ನ್ಯೂಸ್ ಕಡಬ

ಸಾನಿಯಾರ ಕ್ರೀಡಾ ಬದುಕು ಮುಕ್ತಾಯ ➤ ದುಬೈ ಚಾಂಪಿಯನ್ ಶಿಪ್ ನಲ್ಲಿ ಸೋಲು

(ನ್ಯೂಸ್ ಕಡಬ) newskadaba.com. ದುಬೈ.  ಫೆ.22.  ದುಬೈ ಭಾರತೀಯ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಝಾರ ವೃತ್ತಿಪರ ಕ್ರೀಡಾ ಬದುಕು ಮಂಗಳವಾರ ಕೊನೆಗೊಂಡಿತು. ಅವರು ತನ್ನ ಕೊನೆಯ ವೃತ್ತಿಪರ ಪಂದ್ಯವನ್ನು ಡಬ್ಲ್ಯಟಿಎ ದುಬೈ ಡ್ಯೂಟಿ ಫ್ರೀ ಚಾಂಪಿಯನ್ ಶಿಪ್ಸ್ ನಲ್ಲಿ ಆಡಿದರು. ದುಬೈನಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಮಹಿಳೆಯರ ಡಬಲ್ಸ್ ವಿಭಾಗದ ಆರಂಭಿಕ ಸುತ್ತಿನಲ್ಲಿ ಸಾನಿಯಾ ಮತ್ತು ಅವರ ಜೊತೆಗಾತಿ ಅಮೇರಿಕದ ಮ್ಯಾಡಿಸನ್ ಕೀಸ್ ರಶ್ಯದ ಜೋಡಿ ವೆನೋರ್ಕಿಯ ಕುದೆರ್ ಮೆಟೋವ ಮತ್ತು ಲಿಯುಡಿಮಿಲ ಸಮ್ಸೊನೋವ ವಿರುದ್ಧ 4-6,0-6 ನೇರ […]

ಸಾನಿಯಾರ ಕ್ರೀಡಾ ಬದುಕು ಮುಕ್ತಾಯ ➤ ದುಬೈ ಚಾಂಪಿಯನ್ ಶಿಪ್ ನಲ್ಲಿ ಸೋಲು Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಹೈಕೋರ್ಟ್ ವಕೀಲ ವಿ.ಶ್ರೀನಿಧಿ ಹೃದಯಾಘಾತದಿಂದ ನಿಧನ!

(ನ್ಯೂಸ್ ಕಡಬ) newskadaba.com.ಬೆಂಗಳೂರು. ಫೆ.21.  ಬೆಂಗಳೂರು ಹೈಕೋರ್ಟ್ ನಲ್ಲಿ ಸರ್ಕಾರಿ ವಕೀಲರಾಗಿದ್ದ ವಿ.ಶ್ರೀನಿಧಿ(46) ಇಂದು ಮಧ್ಯಾಹ್ನ 2.25ಕ್ಕೆ ಮಲ್ಲೇಶ್ವರದ ಅಪೊಲೊ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರು ಪತ್ನಿ, ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ತಾಳವಟ್ಟಿ ಗ್ರಾಮದ ಶ್ರೀನಿಧಿ ಕಳೆದ ಎಂಟು ವರ್ಷಗಳಿಂದ ಸರ್ಕಾರದ ಪರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪರ ವಕೀಲರಾಗಿ ಮಹತ್ವದ ಪ್ರಕರಣಗಳನ್ನು ಯಶಸ್ವಿಯಾಗಿ ನಿಭಾಯಿಸಿದ ವಕೀಲರೆನಿಸಿದ್ದರು.

➤ ಹೈಕೋರ್ಟ್ ವಕೀಲ ವಿ.ಶ್ರೀನಿಧಿ ಹೃದಯಾಘಾತದಿಂದ ನಿಧನ! Read More »

ಕರ್ನಾಟಕ

➤ ಮಹಿಳೆಯ ಪಿತ್ತಕೋಶದಲ್ಲಿ 2000 ಕ್ಕೂ ಹೆಚ್ಚು ಕಲ್ಲುಗಳು ಪತ್ತೆ!

