ನ್ಯೂಸ್ ಕಡಬ

ವಾಯುಭಾರ ಕುಸಿತ ಹಿನ್ನೆಲೆ ➤ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ

(ನ್ಯೂಸ್ ಕಡಬ) newskadba.com ಮಂಗಳೂರು, ಜೂ. 08. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ, ಜೂ. 11 ರವರೆಗೆ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ. ಮಕ್ಕಳನ್ನು ನೀರು ಇರುವ ತಗ್ಗು ಪ್ರದೇಶ, […]

ವಾಯುಭಾರ ಕುಸಿತ ಹಿನ್ನೆಲೆ ➤ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ Read More »

ಕರಾವಳಿ, ಕರ್ನಾಟಕ

ತೀವ್ರಗೊಂಡ ಸಮುದ್ರದ ಅಲೆಗಳು ➤ ಪ್ರವಾಸಿಗರನ್ನು ಹಿಂದಕ್ಕೆ ಕಳುಹಿಸುತ್ತಿರುವ ಹೋಂಗಾಡ್ಸ್೯

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 07. ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತ ಹಿನ್ನೆಲೆ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಇಂದು ಮುಂಜಾನೆಯಿಂದ ಹೆಚ್ಚಾಗಿದ್ದು, ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರದಲ್ಲಿ ಬರುವ ಪ್ರವಾಸಿಗರನ್ನು ಬಂದೋಬಸ್ತ್ ನಲ್ಲಿರುವ ಹೋಂಗಾಡ್ಸ್೯ ವಾಪಸ್ಸು ಕಳುಹಿಸುತ್ತಿದ್ದಾರೆ‌. ಇಂದು ಮುಂಜಾನೆಯಿಂದ ಚಂಡಮಾರುತದ ಪ್ರಭಾವ ಉಳ್ಳಾಲದ ಸಮುದ್ರ ತೀರದ ಪ್ರದೇಶಗಳಿಗೆ ಗೋಚರಿಸಲು ಆರಂಭವಾಗಿದ್ದು, ಬೃಹತ್ ಗಾತ್ರದ ಅಲೆಗಳು ಸಮುದ್ರದ ಅಂಚಿಗೆ, ಬಂಡೆಕಲ್ಲುಗಳಿಗೆ ಬಹುವೇಗದಲ್ಲಿ ಅಪ್ಪಳಿಸುತ್ತಿದೆ. ಉಳ್ಳಾಲದ ಕೋಟೆಪುರ,

ತೀವ್ರಗೊಂಡ ಸಮುದ್ರದ ಅಲೆಗಳು ➤ ಪ್ರವಾಸಿಗರನ್ನು ಹಿಂದಕ್ಕೆ ಕಳುಹಿಸುತ್ತಿರುವ ಹೋಂಗಾಡ್ಸ್೯ Read More »

ಕರಾವಳಿ

ಚಂಡಮಾರುತದ ಭೀತಿ ➤ ಕರಾವಳಿಯಲ್ಲಿ 4 ದಿನ ಭಾರಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು, ಇದರಿಂದ ರಾಜ್ಯದ ಪಶ್ಚಿಮದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಚಂಡಮಾರುತದ ಚಲನೆಯ ಕಾರಣದಿಂದ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಏಳುವ ಸಂಭವವಿದ್ದು, ಭಾರೀ ಮಳೆಯೂ ಸುರಿಯುವ ಸಾಧ್ಯತೆ ಇದೆ. ಆದುದರಿಂದ ಈ ಅವಧಿಯಲ್ಲಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಚಂಡಮಾರುತದ ಭೀತಿ ➤ ಕರಾವಳಿಯಲ್ಲಿ 4 ದಿನ ಭಾರಿ ಮಳೆ ಸಾಧ್ಯತೆ Read More »

ಕರಾವಳಿ

ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 07. ಹಾಸ್ಟೆಲ್ ನಲ್ಲಿ ವಾಸವಿದ್ದ 18 ವರ್ಷದ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಆರೋಪಿ ಸೆಕ್ಯುರಿಟಿ ಗಾರ್ಡ್ ಮೃತದೇಹವು ಹಾಸ್ಟೆಲ್ ಸಮೀಪದ ರೈಲ್ವೇ ಟ್ರಾಕ್ ಬಳಿ ಪತ್ತೆಯಾಗಿದೆ. ಆದುದರಿಂದ ಪೊಲೀಸರು ಇದೊಂದು ಆತ್ಮಹತ್ಯೆ ಎಂದು ಶಂಕಿಸಿದ್ದಾರೆ. ಹಾಸ್ಟೆಲ್ ನಲ್ಲಿ ವಾಸವಿದ್ದ ವಿದ್ಯಾರ್ಥಿನಿಯು ಮಂಗಳವಾರದಂದು ಸಂಜೆ ನಾಪತ್ತೆಯಾಗಿರುವ ಕುರಿತು ದಾಖಲಾದ ದೂರಿನಂತೆ ಹುಡುಕಾಟ ನಡೆಸಿದಾಗ ಹಾಸ್ಟೆಲ್ ನ ನಾಲ್ಕನೇ ಮಹಡಿಯ ಕೊಠಡಿಯೊಂದರಲ್ಲಿ ವಿದ್ಯಾರ್ಥಿನಿಯ ಮೃತದೇಹ

ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೆರೆದ ಕೊಳವೆ ಬಾವಿಗೆ ಬಿದ್ದ ಮಗು ➤ ಮುಂದುವರಿದ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಭೋಪಾಲ್, ಜೂ. 07. ಆಟವಾಡುತ್ತಿದ್ದ ಮಗುವೊಂದು ತೆರೆದ ಕೊಳವೆ ಬಾವಿಗೆ ಬಿದ್ದ ಘಟನೆ ಮಧ್ಯ ಪ್ರದೇಶದ ಸೆಹೋರ್‌ ಜೆಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ ಕುಶ್ವಾಹ ಎಂಬ ಮಗು ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ 300 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದು, 20-25 ಅಡಿ ಆಳದಲ್ಲಿ ಮಗು ಸಿಲುಕಿದೆ. ಸ್ಥಳೀಯರು ಪೊಲೀಸರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಜೆಸಿಬಿ ಮೂಲಕ ಮತ್ತೊಂದು ಗುಂಡಿ ಅಗೆಯಲಾಗುತ್ತಿದ್ದು, ಆಮ್ಲಜನಕ ಸರಬರಾಜನ್ನು ನೀಡಿ ಮಗುವಿನ ಚಲನವಲಗಳ

ತೆರೆದ ಕೊಳವೆ ಬಾವಿಗೆ ಬಿದ್ದ ಮಗು ➤ ಮುಂದುವರಿದ ಕಾರ್ಯಾಚರಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲೈಟ್‌ನೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ

(ನ್ಯೂಸ್ ಕಡಬ)newskadaba@gmail.comಕಾಸರಗೋಡು,  ( ಜೂ 06) ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಡಿವೈಎಸ್ಪಿಪಿ ಬಾಲಕೃಷ್ಣನ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ಬೇಕಲ ಸಮೀಪದ ಹೊಸಕೋಟೆ ಎಂಬಲ್ಲಿ ವಾಹನ ತಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಚಿತ್ತಾರಿಯ ನಿಜಾರ್ (36) ಎಂಬಾತನನ್ನು ಬಂಧಿಸಲಾಗಿದೆ. ಕಾರಿನಲ್ಲಿದ್ದ 858 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿದು ಕಾರಿನಲ್ಲಿ ಬರುತ್ತಿದ್ದಾಗ ತಪಾಸಣೆ ನಡೆಸಿದಾಗ, ಬ್ಯಾಗ್ ನಲ್ಲಿ ಕಂಡುಬಂದಿದೆ ಎಂದು ವರದಿ

ಲೈಟ್‌ನೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ Read More »

ಕರಾವಳಿ

‘ಬಾಡಿಗೆದಾರರಿಗೂ ಉಚಿತ ವಿದ್ಯುತ್‌’ ➤ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba@gmail.comಬೆಂಗಳೂರು ,( ಜೂ 06) ರಾಜ್ಯದಲ್ಲಿ ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ 200 ಯೂನಿಟ್ವರೆಗೆ ಉಚಿತ  ವಿದ್ಯುತ್ ನೀಡುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ಕೆಲವರು50, ಇನ್ನು ಕೆಲವರು 70, 150, 200ಯೂನಿಟ್‌ ವಿದ್ಯುತ್‌ ಬಳಕೆ ಮಾಡುತ್ತಿರಬಹುದು. ಇದರ ವ್ಯಾಪ್ತಿಯಲ್ಲಿ ಬರುವ ಯಾವುದೇ ಗ್ರಾಹಕರು ವಿದ್ಯುತ್‌ ದರವನ್ನು ಪಾವತಿಸುವ ಅಗತ್ಯವಿಲ್ಲ. ಆದರೆ, ಈ ಉಚಿತ ವಿದ್ಯುತ್‌ ಯೋಜನೆ ವಾಣಿಜ್ಯ ಬಳಕೆದಾರರಿಗೆ ಅನ್ವಯವಾಗುವುದಿಲ್ಲ. ಹೀಗಾಗಿ, ಬಾಡಿಗೆದಾರರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ. ಇಷ್ಟೆಲ್ಲಾ ಆದರೂ ಒಂದೇ ಮಾಲೀಕರ ಹೆಸರಿನಲ್ಲಿ

‘ಬಾಡಿಗೆದಾರರಿಗೂ ಉಚಿತ ವಿದ್ಯುತ್‌’ ➤ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಕಾರಿನ ಮೇಲೆ ಬೃಹತ್ ಜಾಹೀರಾತು ಫಲಕ ➤ತಾಯಿ – ಮಗಳು ಮೃತ್ಯು

