ನ್ಯೂಸ್ ಕಡಬ

ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ ➤  ಇಂದು ಪೂರ್ವಭಾವಿ ಸಭೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ . 16 . ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಮಂಡನೆ ಜುಲೈ 7 ರಂದು ನಡೆಯಲಿದ್ದು, ಈ ಕುರಿತಾದ ಪೂರ್ವಭಾವಿ ಸಭೆ ಇಂದು ಕೂಡ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ.ಇಂದು ಬೆಳಗ್ಗೆ 11 ರಿಂದ ಸಂಜೆಯತನಕ ಬಜೆಟ್ ಪೂರ್ವಭಾವಿ ಸಭೆಯನ್ನು ಮುಖ್ಯಮಂತ್ರಿಗಳು ನಡೆಸಲಿದ್ದು, 14 ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ.

ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ ➤  ಇಂದು ಪೂರ್ವಭಾವಿ ಸಭೆ Read More »

ಕರ್ನಾಟಕ

ಕಡಲ್ಕೊತೆರ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ)newskadaba.com ಕಾಪು, ಜೂ . 16 . ಕಾಪು ವಿಧಾನಸಭಾ ಕ್ಷೇತ್ರದ ಪುರಸಭಾ ವ್ಯಾಪ್ತಿಯ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಈ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಕಡಲ್ಕೊರೆತ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತ ಕ್ರಮ  ಕೈಗೊಳ್ಳುವಂತೆ ಸಂಬಂಧಿಸಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಪುರಸಭಾ ಸದಸ್ಯರಾದ ಸತೀಶ್ಚಂದ್ರ, ರಾಧಿಕಾ, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ ಹಾಗೂ ಬಂದರು

ಕಡಲ್ಕೊತೆರ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ, ಪರಿಶೀಲನೆ Read More »

ಕರಾವಳಿ

ಲೈಟ್ ಆಫ್ ವಿಚಾರದಲ್ಲಿ ಗಲಾಟೆ   ➤ಕಾರ್ಯದರ್ಶಿಗೆ ಚೂರಿ ಇರಿತ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ . 16 . ಲೈಟ್ ಆಫ್ ವಿಚಾರದಲ್ಲಿ ಗಲಾಟೆ ನಡೆದು ಮಸೀದಿ ಕಾರ್ಯದರ್ಶಿಗೆ ಯುವಕನೊಬ್ಬ ಚೂರಿ ಇರಿದಿರುವ ಘಟನೆ ಸುರತ್ಕಲ್ ಕಾನ ಜನತಾ  ಕಾಲೋನಿ ಮಸೀದಿ ಬಳಿ ನಡೆದಿದೆ. ಆರೋಪಿ ಸ್ಥಳೀಯ ನಿವಾಸಿ ತ್ವಾಹಿರ್ (24)) ಎಂಬಾತ ಮಸೀದಿ ಕಾರ್ಯದರ್ಶಿ ಮಹಮ್ಮದ್ ಶಾಫಿ (38) ಎಂಬವರಿಗೆ ಚೂರಿ ಇರಿದಿದ್ದು, ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಲೈಟ್ ಆಫ್ ವಿಚಾರದಲ್ಲಿ ಗಲಾಟೆ   ➤ಕಾರ್ಯದರ್ಶಿಗೆ ಚೂರಿ ಇರಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಳಕಿಗೆ ಲೈಂಗಿಕ  ದೌರ್ಜನ್ಯ ➤ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ)newskadaba.com ಉಡುಪಿ,  ಜೂ  . 16 .  ಎರಡು ವರ್ಷಗಳ ಹಿಂದೆ ನಡೆದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ತಂದೆ ಹಾಗೂ ಮಗನಿಗೆ ಉಡುಪಿ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಗೆ ಗುರಿಯಾದ ಆರೋಪಿಗಳನ್ನು ದಾವಣಗೆರೆಯ  ಶಿವಶಂಕರ್ ಹಾಗೂ ಆತನ ಮಗ ಸಚಿನ್ ಎಂದು ಗುರುತಿಸಲಾಗಿದೆ. ಲಾಕ್ ಡೌನ್ ಸಮಯದಲ್ಲಿ 2020ರ ಎಪ್ರಿಲ್ ನಿಂದ ಅಕ್ಟೋಬರ್ ವರೆಗೆ ಬೆಳಗಿನ ಜಾವ 5 ಗಂಟೆಗೆ ಬಾಲಕಿಯನ್ನು ಮನೆಯಲ್ಲಿ ಬಿಟ್ಟು

