ನ್ಯೂಸ್ ಕಡಬ

ಹೆರಿಗೆ ವೇಳೆ ತೀವ್ರ ರಕ್ತಸ್ರಾವ ➤ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಹೆರಿಗೆ ವೇಳೆ ತೀವ್ರ ರಕ್ತ ಸ್ರಾವದಿಂದ ಮಹಿಳೆಯೋರ್ವಳು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಹೀರೇಬಂಡಾಡಿ ಗ್ರಾಮದ ಮುರ ಕಾಲೊನಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬಾಲಕೃಷ್ಣ ಗೌಡ ಎಂಬವರ ಪತ್ನಿ ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ ಎಂದು ಗುರುತಿಸಲಾಗಿದೆ. ಹಸುಗೂಸು ಆರೋಗ್ಯವಾಗಿರುವುದಾಗಿ ತಿಳಿದುಬಂದಿದೆ.      

ಹೆರಿಗೆ ವೇಳೆ ತೀವ್ರ ರಕ್ತಸ್ರಾವ ➤ ಮಹಿಳೆ ಮೃತ್ಯು Read More »

ಕರಾವಳಿ

ಬಸ್ ಚಾಲಕನ ಸಮಯಪ್ರಜ್ಞೆ ➤ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ –ವೀಡಿಯೋ ವೈರೆಲ್    

 (ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 21. ಮಹಿಳೆ ಒಬ್ಬರು  ಬಸ್ ಅಪಘಾತದಿಂದ ಪವಾಡ ದೃಶ್ಯ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ  ನಡೆದಿದೆ. ಮಂಗಳೂರಿನಿಂದ ಮುಡಿಪು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆಯೊಬ್ಬರು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೇ ರಸ್ತೆ ದಾಟಿದ ವೇಳೆ ಎದುರಿನಿಂದ ಬಸ್ ಬಂದಿದ್ದು, ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು

ಬಸ್ ಚಾಲಕನ ಸಮಯಪ್ರಜ್ಞೆ ➤ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ –ವೀಡಿಯೋ ವೈರೆಲ್     Read More »

ಕರಾವಳಿ

ಪಂಪ್ ರಿಪೇರಿ ವೇಳೆ ಹೈಟೆನ್ಷನ್‌ ಲೈನ್‌ ಗೆ ತಗುಲಿದ ಪೈಪ್ ➤ ಇಬ್ಬರು ಮೃತ್ಯು

 (ನ್ಯೂಸ್ ಕಡಬ) newskadaba.com ಜೈಪುರ, ಜೂ. 21. ಹ್ಯಾಂಡ್‌ ಪಂಪ್‌ ರಿಪೇರಿ ವೇಳೆ ಹೈಟೆನ್ಷನ್‌ ಲೈನ್‌ ಗೆ ಪೈಪ್ ತಗುಲಿದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ರಾಜಸ್ಥಾನದ ಧೋಲ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಲೋಕೇಶ್ ಮತ್ತು ಧ್ರುವ ಎಂದು ಗುರುತಿಸಲಾಗಿದೆ. ರಾಮ್‌ ವೀರ್, ಥಾನ್ ಸಿಂಗ್, ಹರಿ ಸಿಂಗ್ ಹಾಗೂ ಶಿಮ್ಲಾ ತೀವ್ರ ಸುಟ್ಟಗಾಯಗಳಾಗಿದ್ದು, ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸೇಡಿ ಉಪವಿಭಾಗದ ವಿಜಯಕಾಪುರ ಗ್ರಾಮದಲ್ಲಿ ಹ್ಯಾಂಡ್ ಪಂಪ್ ದುರಸ್ತಿ ಕಾರ್ಯ

ಪಂಪ್ ರಿಪೇರಿ ವೇಳೆ ಹೈಟೆನ್ಷನ್‌ ಲೈನ್‌ ಗೆ ತಗುಲಿದ ಪೈಪ್ ➤ ಇಬ್ಬರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಲ್ಯಾಪ್‌ಟಾಪ್, ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳವು! ➤ ದೂರು ದಾಖಲು

