ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ
(ನ್ಯೂಸ್ ಕಡಬ)newskadaba.com ಮಂಗಳೂರು,ಜೂ 15 . ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸರ್ವರ್ ನಿರ್ವಹಣಾ ಕಾರ್ಯ ಇದೇ ಜೂ.28ರಿಂದ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಪಡಿತರ ಚೀಟಿದಾರರು 2023ರ ಜೂನ್ ತಿಂಗಳ ಪಡಿತರವನ್ನು ಇದೇ ಜೂ.27ರೊಳಗೆ ನ್ಯಾಯ ಬೆಲೆ ಅಂಗಡಿಗಳಿಂದ ಪಡೆಯುವಂತೆ ತಿಳಿಸಲಾಗಿದ್ದು , ಜೂ.27ರ ನಂತರ ತಿಂಗಳ ಪಡಿತರವನ್ನು ವಿತರಿಸಲು ಅವಕಾಶವಿರುವುದಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ Read More »
ಕರಾವಳಿ