ಅಪ್ರಾಪ್ತ ಬಾಳಕಿಗೆ ಲೈಂಗಿಕ  ದೌರ್ಜನ್ಯ ➤ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

(ನ್ಯೂಸ್ ಕಡಬ)newskadaba.com ಮುಂಬೈ, ಜೂ . 15 . ಯುವಕನೊಬ್ಬ ರೀಲ್ಸ್​ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ಘಟನೆ ಮುಂಬೈ ಬಳಿ ನಡೆದಿದೆ. ಮೃತನನ್ನು ಬಿಲಾಲ್ ಸೋಹಿಲ್ ಶೇಖ್ (18) ಎಂದು ಗುರುತಿಸಲಾಗಿದೆ, ಈತ  ಚೋಲೆ ಪ್ರದೇಶದಲ್ಲಿ ನೀರು ಸರಬರಾಜು ಮಾಡುವ ಬ್ರಿಟಿಷ್ ಪಂಪ್​ ಹೌಸ್​ಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ . ಬ್ರಿಟಿಷ್​ ಪಂಪ್​ ಹೌಸ್​ಗೆ ಜನಸಾಮಾನ್ಯರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಈ ಪ್ರದೇಶದಲ್ಲಿ ಪ್ರತಿದಿನ ಸಾಯಂಕಾಲ ವಾಯುವಿಹಾರಕ್ಕೆ ಬರಲು ಅವಕಾಶವಿದೆ. ಇದೇ ನೆಪದಲ್ಲಿ  ಬಂದ ಬಿಲಾಲ್​ ಹಾಗೂ

ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ Read More »

ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ ➤ಉಪನ್ಯಾಸಕರನ್ನ ಅರೆಸ್ಟ್ ಮಾಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ!

(ನ್ಯೂಸ್ ಕಡಬ)newskadaba.com ತುಮಕೂರು, ಜೂ . 15 . ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಾಗಿದ್ದ ಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ಲವ್ವಿಡವ್ವಿ ನಡೆಸಿ ಸಿಕ್ಕಿಬಿದ್ದಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ನಡೆದಿದೆ. ವಾಣಿಜ್ಯ ವಿಭಾಗದ ಉಪನ್ಯಾಸಕ ರಂಗನಾಥ್ ಎಂಬಾತನು ವಿದ್ಯಾರ್ಥಿನಿಯೊಂದಿಗೆ ಲವ್ವುಡವ್ವಿ  ಶುರುಮಾಡಿದ್ದಾನೆ. ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ ಚಕ್ಕಂದ ವಿಷಯ ತಿಳಿದ ಬಳಿಕ ಕಾಲೇಜು ವಿದ್ಯಾರ್ಥಿಗಳು ರೊಚ್ಚಿಗೆದ್ದು ಉಪನ್ಯಾಸಕನ ಅರೆಸ್ಟ್ ಮಾಡುವಂತೆ ಒತ್ತಾಯಿಸಿದ್ದಾರೆ. ನಮ್ಮ ಮುಂದೆಯೇ ಉಪನ್ಯಾಸಕನ ಬಂಧನವಾಗಬೇಕು ಅಲ್ಲಿಯವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು  ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ ➤ಉಪನ್ಯಾಸಕರನ್ನ ಅರೆಸ್ಟ್ ಮಾಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ! Read More »

ಕರ್ನಾಟಕ

ಮನೆ ಕಳ್ಳತನ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 1 ಕೆ.ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಬಂಧಿತರನ್ನು ಕಾರ್ಕಳ ತಾಲೂಕಿನ ಮಾಳ ಮಲ್ಲಾರ್ ದರ್ಕಾಸು ಮನೆ ನಿವಾಸಿ ಗಣೇಶ ನಾಯ್ಕ್(26) ಹಾಗೂ ಕೊಡಗು ಜಿಲ್ಲೆಯ ಗುಯ್ಯಾ ಗ್ರಾಮ ನಿವಾಸಿ ರಂಜಿತ್ ಕೆ.ಆರ್ (26) ಎಂದು ಗುರುತಿಸಲಾಗಿದೆ. ಇವರು ಜನವರಿ 15ರಿಂದ ಜನವರಿ 16ರ ನಡುವೆ ಮಂಗಳೂರು ತಾಲೂಕು

ಮನೆ ಕಳ್ಳತನ ಪ್ರಕರಣ ➤ ಇಬ್ಬರ ಬಂಧನ Read More »

ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಭೀಕರ ಅಪಘಾತ ➤ ಮೂವರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com  ಚನ್ನಪಟ್ಟಣ ಜೂ.15. ಟಿಂಬರ್‌ ಲಾರಿಗೆ ಹಿಂಬದಿಯಿಂದ ಹೊಂಡಸಿಟಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು,  ಮೂವರು ಗಾಯಗೊಂಡಿರುವ ಘಟನೆ ದೇವರಹೊಸಹಳ್ಳಿ ಗ್ರಾಮದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸಂಭವಿಸಿದೆ. ಮೃತರನ್ನು ಕಾರಿನ ಚಾಲಕ ಕೃಷ್ಣಮೂರ್ತಿ (57), ನಿಧಿ (13), ನಿಶಾ(20) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಯಲಹಂಕದ ವಿದ್ಯಾರಣ್ಯಪುರ ಮೂಲದ ಶ್ರೀನಿವಾಸ್‌ಮೂರ್ತಿ ಕುಟುಂಬದವರು ಮದುವೆಗೆಂದು ಮೈಸೂರಿನ ಎಚ್‌.ಡಿ.ಕೋಟೆಗೆ ತೆರಳಿ, ಮದುವೆ ಮುಗಿಸಿಕೊಂಡು ವಾಪಸ್‌ ಬೆಂಗಳೂರಿಗೆ ಹಿಂದಿರುಗುತಿದ್ದ ವೇಳೆ ಈ ದುರ್ಘಟನೆ ನಡೆದಿದೆ. .    

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಭೀಕರ ಅಪಘಾತ ➤ ಮೂವರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಇಟಿ ಫಲಿತಾಂಶ ಪ್ರಕಟ  ➤ ಎಕ್ಸ್‌ಪರ್ಟ್ ನ ಬೈರೇಶ್‌ಗೆ ಬಿಎಸ್‌ಸಿಯಲ್ಲಿ ಪ್ರಥಮ ರ್‍ಯಾಂಕ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜೂ . 15 . ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-2023ರ(ಸಿಇಟಿ) ಫಲಿತಾಂಶ ಪ್ರಕಟಗೊಂಡಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು ಈ ಬಾರಿ ಸಿಇಟಿಯಲ್ಲೂ ಎಲ್ಲ ವಿಭಾಗಗಳಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಮಂಗಳೂರಿನ ಎಕ್ಸ್‌ಪರ್ಟ್ ಪ್ರಿ-ಯೂನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿ ಬೈರೇಶ್ ಬಿಎಸ್‌ಸಿ ಕೃಷಿ ವಿಭಾಗದಲ್ಲಿ ಪ್ರಥಮ ರ್ಯಾಂಕ್(96.7%) ಪಡೆದಿದ್ದಾರೆ.  ಬ್ಯಾಚುಲರ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್

ಸಿಇಟಿ ಫಲಿತಾಂಶ ಪ್ರಕಟ  ➤ ಎಕ್ಸ್‌ಪರ್ಟ್ ನ ಬೈರೇಶ್‌ಗೆ ಬಿಎಸ್‌ಸಿಯಲ್ಲಿ ಪ್ರಥಮ ರ್‍ಯಾಂಕ್ Read More »

ಕರ್ನಾಟಕ

ಬಟ್ವಾಳ: ನಾಪತ್ತೆಯಾಗಿರುವ ಯುವತಿ ಠಾಣೆಗೆ ಹಾಜರು  ➤ ಮನೆಗೆ ಹೋಗಲು ನಿರಾಕರಣೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜೂ .15 . ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ಯುವತಿ ಠಾಣೆಗೆ ಹಾಜರಾದ ಘಟನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಬೈಪಾಸ್ ಬಿ.ಕಸಬಾ ಗ್ರಾಮದ ನಿವಾಸಿ ದಿ.ರಮೇಶ್ ಸಾಲಿಯಾನ್ ಅವರ ಪುತ್ರಿ ಕು. ನೇಹಾ ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈಕೆ ಅಲ್ಲಿಗೆ ಹೋಗುವುದೆಂದು ಮನೆಯಿಂದ ಹೋದವಳು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಳು. ಅದೇ ದಿನ ಈಕೆಯ ಚಿಕ್ಕಮ್ಮಳ ಮೊಬೈಲ್ ಗೆ

ಬಟ್ವಾಳ: ನಾಪತ್ತೆಯಾಗಿರುವ ಯುವತಿ ಠಾಣೆಗೆ ಹಾಜರು  ➤ ಮನೆಗೆ ಹೋಗಲು ನಿರಾಕರಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top