಾವೊಂದು ಉರುಳು ಹಾಕಿಕೊಂಡು ನುಂಗಲು ಯತ್ನಿಸಿದೆ. ಸುಮಾರು ಒಂದು ಗಂಟೆಗಳ ಕಾಲ ಸೆಣಸಾಡಿದ ಹೆಬ್ಬಾವು ಆಡಿನ ತಲೆಯ ಭಾಗವನ್ನು ಮಾತ್ರ ನುಂಗಿದ್ದು, ಉಳಿದ ಭಾಗವನ್ನು ನುಂಗಲು

ಕಡಬ: 40 ಕೆಜಿಯ ಆಡನ್ನು ನುಂಗಿದ ಹೆಬ್ಬಾವು ➤ ವೀಡಿಯೋ ವೈರಲ್ Read More »

ಕರ್ನಾಟಕ

ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಕಳೆದ ಎರಡು ತಿಂಗಳ ಹಿಂದೆ ಇಬ್ಬರನ್ನು ಕೊಂದು ಅಟ್ಟಹಾಸ ಮೆರೆದಿದ್ದ ಕಾಡಾನೆಗಳು ಮತ್ತೆ ಕಾಡಿನಿಂದ ರಸ್ತೆಗಿಳಿಯುತ್ತಿದ್ದು, ಕಳೆದ ನಾಲ್ಕೈದು ದಿನಗಳಿಂದ ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಯ ಆಸುಪಾಸಿನಲ್ಲಿ ಕಾಡಾನೆಗಳು ಕಂಡು ಬರುತ್ತಿವೆ. ಮರ್ಧಾಳ ಸಮೀಪದ, ಭ್ರಾಂತಿಕಟ್ಟೆ, ಕೊಡೆಂಕೀರಿ, ಐತ್ತೂರು, ಆಜನ ಭಾಗದಲ್ಲಿ ಕಾಡಾನೆಗಳು ಸಂಚರಿಸಿ ಕೃಷಿ ನಾಶ ಮಾಡಿರುವುದಲ್ಲದೆ, ಮರ್ದಾಳ ಪೇಟೆಯ ಸಮೀಪ ಇರುವ ವಿಶೇಷ ಶಾಲೆಯ ಬಳಿಯ ತೋಟಕ್ಕೆ ಕಾಡಾನೆಗಳು ಲಗ್ಗೆ ಇಟ್ಟಿವೆ. ಮೊದಲೆಲ್ಲಾ ಕಾಡಿನಲ್ಲಿದ್ದ ಕಾಡಾನೆಗಳು ಇದೀಗ

ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರದ 5ಕೆಜಿ ಸೇರಿ ಹತ್ತು ಕೆಜಿ ಅಕ್ಕಿ ಕೊಡುತ್ತಾರೋ ಎಂದು ಸ್ಪಷ್ಟನೆ ನೀಡಬೇಕು ➤ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜೂ. 26. ರಾಜ್ಯ ಕಾಂಗ್ರೆಸ್ ಸರಕಾರವು ಬಡ ಕುಟುಂಬದ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದು, ಇದೀಗ ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಬಿಟ್ಟು ಹತ್ತು ಕೆ.ಜಿ ಅಥವಾ ಕೇಂದ್ರದ್ದು ಸೇರಿ ಹತ್ತು ಕೆಜಿ ನೀಡುತ್ತಾರೋ ಎಂಬುದರ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ ಬಡ ಕುಟುಂಬಗಳ ಪ್ರತಿಯೊಬ್ಬರಿಗೆ

ಕೇಂದ್ರದ 5ಕೆಜಿ ಸೇರಿ ಹತ್ತು ಕೆಜಿ ಅಕ್ಕಿ ಕೊಡುತ್ತಾರೋ ಎಂದು ಸ್ಪಷ್ಟನೆ ನೀಡಬೇಕು ➤ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Read More »

ಕರ್ನಾಟಕ

ಸಿನಿಮೀಯ ಶೈಲಿಯಲ್ಲಿ ದರೋಡೆ ➤ ಸಿಸಿಟಿವಿ ದೃಶ್ಯ  ವೈರಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 26. ಚಲಿಸುತ್ತಿದ್ದ ಕ್ಯಾಬ್ ಒಂದನ್ನು ತಡೆದ ಕಳ್ಳರ ಗ್ಯಾಂಗೊಂದು ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆಸಿರುವ ಘಟನೆ ದೆಹಲಿಯ ಪ್ರಗತಿ ಮೈದಾನ್ ನಲ್ಲಿ ನಡೆದಿದೆ. ಎರಡು ಬೈಕ್ ಗಳಲ್ಲಿ ಬಂದ ನಾಲ್ವರು ಖದೀಮರು ಗನ್ ತೋರಿಸಿ ಕ್ಯಾಬ್ ಅನ್ನು ಅಡ್ಡಗಟ್ಟಿ ಬಳಿಕ ಕಾರಿನ ಒಳಗಿದ್ದ ವ್ಯಕ್ತಿಯ ಬ್ಯಾಗ್ ಕಸಿದು ಕೆಲವೇ ಸೆಕೆಂಡುಗಳಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕುರಿತು ಕ್ಯಾಬ್ ನಲ್ಲಿದ್ದ ವ್ಯಕ್ತಿ, ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.  

