ನ್ಯೂಸ್ ಕಡಬ

ರಷ್ಯಾ – ಉಕ್ರೇನ್ ಸಂಘರ್ಷ!

(ನ್ಯೂಸ್ ಕಡಬ)newskawaba @gmail.com ರಷ್ಯಾ, ಜೂನ್, 1. ಮಾಸ್ಕೋ (ರಷ್ಯಾ): ರಷ್ಯಾ ಯುದ್ಧ ಆರಂಭಿಸಿ 15 ತಿಂಗಳ ಬಳಿಕ ಉಕ್ರೇನ್ ಪ್ರತ್ಯುತ್ತರ ನೀಡುತ್ತಿದೆ. ರಷ್ಯಾ ಆಕ್ರಮಿಸಿದ ಪ್ರದೇಶಗಳನ್ನು ಮರಳಿ ವಶಕ್ಕೆ ಪಡೆಯಲು ದಾಳಿಗೆ ಮುಂದಾಗಿದೆ. ಅಂತೆಯೇ ರಷ್ಯಾದ ಗಡಿಯಲ್ಲಿ ಬುಧವಾರ ಭಾರಿ ಗುಂಡಿನ ದಾಳಿ ನಡೆದಿದೆ. ಡ್ರೋನ್ ಅಪ್ಪಳಿಸಿದ ಪರಿಣಾಮ ತೈಲ ಸಂಸ್ಕರಣಾ ಘಟಕ ಹೊತ್ತಿ ಉರಿದಿದೆ. ರಷ್ಯಾದ ಬೆಲ್ಗೊರೊಡ್‌ ಪ್ರಾಂತ್ಯದ ಗಡಿ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಎಂಟು ಅಪಾರ್ಟ್‌ಮೆಂಟ್ ಕಟ್ಟಡಗಳು, ನಾಲ್ಕು ಮನೆಗಳು, ಒಂದು ಶಾಲೆ […]

ರಷ್ಯಾ – ಉಕ್ರೇನ್ ಸಂಘರ್ಷ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮತ್ತೆ ಬೆಂಕಿ!

(ನ್ಯೂಸ್ ಕಡಬ)newskawaba @gmail.com ಕಣ್ಣೂರು (ಕೇರಳ)  ಜೂನ್, 1 . ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ. ನಿನ್ನೆ ರಾತ್ರಿ 11:45 ಕ್ಕೆ ಪ್ರಯಾಣ ಮುಗಿಸಿದ ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್‌ನ ಬೋಗಿಯಲ್ಲಿ ರಾತ್ರಿ 1.25ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಕೊನೆಯ ಮೂರು ಬೋಗಿಗಳಿಗೆ ಬೆಂಕಿ ವ್ಯಾಪಿಸಿ, ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಘಟನೆಯ ಕುರಿತು ಕೇರಳ ಪೊಲೀಸರು ಮತ್ತು ರೈಲ್ವೆ ಪೊಲೀಸರು ತನಿಖೆ ಆರಂಭಿಸಲಾಗಿದೆ ಎಂದು ವರದಿಯಾಗಿದೆ .  

ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮತ್ತೆ ಬೆಂಕಿ! Read More »