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂ.  21. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಲ್ಯಾಪ್‌ಟಾಪ್ ಮತ್ತು ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳವಾದ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ರಂಜಿತ್ ಎಂಬವರು ಜೂ.15ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಲ್ಯಾಪ್‌ ಟಾಪ್ ಮತ್ತು ಪಾಸ್‌ಪೋರ್ಟ್ ಇದ್ದ ಬ್ಯಾಗ್‌ನ್ನು ಸೀಟಿನ ಮೇಲ್ಭಾಗದ ಕ್ಯಾರಿಯರ್‌ನಲ್ಲಿಟ್ಟಿದ್ದರು, ಮರುದಿನ ಬೆಳಗ್ಗೆ ಮಂಗಳೂರಿನ ಪಿವಿಎಸ್ ಸರ್ಕಲ್ ಬಳಿ ನೋಡಿದಾಗ ಬ್ಯಾಗ್ ಕಳವಾಗಿತ್ತು. ಬಿ.ಸಿರೋಡ್‌ನಲ್ಲಿ ಇಳಿದ ಇಬ್ಬರು ಪ್ರಯಾಣಿಕರ ಮೇಲೆ ಗುಮಾನಿ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಲ್ಯಾಪ್‌ಟಾಪ್, ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳವು! ➤ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಕರ್ನಾಟಕದಲ್ಲಿ 8000 ಕೋಟಿ ಬಂಡವಾಳ ಹೂಡಲು ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿ ಆಸಕ್ತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ವಿದ್ಯುತ್ ಚಾಲಿತ ವಾಹನಗಳಿಗೆ ಅಗತ್ಯವಾದ ಲಿಥಿಯಂ ಕೋಶಗಳ ತಯಾರಿಕೆಗೆ ಹೆಸರಾಗಿರುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯು ರಾಜ್ಯದಲ್ಲಿ 8,000 ಕೋಟಿ ರೂ. ಗಳ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿಸಿದೆ. ಇದಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕಂಪನಿ ಪ್ರತಿನಿಧಿಗಳೊಂದಿಗೆ ಮೊದಲ ಹಂತದ ಸಭೆ ನಡೆಸಿದ್ದಾರೆ. ಈ ಕಂಪನಿಯು ದೇವನಹಳ್ಳಿಯ ಐಟಿಐಆರ್ ಪಾರ್ಕ್ ನಲ್ಲಿ 1000 ಎಕರೆ ಜಮೀನು ಕೇಳಿದ್ದು, ಕಂಪನಿ ಕೇಳಿರುವ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು.

ಕರ್ನಾಟಕದಲ್ಲಿ 8000 ಕೋಟಿ ಬಂಡವಾಳ ಹೂಡಲು ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿ ಆಸಕ್ತಿ..! Read More »

ಕರ್ನಾಟಕ

ಅನ್ನಭಾಗ್ಯ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುತ್ತಿದೆ ➤ ಸಿ.ಟಿ.ರವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ಕಾಂಗ್ರೆಸ್ ಸರಕಾರವು ಅಕ್ಕಿಯ ವಿಚಾರದಲ್ಲಿ ಕೆಟ್ಟ ರಾಜಕಾರಣ ಮಾಡುತ್ತಿದೆ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಸರಕಾರವು ತನ್ನ ವಿಫಲತೆಯನ್ನು ಮುಚ್ಚಿಕೊಳ್ಳಲು ಬಿಜೆಪಿಯನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರ ಸಾಹಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಅನ್ನಭಾಗ್ಯ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುತ್ತಿದೆ ➤ ಸಿ.ಟಿ.ರವಿ Read More »