ಸಿನಿಮೀಯ ಶೈಲಿಯಲ್ಲಿ ದರೋಡೆ ➤ ಸಿಸಿಟಿವಿ ದೃಶ್ಯ  ವೈರಲ್ Read More »

ರಾಷ್ಟ್ರೀಯ ನ್ಯೂಸ್

ಭಾರವಾದ ಶಾಲಾ ಬ್ಯಾಗ್‌ ➤ ಬಿದ್ದು ಗಾಯಗೊಂಡ ಆರು ವರ್ಷದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ.  26. ಬೆನ್ನಿನಲ್ಲಿದ್ದ ಅತಿಭಾರದ ಶಾಲಾ ಬ್ಯಾಗನ್ನು ಹೊರಲಾಗದೆ ಒಂದನೇ ತರಗತಿಯ ವಿದ್ಯಾರ್ಥಿನಿ ಬಿದ್ದಿರುವ ಘಟನೆ ಮುಡಿಪಿನಲ್ಲಿ ನಡೆದಿದೆ. ಮಗುವಿನ ಬ್ಯಾಗಿನಲ್ಲಿ ಬರೋಬ್ಬರಿ 19ನೋಟ್‌ ಪುಸ್ತಕಗಳಿದ್ದು 12 ಕೆ.ಜಿ ಭಾರವನ್ನು ಹೊರಲು ಸಾಧ್ಯವಾಗದೆ ಓಡುವ ರಭಸದಲ್ಲಿ ಕೆಳಗೆಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಈ ಕುರಿತು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.ಖಾಸಗಿ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಇಂಟರ್‌ ಲಾಕ್‌ ರಸ್ತೆಗೆ ಬಿದ್ದು ಮೂಗಿಗೆ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ನೋಡಲು ಮಳೆಗೆ ಜಾರಿಬಿದ್ದಿರುವುದಾಗಿ

ಭಾರವಾದ ಶಾಲಾ ಬ್ಯಾಗ್‌ ➤ ಬಿದ್ದು ಗಾಯಗೊಂಡ ಆರು ವರ್ಷದ ವಿದ್ಯಾರ್ಥಿನಿ Read More »

ಕರಾವಳಿ

ಹವಾಮಾನ ವೈಪರೀತ್ಯ ➤ ಪಾಕಿಸ್ತಾನದ ವಾಯುಪ್ರದೇಶ ಪ್ರವೇಶಿಸಿದ ಇಂಡಿಗೋ ವಿಮಾನ

(ನ್ಯೂಸ್ ಕಡಬ) newskadaba.com ಶ್ರೀನಗರ, ಜೂ. 26. ಹವಾಮಾನ ವೈಪರೀತ್ಯದಿಂದ ಶ್ರೀನಗರದಿಂದ ಜಮ್ಮುಗೆ ಹೊರಟಿದ್ದ ಇಂಡಿಗೊ ವಿಮಾನವು ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸಿದ ಘಟನೆ ನಡೆದಿದೆ. ಇಂಡಿಗೊ 6ಇ – 2124 ವಿಮಾನವು ಜಮ್ಮುವಿನಿಂದ ಶ್ರೀನಗರಕ್ಕೆ ತೆರಳಬೇಕಾಗಿತ್ತು, ಆದರೆ ಹವಾಮಾನ ವೈಪರೀತ್ಯದಿಂದಾಗಿ ಪಾಕಿಸ್ತಾನದ ವಾಯು ಪ್ರದೇಶವನ್ನು ಪ್ರವೇಶಿಸಿದ್ದು ತಕ್ಷಣವೇ ಪೈಲಟ್ ವಿಮಾನವನ್ನು ಅಮೃತ್‍ ಸರದಲ್ಲಿ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇನ್ನು ಪೈಲಟ್‍ ನ ಸಮಯಪ್ರಜ್ಞೆಯನ್ನು ಎರಡೂ ರಾಷ್ಟ್ರಗಳ ನಾಗರಿಕ ವಿಮಾನಯಾನ ಅಧಿಕಾರಿಗಳು ಶ್ಲಾಘಿಸಿದ್ದಾರೆ.    

ಹವಾಮಾನ ವೈಪರೀತ್ಯ ➤ ಪಾಕಿಸ್ತಾನದ ವಾಯುಪ್ರದೇಶ ಪ್ರವೇಶಿಸಿದ ಇಂಡಿಗೋ ವಿಮಾನ Read More »

ರಾಷ್ಟ್ರೀಯ ನ್ಯೂಸ್
Scroll to Top