(ನ್ಯೂಸ್ ಕಡಬ) newskadaba.com. ಚೆನ್ನೈ. ಫೆ.21.  ಮಹಿಳೆಯೊಬ್ಬರ ಪಿತ್ತಕೋಶದಲ್ಲಿದ್ದ 2000 ಸಾವಿರಕ್ಕೂ ಹೆಚ್ಚು ಕಲ್ಲುಗಳನ್ನು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರ ತೆಗೆದ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ 55 ವರ್ಷ ಪ್ರಾಯದ ಮಧುಮೇಹ ಕಾಯಿಲೆಯನ್ನು ಹೊಂದಿರುವ ಮಹಿಳೆಯೊಬ್ಬರು ಚೆನ್ನೈನಲ್ಲಿರುವ  ಮೋಹನ್ ಡಯಾಬಿಟಿಸ್ ಕ್ಲಿನಿಕ್‌ಗೆ ಅನಾರೋಗ್ಯದ ಕಾರಣಕ್ಕೆ ತಪಾಸಣೆಗೆ ಬಂದಿದ್ದರು, ಗ್ಯಾಸ್ಟಿಕ್ ಹಾಗೂ ಅಜೀರ್ಣದ ಸಮಸ್ಯೆಯ ಕಾರಣ ಹೇಳಿ ಆಸ್ಪತ್ರೆಗೆ ಬಂದಿದ್ದ ಅವರಿಗೆ ಸ್ಕ್ಯಾನಿಂಗ್ ಮಾಡಿದಾಗ ಮೊದಲಿಗೆ ಅವರ ಪಿತ್ತಕೋಶದಲ್ಲಿ 50ಕ್ಕೂ ಹೆಚ್ಚು ಕಲ್ಲುಗಳಿರುವುದು

➤ ಮಹಿಳೆಯ ಪಿತ್ತಕೋಶದಲ್ಲಿ 2000 ಕ್ಕೂ ಹೆಚ್ಚು ಕಲ್ಲುಗಳು ಪತ್ತೆ! Read More »

ಕರ್ನಾಟಕ

ಲಿವ್-ಇನ್ ಹತ್ಯೆ ➤ ಬೆಂಕಿ ಹಚ್ಚಿ ಕೊಲೆಗೈದ ಪ್ರಿಯಕರ!

(ನ್ಯೂಸ್ ಕಡಬ) newskadaba.com. ನವದೆಹಲಿ.  ಫೆ.21. ಶ್ರದ್ಧಾವಾಕರ್ ಹತ್ಯೆ ಪ್ರಕರಣ ಹಸಿರಾಗಿರುವಂತೆಯೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು ‘ಲಿವ್-ಇನ್ ಹತ್ಯೆ’ ಪ್ರಕರಣ ಬೆಳಕಿಗೆ ಬಂದಿದ್ದು, ತನ್ನ ಪ್ರಿಯತಮೆಯನ್ನು ಪ್ರಿಯಕರ ಬೆಂಕಿ ಹಚ್ಚಿ ಕೊಲೆಗೈದಿದ್ದಾನೆ. ವಾಯವ್ಯ ದೆಹಲಿಯ ಅಮನ್ ವಿಹಾರ್‌ನಲ್ಲಿ ಈ ಘಟನೆ ನಡೆದಿದ್ದು, 28 ವರ್ಷದ ವಿವಾಹಿತ ಮಹಿಳೆಯನ್ನು ಆಕೆಯ ಪ್ರಿಯಕರ ಬೆಂಕಿ ಹಚ್ಚಿ ಕೊಂದು ಹಾಕಿದ್ದಾನೆ. ಫೆಬ್ರವರಿ 11 ರಂದು, ಸುಟ್ಟ ಗಾಯಗಳೊಂದಿಗೆ ಮಹಿಳೆಯನ್ನು ಎಸ್‌ಜಿಎಂ ಆಸ್ಪತ್ರೆಗೆ ದಾಖಲಿಸಿದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಪೊಲೀಸರು ಆಸ್ಪತ್ರೆಗೆ