ಕರ್ನಾಟಕ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 20. ಅಪ್ರಾಪ್ತ ಬಾಲಕಿಯನ್ನು ಆಟೋ ರಿಕ್ಷಾದಲ್ಲಿ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ರಿಕ್ಷಾ ಚಾಲಕ ಸಾದಿಕ್ ಮತ್ತು ಕರೀಂ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಂತ್ರಸ್ತೆ ಬಾಲಕಿಯು ನೆರೋಲ್ದಪಲ್ಕೆ ಎಂಬಲ್ಲಿ ಜೂನ್ 18 ರಂದು ತನ್ನ ತಾಯಿಯ ಸ್ವಸಹಾಯ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆನಡಾದಲ್ಲಿ ಉದ್ಯೋಗ ನೀಡುವುದಾಗಿ 4.80 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಉದ್ಯೋಗ ನೇಮಕಾತಿ ಮಾಡಿಸಿಕೊಡುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಘಟನೆ ಕೆನಡಾದಲ್ಲಿ ನಡೆದಿದೆ. ವ್ಯಕ್ತಿಯೋರ್ವರು ವಿದೇಶದಲ್ಲಿ ಉದ್ಯೋಗಾವಕಾಶದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ಮಾ. 28ರಂದು ಇನ್‌ ಸ್ಟಾಗ್ರಾಂ ಖಾತೆಯ ಮೂಲಕ ವಿಲಿಯಂ ಪೌಲ್‌ ಆ್ಯಂಟನಿ ಎಂಬಾತನ ಪರಿಚಯವಾಗಿತ್ತು. ಆತ ತಾನು ಕೆನಡಾ ದೇಶದ ಪ್ರಜೆಯಾಗಿದ್ದು, ಇಮಿಗ್ರೇಷನ್‌ ಅಧಿಕಾರಿಯಾಗಿರುವುದಾಗಿ ಪರಿಚಯಿಸಿಕೊಂಡು ಕೆನಡಾ ದೇಶದಲ್ಲಿ ಉದ್ಯೋಗ ಒದಗಿಸಿಕೊಡುವುದಾಗಿ ನಂಬಿಸಿದ್ದ. ಅನಂತರ +1(289)724-1900 ವಾಟ್ಸ್ ಆ್ಯಪ್‌ ನಂಬರ್ ಮೂಲಕ ನಿರಂತರ

ಕೆನಡಾದಲ್ಲಿ ಉದ್ಯೋಗ ನೀಡುವುದಾಗಿ 4.80 ಲಕ್ಷ ರೂ. ವಂಚನೆ Read More »

ಕರ್ನಾಟಕ

ಬಸ್​​ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತ ಸಂಭವಿಸಿದರೆ ಆರ್​.ಅಶೋಕ್ ಹೊಣೆ ➤ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20.ಉಚಿತ ಪ್ರಯಾಣದ ಅವಕಾಶ ಹೆಚ್ಚು ದಿನ ಇರಲ್ಲ, ಎಲ್ಲೆಲ್ಲಿಗೆ ಟೂರ್ ಹೋಗಬೇಕೋ ಬೇಗ ಹೋಗಿ ಬನ್ನಿ ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್​ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಶಕ್ತಿ ಯೋಜನೆ ಹೆಚ್ಚು ದಿನ ಇರಲ್ಲ, ಈಗಲೇ ಎಲ್ಲಾ ಕಡೆಯೂ ತಿರುಗಾಡಿ ಎಂದು ಕರೆ ನೀಡಿರುವ ಆರ್​​.ಅಶೋಕ್, ಸಮಾಜಘಾತುಕ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಒಂದು ವೇಳೆ ಬಸ್​ ಗಳಲ್ಲಿ

ಬಸ್​​ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತ ಸಂಭವಿಸಿದರೆ ಆರ್​.ಅಶೋಕ್ ಹೊಣೆ ➤ ಕಾಂಗ್ರೆಸ್ Read More »

ಕರ್ನಾಟಕ

ಬಿದ್ದು ಸಿಕ್ಕಿದ ಹಣವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ. 20. ವಿದ್ಯಾರ್ಥಿನಿಯೊಬ್ಬಳು ದಾರಿಯಲ್ಲಿ ಸಿಕ್ಕಿದ ಹಣವನ್ನು ಪ್ರಾಮಾಣಿಕತೆಯಿಂದ ಮರಳಿ ವಾರಸುದಾರರಿಗೆ ಸೇರಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಡಾನ್ ಬಾಸ್ಕೋ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಧನ್ವಿ ಪೂಜಾರಿ ಶಾಲೆಗೆ ಹೋಗುತ್ತಿದ್ದ ವೇಳೆ 500 ರೂ. ಮುಖಬೆಲೆಯ 11ಸಾವಿರ ರೂ.ಗಳಿದ್ದ ನೋಟಿನ ಕಟ್ಟು ಸಿಕ್ಕಿದ್ದು, ಆಕೆ ಅದನ್ನು ಗಂಗೊಳ್ಳಿ ಪೊಲೀಸರಿಗೆ ನೀಡಿ ವಾರಸುದಾರರಿಗೆ ಮರಳಿಸುವಂತೆ ತಿಳಿಸಿದ್ದಳು. ಪೊಲೀಸರು ಅದರ ವಾರಸುದಾರರನ್ನು ಪತ್ತೆ ಹಚ್ಚಿ ಹಣವನ್ನು ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.      

ಬಿದ್ದು ಸಿಕ್ಕಿದ ಹಣವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿನಿ Read More »

ಕರ್ನಾಟಕ
Scroll to Top