ನ್ಯೂಸ್ ಕಡಬ

➤ಕಾಸರಗೋಡು ವಿದ್ಯಾರ್ಥಿಯ ಅನುಮಾನಸ್ಪದ ಸಾವು..!

(ನ್ಯೂಸ್ ಕಡಬ) newskadaba.com. ಕಾಸರಗೋಡು,ಮಾ.9   ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯೋರ್ವ ಶಾಲೆಯ ಸಮೀಪ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.  ಕುಂಡಂಗುಳಿ ನಿವಾಸಿ ವಿನೋದ್ ,ಶಾಲಿನಿ ದಂಪತಿಗಳ ಪುತ್ರ ಅಭಿನವ್ (17) ನಿಗೂಢವಾಗಿ ಸಾವನ್ನಪ್ಪಿದ ಪ್ಲಸ್ ವನ್ ಹೈಯರ್ ಸೆಕೆಂಡರಿ ವಿದ್ಯಾರ್ಥಿಯಾಗಿದ್ದಾನೆ. ಮಾರ್ಚ್ 7 ರಂದು ಅಭಿನವ್ ತರಗತಿ ಮುಗಿಸಿ ಸಂಜೆ ಮನೆಗೆ ಬಂದು ಆಟವಾಡಲು ಹೋಗುವುದಾಗಿ ಹೇಳಿದ್ದ. ಸಂಜೆಯಾದರೂ ವಾಪಸ್‌ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಮನೆ ಸಮೀಪದ […]

➤ಕಾಸರಗೋಡು ವಿದ್ಯಾರ್ಥಿಯ ಅನುಮಾನಸ್ಪದ ಸಾವು..! Read More »

ಕ್ರೈಮ್ ನ್ಯೂಸ್

ಅತಿಯಾದ ಇಯರ್ ಫೋನ್ ಬಳಕೆಯಿಂದ ಕಿವುಡುತನ ➤ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್ ಧನಂಜಯ್

(ನ್ಯೂಸ್ ಕಡಬ) newskadaba.com. ಮಾ 9. ಮಂಡ್ಯ  ಇತ್ತೀಚಿನ ದಿನಗಳಲ್ಲಿ ಮೊಬೈಲ್ ಮತ್ತು ಇಯರ್ ಫೋನ್ ಗಳ  ಅತಿಯಾದ ಬಳಕೆಯಿಂದ ಕಿವುಡುತನ ಕಾಣಿಸಿಕೊಳ್ಳುತ್ತಿದೆ. ಹೆಚ್ಚಾಗಿ ಹದಿಹರೆಯದವರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ. ಟಿ. ಎನ್ .ಧನಂಜಯ ಆತಂಕ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ರಾಷ್ಟ್ರೀಯ ಶ್ರವಣದೋಷ ತಡೆ ಹಾಗೂ ನಿಯಂತ್ರಣ ಕಾರ್ಯಕ್ರಮ  ಯೋಜನೆಯಡಿ ನಗರದ ಡಿ ಎಚ್ ಒ ಕಚೇರಿ ಆವರಣದಲ್ಲಿ ಅಯೋಜಿಸಿದ್ದ ವಿಶ್ವ ಶ್ರವಣ ದಿನಾಚರಣೆ

ಅತಿಯಾದ ಇಯರ್ ಫೋನ್ ಬಳಕೆಯಿಂದ ಕಿವುಡುತನ ➤ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್ ಧನಂಜಯ್ Read More »

ಆರೋಗ್ಯ ಮಾಹಿತಿ, ಕರ್ನಾಟಕ

➤ ಹಲವು ವರ್ಷಗಳ ನಂತರ, ಆಂಧ್ರ ಪ್ರದೇಶದ ನಲ್ಲಮಲ ಅರಣ್ಯದಲ್ಲಿ ಭಾರತೀಯ ತೋಳಗಳು ಪತ್ತೆ!