ಲಿವ್-ಇನ್ ಹತ್ಯೆ ➤ ಬೆಂಕಿ ಹಚ್ಚಿ ಕೊಲೆಗೈದ ಪ್ರಿಯಕರ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಶೀಘ್ರದಲ್ಲೇ ಡಿಜಿಟಲ್ ವಹಿವಾಟು ಹೆಚ್ಚಾಗಲಿದೆ ➤ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com. ನವದೆಹಲಿ.  ಫೆ.21. ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ದೇಶದಲ್ಲಿ ಹೆಚ್ಚು ಆದ್ಯತೆಯ ಪಾವತಿ ಕಾರ್ಯವಿಧಾನವಾಗುತ್ತಿರುವುದರಿಂದ ಡಿಜಿಟಲ್ ವಹಿವಾಟು ಶೀಘ್ರದಲ್ಲೇ ನಗದು ವಹಿವಾಟನ್ನು ಮೀರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತದ ಡಿಜಿಟಲ್ ಪಾವತಿ ವಿಧಾನ ಯುಪಿಐ ಮತ್ತು ಸಿಂಗಾಪುರ ದೇಶದ ಪೇನೌ ನಡುವಿನ ಗಡಿಯಾಚೆಗಿನ ಡಿಜಿಟಲ್ ಹಣ ಪಾವತಿ ಸಂಪರ್ಕಕ್ಕೆ ಚಾಲನೆ ನೀಡಿ ಮಾತನಾಡಿದ ಮೋದಿಯವರು, 2022ರಲ್ಲಿ ಯುಪಿಐ ಮೂಲಕ ಸುಮಾರು 2 ಟ್ರಿಲಿಯನ್ ಸಿಂಗಾಪುರ್ ಡಾಲರ್ ಅಂದರೆ ಸುಮಾರು

ದೇಶದಲ್ಲಿ ಶೀಘ್ರದಲ್ಲೇ ಡಿಜಿಟಲ್ ವಹಿವಾಟು ಹೆಚ್ಚಾಗಲಿದೆ ➤ ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ಹೈದರಾಬಾದ್‌ ಬೀದಿ ನಾಯಿ ದಾಳಿಗೆ 4 ವರ್ಷದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಹೈದರಾಬಾದ್‌. ಫೆ.21.  ನಾಲ್ಕು ವರ್ಷದ ಬಾಲಕನನ್ನು ಬೀದಿ ನಾಯಿಗಳು ಕೊಂದ ಘಟನೆ ಹೈದರಾಬಾದ್‌ ನಲ್ಲಿ ನಡೆದಿದೆ.  ಮಗುವಿನ ತಂದೆ ಕಾವಲುಗಾರನಾಗಿ ಕೆಲಸ ಮಾಡುತ್ತಾರೆ. ನಾಯಿಗಳು ಕಚ್ಚಿದ ಏಟಿಗೆ ಬಾಲಕನ ಹೊಟ್ಟೆಗೆ ತೀವ್ರತರ ಗಾಯಗಳಾಗಿದ್ದು, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮಗು ಕೊನೆಯುಸಿರೆಳೆದಿದ್ದಾನೆ ಈ ಘಟನೆ ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ. ಹುಡುಗ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಮೂರು ನಾಯಿಗಳು ಓಡಿ ಬಂದು ಅವನ ಮೇಲೆ ದಾಳಿ ಮಾಡಿ ಅವನನ್ನು ಕಚ್ಚಿ ಕೊಂದಿವೆ ಎಂದು ತಿಳಿದು ಬಂದಿದೆ.