ಬ್ರೇಕಿಂಗ್ ನ್ಯೂಸ್

ಮತಾಂತರಕ್ಕಾಗಿ ಬಲವಂತದ ಮದುವೆಗೆ ಒತ್ತಡ  ➤ ರೂಪದರ್ಶಿ ಗಂಭೀರ ಆರೋಪ

(ನ್ಯೂಸ್ ಕಡಬ)newskadaba.com  ಜಾರ್ಖಂಡ್, ಮೇ.31.ವ್ಯಕ್ತಿಯೊಬ್ಬ ಮತಾಂತರಗೊಳಿಸುವ ನಿಟ್ಟಿನಲ್ಲಿ ತನ್ನನ್ನು ಒತ್ತಾಯಪೂರ್ವವಾಗಿ ಮದುವೆಯಾಗಲು ಪ್ರಯತ್ನಿಸಿದ್ದಾನೆ ಎಂದು ಮಹಾರಾಷ್ಟ್ರದ ಮುಂಬೈನ ಮೂಲದ ರೂಪದರ್ಶಿ ಆರೋಪಿಸಿದ್ದಾರೆ. ಈ ಸಂಬಂಧ ರಾಂಚಿಯ ಯಶ್ ಮಾಡೆಲ್ಸ್ ಸಂಸ್ಥೆಯ ನಿರ್ದೇಶಕ ತನ್ವೀರ್ ಅಖ್ತರ್ ಖಾನ್ ಎಂಬವರ ವಿರುದ್ಧ ಮುಂಬೈನಲ್ಲಿ ಪೊಲೀಸ್​ ಕೇಸ್​ ಸಹ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.    

ಮತಾಂತರಕ್ಕಾಗಿ ಬಲವಂತದ ಮದುವೆಗೆ ಒತ್ತಡ  ➤ ರೂಪದರ್ಶಿ ಗಂಭೀರ ಆರೋಪ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ನೌಕಾದಳಕ್ಕೆರಾಜ್ಯದಿಂದ ಆಯ್ಕೆಯಾದ ಯುವತಿ

(ನ್ಯೂಸ್ ಕಡಬ)newskadaba ದಾವಣಗೆರೆ, ಮೇ, 31. ದಾವಣಗೆರೆ ಮನೆಯಲ್ಲಿ ಕಿತ್ತು ತಿನ್ನುವ ಬಡತನ. ಮನೆಗೆ ಆಧಾರಸ್ತಂಭವಾಗಿದ್ದ ತಂದೆ ಮೃತಪಟ್ಟಿದ್ದರು, ಹೀಗಿದ್ದರೂ ಕಠಿಣ ಪರಿಶ್ರಮದಿಂದ ಯುವತಿಯೊಬ್ಬರು ಇದೀಗ ಭಾರತೀಯ ನೌಕಾದಳಕ್ಕೆ ಆಯ್ಕೆಯಾಗಿದ್ದಾರೆ.ತಾಯಿ ಅಂಗನವಾಡಿಯಲ್ಲಿ ಆಯಾ ಕೆಲಸ ಮಾಡಿ ದುಡಿದು ಶಿಕ್ಷಣ ನೀಡಿದ್ದೇ ದಾವಣಗೆರೆ ಜಿಲ್ಲೆಯ ಹರಿಹರದ ಯುವತಿಯ ಈ ಸಾಧನೆಗೆ ಸಹಕಾರಿಯಾಗಿದೆ. ಹರಿಹರ ನಗರದ ನಿವಾಸಿ ಲತಾ ಎಂಬವರ ಪುತ್ರಿ ಭೂಮಿಕ ಇದೀಗ ನೌಕಾದಳಕ್ಕೆ ರಾಜ್ಯದಿಂದ ಆಯ್ಕೆಯಾದ ಏಕೈಕ ಯುವತಿ ಎಂಬ ಹೆಗ್ಗಳಿಕೆ ಇವರದ್ದಾಗಿದೆ. ತಂದೆಯನ್ನು ಕಳೆದುಕೊಂಡ ಭೂಮಿಕಾರಿಗೆ

ಭಾರತೀಯ ನೌಕಾದಳಕ್ಕೆರಾಜ್ಯದಿಂದ ಆಯ್ಕೆಯಾದ ಯುವತಿ Read More »