(ನ್ಯೂಸ್ ಕಡಬ)newskadaba@gmail.com ಲಕ್ನೋ, ,( ಜೂ 06) ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಜಾಹೀರಾತು ಫಲಕ ಬಿದ್ದು ತಾಯಿ ಮತ್ತು ಮಗಳು ಸಾವಿಗೀಡಾದ ದಾರುಣ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.ಮೃತರನ್ನು ಪ್ರೀತಿ ಜಗ್ಗಿ(38) ಮತ್ತು ಏಂಜಲ್(15)  ಎಂದು ಗುರುತಿಸಲಾಗಿದೆ. ಕಾರಿನ ಡ್ರೈವರ್​ ಸರ್ತಾಜ್ (28) ಭೀಕರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ತಾಯಿ ಹಾಗೂ ಮಗಳು ಮಾಲ್‌ಗೆ ಹೋಗುತ್ತಿದ್ದಾಗ ಏಕಾನಾ ಸ್ಟೇಡಿಯಂ ಹತ್ತಿರದ ಗೇಟ್ ನಂಬರ್ ಎರಡರ ಮುಂಭಾಗದಲ್ಲಿದ್ದ ಜಾಹೀರಾತು ಫಲಕ ಏಕಾಏಕಿ ಮಹೇಂದ್ರಾ ಎಸ್​​ಯುವಿ ಮೇಲೆ

ಕಾರಿನ ಮೇಲೆ ಬೃಹತ್ ಜಾಹೀರಾತು ಫಲಕ ➤ತಾಯಿ – ಮಗಳು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಾಡಿಗೆ ದಾರರಿಗೂ ವಿದ್ಯುತ್ ಉಚಿತ ➤ಇಂಧನ ಸಚಿವರಿಂದ ಸ್ಪಷ್ಟನೆ

(ನ್ಯೂಸ್ ಕಡಬ)newskadaba@gmail.com ಬೆಂಗಳೂರು:(ಜೂ.06) ಇಂಧನ ಸಚಿವರಿಂದ ಸ್ಪಷ್ಟನೆ ಬಾಡಿಗೆ ದಾರರಿಗು 200ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಎಷ್ಟು ವರ್ಷದಿಂದ ಬಾಡಿಗೆ ಮನೆಯಲ್ಲಿ ಇದ್ದೇವೆ ಎಂಬ ದಾಖಲೆಗಳು ಇರಬೇಕು. ಮನೆ ಮಾಲೀಕ ತೆರಿಗೆ ಕಟ್ಟಿರಬೇಕು ಹಾಗೂ ಕರೆಂಟ್‌ ಬಿಲ್‌ ಮತ್ತು ಅಗ್ರಿಮೆಂಟ್‌ ಇರಬೇಕು.ಈ ಎಲ್ಲ ಷರತ್ತುಗಳು ಅನ್ವಯ ವಾಗುತ್ತದೆ. ಪ್ರಯೋಜನವನ್ನು  ಪಡೆಯಲು ಇಚ್ಚಿಸುವ ಗ್ರಾಹಕರು ‘ಸೇವಾ ಸಿಂಧು’ ಮೂಲಕ ಅರ್ಜಿ ಸಲ್ಲಿಸಬೇಕು. 2022-2023ರ ಹಣಕಾಸು

ಬಾಡಿಗೆ ದಾರರಿಗೂ ವಿದ್ಯುತ್ ಉಚಿತ ➤ಇಂಧನ ಸಚಿವರಿಂದ ಸ್ಪಷ್ಟನೆ Read More »

ಕರ್ನಾಟಕ

ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು!

(ನ್ಯೂಸ್ ಕಡಬ)newskadaba @gmail.com ಕಾರ್ಕಳ , ಜೂನ್, 1 ನಂದಳಿಕೆ ಮೂಡುಮನೆಯಲ್ಲಿ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು. ಈ ಬಗ್ಗೆ ಎನ್ ಸುಧಾಕರ ರಾವ್  (66) ಕಾರ್ಕಳ ಠಾಣೆಗೆ ದೂರು ನೀಡಿದ್ದಾರೆ.ಮೇ 26 ರ ಮಧ್ಯಾಹ್ನ 3ರಿಂದ ಮೇ 30 ರ ಸಂಜೆ 6 ಗಂಟೆಯ ನಡುವಿನ ಅವಧಿಯಲ್ಲಿ ಈ ಕೃತ್ಯ ನಡೆದಿರುವುದಾಗಿದೆ. ಸುಧಾಕರ ರಾವ್ ವಾಸವಿರುವ ಮನೆಯ ಪಕ್ಕದಲ್ಲಿರುವ ಇವರ ಮೂಲಮನೆ ಮೂಡುಮನೆಯ ಕಪಾಟಿನಲ್ಲಿ ಇಟ್ಟಿದ್ದ ಸುಮಾರು 40 ಗ್ರಾಂ ತೂಕದ ಕರಿಮಣಿ ಸರ-2. 26 ಗ್ರಾಂನ

ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top