➤ಹೈದರಾಬಾದ್‌ ಬೀದಿ ನಾಯಿ ದಾಳಿಗೆ 4 ವರ್ಷದ ಬಾಲಕ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಶೀಘ್ರದಲ್ಲಿಯೇ ತಮಿಳುನಾಡು ಕರ್ನಾಟಕ ನಡುವೆ ಮೆಟ್ರೊ ಸಂಚಾರ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಫೆ.21.  ಹೊಸೂರು ಮತ್ತು ಬೆಂಗಳೂರು ನಡುವೆ ಮೆಟ್ರೊ ಸಂಪರ್ಕ ಕಲ್ಪಿಸುವಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಚೆನ್ನೈ ಮೆಟ್ರೊ ರೈಲು ನಿಗಮವು ಬೊಮ್ಮಸಂದ್ರದಿಂದ ರೈಲು ಸಂಪರ್ಕ ನಿರ್ಮಾಣಕ್ಕೆ ಕಾರ್ಯಸಾಧ್ಯತೆ ಅಧ್ಯಯನ ನಡೆಸಲು ಅನುಮತಿ ಕೋರಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದೆ. ಸಚಿವಾಲಯ ಪ್ರಸ್ತಾವನೆಯನ್ನು ಅನುಮೋದಿಸಿದ ನಂತರ ಸಿಎಂಆರ್‌ಎಲ್‌, ಹೊಸೂರಿನಿಂದ ಕರ್ನಾಟಕದ ಬೊಮ್ಮಸಂದ್ರದವರೆಗಿನ 20.5 ಕಿ.ಮೀ. ಉದ್ದದ ಮೆಟ್ರೊ ರೈಲು ಸಂಪರ್ಕದ ನಿರ್ಮಾಣದ ಅಧ್ಯಯನ ನಡೆಸಲು ಟೆಂಡರ್‌ ಕರೆಯಲಿದೆ. ತಮಿಳುನಾಡು

➤ ಶೀಘ್ರದಲ್ಲಿಯೇ ತಮಿಳುನಾಡು ಕರ್ನಾಟಕ ನಡುವೆ ಮೆಟ್ರೊ ಸಂಚಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೋಲಾರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ನ್ಯೂಸ್ ಕಡಬ) newskadaba.com. ಕೋಲಾರ. ಫೆ.18.  ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋಲಾರದ ಪೋಕ್ಸೋ ವಿಶೇಷ ಕೋರ್ಟ್ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದು, ಸಂತ್ರಸ್ತೆ ಹಾಗೂ ಆಕೆಯ ಕುಟುಂಬಸ್ಥರಿಗೆ ನ್ಯಾಯ ಸಿಕ್ಕಂತಾಗಿದೆ. ಆನಂದ್, ಕಾಂತರಾಜು, ಪ್ರವೀಣ್, ವೇಣು ಜೀವಾವಧಿ ಶಿಕ್ಷೆಗೆ ಒಳಗಾದ ಆರೋಪಿಗಳು.   ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರದಲ್ಲಿ 2022ರ ಫೆಬ್ರವರಿ ತಿಂಗಳಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿತ್ತು.

ಕೋಲಾರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

MEIF ವತಿಯಿಂದ  SSLC  ವಿದ್ಯಾರ್ಥಿಗಳಿಗೆ  ತರಬೇತಿ  ಕಾರ್ಯಗಾರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿಫೆ.18.  ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ದ.ಕ ,ಡುಪಿ ಜಿಲ್ಲೆ(MEIF)ವತಿಯಿಂದ   ಉಭಯ   ಜಿಲ್ಲೆಗಳಲ್ಲಿ  ಹಮ್ಮಿಕೊಂಡ  ಸರಣಿ  SSLC  ತರಬೇತಿ  ಆಂದೋಲನದ  6ನೇ  ಕಾರ್ಯಾಗಾರವು  ಉಪ್ಪಿನಂಗಡಿಯ  ಅರಫಾ  ವಿದ್ಯಾಕೇಂದ್ರದಲ್ಲಿ  ಇಂದು   ನಡೆಯಿತು.  ಅರಫಾ  ವಿದ್ಯಾ  ಕೇಂದ್ರದ  ಅಧ್ಯಕ್ಷ  ಕೆ.ಪಿ.ಎ.  ಸಿದ್ದೀಕ್  ಹಾಜಿ ಕಾರ್ಯಕ್ರಮವನ್ನು  ಉದ್ಘಾಟಿಸಿದರು. MEIF ಈಸ್ಟ್  ಝೋನ್ ಉಪಾಧ್ಯಕ್ಷ  ಕೆ. ಎಂ.  ಮುಸ್ತಫಾ  ಸುಳ್ಯ  ಅಧ್ಯಕ್ಷತೆ  ವಹಿಸಿದ್ದರು. ವಿದ್ಯಾರ್ಥಿಗಳಲ್ಲಿ  ಆತ್ಮವಿಶ್ವಾಸ  ಮೂಡಿಸಿ,  ಪರೀಕ್ಷೆ  ಎದುರಿಸುವ  ವಿಧಾನಗಳ  ಬಗ್ಗೆ  ಸಂಪನ್ಮೂಲ  ವ್ಯಕ್ತಿಯಾಗಿ  ರಾಷ್ಟೀಯ ತರಬೇತಿದಾರ

MEIF ವತಿಯಿಂದ  SSLC  ವಿದ್ಯಾರ್ಥಿಗಳಿಗೆ  ತರಬೇತಿ  ಕಾರ್ಯಗಾರ Read More »

ಕರಾವಳಿ

ಅಜ್ಜಿಗೆ ಗುಂಡಿಟ್ಟ 6 ವರ್ಷದ ಬಾಲಕಿ!!

(ನ್ಯೂಸ್ ಕಡಬ) newskadaba.com ಫ್ಲೋರಿಡಾ, ಫೆ.18. ಫ್ಲೋರಿಡಾ ರಾಜ್ಯದಲ್ಲಿ 6 ವರ್ಷದ ಬಾಲಕಿಯೊಬ್ಬಳು ತನ್ನ ಸ್ವಂತ ಅಜ್ಜಿಯ ಮೇಲೆ ಗುಂಡು ಹಾರಿಸಿದ ಘಟನೆ ಬೆಳಕಿಗೆ ಬಂದಿದೆ. ಅಮೆರಿಕದಲ್ಲಿ ಮುಕ್ತವಾಗಿ ಗನ್ ಲೈಸೆನ್ಸ್ ನೀಡುವ ಬಗ್ಗೆ ಸಾಕಷ್ಟು ಚರ್ಚೆ, ವಾದ ಪ್ರತಿವಾದಗಳು ನಡೆಯುತ್ತಿರುವ ಹೊತ್ತಲ್ಲೇ ಈ ಘಟನೆ ನಡೆದಿದೆ. ಅದೃಷ್ಟವಶಾತ್, ಮೊಮ್ಮಗಳಿಂದ ಗುಂಡು ಬಡಿದ ಮಹಿಳೆಗೆ ಪ್ರಾಣಾಪಾಯವಾಗಿಲ್ಲ. 57 ವರ್ಷದ ಈಕೆಗೆ ಬೆನ್ನಿನ ಕೆಳಭಾಗದಲ್ಲಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. 6 ವರ್ಷದ ಬಾಲಕಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈಕೆ ಆಕಸ್ಮಿಕವಾಗಿ ಗುಂಡು ಹಾರಿಸಿದ್ದು ಎಂಬ ವಿಚಾರ ಸದ್ಯಕ್ಕೆ

ಅಜ್ಜಿಗೆ ಗುಂಡಿಟ್ಟ 6 ವರ್ಷದ ಬಾಲಕಿ!! Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top