ಕರ್ನಾಟಕ

60ರ ವಯಸ್ಸಿನಲ್ಲಿ ಎರಡನೇ ಮದುವೆಯಾದ ನಟ ಆಶಿಷ್ ವಿದ್ಯಾರ್ಥಿ

 (ನ್ಯೂಸ್ ಕಡಬ) newskadaba.com,ಮುಂಬೈ, ಮೇ.25. ಬಹುಭಾಷಾ ನಟ, ಹಾಗೂ ಜನಪ್ರಿಯ ಫೂಡ್ ವ್ಲಾಗರ್ ಆಶಿಷ್ ವಿದ್ಯಾರ್ಥಿ  ತಮ್ಮ 60ನೇ ವಯಸ್ಸಿನಲ್ಲಿ ಎರಡನೇ ಬಾರಿ ಮದುವೆಯಾಗಿದ್ದಾರೆ. ಇಂದು ಅಸ್ಸಾಮಿ ಮೂಲದ ರೂಪಾಲಿ ಬರುವ  ಎಂಬುವರನ್ನು ಸರಳವಾಗಿ ಆಶಿಷ್ ವಿದ್ಯಾರ್ಥಿ ವಿವಾಹವಾಗಿದ್ದಾರೆ. ಇಬ್ಬರು ಪರಸ್ಪರ ಹಾರಗಳನ್ನು ಬದಲಾಯಿಸಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಜೀವನದ ಈ ಹಂತದಲ್ಲಿ ರೂಪಾಲಿಯೊಟ್ಟಿಗೆ ವಿವಾಹವಾಗಿರುವುದು ಬಹಳ ಖುಷಿಯಾಗಿದೆ ಎಂದು ಆಶಿಷ್ ವಿದ್ಯಾರ್ಥಿ ಹೇಳಿಕೊಂಡಿದ್ದಾರೆ.

60ರ ವಯಸ್ಸಿನಲ್ಲಿ ಎರಡನೇ ಮದುವೆಯಾದ ನಟ ಆಶಿಷ್ ವಿದ್ಯಾರ್ಥಿ Read More »

ರಾಷ್ಟ್ರೀಯ ನ್ಯೂಸ್

ಉಡುಪಿ:ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಕಾಲು ಜಾರಿ ಬಿದ್ದು ಮೃತ್ಯು

 (ನ್ಯೂಸ್ ಕಡಬ) newskadaba.com. ಉಡುಪಿ, ಮೇ.24. ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ. ಮೇ22ಕ್ಕೆ ಇವರ ಎರಡನೇ ಮಗಳಿಗೆ ಉಡುಪಿ ಶ್ಯಾಮಿಲಿ ಸಭಾಭವನದಲ್ಲಿ ಮದುವೆ ನಿಶ್ಚಯವಾಗಿದ್ದು,  ಈ ಸಂದರ್ಭದಲ್ಲಿ  ಮೇ19ರಂದು ಇಡೀ ಕುಟುಂಬ ಸಮೇತರಾಗಿ ಬಂದು ಉಡುಪಿಯ ಹೊಟೋಲ್‌ನಲ್ಲಿ  ಉಳಿದಿದ್ದರು, ಹೊಟೇಲ್ ರೂಮ್ ಒಳಗಡೆ ನಡೆಯುವಾಗ ಆಕಸ್ಮಿಕವಾಗಿ ತುಂಡಾದ

ಉಡುಪಿ:ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಕಾಲು ಜಾರಿ ಬಿದ್ದು ಮೃತ್ಯು Read More »

ಕರಾವಳಿ

ವಿಟ್ಲ: ಗೋ ಸಾಗಾಟವನ್ನು ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.22. ಅಕ್ರಮವಾಗಿ ಗೋ ಸಾಗಾಟ‌ ಮಾಡುತ್ತಿದ್ದ ವಾಹನವನ್ನು ತಡೆದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಸಾಲೆತ್ತೂರು ಗ್ರಾಮದಲ್ಲಿ ನಡೆದಿದೆ. ಕಂಬಳ ಕೋಣ ಸಾಗಾಟ ಮಾಡುತ್ತಿರುವುದಾಗಿ ಚಾಲಕ ತಿಳಿಸಿದ್ದು, ಆದರೆ ಪಿಕಪ್‌ನಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪಿಕಪ್‌ ವಾಹನವನ್ನು ತಡೆದು, ವಿಚಾರಿಸಿ ಗೋ ಅಕ್ರಮ ಸಾಗಾಟ ಮಾಡುವುದೆಂದು ಹೇಳಿದ್ದಾರೆ‌. ಗೋವು ಮತ್ತು ವಾಹನವನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ್ದಾರೆ.  