(ನ್ಯೂಸ್ ಕಡಬ) newskadaba.com. ಓಂಗೋಲು, ಮಾ 7.  ಅಳಿವಿನಂಚಿನಲ್ಲಿರುವ ಭಾರತೀಯ ತೋಳಗಳು ಬರೊಬ್ಬರಿ 10 ವರ್ಷಗಳ ಬಳಿಕ ಆಂಧ್ರ ಪ್ರದೇಶದ ಅರಣ್ಯ ಪ್ರದೇಶದಲ್ಲಿ  ಕಾಣಿಸಿಕೊಂಡಿವೆ. ಆಂಧ್ರ ಪ್ರದೇಶದ ನಲ್ಲಮಲ ಅರಣ್ಯ ವಲಯದ ಅರಣ್ಯಾಧಿಕಾರಿಗಳು ಇತ್ತೀಚೆಗೆ ದೋರ್ನಾಳ-ಆತ್ಮಕೂರು ಗಡಿ ಪ್ರದೇಶದಲ್ಲಿ ಅಳಿವಿನಂಚಿನಲ್ಲಿರುವ ಭಾರತೀಯ ತೋಳಗಳನ್ನು ಪತ್ತೆ ಮಾಡಿದ್ದಾರೆ. ಸುಮಾರು ಒಂದು ದಶಕದ ನಂತರ ಈ ವಿಶೇಷ ವನ್ಯಜೀವಿ ಕಾಣಿಸಿಕೊಂಡಿರುವುದು ಅರಣ್ಯಾಧಿಕಾರಿಗಳು ಮತ್ತು ವನ್ಯಜೀವಿ ಪ್ರಿಯರಲ್ಲಿ ಹರ್ಷವನ್ನು ತಂದಿದೆ. ಒಂದು ತಿಂಗಳ ಹಿಂದೆ, ರೊಳ್ಳಪಾಡು ಅರಣ್ಯ ಪ್ರದೇಶದಲ್ಲಿ ತೋಳಗಳ ಗುಂಪನ್ನು

➤ ಹಲವು ವರ್ಷಗಳ ನಂತರ, ಆಂಧ್ರ ಪ್ರದೇಶದ ನಲ್ಲಮಲ ಅರಣ್ಯದಲ್ಲಿ ಭಾರತೀಯ ತೋಳಗಳು ಪತ್ತೆ! Read More »

ರಾಷ್ಟ್ರೀಯ ನ್ಯೂಸ್

➤ ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com. ಭುವನೇಶ್ವರ ಮಾ 06.  ಒಡಿಶಾದ ಖುರ್ದಾದ ತಂಗಿ ಪೊಲೀಸ್ ವ್ಯಾಪ್ತಿಯ ಭೂಶುಂದಪುರ ಗ್ರಾಮದ ಬಳಿ ಪಟಾಕಿ ತಯಾರಿಕೆ ಘಟಕದಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಮೃತರೆಲ್ಲರೂ ಪುರುಷರಾಗಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಖುರ್ದಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಕಟಾರಿಯಾ ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಖುರ್ದಾ ಜಿಲ್ಲಾ ಪ್ರಧಾನ ಆಸ್ಪತ್ರೆಗೆ (ಡಿಎಚ್‌ಹೆಚ್) ದಾಖಲಿಸಲಾಗಿದೆ ಅವರಲ್ಲಿ ಇಬ್ಬರ ಆರೋಗ್ಯ

➤ ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಲೆ ಕುಸಿತ ➤ಈರುಳ್ಳಿಗೆ ಬೆಂಕಿ ಹಚ್ಚಿದ ರೈತ

(ನ್ಯೂಸ್ ಕಡಬ) newskadaba.com. ನಾಸಿಕ್, ಮಾ 06.  ಈರುಳ್ಳಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ರೈತರೊಬ್ಬರು ಸರ್ಕಾರದ ನೀತಿಗಳನ್ನು ವಿರೋಧಿಸಿ ಈರುಳ್ಳಿ ಬೆಳೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಸಿಕ್‌ನ ಏಷ್ಯಾದ ಅತಿದೊಡ್ಡ ಸಗಟು ಈರುಳ್ಳಿ ಮಾರುಕಟ್ಟೆಯಾದ ಲಾಸಲ್‌ಗಾಂವ್‌ನಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಯಲ್ಲಿ ಈರುಳ್ಳಿ ಬೆಲೆ ತೀವ್ರವಾಗಿ ಕುಸಿದಿದ್ದು, ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಲೆ ಕುಸಿತ ➤ಈರುಳ್ಳಿಗೆ ಬೆಂಕಿ ಹಚ್ಚಿದ ರೈತ Read More »

ರಾಷ್ಟ್ರೀಯ ನ್ಯೂಸ್

➤ ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್‌ ತಂದೆ ನಿಧನ ➤ ಪತ್ರ ಬರೆದು ಧೈರ್ಯ ತುಂಬಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 4. ಉಮೇಶ್ ಯಾದವ್ ಅವರ ತಂದೆ ತಿಲಕ್ ಯಾದವ್ ಅವರು  ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು. ತಂದೆಯ ನಿಧನದ ದುಃಖದ ನಡುವೆಯೇ ಇಂದೋರ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ದದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಉಮೇಶ್ ಯಾದವ್ ಅವರು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಒಟ್ಟು ಮೂರು ವಿಕೆಟ್‌ಗಳನ್ನು ಈ ಪಂದ್ಯದಲ್ಲಿ ಪಡೆದುಕೊಂಡಿದ್ದರು. ಇನ್ನು ಉಮೇಶ್ ಯಾದವ್ ಅವರ ತಂದೆಯ ನಿಧನಕ್ಕೆ ಪತ್ರ ಮುಖೇನ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ನಿಮ್ಮ ಕ್ರಿಕೆಟ್ ಜೀವನದ ಪಯಣದಲ್ಲಿ