ವಿಟ್ಲ: ಗೋ ಸಾಗಾಟವನ್ನು ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು Read More »

ಕರಾವಳಿ

ಸುಬ್ರಹ್ಮಣ್ಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು

 (ನ್ಯೂಸ್ ಕಡಬ) newskadaba.com. ಸುಬ್ರಹ್ಮಣ್ಯ, ಮೇ.9. ಸುಬ್ರಹ್ಮಣ್ಯ ಸಮೀಪದ  ಕೇನ್ಯ ಕಣ್ಕಲ್ ಎಂಬ ಹೊಳೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟ ಘಟನೆ ನಡೆದಿದೆ.  ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ (15) ಮತ್ತು ಅವಂತಿಕಾ (11) ಎಂಬ ಸಹೋದರಿಯರು ಮೃತಪಟ್ಟವರು. ಇವರು ಬೆಂಗಳೂರಿನಲ್ಲಿ ವಾಸವಿದ್ದೂ, ಊರಿನಲ್ಲಿ ನಡೆಯುವ ಕಾರ್ಯಕ್ರಮವೊಂದರ ನಿಮಿತ್ತ ಬಳ್ಪಕ್ಕೆ ಬಂದಿದ್ದರು ಎನ್ನಲಾಗಿದೆ. ಅಗ್ನಿಶಾಮಕ ದಳದಿಂದ ಹುಡುಕಾಟ ನಡೆಯುತ್ತಿದ್ದೂ, ಇಬ್ಬರ ಮೃತದೇಹಗಳೂ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು

ಸುಬ್ರಹ್ಮಣ್ಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ ➤ ಸೇತುವೆಯಿಂದ ಕೆಳಗೆ ಬಿದ್ದ ಬಸ್, 15 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com. ನವದೆಹಲಿ, ಮೇ.9. ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಬಸ್ ವೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಕನಿಷ್ಟ 15 ಮಂದಿ ಸಾವನ್ನಪ್ಪಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಮಂಗಳವಾರ ನಡೆದಿದೆ. ಇಂದೋರ್‌ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಕೆಳಗೆ ಬಿದ್ದಿದೆ ಎಂದು ವರದಿಗಳು ತಿಳಿದಿವೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಸರ್ಕಾರ ಮೃತರ ಕುಟುಂಬಕ್ಕೆ ತಲಾ

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ ➤ ಸೇತುವೆಯಿಂದ ಕೆಳಗೆ ಬಿದ್ದ ಬಸ್, 15 ಮಂದಿ ದುರ್ಮರಣ Read More »

ಕ್ರೈಮ್ ನ್ಯೂಸ್

2023 ರಾಜ್ಯ ವಿಧಾನಸಭೆ ಚುನಾವಣೆ ➤ಮತದಾನದ ದಿನ ವಿಶೇಷ ರೈಲು, ಹೆಚ್ಚುವರಿ ಕೋಚ್ ಅಳವಡಿಕೆ!

(ನ್ಯೂಸ್ ಕಡಬ) newskadaba.com.ಬೆಂಗಳೂರು,  ಮೇ.6. ರಾಜ್ಯದಲ್ಲಿ ಮೇ.10 ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ದಿನವಾದ ಬುಧವಾರ ವಿಶೇಷ ರೈಲು ಹಾಗೂ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರು-ಬೆಳಗಾವಿ, ಬೆಂಗಳೂರು-ಬೀದರ್, ಬೆಂಗಳೂರು (ಯಶವಂತಪುರ) -ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚರಿಸಲಿವೆ. ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿಗೆ ಒಂದು ರೈಲು ಸಂಚರಿಸಲಿದೆ. ಎಂ ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಮೇ 9ರಂದು 8.30ಕ್ಕೆ ಹೊರಡಲಿದ್ದು, ಮೇ 10ರಂದು ಬೆಳಗ್ಗೆ 8.20ಕ್ಕೆ ಬೆಳಗಾವಿ ತಲುಪಲಿದೆ. ಮೇ 10ರ

2023 ರಾಜ್ಯ ವಿಧಾನಸಭೆ ಚುನಾವಣೆ ➤ಮತದಾನದ ದಿನ ವಿಶೇಷ ರೈಲು, ಹೆಚ್ಚುವರಿ ಕೋಚ್ ಅಳವಡಿಕೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top