➤ ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್‌ ತಂದೆ ನಿಧನ ➤ ಪತ್ರ ಬರೆದು ಧೈರ್ಯ ತುಂಬಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

➤ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

(ನ್ಯೂಸ್ ಕಡಬ) newskadaba.com.ಕೊಡಗು, ಮಾ 4.   ಮಡಿಕೇರಿ ಕೊಡಗು ಜಿಲ್ಲೆಯ 16ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು  ಗೋಣಿಕೊಪ್ಪಲಿನಲ್ಲಿ ಇಂದು ಶಾಸಕ ಕೆ.ಜಿ ಬೋಪಯ್ಯ ಉದ್ಘಾಟಿಸಿದರು.  ನಂತರ ಮಾತನಾಡಿದ  ಅವರು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯನ್ನೇ ಬಳಕೆ  ಮಾಡಬೇಕು ಎಂದು ಹೇಳಿದರು. ಇದಕ್ಕೂ ಮೊದಲು ಸರ್ವಾಧ್ಯಕ್ಷೆ ಲೇಖಕಿ ಡಾ. ಎಂ.ಪಿ. ರೇಖಾ ಅವರನ್ನು ಪಾಲಿ ಬೆಟ್ಟದ ಕ್ರಾಸ್ ರಸ್ತೆಯಿಂದ ಮೆರವಣಿಗೆ ಮೂಲಕ ಕರೆತರಲಾಯಿತು.

➤ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ Read More »

ಕರ್ನಾಟಕ

➤ ಕಡಬ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com. ಕಡಬ, ಮಾ 3. ಕೋಡಿಂಬಾಳ ಗ್ರಾಮದ ಕಜೆಮೂಲೆ ನಿವಾಸಿ ಮಹಮ್ಮದ್ ಆತ್ಮಹತ್ಯೆಗೆ ಶರಣಾದವರು. ಕೋಡಿಂಬಾಳದ  ಕಾರ್ಖಾನೆ ಎಂಬಲ್ಲಿ  ಮಾವಿನ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಸುಮಾರು 06 ವರ್ಷಗಳಿಂದ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದು, ಯಾವುದೇ ಕೆಲಸ ಮಾಡಲು ಆಗದೆ ಇದ್ದುದರಿಂದ ಮಾನಸಿಕವಾಗಿ ನೊಂದಿದ್ದು, ಅದೇ ವಿಚಾರವಾಗಿ ಜೀವನದಲ್ಲಿ ಜಿಗುಪ್ಸೆಗೊಂಡು  ನೇಣು ಬಿಗಿದಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

➤ ಕಡಬ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ! Read More »

ಕರಾವಳಿ, ಕ್ರೈಮ್ ನ್ಯೂಸ್

➤ಎಸ್ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.1. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 08 ಮ್ಯಾನೇಜರ್, ಫ್ಯಾಕಲ್ಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾರ್ಚ್ 2023 ರ SBI ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್, ಫ್ಯಾಕಲ್ಟಿ ಪೋಸ್ಟ್‌ಗಳನ್ನು ಭರ್ತಿ ಮಾಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೋಲ್ಕತ್ತಾ – ಮುಂಬೈ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 15-Mar-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ

➤ಎಸ್ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ! Read More »

ಉದ್ಯೋಗ

➤ ಸರ್ಕಾರಿ ನೌಕರರ ಮುಷ್ಕರ ➤ಚಿಕಿತ್ಸೆ ಸಿಗದೆ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಟ

ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ.01.  7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಮುಷ್ಕರಕ್ಕೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕೂಡ ಬೆಂಬಲ ನೀಡಿದ್ದು, ರಾಜ್ಯದ ಹಲವೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಮಾಡಲಾಗಿದೆ. ಸದ್ಯ ಇದರಿಂದ ರೋಗಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.​​​​​ ಬೆಂಗಳೂರಿನ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಡುತ್ತಿರುವ ದೃಶ್ಯಗಳು ಮನಕಲುಕುವಂತಿದೆ.

➤ ಸರ್ಕಾರಿ ನೌಕರರ ಮುಷ್ಕರ ➤ಚಿಕಿತ್ಸೆ ಸಿಗದೆ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಟ Read More »

ಕರ್ನಾಟಕ
Scroll to Top